Police arrest suspects who were sketching a robbery..!

ಡಕಾಯಿತಿಗೆ ಸ್ಕೆಚ್ ಹಾಕುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು..!

ಚಿಕ್ಕಬಳ್ಳಾಪುರ: ಮಾರಕಾಸ್ತಗಳನ್ನು ಹಿಡಿದು ವಾಹನ ಸವಾರರ ಡಕಾಯಿತಿಗೆ (Robbery) ಸ್ಕೆಚ್ ಹಾಕುತ್ತಿದ್ದ 7 ಮಂದಿಯನ್ನು ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು (Police) ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಜುಲೈ. 19 ರಾತ್ರಿ 10-30 ಗಂಟೆಗೆ ಬೆಂಗಳೂರು-ಹಿಂದೂಪುರ ರಸ್ತೆಯ ಗುಡಿಬಂಡೆ ಕ್ರಾಸ್ ನಿಂದ ಚಿಕ್ಕಕುರುಗೋಡು ರಸ್ತೆಯ ಮಧ್ಯ ಬರುವ ರಾಜಲಕ್ಷ್ಮಿ ದೇವಸ್ಥಾನಕ್ಕೆ ಹೋಗುವ ಅರ್ಚ್ ಬಳಿ 7 ಮಂದಿ ಗುಂಪಾಗಿ ಕುಳಿತುಕೊಂಡಿದ್ದು, ಅವರ ಕೈಗಳಲ್ಲಿ ಮಾರಕ ಆಯುಧಗಳನ್ನು ಹಿಡಿದುಕೊಂಡಿರುವುದು ರಸ್ತೆಯಲ್ಲಿ ಓಡಾಡುತ್ತಿದ್ದ ವಾಹನಗಳ ಲೈಟ್ ಬೆಳಕಿನಲ್ಲಿ ಕಂಡು ಬಂದಿದೆ.

ಈ ವ್ಯಕ್ತಿಗಳು ರಸ್ತೆಯಲ್ಲಿ ಬರುವ ವಾಹನಗಳನ್ನು ಅಥವಾ ಜನರನ್ನು ಅಡ್ಡಗಟ್ಟಿ ಅವರಿಗೆ ಹಲ್ಲೆಯನ್ನು ಮಾಡಿ ಹೆದರಿಸಿ ಅವರ ಬಳಿ ಇರುವ ಹಣ ಒಡವೆ ಮೊಬೈಲ್ ಇನ್ನಿತರೇ ಬೆಲೆಬಾಳುವ ವಸ್ತುಗಳನ್ನು ಕಿತ್ತು ಕೊಳ್ಳುವ ಉದ್ದೇಶದಿಂದ ಅಪಾಯಕರವಾದ ಆಯುಧಗಳು ಮತ್ತು ವಸ್ತುಗಳನ್ನು ಇಟ್ಟುಕೊಂಡು ಹೊಂಚು ಹಾಕುತ್ತಿರುವ ಬಗ್ಗೆ ಅನುಮಾನ ಬೀಟ್ ಪೊಲೀಸರಿಗೆ ಬಂದಿದೆ.

ಈ ಕುರಿತಂತೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಾಗಿದ್ದು, ಮಾರಕಾಸ್ತ್ರಗಳೊಂದಿಗೆ ಸಾರ್ವಜನಿಕರನ್ನು ಅಡ್ಡಗಟ್ಟಿ ಡಕಾಯಿತಿ ಮಾಡಲು ಹೊಂಚು ಹಾಕುತ್ತಿದ್ದ ಆರೋಪಿಗಳಾದ ಚಿಕ್ಕಕುರುಗೋಡು ಗ್ರಾಮದ ವಾಸಿಗಳಾದ ಸಂದೀಪ (26 ವರ್ಷ), ಉಮೇಶ (24 ವರ್ಷ), ಕುಮಾರ (28ವರ್ಷ), ಗಣೇಶ್ ಸಿ.ಎನ್ (24 ವರ್ಷ), ರಂಜೀತ್ ಕುಮಾರ್ .ಜಿ ಬಿನ್ (30ವರ್ಷ), ಗೋಪಿನಾಥ ಸಿ.ಎನ್ (27 ವರ್ಷ) ಮತ್ತು ಸುರೇಶ ಸಿ (22 ವರ್ಷ) ಎಂಬ 7 ಮಂದಿಯನ್ನು ಬಂಧಿಸಿದ್ದಾರೆ.

ಈ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಅಧೀಕ್ಷಕ ಕುಶಾಲ್ ಚೌಕ್ಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಿ. ಜಗನ್ನಾಥ್ ರೈ, ಪೊಲೀಸ್ ಉಪಾಧೀಕ್ಷಕ ಆರ್ ಶಿವಕುಮಾರ್, ವ್ಯತ್ತನಿರೀಕ್ಷಕ ಸತ್ಯನಾರಾಯಣ ಕೆ.ಪಿ ಮಾರ್ಗದರ್ಶನದಲ್ಲಿ ಪಿಎಸ್ಐಗಳಾದ ಲಲಿತಮ್ಮ, ರಮೇಶ್ ಗುಗ್ಗರಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಈ ಬಗ್ಗೆ, ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆಂದು ಮಾಧ್ಯಮ ಪ್ರಕಟಣೆ ತಿಳಿಸಿದೆ.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!