Doddaballapura: Medicines and pills cannot be given to customers without an official certificate from a doctor.

ದೊಡ್ಡಬಳ್ಳಾಪುರ: ವೈಧ್ಯರ ಅಧಿಕೃತ ಚೀಟಿ ಇಲ್ಲದೆ ಗ್ರಾಹಕರಿಗೆ ಔಷಧಿ, ಮಾತ್ರೆಗಳನ್ನು ನೀಡುವಂತಿಲ್ಲ

ದೊಡ್ಡಬಳ್ಳಾಪುರ: ಯಾವುದೇ ನೋವು ನಿವಾರಕ ಔಷಧಿ, ಮಾತ್ರೆಗಳನ್ನು (Medicines and pills) ವೈಧ್ಯರ ಅಧಿಕೃತ ಸಲಹಾ ಚೀಟಿ ಇಲ್ಲದೆ ಗ್ರಾಹಕರಿಗೆ ನೀಡುವಂತಿಲ್ಲ. ಎಲ್ಲಾ ರೀತಿಯ ನೋವು ನಿವಾರಕ ಔಷಧಿಗಳು ಮಾದಕದ್ರವ್ಯ ನಿಷೇಧ ಕಾಯ್ದೆ ವ್ಯಾಪ್ತಿಗೆ ಬರಲಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಔಷಧ ನಿಯಂತ್ರಣ ಸಹಾಯಕ ನಿರ್ದೇಶಕ ಸಿ.ಗಣೇಶಬಾಬು (C. Ganeshbabu) ಹೇಳಿದರು.

ಅವರು ನಗರದಲ್ಲಿ ನಡೆದ ತಾಲ್ಲೂಕಿನ ಔಷಧಿ ವ್ಯಾಪಾರಿಗಳ ಕ್ಷೇಮಾಭವೃದ್ದಿ ಸಂಘದ ವಾರ್ಷಿಕ ಮಹಾ ಸಭೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಾರ್ಯಾಗಾರದಲ್ಲಿ ಮಾತನಾಡಿದರು.

ನೋವು ನಿವಾರಕ ಮಾತ್ರೆ,ಔಷಧಿಗಳನ್ನು ಅತಿಯಾಗಿ ಸೇವನೆ ಮಾಡುವುದರಿಂದ ಮಾದಕ ಧ್ರವ್ಯದಷ್ಟೇ ಪರಿಣಾಮವನ್ನು ದೇಹದ ಮೇಲೆ ಬೀರಲಿದೆ. ಹಾಗಾಗಿ ಔಷಧ ಮಾರಾಟಗಾರರು ಯಾವುದೇ ಔಷಧಿ,ಮಾತ್ರೆಗಳನ್ನು ಕೊಡುವಾಗ ಕಡ್ಡಾಯವಾಗಿ ವೈದ್ಯರ ಚೀಟಿಯನ್ನು ನೋಡಿಯೇ ನೀಡಬೇಕು. ಹಾಗೆಯೇ ಹಳೇಯ ದಿನಾಂಕ ಇರುವ ಔಷಧಿ ಚೀಟಿಗಳನ್ನು ಸಹ ಮಾನ್ಯ ಮಾಡುವಂತಿಲ್ಲ ಎಂದರು.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಡೆದ ಭ್ರೂಣಹತ್ಯೆ ಪ್ರಕರಣಗಳ ನಂತರ ಗರ್ಭಪಾತದ ಮಾತ್ರೆಗಳನ್ನು ಔಷಧಿ ಅಂಗಡಿಗಳಲ್ಲಿ ಮಾರಾಟ ಮಾಡುವುದಕ್ಕೆ ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ.

ಗರ್ಭಪಾತದ ಮಾತ್ರೆಗಳನ್ನು ಗ್ರಾಹಕರಿಗೆ ನೀಡುವಾಗ ಕಡ್ಡಾಯವಾಗಿ ವೈದ್ಯರು ಬರೆದುಕೊಡುವ ಚೀಟಿ, ದಿನಾಂಕ ಹಾಗೂ ವೈದ್ಯರ ಕರ್ನಾಟಕ ಮೆಡಿಕಲ್ ಕೌನ್ಸಿಲ್ ಸದಸ್ಯತ್ವ ಸಂಖ್ಯೆಯನ್ನು ಒಳಗೊಂಡ ಶಿಪಾರಸ್ಸು ಪತ್ರವನ್ನು ಪಡೆದುಕೊಂಡೇ ನೀಡಬೇಕು. ಹಾಗೆಯೇ ಗ್ರಾಹಕರ ಮೊಬೈಲ್ ಸಂಖ್ಯೆಯನ್ನು ಪಡೆಯಬೇಕು.

ಈ ನಿಯಮಗಳನ್ನು ಪಾಲಿಸದೇ ಇದ್ದರೆ ಔಷಧಿ ಮಾರಾಟ ಮಳಿಗೆಯ ಪರವಾನಿಗಿ ರದ್ದುಗೊಳಿಸುವುದಲ್ಲದೆ, ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದರು.
ವಾರ್ಷಿಕ ಸರ್ವ ಸದಸ್ಯ ಸಭೆಯ ಅಧ್ಯಕ್ಷತೆಯನ್ನು ತಾಲ್ಲೂಕಿನ ಔಷಧಿ ವ್ಯಾಪಾರಿಗಳ ಕ್ಷೇಮಾಭವೃದ್ದಿ ಸಂಘದ ಅಧ್ಯಕ್ಷ ಶಾಮಸುಂದರ್ ವಹಿಸಿದ್ದರು.

ಸಭೆಯಲ್ಲಿ ಸಂಘದ ರಾಜ್ಯ ಸಮಿತಿ ನಿರ್ದೇಶಕ ಎನ್.ಸಿ.ಪಟೇಲ್, ತಾಲ್ಲೂಕು ಗೌರವ ಅಧ್ಯಕ್ಷ ಡಿ.ಎಸ್.ಸಿದ್ದಣ್ಣ, ಉಪಾಧ್ಯಕ್ಷ ಜಿ.ಎಸ್.ಶಿವಕುಮಾರ್, ಕಾರ್ಯದರ್ಶಿ ಸಿ.ರಜನೀಶ್, ಖಜಾಂಚಿ ರಹೀಂಖಾನ್ ಹಾಗೂ ಸಂಘದ ಸದಸ್ಯರು, ಪದಾಧಿಕಾರಿಗಳು ಇದ್ದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!