GST shock of lakhs of rupees for small shop owners..!

ಚಿಕ್ಕ ಚಿಕ್ಕ ಅಂಗಡಿ ಮಾಲೀಕರಿಗೆ ಲಕ್ಷಾಂತರ ರೂ.GST ಶಾಕ್..!; UPI ಸ್ಟಿಕ್ಕರ್‌ಗಳಿಗೆ ಟೇಪ್, ಮಸಿ ಬಳಿಯುತ್ತಿರುವ ವರ್ತಕರು

ಬೆಂಗಳೂರು; ಜಿಎಸ್‌ಟಿ (GST) ಅಡಿ ನೋಂದಣಿ ಮಾಡಿಕೊಳ್ಳದ, ವಾರ್ಷಿಕ 40 ಲಕ್ಷ ರೂ.ಗಿಂತ ಹೆಚ್ಚಿನ ವಹಿವಾಟು ಹೊಂದಿರುವ ಸಣ್ಣ ಅಂಗಡಿ ಮಾಲೀಕರಿಗೆ ಕೇಂದ್ರ ಸರ್ಕಾರದ ಜಿಎಸ್ಟಿ ತೆರಿಗೆಯ ಹೊರೆ ತಲ್ಲಣವನ್ನು ಸೃಷ್ಟಿಸಿದೆ.

ಹೌದು ಶೇ.1ರಷ್ಟು ತೆರಿಗೆ ಪಾವತಿಸಿ ಜಿಎಸ್‌ಟಿ ನೋಂದಣಿ ಮಾಡಿಕೊಳ್ಳುವಂತೆ ವಾಣಿಜ್ಯ ತೆರಿಗೆ ಇಲಾಖೆ ಸೂಚನೆ ನೀಡಿದೆ. ಇದರ ಅನ್ವಯ ಟೀ ಅಂಗಡಿ, ಬೇಕರಿ, ಹೋಟೆಲ್, ಚಿಕ್ಕಚಿಕ್ಕ ಅಂಗಡಿ ಮಾಲೀಕರು ಲಕ್ಷಾಂತರ ರೂ. ತೆರಿಗೆ ಪಾವತಿಸುವ ಅನಿವಾರ್ಯತೆ ಎದುರಾಗಿದೆ.

ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯ ಕಲಂ 22ರ ಅನ್ವಯ ವಾರ್ಷಿಕ ಸರಕು ಪೂರೈಕೆದಾರರ ಸಮಗ್ರ ವಹಿವಾಟು 40 ಲಕ್ಷ ರೂ. ಮೀರಿದರೆ ಅಥವಾ ಸೇವೆಗಳ ಪೂರೈಕೆದಾರರ ಸಮಗ್ರ ವಹಿವಾಟು 20 ಲಕ್ಷ ರೂ. ಮೀರಿದರೆ ಜಿಎಸ್‌ಟಿ ನೋಂದಣಿ ಪಡೆಯುವುದು ಕಡ್ಡಾಯವಾಗಿದೆ.

2021-22 ರಿಂದ 2024-25ರ ಸಾಲಿನಲ್ಲಿ ಯುಪಿಐ (ಆನ್‌ಲೈನ್ ಪೇಮೆಂಟ್ ಆ್ಯಪ್) ಮೂಲಕ 40 ಲಕ್ಷ ರೂ. ಗೂ ಹೆಚ್ಚಿನ ಮೊತ್ತದ ವಹಿ ವಾಟು ನಡೆಸಿರುವ ಸಣ್ಣ ವರ್ತಕರು ಜಿಎಸ್‌ಟಿ ಅಡಿ ನೋಂದಣಿ ಮಾಡಿಕೊಳ್ಳದಿರುವುದು ಪತ್ತೆಯಾಗಿದೆ.

ಅಂತಹ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ಲಕ್ಷಾಂತರ ರೂ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿರುವುದು ಆತಂಕವನ್ನು ತಂದೊಡ್ಡಿದೆ. ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರ ನೀಡಿ, ಸೂಕ್ತ ತೆರಿಗೆ ಪಾವತಿಸುವಂತೆ ಸೂಚಿಸಲಾಗಿದೆ.

ಹೀಗೆ ನೋಟಿಸ್ ಪಡೆದ ವರ್ತಕರು ಕೂಡಲೇ ಜಿಎಸ್‌ಟಿ ನೋಂದಣಿ ಪಡೆಯುವಂತೆಯೂ ಸೂಚಿಸಲಾಗಿದೆ. ಯುಪಿಐ, ನಗದು ಸೇರಿದಂತೆ ಒಟ್ಟಾರೆ ವಾರ್ಷಿಕ 40 ಲಕ್ಷ ರೂ.ನಿಂದ ಗರಿಷ್ಠ 1.5 ಕೋಟಿ ರೂ.ವರೆಗೆ ವಹಿವಾಟು ನಡೆಸುವ ಸಣ್ಣ ವರ್ತಕರು ಶೇ.1ರಷ್ಟು ತೆರಿಗೆ ಪಾವತಿಸಿ ಕೂಡಲೇ ಜಿಎಸ್‌ಟಿ ನೋಂದಣಿ ಪಡೆಯುವಂತೆ ಇಲಾಖೆ ನಿರ್ದೇಶಿಸಿದೆ.

ಈ ಕುರಿತ ಹೆಚ್ಚಿನ ಮಾಹಿತಿಗೆ www.gst.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ತಿಳಿಸಲಾಗಿದೆ.

ಆನ್ಲೈನ್ ಟ್ರಾನ್ಸಕ್ಷ‌ನ್ಗೆ ಬಹಿಷ್ಕಾರ

ಈ ಹಿನ್ನೆಲೆಯಲ್ಲಿ ಅಂಗಡಿ ಬಳಿ ಅಳವಡಿಸಿರುವ. UPI ಸ್ಟೀಕ್ಕರ್ಗಳಿಗೆ ಮಸಿ ಬಳಿಯುತ್ತಿದ್ದು ಆನ್ಲೈನ್ ಟ್ರಾನ್ಸಕ್ಷ‌ನ್ಗೆ ಬಹಿಷ್ಕಾರ ಮಾಡುತ್ತಿದ್ದಾರೆ. ನಿನ್ನೆ ಸಂಜೆಯಿಂದಲೇ ಅನೇಕ ಅಂಗಡಿಗಳ ವರ್ತಕರು ಪೋನ್ ಪೇ, ಗೂಗಲ್ ಪೇ ಮುಂತಾದ ಆನ್ಲೈನ್ ಪೇಮೆಂಟ್ ಆಪ್ ಬಳಕೆಗೆ ನಿರ್ಬಂಧ ಹೇರಿದ್ದು, ನಗದು ನೀಡಿದರೆ ಮಾತ್ರ ವಹಿವಾಟು ಎಂಬುದಾಗಿ ಹೇಳುತ್ತಿದ್ದಾರೆ.

ಈ ಕುರಿತಂತೆ ಪ್ರತಿಕ್ರಿಯೆ ನೀಡಿದ ಹೆಸರೇಳಲು ಇಚ್ಚಿಸದ ವರ್ತಕರೋರ್ವರು, ಮೋದಿ ಅವರ ಮೇಲಿನ ಅಪಾರ ನಂಬಿಕೆಯಿಂದ ಆನ್ಲೈನ್ ವಹಿವಾಟು ಆರಂಭಿಸಿದ್ದೇವು. ಆದರೆ ಲಕ್ಷಾಂತರ ರೂ. ತೆರಿಗೆ ಕಟ್ಟುವಂತೆ ಚಿಕ್ಕಚಿಕ್ಕ ಅಂಗಡಿಗಳಿಗೆ ನೋಟಿ ನೀಡಿರುವುದು ಮಾಧ್ಯಮಗಳ ವರದಿ ನೋಡಿ ಭಯವಾಗುತ್ತಿದೆ.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕುರಿಯನ್ನು ಕೊಬ್ಬಿಸಿ, ಈಗ ಕತ್ತರಿಸಿದಂತಾಗಿದೆ ಬಡವರ ಪರಿಸ್ಥಿತಿ. ಚಿಕ್ಕ ಚಿಕ್ಕ ಅಂಗಡಿಗಳಿಗೆ ಲಕ್ಷಲಕ್ಷ ತೆರಿಗೆ ಎಂದರೆ ಕಥೆ ಏನು.? ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!