Metro connection to Hoskote: DCM D.K. Shivakumar

ಹೊಸಕೋಟೆಗೆ ಮೆಟ್ರೋ ಸಂಪರ್ಕ ಶೀಘ್ರ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂ.ಗ್ರಾಂ.ಜಿಲ್ಲೆ: ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹೊಸಕೋಟೆಗೆ ಶೀಘ್ರ ಮೆಟ್ರೋ ಸಂಪರ್ಕ ಕಲ್ಪಿಸಲು ಅಗತ್ಯ ಯೋಜನೆ ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ( D.K. Shivakumar) ಅವರು ಹೇಳಿದರು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಹೊಸಕೋಟೆ ಹಾಗೂ 28 ಗ್ರಾಮ ಪಂಚಾಯತಿಗಳ ವತಿಯಿಂದ ಇ-ಸ್ವತ್ತು ಹಾಗೂ ಹಕ್ಕು ಪತ್ರ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲವು ಬೆಂಗಳೂರು ನಗರಕ್ಕೆ ಹೊಂದಿಕೊಂಡಿದ್ದು ತಾಲ್ಲೂಕುಗಳ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು.

ಹೊಸಕೋಟೆಯೂ ಸಹ ಬಹಳ ವೇಗವಾಗಿ ಅಭಿವೃದ್ಧಿ ಕಾಣುತ್ತಿದ್ದು ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಮೆಟ್ರೋ ಸಂಪರ್ಕ ಹೊಸಕೋಟೆಗೆ ಕಲ್ಪಿಸಲಾಗುವುದು. ಇದಕ್ಕಾಗಿ ಡಿಪಿಆರ್ ಸಿದ್ದಪಡಿಸಲು ಅಧಿಕಾರಿಗಳು ಸೂಚಿಸುತ್ತೇನೆ ಎಂದರು.

5 ಗ್ಯಾರಂಟಿಗಳಿಂದ ನಮ್ಮ ಕೈಗೆ ಶಕ್ತಿ ತುಂಬಿದೆ. ಬೆಲೆ ಏರಿಕೆ, ಆದಾಯ ಪಾತಾಳಕ್ಕೆ ಇಳಿದ ಸಂಧರ್ಭದಲ್ಲಿ ಗ್ಯಾರಂಟಿ ಜಾರಿ ತಂದೆವು. ಈಗ ಅದೇ ಗ್ಯಾರಂಟಿ ಗಳು ದೇಶಕ್ಕೆ ಮಾದರಿ ಎನಿಸಿಕೊಂಡಿದೆ. ಇತರೆ ರಾಜ್ಯಗಳು ನಮ್ಮ ಗ್ಯಾರಂಟಿಗಳನ್ನು ಫಾಲೋ ಮಾಡುತ್ತಿದ್ದಾರೆ ಎಂದರು.

ನರೇಗಾ ಯೋಜನೆ, ಆಹಾರ ಭದ್ರತೆ ಕಾಯ್ದೆ, ಉಳುವವನಿಗೆ ಭೂಮಿ, ಭಗರ್ ಹುಕುಂ, ಕ್ಷೀರಧಾರೆ ಸಬ್ಸಿಡಿ, ಐದು ಗ್ಯಾರಂಟಿ ಮುಂತಾದ ಯೋಜನೆಗಳು ಕೇಂದ್ರ ಹಾಗೂ ರಾಜ್ಯಗಳಲ್ಲಿ ನಮ್ಮ ಸರ್ಕಾರ ಇದ್ದಾಗಲೇ ಜಾರಿಯಾದವು. ಜನರ ಸೇವೆಯಿಂದ ಸರ್ಕಾರ ಉಳಿಯಲು ಸಾಧ್ಯ. ನಾವು ಮಾಡುವ ಕೆಲಸಗಳು ಶಾಶ್ವತವಾಗಿ ಉಳಿಯುತ್ತವೆ ಎಂದರು.

ಆರನೇ ಗ್ಯಾರಂಟಿ ಇ-ಸ್ವತ್ತು, ಇಂದು ಹೊಸಕೋಟೆಯಲ್ಲಿ 6000 ಇ-ಸ್ವತ್ತು ನೀಡಲಾಗುತ್ತಿದೆ. 1 ಕೋಟಿ 11 ಲಕ್ಷ 11 ಸಾವಿರ ಸ್ವತ್ತು ರಾಜ್ಯಾದ್ಯಂತ ನೀಡಲಾಗುತ್ತಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಿ ಖಾತೆಯಿಂದ ಎ ಖಾತೆಗೆ ಆಸ್ತಿ ವರ್ಗ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ.

ರೈತರ ಕೃಷಿ ಭೂಮಿಗಳಿಗೆ 19000 ಕೋಟಿ ರೂ.ಗಳ ವೆಚ್ಚದಲ್ಲಿ 10 ಹೆಚ್.ಪಿ ವರೆಗೆ ವಿದ್ಯುತ್ ನ್ನು ಪ್ರತಿ ನಿತ್ಯ 07 ಗಂಟೆ ನೀಡುತ್ತಿದ್ದೇವೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆ ಕಟ್ಟೆ, ಕುಡಿಯುವ ನೀರು ತುಂಬಿಸಲು ಸರ್ಕಾರ ಪಣ ತೊಟ್ಟಿದ್ದು 2027 ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ ಗೊಳ್ಳಲಿದೆ ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಮಾತನಾಡಿ ಚುನಾವಣೆಯಲ್ಲಿ ಮಾತು ನೀಡಿದಂತೆ ನಾವು ಎಲ್ಲಾ ಗ್ಯಾರಂಟಿ ಯೋಜನೆಗಳು ಜಾರಿಗೊಳಿಸಿದ್ದು ನುಡಿದಂತೆ ನಡೆದಿದ್ದೇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಗೆ ಮೆಟ್ರೋ, ಯುಜಿಡಿ, ಎತ್ತಿನಹೊಳೆ ಯೋಜನೆಯು ಆದಷ್ಟು ಬೇಗ ಬರಬೇಕು ಎನ್ನುವುದು ನನ್ನ ಒತ್ತಾಸೆಯಾಗಿದೆ ಎಂದರು.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಐ.ಟಿ.ಬಿ.ಟಿ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ ಸರ್ವರಿಗೂ ಸಮಾನ ಅವಕಾಶ ಎಂಬ ಧ್ಯೇಯ ದೊಂದಿಗೆ ಎಲ್ಲಾ ವರ್ಗದವರಿಗೂ ಸೌಲಭ್ಯ ನೀಡಲಾಗುತ್ತಿದೆ. ನವ ಕರ್ನಾಟಕ ನಿರ್ಮಾಣದ ದಿಟ್ಟ ಹೆಜ್ಜೆ ಇಟ್ಟಿರುವ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ವಿರೋದ ಪಕ್ಷಗಳು ವಿರೋದ ಮಾಡಿದರು ನಾವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಇಡೀ ದೇಶದಲ್ಲಿ ಯಾರು ಜಾರಿಗೆ ತಂದಿಲ್ಲ. ಪ್ರತಿ ಕುಟುಂಬವು 5-6 ಸಾವಿರ ಪ್ರತಿ ತಿಂಗಳು ಉಳಿತಾಯ ಮಾಡಲಾಗುತ್ತಿದೆ‌.

ಗ್ರಾಮೀಣಾಭಿವೃದ್ಧಿ ಇಲಾಖೆ, ಐಟಿ ಇಲಾಖೆಯಲ್ಲಿ ರಾಜ್ಯ ನಂಬರ್ ಒನ್ ಸ್ಥಾನದಲ್ಲಿದ್ದೇವೆ. ನರೇಗಾ ಯೋಜನೆಯಡಿ 13 ಕೋಟಿ ಮಾನವ ದಿನಗಳು ಸೃಜಿಸಿ, ನರೇಗಾ ಕೂಲಿ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆಗಳನ್ನು ನಿರ್ಮಿಸಿದ್ದು. ಅಲ್ಲಿ 50000 ಮಕ್ಕಳು ಕಲಿಯುತ್ತಿದ್ದಾರೆ.

ರಾಜ್ಯದಲ್ಲಿ 8760 ಕಿ.ಮೀ ಗ್ರಾಮೀಣ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈಗಾಗಲೇ ರಾಜ್ಯಾದ್ಯಂತ ಮಾದರಿ ತಾಲ್ಲೂಕು ಪಂಚಾಯಿತಿ ನಿರ್ಮಿಸಲು ಉದ್ದೇಶಿಸಲಾಗಿದ್ದು ಹೊಸಕೋಟೆಯಲ್ಲಿ ಮೊದಲ ಮಾದರಿ ತಾಲ್ಲೂಕು ಪಂಚಾಯಿತಿ ನಿರ್ಮಿಸಲಾಗುವುದು ಎಂದರು.

ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಬಚ್ಚೇಗೌಡ ಅವರು ಮಾತನಾಡಿ ಇಂದಿನ ಕಾರ್ಯಕ್ರಮದಲ್ಲಿ 60 ಗ್ರಾಮಗಳು ಇ-ಸ್ವತ್ತು ಮುಕ್ತ ಎಂದು ಘೋಷಿಸಿದ್ದು 6000 ಇ ಸ್ವತ್ತುನ್ನು ನೀಡಲಾಗುತ್ತಿದೆ. 1010 ನಿವೇಶನ ಹಕ್ಕು ಪತ್ರ ವಿತರಣೆ ಫಲಾನುಭವಿಗಳಿಗೆ ನೀಡಲಾಗುತ್ತಿದೆ ಎಂದರಲ್ಲದೆ. ಹೊಸಕೋಟೆಗೆ ಮೆಟ್ರೋ ಸಂಪರ್ಕ ಹಾಗೂ ಕಾವೇರಿ ನೀರು ಪೂರೈಕೆ, ಮಾದರಿ ತಾಲ್ಲೂಕು ಪಂಚಾಯಿತಿ ನಿರ್ಮಾಣ ಮಾಡಲು ಸಚಿವರಿಗೆ ಮನವಿ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ, ನೆಲಮಂಗಲ ಶಾಸಕ ಶ್ರೀನಿವಾಸ್, ಎಂಎಲ್ಸಿ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಡಾ.ಕೆ.ಎನ್ ಅನುರಾಧ, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!