Prevention of violence against women: Inspector Dr. M.B. Naveen Kumar 's conversation

ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆ: ಇನ್ಸ್ಪೆಕ್ಟರ್ ಡಾ.ಎಂ.ಬಿ. ನವೀನ್ ಕುಮಾರ್‌ ಸಂವಾದ

ದೊಡ್ಡಬಳ್ಳಾಪುರ: ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಉಂಟಾಗುತ್ತಿರುವ ದೌರ್ಜನ್ಯ ಪ್ರಕರಣ ಕಡಿವಾಣ ಹಾಗೂ ಮಹಿಳೆಯರ ರಕ್ಷಣೆಗೆ ಇರುವ ಕಾಯ್ದೆಗಳ ಕುರಿತು ಮಹಿಳಾ ಠಾಣೆ ಇನ್ಸ್ಪೆಕ್ಟರ್ ಡಾ.ಎಂ.ಬಿ. ನವೀನ್ ಕುಮಾರ್ (Dr.M.B. Naveen Kumar) ಅವರು ಸಲಹೆ ನೀಡಿದರು.

ನಗರದ ಹೊರವಲಯದಲ್ಲಿರುವ ಜುಬಿಲಿಯಂಟ್ ಕಾರ್ಖಾನೆಯಲ್ಲಿ ಮಹಿಳಾ ಕಾರ್ಮಿಕರು ಹಾಗೂ ಸಿಬ್ಬಂದಿಗಳೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

‘ನಮ್ಮ ಸಂವಿಧಾನದ 14ನೇ ವಿಧಿಯಡಿ ಎಲ್ಲರಿಗೂ ಸಮಾನ ರಕ್ಷಣೆ, ಅವಕಾಶ, ಹಕ್ಕು ಇದೆ. ಮಹಿಳೆಯರ ಮೇಲೆ ಕೆಲಸದ ಸ್ಥಳದಲ್ಲಿ ನಡೆಯುವ ದೌರ್ಜನ್ಯ ತಡೆಯಲು 2013ರಿಂದ ಕಾನೂನು ರಚನೆಯಾಗಿದ್ದು ಮಹಿಳೆಯರು ಯಾವುದೇ ಭಯವಿಲ್ಲದೆ ಜೀವನ ನಡೆಸಬಹುದು’.

‘ಮಹಿಳೆಯರಿಗೆ ಉಚಿತ ಕಾನೂನಿನ ನೆರವು ಇರಲಿದೆ. ಮಹಿಳೆಯರು ಯಾವುದೇ ರೀತಿಯ ದೌರ್ಜನ್ಯ ಎದುರಿಸಿದ್ದಲ್ಲಿ ಮುಚ್ಚು ಮರೆಯಿಲ್ಲದೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ. ಒಂದು ವೇಳೆ ಅಲ್ಲಿಯೂ ನಿಮಗೆ ಪರಿಹಾರ ಸಿಗದಿದ್ದರೆ ನಿಮ್ಮ ರಕ್ಷಣೆಗೆ ನಾವು ಸದಾ ಸಿದ್ದರಾಗಿರುತ್ತೇವೆ. ಅಪರಾಧಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳುವಂತಗಬಾರದು’ ಎಂದು ಹೇಳಿದರು.

ಕಾನೂನಿಗೆ ಎಲ್ಲ ಧರ್ಮದ ಮಹಿಳೆಯರ ಅನ್ಯಾಯಕ್ಕೂ ನ್ಯಾಯ ಕೊಡಿಸುವ ಶಕ್ತಿ ಇದೆ. ಉಚಿತ ಕಾನೂನಿನ ವಿಷಯಗಳ ಬಗ್ಗೆ ಸರಳವಾಗಿ ವಿವರಿಸಿದರು.

‘ಭಾರತ ಮುಂದುವರೆದ ದೇಶ. ನಮ್ಮ ದೇಶದ ಮಹಿಳೆಯರು ಇದೀಗ ಎಲ್ಲ ಕ್ಷೇತ್ರಗಳಲ್ಲಿ ತಮ್ಮದೇ ಅದ ಛಾಪು ಮೂಡಿಸುತ್ತಿದ್ದಾರೆ. ಕೆಲಸದ ಸಮಯದಲ್ಲಿ ದೌರ್ಜನ್ಯ ಎದುರಿಸಿದಾಗ ಅದನ್ನು ಮರೆಮಾಚಬಾರದು.’ ಎಂದರು.

ಇದೇ ವೇಳೆ ಕೆಲಸ ಮಾಡುವಂತಹ ಸ್ಥಳದಲ್ಲಿ ಹೆಣ್ಣು ಮಕ್ಕಳಿಗೆ ವಿಶ್ರಾಂತಿ ಕೊಠಡಿ ಸೌಲಭ್ಯಗಳು, ಸ್ವಚ್ಛವಾದ ಶೌಚಾಲಯದ ಸೌಲಭ್ಯ, ಕರ್ತವ್ಯ ನಿರ್ವಹಿಸುವಂತಹ ಕಡೆ ಸಿಸಿ ಕ್ಯಾಮೆರಾ ವ್ಯವಸ್ಥೆ, ತಾಯಿಯ ಅಕ್ಕರೆ ಅವಶ್ಯಕತೆ ಇರುವ ಶಿಶುಗಳ ಜೊತೆ ಬಂದಂತಹ ಕೆಲಸ ಮಾಡುವಂತಹ ಹೆಣ್ಣು ಮಕ್ಕಳಿಗೆ ಮಕ್ಕಳು ಆಟವಾಡಲು ವ್ಯವಸ್ಥೆ, ವೇತನ ಸಹಿತ ರಜೆ ಸೌಲಭ್ಯಗಳ, POSH ಕಮಿಟಿಯ ನಿರಂತರ ಸಭೆ ಕುರಿತು ಅರಿವು ಮೂಡಿಸಿದರು, ಅಲ್ಲದೆ She ಬಾಕ್ಸ್ ಅಳವಡಿಸುವಂತೆ ಕಾರ್ಖಾನೆ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಸಮಸ್ಯೆಗಳ ಕುರಿತು ಗಮನಕ್ಕೆ ತಂದು, ಪರಿಹರಿಸಿಕೊಂಡರು

ಈ ವೇಳೆ ಕಾರ್ಖಾನೆಯ ಹೆಚ್.ಆರ್. ರಘುರಾಮ್, ಎಚ್‌.ಆರ್. ಶಶಿಕುಮಾರ್, ಅಪರ ಮುಖ್ಯಸ್ಥ ಅಮಿತ್ ಗೇರ, ಪಿಎಸ್ಐ ಪಂಕಜ, ಸುನಿಲ್ ಗೋತ್ರಾಳೆ, ತನಿಕಾ ಸಹಾಯಕರಾದ ಮಹೇಶ್, ಕುಮಾರ್ ಮತ್ತಿತರರಿದ್ದರು.

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಟ್ರಾಕ್ಟರ್ಗೆ ಸ್ಕೂಟರ್ ಡಿಕ್ಕಿ.. ಸವಾರನಿಗೆ ಪೆಟ್ಟು

ದೊಡ್ಡಬಳ್ಳಾಪುರ: ಟ್ರಾಕ್ಟರ್ಗೆ ಸ್ಕೂಟರ್ ಡಿಕ್ಕಿ.. ಸವಾರನಿಗೆ ಪೆಟ್ಟು

ದೊಡ್ಡಬಳ್ಳಾಪುರ: ಟ್ರಾಕ್ಟರ್ಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡಿರುವ ಘಟನೆ (Accident) ನಗರದ ಟಿಬಿ ಸರ್ಕಲ್ ಮತ್ತು ಪಾಲನಜೋಗಿಹಳ್ಳಿ ನಡುವಿನ ಅಂಬರೀಶ್ ಚಿಕನ್ ಸೆಂಟರ್ ಸಮೀಪ ಇದೀಗ ಸಂಭವಿಸಿದೆ. ಮುಂದೆ

[ccc_my_favorite_select_button post_id="110875"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!