ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆ: ಇನ್ಸ್ಪೆಕ್ಟರ್ ಡಾ.ಎಂ.ಬಿ. ನವೀನ್ ಕುಮಾರ್‌ ಸಂವಾದ

Prevention of violence against women: Inspector Dr. M.B. Naveen Kumar 's conversation

ದೊಡ್ಡಬಳ್ಳಾಪುರ: ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಉಂಟಾಗುತ್ತಿರುವ ದೌರ್ಜನ್ಯ ಪ್ರಕರಣ ಕಡಿವಾಣ ಹಾಗೂ ಮಹಿಳೆಯರ ರಕ್ಷಣೆಗೆ ಇರುವ ಕಾಯ್ದೆಗಳ ಕುರಿತು ಮಹಿಳಾ ಠಾಣೆ ಇನ್ಸ್ಪೆಕ್ಟರ್ ಡಾ.ಎಂ.ಬಿ. ನವೀನ್ ಕುಮಾರ್ (Dr.M.B. Naveen Kumar) ಅವರು ಸಲಹೆ ನೀಡಿದರು.

ನಗರದ ಹೊರವಲಯದಲ್ಲಿರುವ ಜುಬಿಲಿಯಂಟ್ ಕಾರ್ಖಾನೆಯಲ್ಲಿ ಮಹಿಳಾ ಕಾರ್ಮಿಕರು ಹಾಗೂ ಸಿಬ್ಬಂದಿಗಳೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ತಡೆ: ಇನ್ಸ್ಪೆಕ್ಟರ್ ಡಾ.ಎಂ.ಬಿ. ನವೀನ್ ಕುಮಾರ್‌ ಸಂವಾದ

‘ನಮ್ಮ ಸಂವಿಧಾನದ 14ನೇ ವಿಧಿಯಡಿ ಎಲ್ಲರಿಗೂ ಸಮಾನ ರಕ್ಷಣೆ, ಅವಕಾಶ, ಹಕ್ಕು ಇದೆ. ಮಹಿಳೆಯರ ಮೇಲೆ ಕೆಲಸದ ಸ್ಥಳದಲ್ಲಿ ನಡೆಯುವ ದೌರ್ಜನ್ಯ ತಡೆಯಲು 2013ರಿಂದ ಕಾನೂನು ರಚನೆಯಾಗಿದ್ದು ಮಹಿಳೆಯರು ಯಾವುದೇ ಭಯವಿಲ್ಲದೆ ಜೀವನ ನಡೆಸಬಹುದು’.

‘ಮಹಿಳೆಯರಿಗೆ ಉಚಿತ ಕಾನೂನಿನ ನೆರವು ಇರಲಿದೆ. ಮಹಿಳೆಯರು ಯಾವುದೇ ರೀತಿಯ ದೌರ್ಜನ್ಯ ಎದುರಿಸಿದ್ದಲ್ಲಿ ಮುಚ್ಚು ಮರೆಯಿಲ್ಲದೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ. ಒಂದು ವೇಳೆ ಅಲ್ಲಿಯೂ ನಿಮಗೆ ಪರಿಹಾರ ಸಿಗದಿದ್ದರೆ ನಿಮ್ಮ ರಕ್ಷಣೆಗೆ ನಾವು ಸದಾ ಸಿದ್ದರಾಗಿರುತ್ತೇವೆ. ಅಪರಾಧಿಗಳು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳುವಂತಗಬಾರದು’ ಎಂದು ಹೇಳಿದರು.

ಕಾನೂನಿಗೆ ಎಲ್ಲ ಧರ್ಮದ ಮಹಿಳೆಯರ ಅನ್ಯಾಯಕ್ಕೂ ನ್ಯಾಯ ಕೊಡಿಸುವ ಶಕ್ತಿ ಇದೆ. ಉಚಿತ ಕಾನೂನಿನ ವಿಷಯಗಳ ಬಗ್ಗೆ ಸರಳವಾಗಿ ವಿವರಿಸಿದರು.

‘ಭಾರತ ಮುಂದುವರೆದ ದೇಶ. ನಮ್ಮ ದೇಶದ ಮಹಿಳೆಯರು ಇದೀಗ ಎಲ್ಲ ಕ್ಷೇತ್ರಗಳಲ್ಲಿ ತಮ್ಮದೇ ಅದ ಛಾಪು ಮೂಡಿಸುತ್ತಿದ್ದಾರೆ. ಕೆಲಸದ ಸಮಯದಲ್ಲಿ ದೌರ್ಜನ್ಯ ಎದುರಿಸಿದಾಗ ಅದನ್ನು ಮರೆಮಾಚಬಾರದು.’ ಎಂದರು.

ಇದೇ ವೇಳೆ ಕೆಲಸ ಮಾಡುವಂತಹ ಸ್ಥಳದಲ್ಲಿ ಹೆಣ್ಣು ಮಕ್ಕಳಿಗೆ ವಿಶ್ರಾಂತಿ ಕೊಠಡಿ ಸೌಲಭ್ಯಗಳು, ಸ್ವಚ್ಛವಾದ ಶೌಚಾಲಯದ ಸೌಲಭ್ಯ, ಕರ್ತವ್ಯ ನಿರ್ವಹಿಸುವಂತಹ ಕಡೆ ಸಿಸಿ ಕ್ಯಾಮೆರಾ ವ್ಯವಸ್ಥೆ, ತಾಯಿಯ ಅಕ್ಕರೆ ಅವಶ್ಯಕತೆ ಇರುವ ಶಿಶುಗಳ ಜೊತೆ ಬಂದಂತಹ ಕೆಲಸ ಮಾಡುವಂತಹ ಹೆಣ್ಣು ಮಕ್ಕಳಿಗೆ ಮಕ್ಕಳು ಆಟವಾಡಲು ವ್ಯವಸ್ಥೆ, ವೇತನ ಸಹಿತ ರಜೆ ಸೌಲಭ್ಯಗಳ, POSH ಕಮಿಟಿಯ ನಿರಂತರ ಸಭೆ ಕುರಿತು ಅರಿವು ಮೂಡಿಸಿದರು, ಅಲ್ಲದೆ She ಬಾಕ್ಸ್ ಅಳವಡಿಸುವಂತೆ ಕಾರ್ಖಾನೆ ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದ ಸಮಸ್ಯೆಗಳ ಕುರಿತು ಗಮನಕ್ಕೆ ತಂದು, ಪರಿಹರಿಸಿಕೊಂಡರು

ಈ ವೇಳೆ ಕಾರ್ಖಾನೆಯ ಹೆಚ್.ಆರ್. ರಘುರಾಮ್, ಎಚ್‌.ಆರ್. ಶಶಿಕುಮಾರ್, ಅಪರ ಮುಖ್ಯಸ್ಥ ಅಮಿತ್ ಗೇರ, ಪಿಎಸ್ಐ ಪಂಕಜ, ಸುನಿಲ್ ಗೋತ್ರಾಳೆ, ತನಿಕಾ ಸಹಾಯಕರಾದ ಮಹೇಶ್, ಕುಮಾರ್ ಮತ್ತಿತರರಿದ್ದರು.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]