Truck rams into bakery: Death toll rises to 3

ಬೇಕರಿಗೆ ಲಾರಿ ನುಗ್ಗಿದ ಪ್ರಕರಣ: ಸಾವಿನ ಸಂಖ್ಯೆ 3ಕ್ಕೆ ಏರಿಕೆ.. ಬಿಸ್ಕತ್ ಖರೀದಿಗೆ ಬಂದವರು ಮಸಣಕ್ಕೆ

ಕೊರಟಗೆರೆ: ಲಾರಿಯ ಬ್ರೇಕ್ ಫೆಲ್ಯೂರ್‌ ಆಗಿ ಬೇಕರಿ ಮತ್ತು ಬಳೆ ಅಂಗಡಿಗೆ ನುಗ್ಗಿದ ಪರಿಣಾಮ (Accident) ಬೇಕರಿ ಮುಂದೆ ನಿಂತಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟರೆ, ಓರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವ ಘಟನೆ ಕೋಳಾಲ ಗ್ರಾಮದಲ್ಲಿ ನಡೆದಿದೆ.

ಕೊರಟಗೆರೆ ತಾಲೂಕಿನ ಕೋಳಾಲದಲ್ಲಿ ಮಂಗಳವಾರ ಮಧ್ಯಾಹ್ನ ತುಮಕೂರಿನಿಂದ ಕೋಳಾಲದ ಗೊಬ್ಬರದ ಅಂಗಡಿಗೆ ಗೊಬ್ಬರ ತುಂಬಿಕೊಂಡು ಬರುತ್ತಿದ್ದ ಲಾರಿ ಇಳಿ ಜಾರಿನಲ್ಲಿ ಲಾರಿಯ ಬ್ರೇಕ್ ಫೆಲ್ಯೂ‌ರ್ ಆಗಿ ವೇಗವಾಗಿ ಬಂದು ಬಸ್ ನಿಲ್ದಾಣದಲ್ಲಿರುವ ಬಸವೇಶ್ವರ ಬೇಕರಿ ಹಾಗೂ ಪಕ್ಕದ ಬಳೆ ಅಂಗಡಿಗೆ ಗುದ್ದಿದೆ.

ಬೇಕರಿ ಮುಂದೆ ಇದ್ದ ಕಾಟೇನಹಳ್ಳಿ ಗ್ರಾಮದ ರಂಗಶಾಮಯ್ಯ (65 ವರ್ಷ) ಪುರದಹಳ್ಳಿ ಬೈಲಪ್ಪ (65 ವರ್ಷ) ಹಾಗೂ ಕೋಳಾಲದ ಜಯಣ್ಣ (55 ವರ್ಷ) ಮೃತಪಟ್ಟ ದುರ್ದೈವಿಗಳು.

ಅಪಘಾತದಲ್ಲಿ 5 ಜನರು ಗಾಯಗೊಂಡಿದ್ದು, ಸಿದ್ದಗಂಗಾ ಆಸ್ಪತ್ರೆಯಲ್ಲಿ ತಾಪಂ ಮಾಜಿ ಸದಸ್ಯೆ ಸಿದ್ದಗಂಗಮ್ಮ, ವಡ್ಡರಹಳ್ಳಿ ಕಾಂತರಾಜು ಹಾಗೂ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಸವೇಶ್ವರ ಬೇಕರಿ ಮಾಲೀಕ ಮಂಜುನಾಥ್, ಕಾಟೇನಹಳ್ಳಿ ಮೋಹನ್ ದಾಖಲಾಗಿದ್ದಾರೆ. ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ತಾಪಂ ಸದಸ್ಯೆ ಸಿದ್ದಗಂಗಮ್ಮ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಹಿಂದೆಯೂ ಕೂಡ ಇದೇ ರೀತಿ ನಡೆದ ಉದಾಹರಣೆ ಇದೆ. ರೋಡ್ ಹಂಪ್ ಇಲ್ಲದ ಕಾರಣ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಸ್ಥಳೀಯ ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಬಿಸ್ಕತ್ ಖರೀದಿಗೆ ಬಂದವರು ಮಸಣಕ್ಕೆ

ಅಪಘಾತವಾದ ಸ್ಥಳ ಕೋಳಾಲ ಗ್ರಾಮದ ಬಸ್ ನಿಲ್ದಾಣದಲ್ಲಿ ಪಕ್ಕದಲ್ಲಿದ್ದು, ಮಂಗಳವಾರ ಮಧ್ಯಾಹ್ನ ಅಪಘಾತ ನಡೆದಿದ್ದು, ವೇಗವಾಗಿ ಬಂದ ಲಾರಿ ಬೇಕರಿಯಲ್ಲಿ ಖರೀದಿ ಮಾಡುತ್ತಿದ್ದ ಹಾಗೂ ಪಕ್ಕದಲ್ಲಿಯೇ ಇದ್ದ ಬಳೆ ಅಂಗಡಿ ಮುಂದೆ ನಿಂತಿದ್ದ ಜನರ ಮೇಲೆ ಹರಿಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಸ್ ನಿಲ್ದಾಣದ ಪಕ್ಕದಲ್ಲಿಯೇ ಬೇಕರಿ ಇದ್ದುದರಿಂದ ಬಿಸ್ಕತ್ ಹಾಗೂ ಇತರೇ ತಿನಿಸುಗಳನ್ನು ತೆಗೆದುಕೊಂಡು ಹೋಗಲು ಅಲ್ಲಿಗೆ ಆಗಮಿಸಿದ್ದರು ಎನ್ನಲಾಗಿದೆ

ಬೇಕರಿಯಲ್ಲಿ ಖರೀದಿ ವೇಳೆ ಏಕಾಏಕಿ ವೇಗವಾಗಿ ಬಂದ ಲಾರಿ ಅವರನ್ನು ಬಲಿ ಪಡೆದಿದೆ. ಈ ಘಟನೆಯಲ್ಲಿ ಗ್ರಾಹಕರಲ್ಲದೆ, ಬೇಕರಿ ಮಾಲೀಕರಿಗೂ ಸಹ ಗಂಭೀರ ಗಾಯಗಳಾಗಿದ್ದು ಅವರನ್ನು ಸಹ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

‘ಬಮೂಲ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಬಿ.ಸಿ.ಆನಂದಕುಮಾರ್ ನಮ್ಮ ಹುಡುಗ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ (D.K. Suresh) ಅವರು

[ccc_my_favorite_select_button post_id="111648"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!