ರೈತನಿಗೆ ದೋಷಯುತ ಕೊಯ್ಲುಯಂತ್ರ.. ಅಗ್ರೊ ಇಂಡಸ್ಟ್ರೀಗೆ ಬಿಸಿ ಮುಟ್ಟಿಸಿದ ಗ್ರಾಹಕರ ಆಯೋಗ

Drink & Drive: Driver fined Rs. 12,500!

ಧಾರವಾಡ: ರೈತನಿಗೆ ದೋಷಯುತ ಹಾರವೆಸ್ಟಿಂಗ್ ( ಕೊಯ್ಲುಯಂತ್ರ) ಮಷೀನ್ ನೀಡಿದ ಗುರು ಹಿಂದುಸ್ಥಾನ ಅಗ್ರೋ ಇಂಡ್ರಸ್ಟ್ರೀಸ್‍ಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗ (Consumer Commission) ದಂಡ ವಿಧಿಸಿದೆ.

ನವಲಗುಂದದ ನಿವಾಸಿ ದ್ಯಾಮಪ್ಪ ಹಂಚಿನಾಳ ಎನ್ನುವವರು ವೃತ್ತಿಯಲ್ಲಿ ವ್ಯವಸಾಯವನ್ನು ಅವಲಂಬಿಸಿದ್ದಾರೆ. ತಮ್ಮ ಉಪಜೀವನಕ್ಕಾಗಿ ಬೆರೆಯವರು ಬೆಳೆಗಳನ್ನು ಹಾರ್ವೆಸ್ಟಿಂಗ ಮಷೀನ್‍ನ ಮುಖಾಂತರ ಕೊಯ್ಯಲು ಈ ಮಷೀನನ್ನು ಅವರು ಗುರು ಹಿಂದುಸ್ಥಾನ ಅಗ್ರೊ ಇಂಡಸ್ಟ್ರೀ ಬಳಿ ಖರೀದಿಸಿದ್ದರು.

ಅದಕ್ಕೆ ಅವರು ರೂ.3,50,000 ಬ್ಯಾಂಕಿನಿಂದ ಲೋನ್ ಪಡೆದು ಪಾವತಿಸಿದ್ದರು. ಖರೀದಿಸುವ ಸಮಯದಲ್ಲಿ ಎದುರುದಾರರು ಮಷೀನು ಬೆಳೆಯನ್ನು ಕೊಯ್ಲು ಮಾಡುವಾಗ ಅದು ಬೆಳೆ ಮತ್ತು ಹೊಟ್ಟನ್ನು ಬೇರ್ಪಡಿಸುತ್ತದೆ ಅಂತ ಹೇಳಿದ್ದರು. ಆದರೆ ದೂರುದಾರರು ಅದನ್ನು ವ್ಯವಸಾಯದಲ್ಲಿ ಉಪಯೋಗಿಸಲು ಪ್ರಾರಂಭಿಸದ ನಂತರ ಅದು ಎದುರುದಾರರು ಹೇಳಿದ ರೀತಿ ಮಾಡದೇ ಬೆಳೆ ಮತ್ತು ಹೊಟ್ಟು ಎರಡನ್ನು ಒಟ್ಟು ಗೂಡಿಸಿ ವಿಸರ್ಜಿಸುತ್ತಿತ್ತು.

ಈ ವಿಷಯವನ್ನು ದೂರುದಾರರು ತಮ್ಮ ನೆರೆಯ ರೈತರನ್ನು ವಿಚಾರಿಸಲು ಅವರಿಗೂ ಸಹ ಇಂತಹದೇ ಸಮಸ್ಯೆ ಬಂದಿರುವುದು ಗೊತ್ತಾಯಿತು. ಆದರೆ ಯಂತ್ರ ಸರಿ ಇಲ್ಲದ ಕಾರಣ ದೂರುದಾರರ ಉಪಜೀವನಕ್ಕೆ ತುಂಬಾ ತೊಂದರೆಯಾಗಿ ಮತ್ತು ಬ್ಯಾಂಕಿಗೆ ಲೋನನ್ನು ತುಂಬದೇ ಬಹಳ ನಷ್ಟವನ್ನು ಅನುಭವಿಸಿರುತ್ತಾರೆ.

ಕೊನೆಗೆ ದೂರುದಾರರು ಆ ಯಂತ್ರವನ್ನು ಎದುರುದಾರರ ಡೀಲರಾದ ಗಣಾಚಾರಿ ಅಗ್ರಿಕಲ್ಚರ್ ಇಂಡಸ್ಟ್ರೀಸ್ ಬೆಳಗಾವಿ ಇವರಿಗೆ ಮರಳಿಸಿರುತ್ತಾರೆ. ಆದರೆ ಇವತ್ತಿನವರೆಗೂ ಎದುರುದಾರರು ಆ ಮಷೀನನ್ನು ಸರಿಪಡಿಸಿ ಕೊಟ್ಟಿರುವುದಿಲ್ಲ.

ಇದರಿಂದ ಮನನೊಂದರೈತ ಗ್ರಾಹಕ ಅಂತಹ ಎದುರುದಾರರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯಿದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ:12/07/2024ಕ್ಕೆ ದೂರು ಸಲ್ಲಿಸಿದ್ದರು.

ಈ ದೂರಿನ ಬಗ್ಗೆ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ ಹಾಗೂ ವಿಶಾಲಾಕ್ಷಿ. ಅ. ಬೋಳಶೆಟ್ಟಿ ಸದಸ್ಯರು, ದೂರುದಾರರು ರೂ.3,50,000 ಪಾವತಿಸಿ ತನ್ನ ಉಪಜೀವನಕ್ಕೆ ಅನುಕೂಲವಾಗಲೆಂದು ಹಾರ್ವೆಸ್ಟಿಂಗ್ ಮಷೀನ್‍ನ್ನು ಎದುರುದಾರರಿಂದ ಖರೀದಿಸಿರುವುದು ದಾಖಲೆಗಳ ಮುಖಾಂತರ ಕಂಡು ಬರುತ್ತದೆ. ಆದರೆ ಖರೀದಿಸಿದ ನಂತರ ಆ ಮಷೀನು ಎದುರುದಾರರು ಹೇಳಿದಂತೆ ಸರಿಯಾಗಿ ಕೆಲಸ ಮಾಡದೇ ಇರುವುದು ದೂರುದಾರರಿಗೆ ಆರ್ಥಿಕ ನಷ್ಟಕ್ಕೆ ಹೊಣೆಯಾಗಿರುತ್ತದೆ.

ಅಲ್ಲದೆ ದೂರುದಾರರು ಬ್ಯಾಂಕನಿಂದ ಲೋನ ಪಡೆದು ಅದನ್ನು ಖರೀದಿಸಿದರೂ ಅದರ ಉಪಯೋಗವಿಲ್ಲದೆ ಆರ್ಥಿಕ ಹೊರೆಯನ್ನು ಅನುಭವಿಸುತ್ತಿರುವುದು ಆಯೋಗಕ್ಕೆ ಕಂಡು ಬಂದಿರುತ್ತದೆ. ಅಲ್ಲದೇ ಮಷೀನು ಎದುರುದಾರರ ಬಳಿಯೇ ಇದ್ದು ಅವರು ಅದನ್ನು ಸರಿಪಡಿಸಿ ದೂರುದಾರರಿಗೆ ಕೊಡದೇ ಇರುವುದು ಗ್ರಾಹಕ ರಕ್ಷಣಾ ಕಾಯಿದೆಯಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತಂತೆ ದೂರುದಾರರು ಮಷೀನ್ ಕೊಟ್ಟಂತಹ ರೂ.3,50,000 ಗಳನ್ನು ಶೇ.8 ರಂತೆ ಬಡ್ಡಿ ಲೆಕ್ಕ ಹಾಕಿ ಕೊಡುವಂತೆ ಎದುರುದಾರರಿಗೆ ಆಯೋಗ ಆದೇಶಿಸಿದೆ.

ಅಲ್ಲದೇ ರೈತನಾಗಿ ತನ್ನ ಉಪಜೀವನಕ್ಕಾಗಿ ಯಂತ್ರವನ್ನು ಖರೀದಿಸಿ ಅದು ಸರಿಯಾಗಿ ಕೆಲಸ ಮಾಡದಿರುವುದರಿಂದ ಅವರಿಗೆ ಆದ ಅನಾನುಕೂಲ, ಮಾನಸೀಕ ತೊಂದರೆಗೆ ರೂ. ಒಂದು ಲಕ್ಷ ಪರಿಹಾರ ಹಾಗೂ ಪ್ರಕರಣದ ಖರ್ಚು ವೆಚ್ಚ 10 ಸಾವಿರಗಳನ್ನು ದೂರುದಾರರಿಗೆ ಕೊಡಲು ಎದುರುದಾರರಾದ ಗುರು ಹಿಂದುಸ್ಥಾನ ಅಗ್ರೋ ಇಂಡ್ರಸ್ಟ್ರೀಸ್‍ಗೆ ಆಯೋಗ ತನ್ನ ಆದೇಶದಲ್ಲಿ ಹೇಳಿದೆ.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]