D.K. Suresh appeals to use Nandini milk

ಕಡಿಮೆ ಬೆಲೆಯ ಹಾಲು ಕೊಂಡು ಆರೋಗ್ಯ ಕೆಡಿಸಿಕೊಳ್ಳಬೇಡಿ: ನಂದಿನಿ ಹಾಲು ಬಳಸುವಂತೆ ದೊಡ್ಡಬಳ್ಳಾಪುರದಲ್ಲಿ ಡಿ.ಕೆ. ಸುರೇಶ್ ಮನವಿ

ದೊಡ್ಡಬಳ್ಳಾಪುರ: ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಸಿಗುತ್ತದೆ ಎಂದು ಕಳಪೆ ಗುಣಮಟ್ಟದ ಹಾಲನ್ನು ಬಳಸಿ ಅನಾರೋಗ್ಯಕ್ಕೆ ಒಳಗಾಗದೆ, ಉತ್ತಮ ಗುಣಮಟ್ಟದ ನಂದಿನ ಹಾಲನ್ನು ಬಳಸಿ ಆರೋಗ್ಯವನ್ನು ಕಾಪಾಡುವಂತೆ ಬಮೂಲ್ (Bamul) ಅಧ್ಯಕ್ಷ ಡಿ.ಕೆ.ಸುರೇಶ್ (D.K. Suresh) ಗ್ರಾಹಕರಲ್ಲಿ ಮನವಿ ಮಾಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುಣಮಟ್ಟದ ಹಾಲು ಪೂರೈಕೆ, ರೈತರಿಗೆ ಉತ್ತಮ ದರ ನೀಡುವ ಜೊತೆಯಲ್ಲಿಯೇ, ಗ್ರಾಹಕರ ಹಿತ ಕಾಪಾಡಬೇಕಾದ ಹೊಣೆಗಾರಿಕೆ ಬಮೂಲ್ ಮೇಲಿದೆ.

ಈ ನಿಟ್ಟಿನಲ್ಲಿ ಬಮೂಲ್ ಅಧ್ಯಕ್ಷನಾದ ಬಳಿಕ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ರೈತರ, ಒಕ್ಕೂಟದ ಸಮಸ್ಯೆಗಳನ್ನು ತಿಳಿಯಲಾಗುತ್ತಿದೆ. ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಹಾಲು ಪೂರೈಕೆ ಕಡಿಮೆಯಾಗಿದ್ದು, ಇದನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಮಾರ್ಗೋಪಾಯಗಳ ಕುರಿತು ಚರ್ಚಿಸುತ್ತೇವೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಟೆಟ್ರಾ ಪ್ಯಾಕೆಟ್ ಘಟಕ ಸ್ಥಾಪನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಾಲಿನ ಪೂರೈಕೆ ಕಡಿಮೆಯಾಗಿರುವ ಕಾರಣ ಘಟಕ ಸ್ಥಾಪನೆ ಕುರಿತು ಕೆಲ ತಾಂತ್ರಿಕ ಸಮಸ್ಯೆ ಎದುರಾಗಿದೆ.

ಟೆಟ್ರಾ ಪ್ಯಾಕೇಟ್ ಘಟಕ ಸ್ಥಾಪನೆ ಸಾಧಕ ಬಾಧಕದ ಕುರಿತು ಚರ್ಚೆ ಮಾಡಬೇಕಿದೆ. ಈಗಾಗಲೇ ಪರಿಸರಕ್ಕೆ ಮಾರಕವಾಗದಂತೆ ನಂದಿನ ಹಾಲಿನ ಪ್ಯಾಕೇಟ್ ಬಳಕೆಗೆ ಒತ್ತು ನೀಡಲಾಗುತ್ತಿದೆ. ಇದರಿಂದ ಗ್ರಾಹಕರಿಗೆ ಎರಡು ರೂ. ಹೆಚ್ಚಳವಾಗಲಿದೆ. ಲಕ್ಷಾಂತರ ಪ್ಲಾಸ್ಟಿಕ್ ಲವರ್ ಬಳಕೆಯಿಂದ ಉಂಟಾಗುತ್ತಿರುವ ಪರಿಸರಮಾಲಿನ್ಯ ತಡೆಯಲು ಗ್ರಾಹಕರ ಸಹಕಾರ, ಪ್ರತಿಕ್ರಿಯೆ ಯಾವ ರೀತಿ ಸಿಗುತ್ತದೆ ಎಂಬುದನ್ನು ತಿಳಿಯಲು ಬೆಂಗಳೂರಿನಲ್ಲಿ ಟ್ರಯಲ್ ಮಾಡಲಾಗುತ್ತಿದೆ.

ಮುಂದಿನ ದಿನಗಳಲ್ಲಿ ಇಲ್ಲಿ ಖರೀದಿಸಿರುವ ಜಮೀನಿನನ್ನು ಯಾವ ರೀತಿ ಬಳಕೆ ಮಾಡಬೇಕೆಂಬ ಕುರಿತು ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ ಮಾತನಾಡಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಉಂಟಾದ ಅನಿರೀಕ್ಷೀತ ಹಿನ್ನಡೆಯ ಕಾರಣ, ಸ್ಥಳೀಯ ರೈತರು ಡಿ.ಕೆ. ಸುರೇಶ್ ಅವರಿಗೆ ಒತ್ತಡ ಹೇರಿ ಬಮೂಲ್ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಮಾಡಿದ್ದರು. ಅದರ ಪರಿಣಾಮ ಈಗ ಅವರು ಅಧ್ಯಕ್ಷರಾಗಿ ಬಮೂಲ್ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರ ಘೋಷಿಸಿದ ಗ್ಯಾರಂಟಿ ಯೋಜನೆಗಳ ಕುರಿತು ಪ್ರಧಾನಿ ಮೋದಿ ಆದಿಯಾಗಿ, ಮಾಜಿ ಪ್ರಧಾನಿ ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ದಿವಾಳಿ ಆಗುತ್ತದೆ ಎಂದು ಆರೋಪಿಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರದ ದಿಟ್ಟ ಯೋಜನೆಯಿಂದ ಕರ್ನಾಟಕದ ಜನತೆಯ ತಲಾದಾಯ ಎರಡು ಲಕ್ಷಕ್ಕೆ ಏರಿಕೆಯಾಗಿದೆ ಎಂದು ಆರೋಪ ಮಾಡಿದವರಿಗೆ ಉತ್ತರವಾಗಿದೆ ಎಂದರು.

ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಅರವಿಂದ ಮಾತನಾಡಿ, ಬಮೂಲ್ ಚುನಾವಣೆಯಲ್ಲಿ ಗೆದ್ದು, ಬಮೂಲ್ ಅದ್ಯಕ್ಷರಾಗಿ ಪ್ರಾಮಾಣಿಕವಾಗಿ ರೈತರ ಪರ ಸೇವೆ ಸಲ್ಲಿಸುತ್ತಿರುವ ಡಿ.ಕೆ. ಸುರೇಶ್ ಅವರು ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ನಿಶ್ವಿತ ಎಂದರು.

ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ವಿಧಾನಪರಿಷತ್ ಸದಸ್ಯ ಎಸ್.ರವಿ, ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ ಸೇರಿದಂತೆ ಅನೇಕರು ಇದ್ದರು.

ರಾಜಕೀಯ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ: ಆರ್‌.ಅಶೋಕ (R. Ashok) ಹೇಳಿದರು.

[ccc_my_favorite_select_button post_id="111673"]
ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು, ಬಿಜೆಪಿ ಹಾಗೂ ಜೆಡಿಎಸ್‌ನ್ನು ಕಂಗೆಡಿಸಿದೆ: ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? Cmsiddaramaiah

[ccc_my_favorite_select_button post_id="111451"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!