If realization does not occur in one birth

ಹರಿತಲೇಖನಿ ದಿನಕ್ಕೊಂದು ಕಥೆ: ಒಂದು ಜನ್ಮದಲ್ಲಿ ಸಾಕ್ಷಾತ್ಕಾರವಾಗದಿದ್ದರೆ..?

Harithalekhani: ಎಲ್ಲರನ್ನೂ ಒಂದು ಪ್ರಶ್ನೆ ಕಾಡಬಹುದು. ಅದೇನೆಂದರೆ, ಮೊದಲು ಹುಟ್ಟು, ಆನಂತರ ಅಧ್ಯಯನ, ಸಾಧನೆ, ನಂತರ ಸಾವು. ಪುನಃ ಮರುಹುಟ್ಟು ಮತ್ತೆ ಅದೇ ಸಾಧನೆ ಮತ್ತೆ ಸಾವು ! ಇದರಿಂದ ಏನು ಉಪಯೋಗ.

ಒಂದು ಜನ್ಮದಲ್ಲಿ ಬ್ರಹ್ಮಸಾಕ್ಷಾತ್ಕಾರವಾಗದೇ ಇದ್ದರೆ ಆ ಎಲ್ಲಾ ಸಾಧನೆ ವ್ಯರ್ಥವೇ ? ಖಂಡಿತವಾಗಿ ಇಲ್ಲ ಎನ್ನುತ್ತಾನೆ ಕೃಷ್ಣ. ನಮ್ಮ ಜೀವನದಲ್ಲಿ ಗಳಿಸಿದ ಐಹಿಕ ಸಂಪತ್ತು (ಧನ, ಒಡವೆ, ಕೀರ್ತಿ, ಆಸ್ತಿ ಇತ್ಯಾದಿ) ಸತ್ತ ನಂತರ ನಮ್ಮೊಂದಿಗೆ ಬಾರದು ನಿಜ. ಆದರೆ ಅಧ್ಯಾತ್ಮ ಸಾಧನೆ ಹಾಗಲ್ಲ. ಒಂದು ಜನ್ಮದಲ್ಲಿ ಮಾಡಿದ ಅಧ್ಯಾತ್ಮ ಸಾಧನೆ ಎಂದೂ ನಾಶವಾಗದು.

ಈ ಜನ್ಮದಲ್ಲಿ ಅಧ್ಯಾತ್ಮದ ಒಂದು ಮೆಟ್ಟಿಲನ್ನು ಹತ್ತಿದರೆ ಮುಂದಿನ ಜನ್ಮದಲ್ಲಿ ಹುಟ್ಟುವಾಗಲೇ ನಾವು ಎರಡನೇ ಮೆಟ್ಟಲಲ್ಲಿರುತ್ತೇವೆ. ಹಿಂದಿನ ಜನ್ಮದಲ್ಲಿ ಎಲ್ಲಿ ನಿಂತಿದ್ದೇವೋ ಅಲ್ಲಿಂದ ಮುಂದುವರಿಯುವ ಪರಿಸರದಲ್ಲಿ ನಮ್ಮ ಜನನವಾಗುತ್ತದೆ.

ಸಾಮಾಜಿಕವಾಗಿ ನೀವು ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳು ಜನಿಸುವುದನ್ನು, ಹಾಗೂ ಅತ್ಯಂತ ಕಡಿಮೆ ಸಮಯದಲ್ಲಿ ಮಹಾನ್ ಸಾಧನೆ ಮಾಡುವುದನ್ನು ಕಾಣುತ್ತೀರಿ. ಇದು ಅವರು ಹಿಂದಿನ ಜನ್ಮದಿಂದ ಪಡೆದು ಬಂದ ಜ್ಞಾನ. ಹಿಂದಿನ ಜನ್ಮದ ಅಧ್ಯಾತ್ಮದ ಸಾಧನೆಯ ಮುಂದುವರಿದ ಭಾಗವೇ ಈ ಜನ್ಮ. ನಾವು ಆ ಜನ್ಮದಲ್ಲಿ ಎಲ್ಲಿ ನಿಲ್ಲಿಸಿದ್ದೇವೋ ಅಲ್ಲಿಂದಲೇ ಈ ಜನ್ಮದ ಸಾಧನೆ ಪ್ರಾರಂಭವಾಗಿ ಮುಂದುವರಿಯುತ್ತದೆ.

ಒಂದು ವೇಳೆ ನಮಗೆ ಅಧ್ಯಾತ್ಮ ಸಾಧನೆ ಮಾಡಬೇಕು ಎನ್ನುವ ಅಂತರಂಗದ ತುಡಿತವಿದ್ದು, ಅದನ್ನು ಈ ಜನ್ಮದಲ್ಲಿ ಸಾಧಿಸಲಾಗದಿದ್ದಲ್ಲಿ ಮುಂದಿನ ಜನ್ಮದಲ್ಲಿ ಸಾಧನೆಗೆ ಬೇಕಾದ ವಾತಾವರಣದಲ್ಲಿ, ವಿದ್ವಾಂಸರ ಸಂಗವಿರುವ ಕಡೆ ನಮ್ಮ ಜನ್ಮವಾಗುತ್ತದೆ. ಆದ್ದರಿಂದ ನಮ್ಮ ಅಧ್ಯಾತ್ಮ ಚಿಂತನೆಯಲ್ಲಿ ನಮ್ಮ ಒಂದೊಂದು ಜನ್ಮ ಒಂದೊಂದು ತರಗತಿ ಇದ್ದಂತೆ.

ಒಂದು ಗ್ರಂಥವನ್ನು ಸಂಪೂರ್ಣ ತಿಳಿಯಲು ನಾವು ಅನೇಕ ಜನ್ಮ ಸಾಧನೆ ಮಾಡಬೇಕು. ಈ ಕಾರಣದಿಂದ ಅಧ್ಯಾತ್ಮ ಸಾಧನೆ ಎಂದೂ ವ್ಯರ್ಥವಲ್ಲ. ಇಂದು ನೀವು ನಿಮ್ಮ ಜೀವನದ ಯಾವ ಘಟ್ಟದಲ್ಲಿದ್ದರೂ ಸರಿ, ಅಧ್ಯಾತ್ಮ ಸಾಧನೆಗೆ ಇದು ಸಕಾಲ. ಇಂದೇ ನಿಮ್ಮ ಸಾಧನೆಯನ್ನು ಆರಂಭಿಸಿ. ಅದು ನಿಮ್ಮನ್ನು ಮೋಕ್ಷ ಮಾರ್ಗದತ್ತ ಕೊಂಡೊಯ್ಯುತ್ತದೆ ಎನ್ನುವುದು ಕಟುಸತ್ಯ.

ಅಧ್ಯಾತ್ಮ ಪ್ರದರ್ಶನದ ವಸ್ತುವಲ್ಲ, ಅದು ಅಂತರಂಗದ ಸಾಧನೆ. ನಮ್ಮ ಜನ್ಮದಲ್ಲಿ ನಾವು ಅಧ್ಯಾತ್ಮದ ಕಿಂಚಿತ್ ಸಾಧನೆ ಮಾಡಿದರೂ ಕೂಡಾ, ಅದು ನಮ್ಮನ್ನು ಭಯದಿಂದ ಪಾರು ಮಾಡುತ್ತದೆ. ಭಯದಿಂದ ಅಭಯದತ್ತ ನಮ್ಮನ್ನು ಸಾಗಿಸುವ ಏಕಮಾತ್ರ ಸಾಧನ ಅಧ್ಯಾತ್ಮ.

ಕೃಪೆ: ಸನಾತನ ಸಂಸ್ಥೆ (ಸಾಮಾಜಿಕ ಜಾಲತಾಣ)

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!