ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ – ಡಿ.ಕೆ.ಸುರೇಶ್

This is our boy - D.K. Suresh

ದೊಡ್ಡಬಳ್ಳಾಪುರ: ಹಾಲಿನ ಉತ್ಪಾದನೆ ಹೆಚ್ಚಿಸಲು ಹೊಸದಾಗಿ ಹಸುಗಳನ್ನು ಖರೀದಿಸಿ ಹೈನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ಪ್ರತಿ ಹಾಲು ಉತ್ಪಾದಕರ ಸಹಕಾರ ಸಂಘದ ವ್ಯಾಪ್ತಿಲ್ಲಿನ 25 ಜನ ರೈತರಿಗೆ ಶೇ 3ರ ಬಡ್ಡಿದರದಲ್ಲಿ ₹1.60 ಲಕ್ಷ ದಿಂದ ₹15 ಲಕ್ಷದವರೆಗೂ ಸಾಲ ನೀಡುವ ಚಿಂತನೆ ನಡೆಸಲಾಗಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಹೇಳಿದರು.

ನಗರದ ಹಾಲು ಶೀಥಲ ಕೇಂದ್ರದಲ್ಲಿ ಶುಕ್ರವಾರ ನಡೆದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷರು, ಕಾರ್ಯನಿರ್ವಾಹಕರು ಹಾಗೂ ರೈತರ ಸಮಾಲೋಚನ ಸಭೆಯಲ್ಲಿ ಮಾತನಾಡಿದರು.

ಗುಡ್ಮಾರ್ನಿಂಗ್ ನ್ಯೂಸ್: ಇವ ನಮ್ಮ ಹುಡುಗ - ಡಿ.ಕೆ.ಸುರೇಶ್

ಬಮೂಲ್ ಗ್ರಾಮೀಣ ಭಾಗದ ಜನರ ಆರ್ಥಿಕ ಪ್ರಗತಿಯ ಅಡಿಪಾಯವಾಗಿದೆ. ನಂದಿನಿ ಹಾಲು,ಇತರೆ ಉತ್ಪನ್ನಗಳು ಗುಣಮಟ್ಟದಲ್ಲಿ ಗ್ರಾಹಕರ ವಿಶ್ವಾಸ ಉಳಿಸಿಕೊಂಡು ಬಂದಿದೆ. ಆದರೆ ವಿವಿಧ ಕಾರಣಗಳಿಂದಾಗಿ ಮಾರುಕಟ್ಟೆ ವಿಸ್ತರಣೆಗೆ ಆದ್ಯತೆ ನೀಡದೆ ಪ್ರತಿ ದಿನ 6 ಲಕ್ಷ ಲೀಟರ್ ಹಾಲನ್ನು ವಿವಿಧ ಉತ್ಪನ್ನಗಳಾಗಿ ಪರಿವರ್ತಿಸಲಾಗುತ್ತಿದೆ.

ಹಾಲು ಉತ್ಪಾದನೆ ಹೆಚ್ಚಳ ಹಾಗೂ ಮಾರುಕಟ್ಟೆ ವಿಸ್ತರಣೆ ಎರಡನ್ನೂ ಸಮಾನವಾಗಿ ಅಭಿವೃದ್ಧಿ ಮಾಡುವ ಹೊಣೆಗಾರಿಕೆ ನಮ್ಮ ಮೇಲಿದೆ. ಹೈನುಗಾರಿಕೆಯಿಂದ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಜನರಿಗೆ ಸ್ವದ್ಯೋಗ ದೊರೆಯಲಿದೆ ಎಂದರು.

ಬಮೂಲ್ ಮೆಗಾ ಡೇರಿಯನ್ನು ಕನಕಪುರಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಇತರೆ ತಾಲ್ಲೂಕುಗಳಿಗೆ ಬಮೂಲ್ನ ಯಾವುದೇ ಅನುಕೂಲಗಳು ಆಗಿಲ್ಲ ಎನ್ನುವ ಆರೋಪಗಳು ಸುಳ್ಳು. ಇಚ್ಚಾಶಕ್ತಿ ಕೊರತೆಯೇ ಇಲ್ಲಿಯವರೆಗೂ ಬಮೂಲ್ ಅಭಿವೃದ್ಧಿಗೆ ಅಡ್ಡಿಯಾಗಿದೆ. ಕನಕಪುರದಲ್ಲಿ 50 ಎಕರೆ ಪ್ರದೇಶದಲ್ಲಿ ಆಧುನಿಕ ಮೆಗಾ ಡೇರಿ ಸ್ಥಾಪನೆ ಮಾಡದೇ ಹೋಗಿದ್ದರೆ ಕೋವಿಡ್ ಸಂಕಷ್ಟದ ಸಮಯದಲ್ಲಿ ಹಾಗೂ ಇಂದು ಸಹ ಹಾಲು ಉತ್ಪಾದನೆ ಹೆಚ್ಚಾದ ಸಮಯದಲ್ಲಿ ರೈತರು ಹಾಲನ್ನು ಚರಂಡಿಗೆ ಸುರಿಯುವ ಪ್ರಸಂಗ ಬರುತಿತ್ತು.ಆದರೆ ಇಂದು ರೈತರು ಎಷ್ಟೇ ಹಾಲು ಉತ್ಪಾದಿಸಿದರು ಖರೀದಿ ಮಾಡಿ ವಿವಿಧ ಉತ್ಪನ್ನಗಳನ್ನು ತಯಾರಿಸುವ ಸಾಮರ್ಥ್ಯ ಇದೆ. ಬಮೂಲ್ ಆಡಳಿತ ವೆಚ್ಚವನ್ನು ತಗ್ಗಿಸುವ ಕಡೆಗೂ ಗಮನ ನೀಡಲಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಮೂಲ್ ನಿರ್ದೇಶಕ ಬಿ.ಸಿ.ಆನಂದಕುಮಾರ್, ತಾಲ್ಲೂಕಿನಲ್ಲಿ ನಾಲ್ಕು ವರ್ಷಗಳ ಹಿಂದೆಯೇ ಹಾಲಿನ ಟೆಟ್ರಾಪ್ಯಾಕ್ ಸೇರಿದಂತೆ ನಂದಿನಿಯ ಇತರೆ ಉತ್ಪನ್ನಗಳ ಘಟಕ ಸ್ಥಾಪನೆಗೆ 15 ಎಕರೆ ಜಮೀನು ಖರೀದಿಸಲಾಗಿದೆ. ಬಮೂಲ್ ವತಿಯಿಂದ ಯಾವುದಾದರು ಒಂದು ಉತ್ಪನ್ನ ತಯಾರಿಕ ಘಟಕ ಸ್ಥಾಪನೆಗೆ ಅನುಮತಿ ನೀಡಬೇಕು ಎಂದರು.

ಸಮಾಲೋಚನ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಬಮೂಲ್ ವ್ಯವಸ್ಥಾಪಕ ಡಾ.ಟಿ.ಸುರೇಶ್, ಉಪಾಧ್ಯಕ್ಷ ರಾಜಣ್ಣ,ನಿರ್ದೇಶಕರಾದ ಕಡತನಮಲೆ ಸತೀಶ್,ಮುನಿರಾಜು,ಬೈರೇಗೌಡ, ಆರ್.ಕೆ.ರಮೇಶ್, ಮಂಜುನಾಥ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಶಿವಣ್ಣ,ಉಪಾಧ್ಯಕ್ಷ ರಾಮಚಂದ್ರಬಾಬು,ಟಿಎಪಿಎಂಸಿಎಸ್ ನಿರ್ದೇಶಕ ವಿ.ಅಂಜಿನಗೌಡ, ಎಸ್.ಟಿ.ಆರ್.ಆರ್.ಸದಸ್ಯ ದೀಪು,ನೌಕರರ ಹಿತರಕ್ಷಣಾ ಸಮಿತಿ ಜಿಲ್ಲಾ ಅಧ್ಯಕ್ಷ ಲೋಕೇಶ್, ತಾಲ್ಲೂಕು ಅಧ್ಯಕ್ಷ ರವೀಂದ್ರಕುಮಾರ್ ಇದ್ದರು.

ಇವ ನಮ್ಮ ಹುಡುಗ

‘ಬಮೂಲ್ ನಿರ್ದೇಶಕರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಬಿ.ಸಿ.ಆನಂದಕುಮಾರ್ ನಮ್ಮ ಹುಡುಗ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಶುಕ್ರವಾರ ನಗರದಲ್ಲಿ ನಡೆದ ಸಭೆಯಲ್ಲಿ ಹೇಳಿರುವ ಮಾತು ತಾಲ್ಲೂಕಿನ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಬಿ.ಸಿ.ಆನಂದಕುಮಾರ್ ಸೇರಿದಂತೆ ಇತರೆ ಮುಖಂಡರು ಕಾಂಗ್ರೆಸ್ ತೊರೆದು ಹೋಗಿದ್ದರಿಂದಲೇ ಇಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕಾರಣವಾಗಿತ್ತು ಎಂದೇ ವಿಶ್ಲೇಷಿಸಲಾಗಿತ್ತು. ಅಲ್ಲದೆ ಡಿ.ಕೆ.ಶಿವಕುಮಾರ್ ಅವರ ಅತ್ಯಾಪ್ತರ ಬಳಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿದ್ದರು.

‘ಈ ಹಿಂದೆ ಕಾಂಗ್ರೆಸ್ ಪಕ್ಷ ಬೆಂಬಲಿತ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾಗ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರ ಹಾಗೂ ಸ್ಥಳೀಯ ಮುಖಂಡರ ಮನವಿಯಂತೆ ಕೆ.ಎಂ.ಎಫ್ ನಿರ್ದೇಶಕರಾಗಿಯುವ ಬಿ.ಸಿ.ಆನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿತ್ತು.

2023ರ ವಿಧಾನ ಸಭಾ ಚುನಾಚವಣ ಸಂದರ್ಭದಲ್ಲಿ ಇತರೆ ಪಕ್ಷದ ಕಡೆಗೆ ಹೋಗಿದ್ದಾರೆ. ಆದರೆ ಆನಂದ್ಕುಮಾರ್ ನಮ್ಮ ಹುಡುಗ. ಮುಂದಿನ ದಿಗಳಲ್ಲಿ ನಮ್ಮೊಂದಿಗೆ ಇರಲಿದ್ದಾರೆ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]