The never-ending crisis in the BJP...

ಬಿಜೆಪಿಯಲ್ಲಿ ಮುಗಿಯದ ಬಿಕ್ಕಟ್ಟು… ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭಸುದ್ದಿ ಎಂದು ಯತ್ನಾಳ್ ಪೋಸ್ಟ್‌..!!

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ (BJP) ಬಣಬಡಿದಾಟ ದಿನೇದಿನೇ ತೀವ್ರಗೊಳ್ಳುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ಗೊಂದಲ ಜಟಿಲ ವಾಗುತ್ತಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಕದನ ಎಂದು ಕೆಲ ಖಾಸಗಿ ಚಾನಲ್ ಮೂಲಕ ದೊಡ್ಡದು ಮಾಡಿಸಿ, ಏನೇ ಮರೆಮಾಚಲು ಪ್ರಯತ್ನಿಸಿದರು‌ ಬಣಬಡಿದಾಟಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ.

ಇತರೆ ರಾಜ್ಯಗಳ ಅಧ್ಯಕ್ಷರನ್ನು ವರಿಷ್ಠರು ಘೋಷಣೆ ಮಾಡುತ್ತಿದ್ದರೂ ಕರ್ನಾಟಕದಲ್ಲಿ ಯಾರಿಗೆ ಪಟ್ಟ ಎಂಬ ಕುರಿತಾಗಿ ಗಟ್ಟಿ ನಿರ್ಧಾರ ಕೈಗೊಳ್ಳಲು ಈ ಕ್ಷಣದ ವರೆಗೂ ಹೈಕಮಾಂಡ್ ವರಿಷ್ಠರಿಗೆ ಸಾಧ್ಯವಾಗದಿರುವುದು ಕೂಡ ಅನುಮಾನ ಹುಟ್ಟುಹಾಕಿದೆ.

ಶಿಸ್ತಿನ ಪಕ್ಷ ಎಂದೇ ತನ್ನನ್ನು ಗುರುತಿಸಿಕೊಂಡ ಬಿಜೆಪಿ ಯಲ್ಲಿ ಶಿಸ್ತು ಪದೇ ಪದೆ ಶಿಸ್ತು ಉಲ್ಲಂಘನೆಯಾಗುತ್ತಿದೆ ಎಂಬುದು ನೊಂದ ಕಾರ್ಯಕರ್ತರ ಅಳಲಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಹೈಕಮಾಂಡ್ ಅಷ್ಟೊಂದು ಪ್ರಬಲವಾಗಿದ್ದರೂ ನಾಯಕರು ಕರ್ನಾಟಕದ ಕುರಿತಾಗಿ ನಿರ್ಧಾರ ಕೈಗೊಳ್ಳಲು ಯಾಕೆ ಹಿಂದೇಟು ಹಾಕುತ್ತಿದ್ದಾರೆ ಎಂಬುದು ಕೂಡ ಕಗ್ಗಂಟಾಗಿ ಉಳಿದಿದೆ.

ಬಿ.ವೈ.ವಿಜಯೇಂದ್ರ. (B.Y.Vijayendra) ಅವರನ್ನು ಮುಂದುವರಿಸಬೇಕೋ, ಬೇಡವೋ ಎಂಬುದು ಕೂಡ ಹೈಕಮಾಂಡ್ ನಾಯಕರಿಗೆ ಕಾಡುತ್ತಿದೆ ಎಂಬುದು ಬಹಿರಂಗ.

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಭದ್ರ ನೆಲೆ ಇರುವುದು ಕರ್ನಾಟಕದಲ್ಲಿ ಮಾತ್ರ. ಇದು ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು. ಬೇರೆ ಯಾವ ರಾಜ್ಯದಲ್ಲೂ ಬಿಜೆಪಿ ಅಧಿಕಾರ ಗಳಿಸಿಲ್ಲ.

ಆದರೆ ಕರ್ನಾಟಕದಲ್ಲಿ ಬಿ.ಎಸ್.ಯಡಿಯೂರಪ್ಪ ಪ್ರಯತ್ನದಿಂದ ಬಿಜೆಪಿ ಆಡಳಿತ ನಡೆಸಿದೆ. ಆದರೆ ಅದೇ ಯಡಿಯೂರಪ್ಪ ಅವರನ್ನು 75 ವರ್ಷದ ಕಾರಣ ನೀಡಿ, ಅಧಿಕಾರದಿಂದ ಕೆಳಗಿಳಿಸಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೂಲೆ ಗುಂಪಾಗಿ ಮಾಡಲಾಗಿತು. ಇದರ ಪರಿಣಾಮ ಪಕ್ಷ ಎದುರಿಸಬೇಕಾಗಿ ಬಂದಿರುವುದು ವಾಸ್ತವ.

ಯಡಿಯೂರಪ್ಪ ಕುಟುಂಬಕ್ಕೆ ಮಣೆ ಹಾಕಿರುವುದಕ್ಕೆ ಬಿಜೆಪಿಯಲ್ಲಿ ಭುಗಿಲೆದ್ದಿರುವ ಅಸಮಾಧಾನ ಹೈಕಮಾಂಡ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಈ ನಡುವೆ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಶಮನ ಮಾಡಲು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನೇತೃತ್ವದಲ್ಲಿ ಸಭೆಗಳು ನಡೆದಿದ್ದವು. ಮಾಜಿ ಡಿಸಿಎಂ ಅಶ್ವತ್ಥ ನಾರಾಯಣ ಅವರ ನಿವಾಸದಲ್ಲಿ RSS ನಾಯಕರ ಸಮ್ಮುಖದಲ್ಲಿ ನಡೆದ ಸಂಧಾನ ಮಾತುಕತೆಗಳು ಫಲ ಕೊಡಲಿಲ್ಲ. ಎರಡು ಸಭೆ ನಡೆಸಿದರೂ ಅದರಿಂದ ಅನುಕೂಲ ಆಗಿಲ್ಲ.

ಇದರ ನಡುವೆ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ (Basanagowda Patil Yatnal) ಪೋಸ್ಟ್ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಉಚ್ಚಾಟಿತ ಶಾಸಕ ಯತ್ನಾಳ್, ಶೀಘ್ರದಲ್ಲಿ ಕರ್ನಾಟಕದ ಜನತೆಗೆ ಶುಭಸುದ್ದಿ ಎಂದು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ಕರ್ನಾಟಕ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಯತ್ನಾಳ್‌ ಮಾಡಿರುವ ಪೋಸ್ಟ್ ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಶುಭ ಸುದ್ದಿ ಯಾರಿಗೆ? ಅಂತ ಸಾರ್ವಜನಿಕರು ತಲೆ ಕೆಡಿಸಿಕೊಂಡಿದ್ದಾರೆ. ಬಿಜೆಪಿ ರೆಬೆಲ್ ಟೀಮ್ ನಿರಂತರ ಯಡಿಯೂರಪ್ಪ ಕುಟುಂಬದ ವಿರುದ್ಧ ಸೆಟೆದು ನಿಂತಿದ್ದು ಹೈ ಕಮಾಂಡ್ ಶಾಕ್ ಕೊಡುತ್ತಾ ಅನ್ನೋ ಕೌತುಕ ಮನೆಮಾಡಿದೆ.

ಉಚ್ಚಾಟಿತರಾದ ಯತ್ನಾಳ್ ಅವರು ಮರಳಿ ಬಿಜೆಪಿ ಪಾಳಯಕ್ಕೆ ಮರಳಲು ಉತ್ಸುಕರಾಗಿದ್ದಾರೆ. ಸದ್ದಿಲ್ಲದೇ ಯತ್ನಾಳ್ ಎಂಟ್ರಿಗೆ ಸಿದ್ಧತೆ ನಡೆದಿದೆ ಎನ್ನಲಾಗಿದ್ದು, ಕೇಸರಿಪಡೆಯಲ್ಲಿ ಸಾಕಷ್ಟು ನಾಟಕೀಯ ಬೆಳವಣಿಗೆ ನಿರೀಕ್ಷೆ ಮಾಡಲಾಗಿದೆ.

ಈ ನಡುವೆ ಬಹುತೇಕ 1 ವಾರದಲ್ಲಿ ಬಿಜೆಪಿ ರಾಜ್ಯಧ್ಯಕ್ಷರ ಆಯ್ಕೆ ಆಗಲಿದೆ ಎನ್ನಲಾಗುತ್ತಿದ್ದು, ಈ ಎಲ್ಲಾ ಬೆಳವಣಿಗೆ ಮಧ್ಯೆ ಯತ್ನಾಳ್ ಮಾಡಿರೋ ಪೋಸ್ಟ್ ಹೊಸ ಸಂಚಲನ ಮೂಡಿಸಿದೆ.

ಬಿಜೆಪಿ ರೆಬೆಲ್ ಲೀಡರ್ಸ್ ಹಾಗೂ ವಿಜಯೇಂದ್ರ ನಡುವೆ ರಾಜೀ ಸಂಧಾನಕ್ಕೆ ಜೋಶಿ ಹಾಗೂ ಸದಾನಂದಗೌಡ ಮಧ್ಯಸ್ಥಿತಿಕೆ ವಹಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದು, ವಿರೋಧಿ ಬಣ ಸ್ಟ್ರಾಂಗ್ ಆಗಿ ಆ್ಯಕ್ಟಿವ್ ಆಗುತ್ತಿದ್ದಂತೆಯೇ ಮಗ ವಿಜಯೇಂದ್ರನನ್ನು ಉಳಿಸಿಕೊಳ್ಳಲು ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡ್ತಿದ್ದಾರೆ ಎನ್ನಲಾಗಿದೆ. ಹೀಗಿರುವಾಗ ಯತ್ನಾಳ್ ಪೋಸ್ಟ್ ಹೊಸ ಚರ್ಚೆ ಹುಟ್ಟುಹಾಕಿದೆ.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!