PM E-DRIVE: Union Minister H.D. Kumaraswamy announces stimulus scheme

PM E-DRIVE: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ (PM E-DRIVE): ಸರಕು ಸಾಗಾಣೆ ವಲಯದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿರುವ ನರೇಂದ್ರ ಮೋದಿ ಅವರ ಸರ್ಕಾರ, ಇದೇ ಮೊದಲ ಬಾರಿಗೆ ವಿದ್ಯುತ್ ಚಾಲಿತ ಟ್ರಕ್ ಗಳಿಗೆ (ಇ-ಟ್ರಕ್‌ಗಳು) ಆರ್ಥಿಕ ಉತ್ತೇಜನ ನೀಡುವ ಯೋಜನೆಯನ್ನು ಆರಂಭಿಸಿದೆ.

ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ದೆಹಲಿಯ ತಮ್ಮ ಸಚಿವಾಲಯದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಈ ಯೋಜನೆಯನ್ನು ಪ್ರಕಟಿಸಿದ್ದು, ಪಿಎಂ ಇ ಡ್ರೈವ್ (PM E-DRIVE) ಯೋಜನೆಯ ಅಡಿಯಲ್ಲಿ ಟ್ರಕ್ ಗಳಿಗೆ ಪ್ರೋತ್ಸಾಹ ಧನ ಕೊಡಲಾಗುವುದು ಎಂದರು.

ದೇಶದಲ್ಲಿ ಸಾಮೂಹಿಕ ಸಾರಿಗೆ ಹಾಗೂ ಸರಕು ಸಾಗಣೆ ವ್ಯವಸ್ಥೆಯಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಪರಿಪೂರ್ಣವಾಗಿ ತಗ್ಗಿಸುವ ನಿಟ್ಟಿನಲ್ಲಿ ಪ್ರಧಾನಿ ಅವರ ಮಹತ್ವಾಕಾಂಕ್ಷೀಯ ಪಿಎಂ ಇ ಡ್ರೈವ್ ಯೋಜನೆಯನ್ನು ಈಗಾಗಲೇ ಅನುಷ್ಠಾನಕ್ಕೆ ತರಲಾಗಿದೆ. ಈ ಮೂಲಕ ಆರ್ಥಿಕ ಪ್ರೋತ್ಸಾಹ ನೀಡುವ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಸ್ವಚ್ಛ, ದಕ್ಷ ಮತ್ತು ಸುಸ್ಥಿರ ಸರಕು ಸಾಗಣೆಗೆ ಪೂರಕವಾಗಿ ಪರಿವರ್ತನಾತ್ಮಕ ಹೆಜ್ಜೆಗಳನ್ನು ಇಡಲಾಗಿದೆ. ಕೇಂದ್ರ ಸರ್ಕಾರವು ವಿದ್ಯುತ್ ಟ್ರಕ್‌ಗಳಿಗೆ ನೇರ ಆರ್ಥಿಕ ಪ್ರೋತ್ಸಾಹ ನೀಡುತ್ತಿರುವುದು ಇದೇ ಮೊದಲು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಯೋಜನೆಯ ಮಹತ್ವವನ್ನು ವಿವರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; “ಡೀಸೆಲ್ ಟ್ರಕ್‌ಗಳು ಒಟ್ಟು ವಾಹನ ಜನಸಂಖ್ಯೆಯಲ್ಲಿ ಕೇವಲ 3% ರಷ್ಟಿದ್ದರೂ, ಸಾರಿಗೆ ಸಂಬಂಧಿತ ಹಸಿರುಮನೆ ಅನಿಲ ಹೊರಸೂಸುವಿಕೆಯಲ್ಲಿ 42% ರಷ್ಟು ಕೊಡುಗೆ ನೀಡುತ್ತವೆ ಮತ್ತು ವಾಯುಮಾಲಿನ್ಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಿಂದ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ವಿದ್ಯುತ್ ಟ್ರಕ್‌ಗಳಿಗೆ ಮೀಸಲಾದ ಮೊತ್ತ ಮೊದಲ ಆರ್ಥಿಕ ಉತ್ತೇಜನ ಕಾರ್ಯಕ್ರಮ ಇದಾಗಿದೆ.

ಈ ಮೂಲಕ ರಾಷ್ಟ್ರವನ್ನು ಸುಸ್ಥಿರ ಸರಕು ಸಾಗಣೆ, ಸ್ವಚ್ಛ ಭವಿಷ್ಯ ಮತ್ತು 2047ರ ವೇಳೆಗೆ ವಿಕಸಿತ ಭಾರತ ಸಾಕಾರದತ್ತ ಕೊಂಡೊಯ್ಯುತ್ತದೆ, 2070ರ ವೇಳೆಗೆ ಇಂಗಾಲದ ನಿವ್ವಳ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸುವ ಗುರಿಯನ್ನು ಮುಟ್ಟಲಿದ್ದೇವೆ. ಇದು ಪ್ರಧಾನಿಗಳ ಸಂಕಲ್ಪವಾಗಿದೆ ಎಂದು ಕೇಂದ್ರ ಸಚಿವರು ನುಡಿದರು.

ಈ ಯೋಜನೆಯಡಿಯಲ್ಲಿ ಕೇಂದ್ರ ಮೋಟಾರು ವಾಹನ ನಿಯಮಗಳ (CMVR) ಅಡಿಯಲ್ಲಿ ಪ್ರಸ್ತಾಪಿಸಲಾಗಿದೆ.

•N2 ಮತ್ತು N3 ವರ್ಗದ ಎಲೆಕ್ಟ್ರಿಕ್ ಟ್ರಕ್‌ಗಳಿಗೆ ಬೇಡಿಕೆ ಪ್ರೋತ್ಸಾಹವನ್ನು ವಿಸ್ತರಿಸಲಾಗುತ್ತದೆ. N2 ವರ್ಗವು 3.5 ಟನ್‌ಗಳಿಗಿಂತ ಹೆಚ್ಚು ಮತ್ತು 12 ಟನ್‌ಗಳವರೆಗೆ ಒಟ್ಟು ವಾಹನ ತೂಕ (GVW) ಹೊಂದಿರುವ ಟ್ರಕ್‌ಗಳನ್ನು ಒಳಗೊಂಡಿದೆ.

  • N3 ವರ್ಗವು 12 ಟನ್‌ಗಳಿಗಿಂತ ಹೆಚ್ಚು ಮತ್ತು 55 ಟನ್‌ಗಳವರೆಗೆ GVW ಹೊಂದಿರುವ ಟ್ರಕ್‌ಗಳನ್ನು ಒಳಗೊಂಡಿದೆ. ಆರ್ಟಿಕ್ಯುಲೇಟೆಡ್ ವಾಹನಗಳ ಸಂದರ್ಭದಲ್ಲಿ ಆರ್ಥಿಕ ಉತ್ತೇಜನ ಯೋಜನೆ N3 ವರ್ಗದ ಪುಲ್ಲರ್ ಟ್ರಾಕ್ಟರ್‌ಗೆ ಮಾತ್ರ ಅನ್ವಯಿಸುತ್ತವೆ. ವಿಶ್ವಾಸಾರ್ಹತೆ ಮತ್ತು ಕಾರ್ಯಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ಯೋಜನೆಯು ಸಮಗ್ರ ತಯಾರಿಕಾ ಬೆಂಬಲಿತ ವಾರಂಟಿಗಳನ್ನು ಕಡ್ಡಾಯಗೊಳಿಸುತ್ತದೆ.
  • ಬ್ಯಾಟರಿಯನ್ನು ಐದು ವರ್ಷಗಳು ಅಥವಾ 5 ಲಕ್ಷ ಕಿಲೋಮೀಟರ್‌ಗಳವರೆಗೆ, ಇದರಲ್ಲಿ ಯಾವುದು ಮೊದಲೋ ಅದು ಖಾತರಿಯಡಿಯಲ್ಲಿ ಒಳಗೊಳ್ಳಬೇಕು.
  • ವಾಹನ ಮತ್ತು ಮೋಟಾರ್ ಐದು ವರ್ಷಗಳು ಅಥವಾ 2.5 ಲಕ್ಷ ಕಿಲೋಮೀಟರ್‌ಗಳ ಖಾತರಿಯನ್ನು ಹೊಂದಿರಬೇಕು, ಇದರಲ್ಲಿ ಕೂಡ ಯಾವುದು ಮೊದಲೋ ಅದನ್ನು ಪರಿಗಣಿಸಲಾಗುತ್ತದೆ.

ಎಲೆಕ್ಟ್ರಿಕ್ ಟ್ರಕ್ ದರವು ಕೈಗೆಟುಕುವ ಹಾಗೆ ಇರಬೇಕು ಎನ್ನುವ ಉದ್ದೇಶದಿಂದ ಈ ಉತ್ತೇಜನ ಯೋಜನೆಯ ಪ್ರೋತ್ಸಾಹಕ ಮೊತ್ತವು ಎಲೆಕ್ಟ್ರಿಕ್ ಟ್ರಕ್‌ನ GVW ಅನ್ನು ಅವಲಂಬಿಸಿರುತ್ತದೆ. ಗರಿಷ್ಠ ಪ್ರೋತ್ಸಾಹಕ ಮೊತ್ತವನ್ನು ಪ್ರತಿ ವಾಹನಕ್ಕೆ ₹9.6 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಈ ಪ್ರೋತ್ಸಾಹಕಗಳನ್ನು ಖರೀದಿ ಬೆಲೆಯಲ್ಲಿ ಮುಂಗಡ ಕಡಿತವಾಗಿ ನೀಡಲಾಗುತ್ತದೆ ಮತ್ತು ಮೊದಲು ಬಂದವರಿಗೆ ಆದ್ಯತೆ ಆಧಾರದ ಮೇಲೆ PM E-DRIVE ಪೋರ್ಟಲ್ ಮೂಲಕ OEM ಗಳಿಗೆ ಮರುಪಾವತಿ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ದೇಶಾದ್ಯಂತ ಸುಮಾರು 5,600 ಇ-ಟ್ರಕ್‌ಗಳ ನಿಯೋಜನೆಯನ್ನು ಈ ಯೋಜನೆ ಬೆಂಬಲಿಸುವ ನಿರೀಕ್ಷೆಯಿದೆ. ದೆಹಲಿಯಲ್ಲಿ ನೋಂದಾಯಿಸಲಾದ 1,100 ಇ-ಟ್ರಕ್‌ಗಳಿಗೆ ಮೀಸಲಾದ ನಿಬಂಧನೆಯನ್ನು ರೂಪಿಸಲಾಗಿದೆ. ಇದರ ಅಂದಾಜು ವೆಚ್ಚ ₹100 ಕೋಟಿ. ರಾಜಧಾನಿಯ ಗಂಭೀರ ವಾಯು ಗುಣಮಟ್ಟದ ಸವಾಲುಗಳನ್ನು ಪರಿಹರಿಸುವ ಗುರಿಯನ್ನು ಇದು ಹೊಂದಿದೆ ಎಂದರು ಕುಮಾರಸ್ವಾಮಿ ಅವರು.

ಸಿಮೆಂಟ್ ಉದ್ಯಮ, ಬಂದರುಗಳು, ಉಕ್ಕು ಮತ್ತು ಇತರ ಸಾಗಾಣಿಕೆ ವಲಯವು ಈ ಯೋಜನೆಯ ಪ್ರಯೋಜನ ಪಡೆಯಲಿರುವ ಪ್ರಮುಖ ಕ್ಷೇತ್ರಗಳಾಗಿವೆ. ವೋಲ್ವೋ, ಐಷರ್, ಟಾಟಾ ಮೋಟಾರ್ಸ್ ಮತ್ತು ಅಶೋಕ್ ಲೇಲ್ಯಾಂಡ್‌ನಂತಹ ಹಲವಾರು ಪ್ರಮುಖ ಕಂಪನಿಗಳು ಈಗಾಗಲೇ ಭಾರತದಲ್ಲಿ ಎಲೆಕ್ಟ್ರಿಕ್ ಟ್ರಕ್‌ಗಳನ್ನು ತಯಾರಿಸುವಲ್ಲಿ ತೊಡಗಿಸಿಕೊಂಡಿವೆ. ಆತ್ಮನಿರ್ಭರ ಭಾರತ್ ದೃಷ್ಟಿಕೋನದ ಅಡಿಯಲ್ಲಿ ಸ್ಥಳೀಯ ಸಾಮರ್ಥ್ಯಗಳನ್ನು ಹೆಚ್ಚಿಸುತ್ತವೆ ಎಂದು ಸಚಿವರು ಹೇಳಿದರು.

150 ಇ-ಟ್ರಕ್ ಗಳನ್ನು ನಿಯೋಜಿಸಲಿದೆ ಉಕ್ಕು ಪ್ರಾಧಿಕಾರ

ವಿದ್ಯುತ್ ಚಾಲಿತ ಟ್ರಕ್ ಗಳ ಬಳಕೆಯಲ್ಲಿ ದೊಡ್ಡ ಹೆಜ್ಜೆ ಇರಿಸಿರುವ ಉಕ್ಕು ಸಚಿವಾಲಯದ ಅಧೀನ ಸಂಸ್ಥೆಯಾಗಿರುವ ಭಾರತೀಯ ಉಕ್ಕು ಪ್ರಾಧಿಕಾರ (SAIL) ಮುಂದಿನ ಎರಡು ವರ್ಷಗಳಲ್ಲಿ 150 ಇ-ಟ್ರಕ್‌ಗಳನ್ನು ತನ್ನ ಕಾರ್ಯಾಚರಣೆಯ ವಿವಿಧ ವ್ಯೂಹಾತ್ಮಕ ಸ್ಥಳಗಳಲ್ಲಿ ನಿರ್ಧರಿಸಿದೆ. ಅಲ್ಲದೆ, ವಿವಿಧ ಉದ್ದೇಶಗಳಿಗೆ ತಾನು ಬಳಕೆ ಮಾಡುತ್ತಿರುವ ಒಟ್ಟಾರೆ ಟ್ರಕ್ ಗಳ ಪೈಕಿ ಕನಿಷ್ಠ 15% ವಿದ್ಯುತ್ ಚಾಲಿತ ಟ್ರಕ್ ಗಳನ್ನೇ ಬಳಕೆ ಮಾಡಲು ಪ್ರಾಧಿಕಾರ ನಿರ್ಧರಿಸಿದೆ.

ಇದರ ಜತೆಯಲ್ಲಿ, ಪ್ರೋತ್ಸಾಹ ಧನಕ್ಕೆ ಅರ್ಹತೆ ಪಡೆಯಲು ಹಾಗೂ ತಾನು ಬಳಕೆ ಮಾಡುತ್ತಿರುವ ಅವಧಿ ಮೀರಿದ ಹಳೆಯ ಮಾಲಿನ್ಯಕಾರಕ ಟ್ರಕ್‌ಗಳನ್ನು ವಿಲೇವಾರಿ ಮಾಡಲಿದೆ ಎಂದು ಇದೇ ಸಂದರ್ಭದಲ್ಲಿ ಉಕ್ಕು ಸಚಿವರೂ ಆಗಿರುವ ಕುಮಾರಸ್ವಾಮಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿ ಕಮರನ್ ರಿಜ್ವಿ ಹಾಗೂ ಹೆಚ್ಚುವರಿ ಕಾರ್ಯದರ್ಶಿ ಹನೀಫ್ ಖುರೇಷಿ ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!