ಒಂದೇ ದಿನ ರೂ.1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಿಜೆಪಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

CM Siddaramaiah challenges BJP by launching development works worth Rs. 1146 crore in a single day

ಮದ್ದೂರು: ಒಂದೇ ದಿನ ರೂ. 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ನುಡಿದರು.

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದು ಸವಾಲೆಸೆದರು.

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು.‌ ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಸಹಾಯಧನ‌ ಒದಗಿಸಿದ್ದು ನಾವು. ಈಗ ಮತ್ತೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 10 ಕೋಟಿ ರೂ ಕೊಟ್ಟಿರುವುದು ನಮ್ಮ ಸರ್ಕಾರ. ಮಂಡ್ಯ ಕೃಷಿ ವಿವಿ ಆರಂಭಿಸಿ, ಅಗತ್ಯ ಅನುದಾನ‌ ಕೊಟ್ಟಿರುವುದು ನಾವು. ಇದು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಬದ್ಧತೆ ಎಂದು ವಿವರಿಸಿದರು.

ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರ ಕೊಳ್ಳುವ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಪರಿಣಾಮ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ ಎಂದು ಮೆಚ್ವುಗೆ ಸೂಚಿಸಿದರು.

ಮಂಡ್ಯ ನಗರದಲ್ಲಿ 100 ಅಡಿ ರಸ್ತೆ ಮಾಡಲು ಶಾಸಕ ಉದಯ್ ಅವರ ಬೇಡಿಕೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಘೋಷಿಸಿದ ಮುಖ್ಯಮಂತ್ರಿಗಳು,
ಶಾಸಕ‌ ಉದಯ್ ಅವರದ್ದು ಕಡಿಮೆ ಮಾತು, ಹೆಚ್ಚು ಕೆಲಸ ಮಾಡುತ್ತಾರೆ ಎಂದು ಪ್ರಶಂಶಿಸಿದರು.

ರಾಜ್ಯದ ಪಾಲಿನ ಗೊಬ್ಬರವನ್ನೂ ಕೇಂದ್ರ ಕೊಡುತ್ತಿಲ್ಲ

ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದು ಸವಾಲು ಹಾಕಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳೀಗೌಡ ಸೇರಿ ಹಲವು ಪ್ರಮುಖರು ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ‌ ಉದಯ್ ಅವರು ಅಧ್ಯಕ್ಷತೆ ವಹಿಸಿದ್ದರು.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]