ಕುರ್ಚಿ ಉಳಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಸಮಾವೇಶ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Siddaramaiah CM conference to retain chair: Opposition Leader R. Ashoka

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Cmsiddaramaiah) ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶ ಆದ ನಂತರ ಇದು ಸಿಎಂ ಅಳಿವು-ಉಳಿವಿನ ಸಮಾವೇಶವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರಂಭದಿಂದಲೂ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ಹೇಳುತ್ತಲೇ ಇದ್ದಿದ್ದರಿಂದ ಯಾವಾಗಲೂ ಸರ್ಕಾರವನ್ನು ಅಸ್ಥಿರತೆ ಕಾಡುತ್ತಿದೆ. ಈ ಸಮಾವೇಶದಿಂದ ಜನರಿಗೆ ಯಾವುದೇ ಉಪಯೋಗವಿಲ್ಲ.

ವಾಲ್ಮೀಕಿ ನಿಗಮದಲ್ಲಿ ಹಗರಣ, 2,500 ರೈತರ ಆತ್ಮಹತ್ಯೆ 1200 ನವಜಾತ ಶಿಶುಗಳ ಸಾವು, ಬಾಣಂತಿಯರ ಸಾವು, ಹತ್ತಕ್ಕೂ ಅಧಿಕ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಆತ್ಮಹತ್ಯೆ, ಆರ್‌ಸಿಬಿ ಸಂಭ್ರಮಾಚರಣೆ ವೇಳೆ 11 ಸಾವು, ಇಂತಹ ಘಟನೆಗಳನ್ನು ಸಂಭ್ರಮಿಸಲು ಸಮಾವೇಶ ಮಾಡಲಾಗುತ್ತಿದೆಯೇ ಎಂದು ಪ್ರಶ್ನಿಸಿದರು.

ಆರ್‌ಸಿಬಿ ಕಾರ್ಯಕ್ರಮ ಸರ್ಕಾರದ ವತಿಯಿಂದ ನಡೆದಿಲ್ಲ ಎಂದು ಬಿಂಬಿಸಲಾಗುತ್ತಿದೆ. ಆದರೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿದ್ದರು.

ಸಿಐಡಿ ಹಾಗೂ ನ್ಯಾ.ಡಿಕುನ್ಹ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಸರ್ಕಾರದ ಪಾತ್ರದ ಬಗ್ಗೆ ಹೇಳದೆ, ಪೊಲೀಸರ ಮೇಲೆ ಆರೋಪ ಮಾಡಲಾಗಿದೆ. ಪೊಲೀಸರಿಗೆ ಆದೇಶ ಕೊಟ್ಟ ಸರ್ಕಾರದ ತಪ್ಪಿನ ಬಗ್ಗೆ ಎಲ್ಲೂ ಹೇಳಿಲ್ಲ. ಇಂತಹ ಸಮಯದಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಇದೇ ರೀತಿ ಡಿ.ಕೆ.ಶಿವಕುಮಾರ್‌ ಕನಕಪುರದಲ್ಲಿ ಸಮಾವೇಶ ನಡೆಸಿದರೆ ಆಗ ಯಾರ ಬಲ ಹೆಚ್ಚಿದೆ ಎಂದು ತೀರ್ಮಾನಿಸಬಹುದು. ಇಲ್ಲಿ ಪರಸ್ಪರ ಸ್ಪರ್ಧೆ ನಡೆಯುತ್ತಿದೆ ಎಂದರು.

ತನಿಖಾ ಆಯೋಗಗಳನ್ನು ನೇಮಕ ಮಾಡುವಾಗ ಪದೇ ಪದೆ ಇಬ್ಬರನ್ನೇ ನೇಮಕ ಮಾಡಲಾಗುತ್ತದೆ. ಇದರಿಂದಾಗಿ ಜನರಿಗೆ ಸರ್ಕಾರದ ಮೇಲೆ ನಂಬಿಕೆ ಹೋಗಿದೆ.

ವಿರೋಧ ಪಕ್ಷದ ಶಾಸಕರಾದ ಬೈರತಿ ಬಸವರಾಜ್‌ ಅವರನ್ನು ಬಗ್ಗುಬಡಿಯಲು ಪೊಲೀಸರೇ ಎಫ್‌ಐಆರ್‌ನಲ್ಲಿ ಅವರ ಹೆಸರು ಬರೆದಿದ್ದಾರೆ. ದೂರು ಕೊಟ್ಟ ಮಹಿಳೆಯೇ ಮುಂದೆ ಬಂದು ಶಾಸಕರ ಹೆಸರನ್ನು ಹೇಳಿಲ್ಲ ಎಂದಿದ್ದಾರೆ. ಆದರೂ ಸರ್ಕಾರದ ದ್ವೇಷ ಸಾಧಿಸುತ್ತಿದೆ ಎಂದರು.

ಅಭಿವೃದ್ಧಿ ಕಾರ್ಯಗಳಿಲ್ಲ

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರೇ ಹೇಳಿದ್ದಾರೆ. ಇಂತಹ ಸಮಯದಲ್ಲಿ ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂದು ಹೇಳಿದ್ದಾರೆ. ಈ ರೀತಿ ತಾರತಮ್ಯ ಮಾಡಿ, ಕೇಂದ್ರದ ಮೇಲೆ ತಾರತಮ್ಯದ ಆರೋಪ ಹೊರಿಸುತ್ತಿದ್ದಾರೆ. ಎಲ್ಲ ಶಾಸಕರಿಗೆ ಸಮಾನ ಅನುದಾನ ನೀಡಬೇಕು. ಇದರಿಂದ ಸಮಾನ ಅಭಿವೃದ್ಧಿ ಸಾಧ್ಯ ಎಂದರು.

ಬೆಂಗಳೂರಿನಲ್ಲಿ ಗಟ್ಟಿಯಾದ ಕಲ್ಲು ಇರುವುದರಿಂದ ಸುರಂಗ ಮಾಡುವುದು ಕಷ್ಟ. ಅದರ ಬದಲು ಮೆಟ್ರೊ ಯೋಜನೆಗೆ ಒತ್ತು ನೀಡಬಹುದಿತ್ತು. ಮೊದಲು ಮೇಲಿನ ರಸ್ತೆಗಳನ್ನು ಅಭಿವೃದ್ಧಿಪಡಿಸಿದರೆ ಸಾಕು.

ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನವಾಗುತ್ತದೆ. ಒಡೆಯುವುದು ಕಾಂಗ್ರೆಸ್‌ನ ಬುದ್ಧಿ. ಅಭಿವೃದ್ಧಿ ಮಾಡುವುದರ ಬದಲು ಒಡೆಯುವುದು ಸರಿಯಲ್ಲ. ಬ್ರ್ಯಾಂಡ್‌ ಬೆಂಗಳೂರಿನ ಹೆಸರಲ್ಲಿ ಇದುವರೆಗೆ ಒಂದು ಯೋಜನೆಯೂ ಜಾರಿಯಾಗಿಲ್ಲ ಎಂದರು.

ಬಿಜೆಪಿ ಸರ್ಕಾರ ಇದ್ದಾಗ ಕೇಳಿದ್ದ ಮನೆಯನ್ನೇ ಕೊಡಲಾಗುತ್ತಿತ್ತು. ಕಳೆದೆರಡು ವರ್ಷಗಳಿಂದ ಮನೆ ನೀಡಲು ಅನೇಕ ಪತ್ರಗಳನ್ನು ಬರೆದರೂ ಸರ್ಕಾರ ಸ್ಪಂದಿಸಿಲ್ಲ. ನೀತಿ ಸಂಹಿತೆ, ಶಿಷ್ಟಾಚಾರದ ಬಗ್ಗೆ ಪ್ರಧಾನಮಂತ್ರಿಗೂ ಪತ್ರ ಬರೆಯುವ ಇವರು, ಇಲ್ಲಿ ಶಿಷ್ಟಾಚಾರ ಪಾಲಿಸುತ್ತಿಲ್ಲ. ವಿರೋಧ ಪಕ್ಷದ ನಾಯಕನಾದ ನನಗೆ ಮನೆ ನೀಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದರು.

ಸರ್ಕಾರದಲ್ಲಿ ಹಣವಿಲ್ಲ. ಒಂದು ರೂಪಾಯಿ ಖರ್ಚು ಮಾಡುವಾಗ ಕೂಡ ಬಹಳ ಯೋಚನೆ ಮಾಡಬೇಕು. ಅದಕ್ಕಾಗಿ ಬೀದಿ ವ್ಯಾಪಾರಿಗಳಿಂದ ಬರುವ ಜಿಎಸ್‌ಟಿ ಹೆಚ್ಚಿಸಲು ರಾಜ್ಯ ಸರ್ಕಾರ ಕುತಂತ್ರ ಮಾಡಿದೆ.

ಈ ಮೂಲಕ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸಲಾಗಿದೆ. ಇದರಿಂದ ದೇಶದ ಆರ್ಥಿಕ ವ್ಯವಸ್ಥೆಗೂ ಹಾನಿಯಾಗಲಿದೆ. ಜನರಿಗೆ ಅನ್ಯಾಯವಾಗಿದ್ದರೆ ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ತಿಳಿಸಲಾಗುವುದು ಎಂದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]