Karnataka Congress Guarantee Scheme Model in Bihar too

ಬಿಹಾರದಲ್ಲೂ ಕರ್ನಾಟಕ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮಾದರಿ; ಉಚಿತ ವಿದ್ಯುತ್ ಘೋಷಿಸಿದ ಬಿಜೆಪಿ ಮಿತ್ರ ಪಕ್ಷ..!

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ವಿರೋಧಿಸುತ್ತಲೇ ಇರುವ ವಿರೋಧ ಪಕ್ಷಗಳು, ಸದ್ದಿಲ್ಲದೆ ತಮ್ಮ ಚುನಾವಣೆ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಅಳವಡಿಸಿಕೊಳ್ಳುತ್ತಿವೆ.

ಅದರಲ್ಲಿಯೂ ಕಾಂಗ್ರೆಸ್‌ನ ಪ್ರಮುಖ ವಿರೋಧ ಪಕ್ಷವಾದ ಬಿಜೆಪಿ, ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಖಂಡಿಸಿತ್ತು. ಆದರೆ ಕಳೆದ ಚುನಾವಣೆಯಲ್ಲಿ ಮೋದಿಕಿ ಗ್ಯಾರಂಟಿ ಘೋಷಿಸಿ ಮುಜುಗರಕ್ಕೀಡಾಗಿತ್ತು. ಈಗ ಸರದಿ ಅದರ ಮಿತ್ರ ಪಕ್ಷ ಜೆಡಿಯುದ್ದಾಗಿದೆ.

ಹೌದು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಜ್ಯೂತಿ ಯೋಜನೆ ಉಚಿತ ವಿದ್ಯುತ್ ಸೌಲಭ್ಯವನ್ನು ಜೆಡಿಯು ಘೋಷಿಸಿದೆ.

ಈ ಕುರಿತಂತೆ ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಈ ಕುರಿತಂತೆ ಟ್ವಿಟ್ ಮಾಡಿದ್ದು, ನಾವು ಆರಂಭದಿಂದಲೂ ಎಲ್ಲರಿಗೂ ಕೈಗೆಟುಕುವ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಈಗ ನಾವು ಆಗಸ್ಟ್ 1, 2025 ರಿಂದ, ಅಂದರೆ ಜುಲೈ ಬಿಲ್‌ನಿಂದ, ರಾಜ್ಯದ ಎಲ್ಲಾ ಗೃಹಬಳಕೆದಾರರು 125 ಯೂನಿಟ್‌ಗಳವರೆಗಿನ ವಿದ್ಯುತ್‌ಗೆ ಹಣ ಪಾವತಿಸಬೇಕಾಗಿಲ್ಲ ಎಂದು ನಿರ್ಧರಿಸಿದ್ದೇವೆ.

ಇದು ರಾಜ್ಯದ ಒಟ್ಟು 1 ಕೋಟಿ 67 ಲಕ್ಷ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ. ಮುಂದಿನ ಮೂರು ವರ್ಷಗಳಲ್ಲಿ, ಈ ಎಲ್ಲಾ ಗೃಹಬಳಕೆದಾರರು ಅವರ ಒಪ್ಪಿಗೆಯನ್ನು ಪಡೆದು ತಮ್ಮ ಮನೆಗಳ ಛಾವಣಿಯ ಮೇಲೆ ಅಥವಾ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಮೂಲಕ ಪ್ರಯೋಜನ ಪಡೆಯಬೇಕೆಂದು ನಾವು ನಿರ್ಧರಿಸಿದ್ದೇವೆ.

ಕುಟೀರ ಜ್ಯೋತಿ ಯೋಜನೆಯಡಿಯಲ್ಲಿ, ರಾಜ್ಯ ಸರ್ಕಾರವು ಅತ್ಯಂತ ಬಡ ಕುಟುಂಬಗಳಿಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಸಂಪೂರ್ಣ ವೆಚ್ಚವನ್ನು ಭರಿಸುತ್ತದೆ ಮತ್ತು ಉಳಿದ ಮೊತ್ತಕ್ಕೆ ಸಾಕಷ್ಟು ಬೆಂಬಲವನ್ನು ನೀಡುತ್ತದೆ.

ಇದರಿಂದಾಗಿ, ಗೃಹಬಳಕೆಯ ಗ್ರಾಹಕರು ಈಗ 125 ಯೂನಿಟ್ ವಿದ್ಯುತ್‌ಗೆ ಏನನ್ನೂ ಖರ್ಚು ಮಾಡಬೇಕಾಗಿಲ್ಲ ಮತ್ತು ಅಂದಾಜಿನ ಪ್ರಕಾರ, ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 10 ಸಾವಿರ ಮೆಗಾವ್ಯಾಟ್‌ಗಳಷ್ಟು ಸೌರಶಕ್ತಿ ಲಭ್ಯವಿರುತ್ತದೆ ಎಂದಿದ್ದಾರೆ.

ರಾಜಕೀಯ

ಬಿಹಾರದಲ್ಲೂ ಕರ್ನಾಟಕ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮಾದರಿ; ಉಚಿತ ವಿದ್ಯುತ್ ಘೋಷಿಸಿದ ಬಿಜೆಪಿ ಮಿತ್ರ ಪಕ್ಷ..!

ಬಿಹಾರದಲ್ಲೂ ಕರ್ನಾಟಕ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಮಾದರಿ; ಉಚಿತ ವಿದ್ಯುತ್ ಘೋಷಿಸಿದ ಬಿಜೆಪಿ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ವಿರೋಧಿಸುತ್ತಲೇ ಇರುವ ವಿರೋಧ ಪಕ್ಷಗಳು, ಸದ್ದಿಲ್ಲದೆ ತಮ್ಮ ಲಾಭಕ್ಕಾಗಿ

[ccc_my_favorite_select_button post_id="111268"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!