ಬೆಂ.ಗ್ರಾ.ಜಿಲ್ಲೆ: ಕಾರ್ಮಿಕ ಇಲಾಖೆ ವತಿಯಿಂದ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 2025-26 ನೇ ಸಾಲಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ (Applications invited).
ಅರ್ಜಿಯನ್ನು www.klwbapps.karnataka.gov.in ವೆಬ್ಸೈಟ್ ಮೂಲಕ ಡಿಸೆಂಬರ್ 31 ರೊಳಗೆ ಸಲ್ಲಿಸಬೇಕು.
ಕಾರ್ಮಿಕನ ಮಾಸಿಕ ವೇತನ 35,000 ಮೀರಿರಬಾರದು, ವಿದ್ಯಾರ್ಥಿಯ ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಹಾಗೂ ಪ.ಜಾತಿ/ಪ.ಪಂ ಶೇ 45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು.
ಕುಟುಂಬದ ಇಬ್ಬರು ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48. 2ನೇ ಮಹಡಿ, ಮತ್ತಿಕೆರೆ ಮುಖ್ಯ ರಸ್ತೆ, ಯಶವಂತಪುರ, ಬೆಂಗಳೂರು -560022 ಖುದ್ದಾಗಿ ಅಥವಾ ದೂರವಾಣಿ ಸಂ: 080-23475188, 8277291175, 8277120505, 9141585402 ಹಾಗೂ 9141602561 ಗೆ ಸಂಪರ್ಕಿಸಬಹುದು ಎಂದು ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.