Are BJP members pure? Why is no ED case registered against them?: DCM D.K. Shivakumar

ಬಿಜೆಪಿಯವರು ಶುದ್ಧರೇ..? ಅವರ ಮೇಲೆ ಮಾತ್ರ ಇಡಿ ಕೇಸ್ ದಾಖಲಾಗುತ್ತಿಲ್ಲ ಯಾಕೆ?: ಡಿಸಿಎಂ ಡಿ.ಕೆ. ಶಿವಕುಮಾರ್

ಕನಕಪುರ: “ಇ.ಡಿ. ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನ ಪ್ರಕರಣವೇ ಸಾಕ್ಷಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar ಅವರು ತಿಳಿಸಿದರು.

ಕನಕಪುರದ ಕೋಡಿಹಳ್ಳಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ಮೂಡಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಡಿಗೆ ತರಾಟೆಗೆ ತೆಗೆದುಕೊಂಡಿರುವ ಬಗ್ಗೆ ಕೇಳಿದಾಗ, “ನನ್ನ ಪ್ರಕರಣವನ್ನೇ ತೆಗೆದುಕೊಳ್ಳಿ. ನನ್ನ ಮೇಲೆ ಕೇಸ್ ಹಾಕಿ ತಿಹಾರ್ ಜೈಲಿಗೆ ಕಳುಹಿಸಿದರು. ನಂತರ ಆ ಕೇಸ್ ರದ್ದಾಯಿತು. ರಾಜಕೀಯ ಒತ್ತಡಕ್ಕೆ ಸಿಲುಕುವ ಬಗ್ಗೆ ಇಡಿ ಪರಿಶೀಲನೆ ನಡೆಸಬೇಕು. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದ ಬಳಿಕ ಮೇಲ್ಮನವಿ ಸಲ್ಲಿಸುವ ಪ್ರಶ್ನೆ ಇರಲಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಈ ರೀತಿ ಹೇಳಿರಬೇಕು” ಎಂದರು.

ಕೇಂದ್ರ ಸರ್ಕಾರ ಇಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ ಎಂದು ಕೇಳಿದಾಗ, “ಈ ಕಾರಣಕ್ಕೆ ಈ ರೀತಿ ಮೇಲ್ಮನವಿ ಸಲ್ಲಿಸಲಾಗುತ್ತಿದೆ. ಬಿಜೆಪಿ ನಾಯಕರ ಮೇಲೆ ಮಾತ್ರ ಇಡಿ ಕೇಸ್ ದಾಖಲಾಗುತ್ತಿಲ್ಲ ಯಾಕೆ? ಕೇವಲ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಬರ್ಟ್ ವಾದ್ರಾ, ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ಯಾಕೆ ಕೇಸ್ ಹಾಕಲಾಗುತ್ತಿದೆ. ಬಿಜೆಪಿಗೆ ಹೋದವರೆಲ್ಲಾ ಶುದ್ಧರೇ? ಇದೇ ಅಲ್ಲವೇ ಬಿಜೆಪಿ ವಾಷಿಂಗ್ ಮಷಿನ್” ಎಂದು ತಿಳಿಸಿದರು.

ಟನಲ್ ಕಾರಿಡಾರ್ ಅಗತ್ಯವಿದೆಯೇ ಎಂಬ ತೇಜಸ್ವಿ ಸೂರ್ಯ ಹೇಳಿಕೆ ಬಗ್ಗೆ ಕೇಳಿದಾಗ, “ಪಾಪ ಸಣ್ಣ ಹುಡುಗ, ಅವರ ಪಕ್ಷದಲ್ಲಿ ದೊಡ್ಡ ದೊಡ್ಡ ನಾಯಕರಿದ್ದಾರಲ್ಲಾ ಅವರ ಮೂಲಕ ಸದನದಲ್ಲಿ ಚರ್ಚೆ ಮಾಡಿಸಲಿ” ಎಂದು ತಿರುಗೇಟು ನೀಡಿದರು.

ನಾನು ಬಂದಮೇಲೆ ಯಾಕೆ ಹೋರಾಟ?

ಬಿಡದಿ ಟೌನ್ ಶಿಪ್ ಗೆ ಕೆಲವು ಪಂಚಾಯ್ತಿ ರೈತರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದಾಗ, “ಈ ಯೋಜನೆ ನಾನು ಮಾಡಿದ್ದಲ್ಲ. ಕುಮಾರಸ್ವಾಮಿ ಅವರು ಮಾಡಿರುವುದು. ಅದನ್ನು ನಾನು ಡಿನೋಟಿಫಿಕೇಷನ್ ಮಾಡಲು ಬರಲ್ಲ. ರೈತರಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡುತ್ತೇವೆ. ಅವತ್ತಿನಿಂದ ಹೋರಾಟ ಮಾಡದೇ, ನಾನು ಬಂದಾಗ ಮಾತ್ರ ಯಾಕೆ ಹೋರಾಟ ಮಾಡಬೇಕು? 9 ಸಾವಿರ ಎಕರೆ ಪೈಕಿ 1 ಸಾವಿರಕ್ಕೂ ಹೆಚ್ಚು ಜಮೀನು ಈಗಾಗಲೇ ಕೆಐಎಡಿಬಿಗೆ ನೀಡಲಾಗಿದೆ. ಅದಕ್ಕೆ ಪರಿಹಾರವನ್ನು ಪಡೆಯಲಾಗಿದೆ. ಆಗ ಹೋರಾಟ ಮಾಡದೆ ಈಗ ಯಾಕೆ? ಇದರಲ್ಲೂ 75% ಜನ ತಮಗೆ ಏನು ಪರಿಹಾರ ಬೇಕು ಎಂದು ಕೇಳಿದ್ದಾರೆ” ಎಂದು ತಿಳಿಸಿದರು.

ರೈತರನ್ನು ಕರೆದು ಚರ್ಚೆ ಮಾಡುತ್ತಿಲ್ಲ ಎಂದು ಕೇಳಿದಾಗ, “ರೈತರ ಜೊತೆ ಚರ್ಚೆ ಮಾಡುತ್ತೇನೆ. ಅವರನ್ನು ಕರೆಯುವುದಿಲ್ಲ. ನಾನೇ ಅವರ ಬಳಿ ಹೋಗಿ ಚರ್ಚೆ ಮಾಡುವೆ. ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಅವರು ಕೂಡ ನಮ್ಮ ರೈತರೆ” ಎಂದು ತಿಳಿಸಿದರು.

ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ನಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಸಮಸ್ಯೆ ಏನು ಇಲ್ಲ. ನಮ್ಮ ಕಾರ್ಯಕರ್ತರು, ಸ್ಥಳೀಯ ನಾಯಕರು ಇಲ್ಲಿ ಜನರ ಸಂಪರ್ಕ ಸಾಧಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಇಂದು ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಪರಿಹಾರ ನೀಡುತ್ತೇವೆ. ಕೆಲವು ಅರ್ಜಿಗಳು ಪಿಂಚಣಿ, ಇ-ಖಾತಾ, ಜಿಎಸ್ ಟಿ ವಿಚಾರವಾಗಿ ಬಂದಿವೆ” ಎಂದು ತಿಳಿಸಿದರು.

ರಾಜಕೀಯ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ; ಆರ್. ಅಶೋಕ್ ಕಿಡಿ

ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ (Cmsiddaramaiah) ಹಾಗೂ ಡಿ.ಕೆ.ಶಿವಕುಮಾರ್‌ (D.K. Shivakumar) ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ

[ccc_my_favorite_select_button post_id="116948"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!