Excavation of Buddhist site begins at Rajghatta

ರಾಜಘಟ್ಟದಲ್ಲಿ ಬೌದ್ಧನೆಲೆಯ ಉತ್ಖನನಕ್ಕೆ ಚಾಲನೆ

ದೊಡ್ಡಬಳ್ಳಾಪುರ: ಬೌದ್ಧ ನೆಲೆಗಳನ್ನು (Buddhist site) ಪ್ರತಿಬಿಂಬಿಸುವ ಚೈತ್ಯ-ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರಲು ಬೌದ್ಧ ನೆಲೆ ಉತ್ಖನನಕ್ಕೆ ಚಾಲನೆ ನೀಡಲಾಗಿದ್ದು ರಾಜಘಟ್ಟವು ಮುಂದೆ ಮಹತ್ವದ ನೆಲೆಯಾಗಲಿದೆ ಎಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ ಪಾಟೀಲ್ (Dr.H.K.Patil) ಅವರು ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ರಾಜಘಟ್ಟ ಗ್ರಾಮದ ಬೂದಿಗುಂಡಿಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ರಾಜ್ಯದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬೌದ್ಧನೆಲೆಯ ಉತ್ಖನನಕ್ಕೆ ಚಾಲನೆ ನೀಡುವ ಮೂಲಕ ಅವರು ಮಾತನಾಡಿದರು.

ರಾಜಘಟ್ಟ ಗ್ರಾಮದಲ್ಲಿ ಬೌದ್ಧನೆಲೆಯ ಕುರಿತಾದ ಸ್ತೂಪಗಳು, ಹಾಗೂ ವಿವಿ‍ಧ ಅವಶೇಷಗಳು ಪತ್ತೆಯಾಗಿದ್ದು, ಕಾರಣಾಂತರದಿಂದ ಅಪೂರ್ಣಗೊಂಡಿದ್ದ ಉತ್ಖನನಕ್ಕೆ, ಕೇಂದ್ರ ಪುರಾತತ್ವ ಇಲಾಖೆ ಅನುಮೋದನೆಯೊಂದಿಗೆ ಈಗ ರಾಜ್ಯ ಸರ್ಕಾರದಿಂದ ಮರು ಚಾಲನೆ ನೀಡಲಾಗಿದೆ.

ಪ್ರೋ ಎಮ್.ಎಸ್ ಕೃಷ್ಣ ಮೂರ್ತಿ ಅವರು ಈ ಉತ್ಖನನದ ಪ್ರಧಾನ ನಿರ್ದೇಶಕರಾಗಿರುತ್ತಾರೆ.

2001 ಮತ್ತು 2004ರಲ್ಲಿ ಸಂಶೋಧಕ ಪ್ರೊ.ಎಂ.ಎಸ್.ಕೃಷ್ಣಮೂರ್ತಿ ಮಾರ್ಗದರ್ಶನದಲ್ಲಿ ರಾಜಘಟ್ಟದಲ್ಲಿ ಕ್ರಮಬದ್ಧವಾಗಿ ಉತ್ಖನನ ಕಾರ್ಯ ನಡೆದಿತ್ತು. ಅದರ ಫಲವಾಗಿ ಬೌದ್ದ ಧರ್ಮಿಯರು ಚೈತ್ಯಾಲಯ ಮತ್ತು ಅದರ ಸುತ್ತಲೂ ನಿರ್ಮಿತವಾಗಿದ್ದ ಬೌದ್ಧ ವಿಹಾರದ ಪಾಯದ ಅವಶೇಷಗಳು ಬೆಳಕಿಗೆ ಬಂದವು.

ಈಗ ನಡೆಯಲಿರುವ ಈ ಮಹತ್ತರ ಉತ್ಖನನ ಕಾರ್ಯಕ್ರಮದಿಂದ ಬೌದ್ಧಧರ್ಮದ ಇತಿಹಾಸ, ಕುರುಹುಗಳು, ಮಾರ್ಗದರ್ಶನ ಹಾಗೂ ಬುದ್ದನ ಸಂದೇಶ ಅರಿಯಲು ಸಹಕಾರಿಯಾಗಲಿದೆ ಎಂದರು.

ಬುದ್ಧನ ಸಂದೇಶಗಳು ಜನರ ಬದುಕಿಗೆ ಸಮೀಪವಾಗಿದ್ದು ನಾವೇಲ್ಲರು ಬುದ್ಧನ ಸಂದೇಶಗಳನ್ನು ಅರಿಯಬೇಕು, ಅವರ ಸಂದೇಶಗಳೆ ನಮಗೆ ಪ್ರೇರಣೆ ಎಂದರಲ್ಲದೆ ಉತ್ಖನನ ಕಾರ್ಯಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವರಾದ ಡಾ.ಎಚ್.ಕೆ ಪಾಟೀಲ್ ಅವರು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರಿಂದ ಪುಸ್ತಕ ಬಿಡುಗಡೆ

ಕರ್ನಾಟಕದಲ್ಲಿ ಬೌದ್ಧಕಲೆ ಮತ್ತು ಸಂಸ್ಕೃತಿ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಬೌದ್ಧ ಧರ್ಮವನ್ನು ಈಡಿ ಜಗತ್ತು ಒಪ್ಪಿಕೊಂಡಿದೆ. ನಾವು ಬುದ್ಧನನ್ನು ಮಾತ್ರ ನೋಡುತ್ತೇವೆ ಅವನ ಸಿದ್ದಾಂತ ಅವನು ತೋರಿಸಿದ ಸುಖ ಜೀವನದ ದಾರಿ ದೀಪವನ್ನು ತಿಳಿದುಕೊಳ್ಳಬೇಕು.

ರಾಜ್ಯ ಪುರತತ್ವ ಇಲಾಖೆ ರಾಜಘಟ್ಟದಲ್ಲಿ ಸಿಕ್ಕಿರುವ ಬೌದ್ಧ ಧರ್ಮದ ಚೈತ್ಯ- ವಿಹಾರ ಸಂಕೀರ್ಣದ ಸಂಪೂರ್ಣ ಚಿತ್ರಣವನ್ನು ಬೆಳಕಿಗೆ ತರುವ ಯೋಜನೆಯನ್ನು ಹಮ್ಮಿಕೊಂಡಿದೆ. ಈ ಭೂಗರ್ಭದಲ್ಲಿ ಅಡಗಿರುವ ಬೌದ್ಧ ಮಂತ್ರ ಮುದ್ರಿತ ಮಣ್ಣಿನ ಬಿಲ್ಲೆಗಳು ಅವುಗಳ ಗಾತ್ರ ಅಗಲ ಚೈತ್ಯ ವಿಹಾರ ಎಲ್ಲಾವೂ ಬೌದ್ಧ ಧರ್ಮದ ಧಾರ್ಮಿಕ ಶಕ್ತಿ ಮತ್ತು ಮೌಲ್ಯವನ್ನು ಪ್ರತಿಬಿಂಬಿಸುತ್ತದೆ ಹಾಗಾಗಿ ಇದರ ಸಂಪೂರ್ಣ ಅಭಿವೃದ್ಧಿಗೆ ನಾವೆಲ್ಲರು ಕೈಜೋಡಿಸಬೇಕು. ನಮ್ಮ ಇತಿಹಾಸವನ್ನು ಅರಿಯುವ ನಿಟ್ಟಿನಲ್ಲಿ ಉತ್ಖನನ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರು ಹಾಗೂ ಸಂಶೋಧಕರಾದ ಎಂ.ಎಸ್ ಕೃಷ್ಣಮೂರ್ತಿ, ಸಾಹಿತಿಗಳಾದ ಡಾ.ಎಲ್ ಹನುಮಂತಯ್ಯ, ನಾಡೋಜ ಪ್ರೊ.ಹಂಪ ನಾಗರಾಜ್, ಮೈಸೂರಿನ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಆಯುಕ್ತರು ದೇವರಾಜು ಎ, ದೊಡ್ಡಬಳ್ಳಾಪುರ ಮಾಜಿ ಶಾಸಕ ವೆಂಕಟರಮಣಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ರಾಜಘಟ್ಟ ಉತ್ಖನನ ಭೂಮಾಲೀಕರು ಕೃಷ್ಣಪ್ಪ ಎನ್.ಅಂಜಿನಪ್ಪ, ಸ್ಥಳೀಯ ಜನ ಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!