ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ

Don't spread misinformation about the Manjunatha Swamy temple in Dharmasthala: R. Ashoka

ಬೆಂಗಳೂರು: ಧರ್ಮಸ್ಥಳದ (Dharmasthala) ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು ಎಂದರು.

ದಕ್ಷಿಣ ಭಾರತದಲ್ಲಿ ತಿರುಪತಿ ಹಾಗೂ ಧರ್ಮಸ್ಥಳ ಕೋಟ್ಯಂತರ ಹಿಂದೂಗಳ ಶ್ರದ್ಧಾಕೇಂದ್ರವಾಗಿದೆ. ಧರ್ಮಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಯುವಕನೊಬ್ಬ ವೀಡಿಯೋಗಳನ್ನು ಅಪ್‌ಲೋಡ್‌ ಮಾಡುತ್ತಿದ್ದಾನೆ.

ಈ ನಡುವೆ ಕೇರಳ ಸರ್ಕಾರ ಮಧ್ಯಪ್ರವೇಶ ಮಾಡಿದೆ. ಕೇರಳ ಸರ್ಕಾರ ಅಲ್ಲಿನ ದೇವಸ್ಥಾನಗಳ ವಿಚಾರದಲ್ಲಿ ಹೇಗೆ ನಡೆದುಕೊಳ್ಳುತ್ತಿದೆ, ಶಬರಿಮಲೆ ಅಯ್ಯಪ್ಪ ದೇವಾಲಯದ ವಿಚಾರದಲ್ಲಿ ಹೇಗೆ ನಡೆದುಕೊಂಡಿದೆ ಎಂಬುದು ಜಗಜ್ಜಾಹೀರಾಗಿದೆ. ಯಾವುದೇ ಕೊಲೆಯಾಗಿದ್ದರೆ ಸ್ಥಳೀಯ ಪೊಲೀಸ್‌ ಠಾಣೆ ತನಿಖೆ ಮಾಡುತ್ತದೆ ಎಂದರು.

ಸಾವಿರಾರು ಶವಗಳು ಸಿಕ್ಕಿದೆ ಎಂದರೆ, ಅವರ ಕುಟುಂಬದವರು ದೂರು ದಾಖಲಿಸುತ್ತಾರೆ. ಅಂತಹ ಪ್ರಕರಣ ಎಷ್ಟಿದೆ ಎಂದು ಸರ್ಕಾರ ತಿಳಿಸಬೇಕು. ದೇವಾಲಯ ಮಾತ್ರವಲ್ಲದೆ, ಚರ್ಚ್‌, ಮಸೀದಿ ಮೊದಲಾದ ಧಾರ್ಮಿಕ ಕೇಂದ್ರಗಳ ಬಳಿ ಅನೇಕರು ಸಾಯುತ್ತಾರೆ. ಇಂತಹ ಸಂದರ್ಭಗಳಲ್ಲಿ ಪೊಲೀಸರು ತನಿಖೆ ಮಾಡುತ್ತಾರೆ.

ಯಾರೋ ಒಬ್ಬರಿಗೆ 20 ವರ್ಷಗಳ ಬಳಿಕ ಜ್ಞಾನೋದಯವಾಗಿದ್ದು ಹೇಗೆ ಎಂಬ ಪ್ರಶ್ನೆ ಮೂಡುತ್ತದೆ. ಒಂದು ಧರ್ಮಕ್ಕೆ ಅಪಮಾನ ಮಾಡಲು ವಿವಾದ ಮಾಡುವುದು ಸರಿಯಲ್ಲ. ಇದರಲ್ಲಿ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿಯ ವಿಚಾರವೇ ಬರುವುದಿಲ್ಲ. ಆದರೂ ಪದೇ ಪದೆ ಧಾರ್ಮಿಕ ಕೇಂದ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.

ಯಾವುದೇ ವ್ಯಕ್ತಿ ತಪ್ಪು ಮಾಡಿದರೆ, ಆ ವ್ಯಕ್ತಿಯ ಬಗ್ಗೆ ಆರೋಪ ಮಾಡಲಿ. ಆದರೆ ಇಡೀ ಧಾರ್ಮಿಕ ಸಂಸ್ಥೆಯನ್ನು ಗುರಿ ಮಾಡಿ ಮಾತಾಡುವುದು ಸರಿಯಲ್ಲ. ಎಸ್‌ಐಟಿ ತಂಡಕ್ಕೆ ಸರ್ಕಾರ ಬೇರಾವುದೇ ಜವಾಬ್ದಾರಿ ವಹಿಸಬಾರದು. ಈ ತಂಡದ ಪೊಲೀಸರು ಸಂಪೂರ್ಣವಾಗಿ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲಿ ಎಂದರು.

ಇದು ವ್ಯಕ್ತಿಗಳಿಗೆ ಸಂಬಂಧಿಸಿದ ವಿಚಾರವೇ ಹೊರತು, ಧರ್ಮಸ್ಥಳದ ಶ್ರೀ ಮಂಜುನಾಥ ದೇವಾಲಯಕ್ಕೆ ಸಂಬಂಧಿಸಿದ ವಿಷಯವಲ್ಲ. ಯಾರೂ ಧರ್ಮಸ್ಥಳದ ದೇವಾಲಯವನ್ನು ಗುರಿ ಮಾಡಬಾರದು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಮಗಿಂತಲೂ ಹೆಚ್ಚಿನ ದೈವಭಕ್ತರು. ಅವರು ದೇವರ ಇಚ್ಛೆಯಂತೆಯೇ ನಡೆದುಕೊಳ್ಳಲಿ. ಧರ್ಮಸ್ಥಳದ ದೇವಾಲಯದ ಬಗ್ಗೆ ಮನಸ್ಸಿಗೆ ಬಂದಂತೆ ಮಾತಾಡುವುದು ತಪ್ಪು. ಇಂತಹ ಮಾತುಗಳು ಯಾವುದೇ ಸಚಿವರಿಗೆ ಶೋಭೆ ತರುವುದಿಲ್ಲ ಎಂದರು.

ಅಭಿವೃದ್ಧಿ ಇಲ್ಲದೆ ಗ್ರೇಟರ್‌ ಬೆಂಗಳೂರು ಪ್ರಸ್ತಾಪ

ಗ್ರೇಟರ್‌ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡುವಂತೆ ಸರ್ಕಾರಕ್ಕೆ ಕೋರ್ಟ್‌ ಸೂಚನೆ ನೀಡಿದೆ. ಇದನ್ನೇ ಮುಂದಿಟ್ಟುಕೊಂಡು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ.

ಕಸದ ರಾಶಿ ಎಲ್ಲ ಕಡೆ ಇದೆ. ಆಸ್ಪತ್ರೆಗಳಲ್ಲಿ ಸಂಬಳ ಪಾವತಿಯಾಗಿಲ್ಲ. ಶಾಲೆಗಳ ಶಿಕ್ಷಕರನ್ನು ವಜಾ ಮಾಡಲಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿ ಮಾಡಲಾಗದೆ ಐದು ಪಾಲಿಕೆ ಮಾಡುವ ವಿಷಯವನ್ನು ಮುನ್ನೆಲೆಗೆ ತರಲಾಗಿದೆ. ಎಲ್ಲದಕ್ಕೂ ಜನರ ಮೇಲೆ ತೆರಿಗೆ ಹೇರಲಾಗಿದೆ. ಇ ಖಾತಾದಿಂದಾಗಿ ಎಲ್ಲೂ ನೋಂದಣಿ ಮಾಡಲು ಆಗುತ್ತಿಲ್ಲ.

ಕಾಂಗ್ರೆಸ್‌ ವಾಮಮಾರ್ಗದಲ್ಲಿ ಗೆಲ್ಲಲು ಈ ರೀತಿ ಪಾಲಿಕೆಗಳನ್ನು ರಚಿಸುತ್ತಿದೆ. ಬೆಂಗಳೂರನ್ನು ಹೋಳು ಮಾಡುವುದನ್ನು ಬಿಜೆಪಿ ಯಾವಾಗಲೂ ವಿರೋಧ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲೂ ಇದನ್ನು ವಿರೋಧಿಸಲಾಗುವುದು ಎಂದು ತಿಳಿಸಿದರು.

ಮುಡಾ ಹಗರಣದ ವಿರುದ್ಧದ ಬಿಜೆಪಿಯ ಹೋರಾಟದ ಫಲವಾಗಿ ಸಿಎಂ ಸಿದ್ದರಾಮಯ್ಯ ನಿವೇಶನಗಳನ್ನು ವಾಪಸ್‌ ಮಾಡಿದ್ದಾರೆ. ತಪ್ಪಾಗಿದೆ ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಮುಡಾ ಹಗರಣದ ವಿರುದ್ಧದ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]