ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

I would not have lost if Aadhaar card was linked to voter ID; Nikhil Kumaraswamy

ಚಿಕ್ಕಬಳ್ಳಾಪುರ: ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗದಿಂದ ಆಯ್ಕೆಯಾಗುತ್ತಾರೆ ಈ ಭಾಗಗಳಿಗೆ ನಾನು ನಿರಂತರವಾಗಿ ಭೇಟಿ ನೀಡುತ್ತೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದರು.

ಚಿಕ್ಕಬಳ್ಳಾಪುರವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ- ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇಶಕ್ಕೆ ನರೇಂದ್ರ ಮೋದಿ ಜೀ ರಾಜ್ಯಕ್ಕೆ ಕುಮಾರಣ್ಣ.ಇದು ಕೇವಲ ಜೆಡಿಎಸ್ ಕಾರ್ಯಕರ್ತರ ಭಾವನೆ ಅಷ್ಟೇ ಅಲ್ಲ, ರಾಜ್ಯದ ಜನರ ಭಾವನೆ. ಕುಮಾರಣ್ಣ ಸಿಎಂ ಆಗಿದ್ದಾಗ ಕೊಟ್ಟ ಕೊಡುಗೆಗಳನ್ನ ಜನ ಈಗಲೂ ಸ್ಮರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ನಾನು ರಾಜ್ಯದ ಹಲವೆಡೆ ಪ್ರವಾಸ ಮಾಡಿದಾಗ, ಜನ ಕುಮಾರಣ್ಣ ಸಿಎಂ ಆಗಲಿ ಎಂದು ಬಯಸುತ್ತಿದ್ದಾರೆ ಎಂದರು. ಅಂತಹ ವ್ಯಕ್ತಿ ಸಿಎಂ ಆದರೆ ರಾಜ್ಯದಲ್ಲಿ ಸಮೃದ್ಧಿಯ ವಾತವಾರಣ ನಿರ್ಮಾಣವಾಗಲಿದೆ ಎಂದು
ನಿಖಿಲ್ ಕುಮಾರಸ್ವಾಮಿ ಹೇಳಿದರು.

ನಾವು 3 ವರ್ಷ ಯಾವುದೇ ವಾಮಮಾರ್ಗದಿಂದ ಅಧಿಕಾರ ಹಿಡಿಯಲ್ಲ

ಮುಂದಿನ 2028 ರಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಗೆ 150ಕ್ಕೂ ಹೆಚ್ಚು ಸ್ಥಾನಗಳು ಸಿಗಲಿದೆ, ಮೈತ್ರಿ ಸರ್ಕಾರ ರಚನೆ ಮಾಡಲಿದ್ದೇವೆ. ನಮ್ಮ ನಾಯಕರು ಕುಮಾರಣ್ಣ. ಫೇಸ್ ವ್ಯಾಲ್ಯೂ ಇರುವ ನಾಯಕರು ದೇವೇಗೌಡರು, ಕುಮಾರಣ್ಣ. ಕುಮಾರಣ್ಣ ಸಿಎಂ ಆಗಬೇಕು ಎಂಬುದು ನಮ್ಮ ಅಪೇಕ್ಷೆ ಅಲ್ಲ, ಇದು ಕಾರ್ಯಕರ್ತರ ಅಪೇಕ್ಷೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಮತ್ತು ಕೋಲಾರ ಜೆಡಿಎಸ್ ಪಕ್ಷಕ್ಕೆ ಅಂದಿನಿಂದಲೂ ಬಲ ತುಂಬಿರುವ ಜಿಲ್ಲೆಗಳು.ನಮಗೆ ರಾಮನಗರ ಮತ್ತು ಚಿಕ್ಕಬಳ್ಳಾಪುರ ಎರಡು ಕಣ್ಣುಗಳಿದ್ದಂತೆ. ಶಿಡ್ಲಘಟ್ಟ ಶಾಸಕ ರವಿಕುಮಾರ್ ಚಿಂತಾಮಣಿ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಎರಡು ಆಧಾರ ಸ್ಥಂಬಗಳಿದ್ದಂತೆ ಎಂದು ಹೇಳಿದರು

ಯುವ ಸಮುದಾಯದವರು ಅಧಿಕ್ಕಾಗಿ ರಾಜಕೀಯ ಮಾಡೋದು ಬೇಡ

ತಾಲ್ಲೂಕಿನ ರೈತರು ಕೋರಿದಂತೆ ಚಿಕ್ಕಬಳ್ಳಾಪುರ ಕ್ಷೇತ್ರವನ್ನ ಮುನ್ನಡೆಸುವ ಒಬ್ಬ ಟಗರನ್ನು ಕೊಟ್ಟೆ ಕೊಡ್ತೆವೆ. ಯುವ ಸಮುದಾಯದ ಅಣ್ಣ ತಮ್ಮಂದಿರು ಅಧಿಕಾರ ಕ್ಕೋಸ್ಕರ ರಾಜಕೀಯ ಮಾಡೋದು ಬೇಡ ಸಮಾಜದ ಕಟ್ಟಕಡೆಯ ವ್ಯಕ್ತಿಯ ಪರವಾಗಿ ಕೆಲಸ ಮಾಡುವ ಉದ್ದೇಶದಿಂದ ರಾಜಕಾರಣಕ್ಕೆ ಬನ್ನಿ ಎಂದು ಯುವ ಜನತಾದಳದ ರಾಜ್ಯಾದ್ಯಕ್ಷ ನಿಖಿಲ್ ಕುಮಾರಸ್ವಾಮಿ ಕರೆನೀಡಿದರು.

ಯುವಕರು ಹೆಚ್ಚಾಗಿ ರಾಜಕಾರಣಕ್ಕೆ ಬರಬೇಕು ಆಗ ಏನಾದ್ರು ಬದಲಾವಣೆ ಸದ್ಯ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಸ್ಯೆಗಳನ್ನ ಪರಿಹರಿಸೋ ಮನಸ್ಸಿರಬೇಕು ಚುನಾವಣೆಗಳಲ್ಲಿ ಕೆಲವರಿಗೆ ಫಲ ಸಿಕ್ಕಿದೆ ಇನ್ನು ಕೆಲವರಿಗೆ ಸಿಕ್ಕಿಲ್ಲದಿರಬಹುದು ಚುನಾವಣೆಗಳಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರಿಲ್ಲದಿದ್ದರೆ ಗೆಲ್ಲಲು ಸಾದ್ಯವಾಗುತ್ತಿರಲಿಲ್ಲ ಎಂದು ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಹೇಳಿಕೊಂಡಿರುವುದೆ ನಮ್ಮ ಪಕ್ಷಕ್ಕೆ ಶಕ್ತಿ ಇದೆ ಎನ್ನುವುದು ತೋರಿಸುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರ ಸತ್ತುಹೋಗಿದೆ. ಉಚಿತವಾಗಿ ಕೊಡುತ್ತಿರುವ ಅಕ್ಕಿ ಸರಬರಾಜಿಗೆ ಬಳಸಿದ ಲಾರಿಗಳ ಮಾಲೀಕರ ಬಾಡಿಗೆ 250 ಕೋಟಿ ಬಾಕಿ ಇಟ್ಟುಕೊಂಡಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಎನ್ ಡಿ ಎ ಮೈತ್ರಿ ಲೋಕಸಭಾ ಚುನಾವಣೆಯಲ್ಲಿ 151 ಸ್ಥಾನದಲ್ಲಿ ಅತ್ಯಂತ ಪ್ರಚಂಡ ಬಹುಮತ ತೆಗೆದುಕೊಳ್ಳಲು ಜೆಡಿಎಸ್ ಕಾರಣರಾಗಿದ್ದೇವೆ. ರಾಜ್ಯ ಪ್ರವಾಸ ಮಾಡುತ್ತಿರುವುದು ಮುಂದಿನ ಚುನಾವಣೆ ಹೇಗೆ ನಡೆಸಬೇಕೆಂಬ ಮಾಹಿತಿ ನಿಮಗೆ ನೀಡುತ್ತೇವೆ. ಪಕ್ಷ 50 ಲಕ್ಷಕ್ಕೂ ಹೆಚ್ಚು ಸದಸ್ಯತ್ವ ಗುರಿ ಇಟ್ಟು ಹೋಗುತ್ತಿದ್ದೇನೆ ನಿಮ್ಮ ಸಹಕಾರ ಇರಲಿ ಎಂದು ಹೇಳಿದರು.

ಕಾರ್ಯಕರ್ತರು ಮೂವತ್ತು ದಿನ, ಒಂದು ದಿನಕ್ಕೆ ಮೂರು ಗಂಟೆ ಕೆಲಸ ಮಾಡಿ ಒಬ್ಬರು ಹತ್ತು ಜನರಿಂದ ಮಿಸ್ಡ್ ಕಾಲ್ ಕೊಡಿಸಿ ಅವರಿಗೆ ಪಕ್ಷಕ್ಕೆ ಬೆಂಬಲಿಸುವಂತೆ ವಿಶ್ವಾಸ ಮೂಡಿಸಿ ಎಂದು ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರಿಗೆ ಮನವಿ ಮಾಡಿದರು.

ಹೆಚ್.ಡಿ. ದೇವೇಗೌಡರು ಹಾಗೂ ಕುಮಾರಣ್ಣನವರು ಚಿಕ್ಕಬಳ್ಳಾಪುರ ಜಿಲ್ಲೆಗೆ ನೀಡಿದ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿ “2028” ಕ್ಕೆ ಮತ್ತೊಮ್ಮೆ ಕುಮಾರಣ್ಣನವರನ್ನು ಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಲು ನಾವೆಲ್ಲರೂ ಹಗಲಿರುಳು ಶ್ರಮಿಸೋಣ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಇದಕ್ಕೂ ಮೊದಲು ನಿಖಿಲ್ ಕುಮಾರಸ್ವಾಮಿ ಅವರನ್ನು ತಿಪ್ಪೆನಹಳ್ಳಿಯಿಂದ ಕನಜೇನಹಳ್ಳಿ. ನಗರದ ಅಂಕನಗೊಂದಿ, ಎಪಿಎಂಸಿ, ಎಂ ಜಿ ರಸ್ತೆ, ಬಿ ಆರ್ ಅಂಬೇಡ್ಕರ್ ವೃತ್ತ, ಬಿಬಿ ರಸ್ತೆ ಮೂಲಕವಾಗಿ ಸಾಗಿತು ಇದೇ ವೇಳೆ ಹೂವಿನ ಮಳೆ ಸುರಿಸಿ ಸುಮಾರು ಐದು ಕಿಲೋಮೀಟರ್ ನಷ್ಟು ಬೈಕ್ ರ್ಯಾಲಿ ಮೂಲಕ ಹಾಗೂ ಟ್ರ್ಯಾಕ್ಟರ್ ಮೆರವಣಿಗೆ ಮೂಲಕ ಕಾರ್ಯಕರ್ತರು ಅವರನ್ನು ಸ್ವಾಗತ ಮಾಡಿದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]