Doddaballapura Shakti limited to a few leaders..!?; Congress workers outraged

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ದೊಡ್ಡಬಳ್ಳಾಪುರ: ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

ಅಂತೆಯೆ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿವತಿಯಿಂದ ದೊಡ್ಡಬಳ್ಳಾಪುರ ನಗರದ KSRTC ಬಸ್ ನಿಲ್ದಾಣದಲ್ಲಿ ಬಸ್ ಗಳಿಗೆ ವಿಶೇಷ ಅಲಂಕಾರ ಮಾಡಿ, ಪೂಜೆ ಸಲ್ಲಿಸಿ, ಬಸ್ ನಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯರಿಗೆ ಸಿಹಿ ಹಂಚಿ ಸಂಭ್ರಮಿಸಲಾಗಿದೆ.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆಗಳ (Guarantee scheme) ಅನುಷ್ಟಾನ ಸಮಿತಿ ಅಧ್ಯಕ್ಷ ಎನ್.ವಿಶ್ವನಾಥ್ ರೆಡ್ಡಿ, ದೊಡ್ಡಬಳ್ಳಾಪುರ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಸದಸ್ಯ ಅಂಜನ ಮೂರ್ತಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಆದರೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡದೇ ಇರುವ ಕುರಿತು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ‌.

ಹೌದು ಕಾಂಗ್ರೆಸ್ ಕಾರ್ಯಕರ್ತರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವರ್ತನೆಯ ವಿರುದ್ಧ ಕೆರಳಿದ್ದಾರೆ. ಬೇಕಿದ್ದಾಗ ಬಳಸಿಕೊಳ್ಳುತ್ತಾರೆ, ಬಳಿಕ ತಾತ್ಸರ ಮಾಡುತ್ತಾರೆ. ನಮಗ್ಯಾರಿಗೂ ಮಾನ್ಯತೆ ನೀಡುತ್ತಿಲ್ಲ. ಬಿಳಿ ಬಟ್ಟೆ ತೊಟ್ಟವರಿಗೆ ಮಾತ್ರ ಮಾನ್ಯತೆ ಎಂಬಂತಾಗಿದೆ.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಪಕ್ಷ ಸಂಘಟನೆ ಮಾಡುತ್ತಿಲ್ಲ. ಅವರ ಅನುಕೂಲಕ್ಕೆ ಮಾತ್ರ ಪಕ್ಷವನ್ನು ಬಳಸಿಕೊಳ್ಳುತ್ತಿದ್ದಾರೆ ಎಂಬ ಮಾತುಗಳು ವ್ಯಾಪಕವಾಗುತ್ತಿದೆ.

ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಶ್ರಮಿಸಿದ್ದೇವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎದುರಾಳಿಯ ಆಸೆ, ಆಮಿಷಗಳಿಂದಾಗಿ ನಮ್ಮ ಅಭ್ಯರ್ಥಿಗೆ ಹಿನ್ನಡೆಯಾಗಿದೆಯೇ ಹೊರತು ಕಾರ್ಯಕರ್ತರು ಹೊಣೆಯಲ್ಲ.

ಆದರೆ ಇದನ್ನೇ ಕಾರಣವಾಗಿಟ್ಟುಕೊಂಡು ನಿಷ್ಟಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿದೆ. ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಪಕ್ಷದಲ್ಲಿ ಮಾನ್ಯತೆಯೇ ಇಲ್ಲವೆಂಬಂತೆ ತಾತ್ಸಾರದಿಂದ ನೋಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿವೆ.

ಇನ್ನೂ ಇವತ್ತಿನ ಕಾರ್ಯಕ್ರಮದ ಕುರಿತು ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರಲ್ಲಿ ಒಬ್ಬರಾದ ತಳಗವಾರ ಪುನೀತ್ ಎನ್ನುವವರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿಯೇ ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ ಯೋಜನೆ ಸಂಭ್ರಮ ಎಂದು ಬರೆದಿದ್ದಾರೆ.

ಈ ಪೊಸ್ಟ್ಗೆ ಶಕ್ತಿ ಯೋಜನೆ ಮಾತ್ರವಲ್ಲ, ದೊಡ್ಡಬಳ್ಳಾಪುರ ಕಾಂಗ್ರೆಸ್ ಸಮಿತಿ ಕೆಲವೇ ನಾಯಕರಿಗೆ ಸೀಮಿತವಾಗಿದೆ, ನಿಷ್ಠಾವಂತ ಕಾರ್ಯಕರ್ತರ ಲೆಕ್ಕದಲ್ಲಿ ಇಲ್ಲಾ ಹಿಂದುಳಿದ ವರ್ಗದವರ ಕಡಗಣನೆ, ಇದೇನಿದು ಅಸಮಾಧಾನದ ಹೊಗೆ, ಕೆಲವು ಹೊಸ ಮುಖಗಳಿಗೆ ಮಾತ್ರ ಅಧ್ಯತೆ ಎಂಬಂತೆ ಅನೇಕರು ಕಾಮೆಂಟ್ ಮಾಡುತ್ತಿದ್ದಾರೆ.

ರಾಜಕೀಯ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರ ಸ್ಥಳಿಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಗೆಲುವು: ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ

ಮಹಾರಾಷ್ಟ್ರದ ಪ್ರತಿಷ್ಠಿತ ಬೃಹತ್ ಮುಂಬೈ ಮಹಾನಗರ ಪಾಲಿಕೆ ಸೇರಿದಂತೆ ಪುಣೆ, ನಾಗಪೂರ ಸೇರಿದಂತೆ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಬಿಜೆಪಿ (BJP) ಮತ್ತು ಶಿವಸೇನೆ (ಏಕನಾಥ ಸಿಂಧೆ ಬಣ) ದೊಡ್ಡ ಪ್ರಮಾಣದಲ್ಲಿ ಜಯಗಳಿಸಿದ್ದಾರೆ.

[ccc_my_favorite_select_button post_id="118518"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!