ತೆಲುಗು ಚಿತ್ರರಂಗದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ಇನ್ನಿಲ್ಲ..!

Veteran Telugu film actor Kota Srinivasa Rao is no more..!

ಹೈದರಾಬಾದ್: ತೆಲುಗು ಚಿತ್ರರಂಗ ಮತ್ತೊಮ್ಮೆ ದುಃಖದಲ್ಲಿ ಮುಳುಗಿದೆ. ಕಳೆದ ನಾಲ್ಕು ದಶಕಗಳಿಂದ ತಮ್ಮ ಅದ್ಭುತ ಅಭಿನಯದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ (Kota Srinivasa Rao) ಅವರು ಭಾನುವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಫಿಲ್ಮ ನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

ಕೋಟಾ ಶ್ರೀನಿವಾಸ ರಾವ್ ಅವರು ಪತ್ನಿ ರುಕ್ಕಿಣಿ ಹಾಗೂ ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ಕೋಟಾ ಶ್ರೀನಿವಾಸ ರಾವ್ ಅವರ ಅಗಲಿಕೆಯಿಂದ ತೆಲುಗು ಚಿತ್ರರಂಗದಲ್ಲಿ ಶೂನ್ಯತೆ ಮೂಡಿದೆ.

ವಯಸ್ಸಾದ ಕಾರಣ ನಡೆಯಲು ಕಷ್ಟವಾಗುತ್ತಿದ್ದರೂ, ಅವರು ಎರಡು ವರ್ಷಗಳ ಹಿಂದಿನವರೆಗೂ ಸಿನಿಮಾಗಳಲ್ಲಿ ಸಕ್ರಿಯರಾಗಿದ್ದರು. 2023ರಲ್ಲಿ ತೆರೆಕಂಡ ‘ಸುವರ್ಣ ಸುಂದರಿ’ ಅವರ ಕೊನೆಯ ಸಿನಿಮಾ.

ತಮ್ಮ ಸುದೀರ್ಘ ಸಿನಿ ಪಯಣದಲ್ಲಿ ಕೋಟಾ ಶ್ರೀನಿವಾಸ ರಾವ್ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕೇವಲ ವಿಭಿನ್ನ ಪಾತ್ರಗಳನ್ನು ನಿರ್ವಹಿಸಲಿಲ್ಲ, ಬದಲಿಗೆ ಆ ಪಾತ್ರಗಳಲ್ಲಿ ಜೀವಿಸಿದರು ಎಂದರೆ ತಪ್ಪಾಗಲಾರದು.

ಅವರ ನಟನೆ ಹಾಸ್ಯ ಮತ್ತು ವಿಲನ್ ಪಾತ್ರದ ವಿಶಿಷ್ಟ ಮಿಶ್ರಣವಾಗಿತ್ತು. ವಿಲನ್ ಪಾತ್ರಗಳಲ್ಲೂ ಹಾಸ್ಯವನ್ನು ತರುವುದು ಅವರ ವಿಶೇಷತೆಯಾಗಿತ್ತು.

‘ಆಡವಾರಿ ಮಾಟಲಕು ಅರ್ಥಾಲೇ ವೇರು ಲೇ ಸಿನಿಮಾದಲ್ಲಿನ ತಂದೆಯ ಪಾತ್ರ, ಆಹ ನಾ ಪೆಳ್ಳಂಟ’ದಲ್ಲಿ ಕಂಜೂಸ್ ಪಾತ್ರವಿರಲಿ, ‘ಗಣೇಶ್’ ಚಿತ್ರದಲ್ಲಿ ರಾಜಕಾರಣಿಯ ಪಾತ್ರವಿರಲಿ, ನುವ್ವು ವಸ್ತಾವನಿ ಚಿತ್ರದ ಮದ್ಯವ್ಯಸನಿ ಪೋಷಕ ಪಾತ್ರ ಸೇರಿದಂತೆ ಪ್ರತಿಯೊಂದು ಪಾತ್ರಕ್ಕೂ ಅವರು ತಮ್ಮದೇ ಆದ ವಿಶಿಷ್ಟ ಸ್ಪರ್ಶವನ್ನು ನೀಡುತ್ತಿದ್ದರು.

ಕೋಟಾ ಶ್ರೀನಿವಾಸ ರಾವ್ ಅವರು 1942ರ ಜುಲೈ 10ರಂದು ಕೃಷ್ಣಾ ಜಿಲ್ಲೆಯ ಕಂಕಿಪಡು ಎಂಬಲ್ಲಿ ಜನಿಸಿದರು. ಅವರ ತಂದೆ ಸೀತಾರಾಮಾಂಜನೇಯಲು ವೈದ್ಯರಾಗಿದ್ದರು.

ಕೋಟಾ ಅವರು ಚಿಕ್ಕ ವಯಸ್ಸಿನಲ್ಲಿ ವೈದ್ಯರಾಗಬೇಕೆಂದು ಕನಸು ಕಂಡರೂ, ಶಾಲಾ ದಿನಗಳಲ್ಲಿ ನಾಟಕಗಳಲ್ಲಿ ಸಕ್ರಿಯರಾದ ನಂತರ ನಟನೆಯ ಬಗ್ಗೆ ಆಸಕ್ತಿ ಬೆಳೆಸಿಕೊಂಡರು. ಪದವಿ ನಂತರ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಸಿಕ್ಕರೂ, ನಟನೆಯನ್ನೇ ತಮ್ಮ ವೃತ್ತಿಯನ್ನಾಗಿ ಆರಿಸಿಕೊಂಡರು.

ಅವರು ಕೇವಲ ತೆಲುಗು ಮಾತ್ರವಲ್ಲದೆ, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಭಾಷೆಗಳ ಚಲನಚಿತ್ರಗಳಲ್ಲೂ ನಟಿಸಿದ್ದಾರೆ. ಕನ್ನಡದಲ್ಲಿ ‘ಲೇಡಿ ಕಮಿಷನರ್’, ‘ರಕ್ತ ಕಣ್ಣೀರು’, ‘ಲವ್’, ‘ನಮ್ಮ ಬಸವ’, ‘ನಮ್ಮಣ್ಣ’, ‘ಶ್ರೀಮತಿ’, ‘ಕಬ್ಬಾ’ ಸೇರಿದಂತೆ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕೋಟಾ ಶ್ರೀನಿವಾಸ ರಾವ್ ಅವರು ನಟನೆಯ ಜೊತೆಗೆ ರಾಜಕೀಯದಲ್ಲೂ ತೊಡಗಿಕೊಂಡಿದ್ದರು. 1999ರಿಂದ 2004ರವರೆಗೆ ವಿಜಯವಾಡ ಪೂರ್ವ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು.

ಅವರ ಮಗ ಕೋಟಾ ವೆಂಕಟ ಆಂಜನೇಯ ಪ್ರಸಾದ್ ತಂದೆಯ ಹೆಜ್ಜೆ ಹಿಡಿದು ಚಿತ್ರರಂಗಕ್ಕೆ ಬಂದಿದ್ದರೂ, ದುರದೃಷ್ಟವಶಾತ್ ಅಪಘಾತವೊಂದರಲ್ಲಿ ಅಕಾಲಿಕವಾಗಿ ನಿಧನರಾದರು. ಮಗನ ಸಾವಿನಿಂದ ಕೋಟಾ ಅವರು ತೀವ್ರವಾಗಿ ನೊಂದಿದ್ದರು.

ಅವರ ಸಹೋದರ ಶಂಕರ್ ರಾವ್ ಕೂಡ ನಟರಾಗಿದ್ದಾರೆ. ಕೋಟಾ ಶ್ರೀನಿವಾಸ ರಾವ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಮತ್ತು ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]