LKG-UKG to start in Anganwadis: Lakshmi Hebbalkar

ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ಆರಂಭ: ಲಕ್ಷ್ಮಿ ಹೆಬ್ಬಾಳಕರ್

ಬೆಂಗಳೂರು: ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ (LKG, UKG) ತರಗತಿಗಳನ್ನ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ (Lakshmi Hebbalkar) ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ಮಾಡಲು 2 ಕೊಠಡಿಗಳ ಅಗತ್ಯವಿದೆ. ರಾಜ್ಯದಲ್ಲಿ ಈ ರೀತಿ 2 ಕೊಠಡಿಗಳಿರುವ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಪಟ್ಟಿ ಮಾಡಲಾಗಿದೆ.

ಸದ್ಯ 4 – 5 ಸಾವಿರ ಅಂಗನವಾಡಿಗಳಲ್ಲಿ ತರಗತಿಗಳನ್ನು ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲಾ ಕೇಂದ್ರಗಳಲ್ಲಿ ಆರಂಭ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.

ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ 233 ಅಂಗನವಾಡಿ ಕೇಂದ್ರಗಳನ್ನ ಇಲಾಖೆ ಪಟ್ಟಿ ಮಾಡಿದ್ದು, ಈ ಕೇಂದ್ರಗಳಲ್ಲಿ ಅಂಗನವಾಡಿ ಇಲಾಖೆ ಆರಂಭಿಸಲಾಗುತ್ತದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತ್ಯೇಕ ಇಲಾಖೆಯಾಗಿ ರೂಪುಗೊಂಡು ಅಕ್ಟೋಬರ್ 2 ಕ್ಕೆ 50 ವರ್ಷಗಳನ್ನ ಪೂರೈಸುತ್ತದೆ. ಈ ನಿಟ್ಟಿನಲ್ಲಿ ಅಕ್ಟೋಬರ್‌ನಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಆರಂಭಿಸಲು ಇಲಾಖೆ ನಿರ್ಧಾರ ಮಾಡಿದೆ. ಹಾಗೆಯೇ, ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ತರಬೇತಿ ನೀಡಿದ್ದು, ಪುಸ್ತಕಗಳನ್ನ ಸಹ ಕೊಡಲಾಗಿದೆ.

ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಉಳಿದ ಕಡೆ ಹೊಸದಾಗಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿ ರಚನೆ ಮಾಡಲಾಗಿತ್ತು. ಅದರ ಅನುಸಾರ ಇದೀಗ ಎಲ್‌ಜಿ ಹಾಗೂ ಯುಕೆಜಿ ಆರಂಭಿಸಲು ನಿರ್ಧಾರ ಮಾಡಲಾಗಿದೆ.

ಅಂಗನವಾಡಿ ಕೇಂದ್ರಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದೆ. ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ಕಾರಣಕ್ಕೆ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದಾರೆ.

ಇಲಾಖೆಯ ಮೂಲಕವೇ ಮಕ್ಕಳಿಗೆ ಸಮವಸ್ತ್ರ ಪುಸ್ತಕ, ಬ್ಯಾಗ್‌ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೇ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮ ವಹಿಸಲಾಗುವುದು ಎಂದು ಹೆಬ್ಬಾಳಕರ್ ಹೇಳಿದ್ದಾರೆ.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!