Doddaballapura: Kannadigara Karnataka Rakshana Vedike shocked Bigg Boss winner Pratham and Jagadish..!

ದೊಡ್ಡಬಳ್ಳಾಪುರ: ಪ್ರಥಮ್ ಹಾಗೂ ಜಗದೀಶ್‌ಗೆ ಶಾಕ್ ಕೊಟ್ಟ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ..!

ದೊಡ್ಡಬಳ್ಳಾಪುರ: ಹಲ್ಲೆ ನಡೆದಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ (Doddaballapura) ಮತ್ತು ಪೊಲೀಸ್ (Police) ಇಲಾಖೆಗೆ ಮಸಿ ಬಳಿಯಲು ಯತ್ನಿಸಿದ ಆರೋಪದಡಿಯಲ್ಲಿ ಬಿಗ್ ಬಾಸ್ ವಿನ್ನರ್ ಪ್ರಥಮ್ ಹಾಗೂ ಮತ್ತೊಬ್ಬ ಸ್ಪರ್ಧಿ ಜಗದೀಶ್ ವಿರುದ್ಧ ಕ್ರಮಕೈಗೊಳ್ಳುವಂತೆ ದೊಡ್ಡಬಳ್ಳಾಪುರ ಡಿವೈಎಸ್ಪಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಗೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ದೂರು ನೀಡಿದೆ‌.

ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿಎಸ್ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ಡಿವೈಎಸ್ಪಿ ರವಿ ಅವರಿಗೆ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ದೊಡ್ಡಬಳ್ಳಾಪುರವು ಇತಿಹಾಸದಿಂದ ಇಲ್ಲಿಯವರೆಗೂ ಶಾಂತಿ ಸೌಹಾರ್ದತೆಯಿಂದ ತುಂಬಿದ ತಾಲ್ಲೂಕಾಗಿದೆ. ಇಂಡಸ್ಟ್ರಿಯಲ್ ಏರಿಯಾಗಳನ್ನು ಹೊಂದಿರುವ ಈ ತಾಲ್ಲೂಕು ವಲಸೆ ಬಂದಂತಹ ಅದೆಷ್ಟೋ ಜನರನ್ನು ಆದರದಿಂದ ಬರಮಾಡಿಕೊಂಡು ಅವರುಗಳು ಇಲ್ಲಿ ನೆಲೆವೂರುವಂತೆ ಮಾಡಿದೆ.

ಕಾಲಕಾಲಕ್ಕೆ ಬಂದಂತಹ ಪೋಲೀಸ್ ಅಧಿಕಾರಿಗಳು ತೋರಿರುವ ದಕ್ಷತೆ, ಸಾಮರ್ಥ್ಯದಿಂದ ರೌಡಿಸಂ ಆಗಲಿ, ಕೋಮುಗಲಭೆಯಾಗಲಿ ಅಥವಾ ಇನ್ನು ಇತರೆ ಯಾವುದೇ. ತರಹದ ಗಲಾಟೆಗಳು ಇಲ್ಲದಂತೆ ನೋಡಿಕೊಂಡು ದೊಡ್ಡಬಳ್ಳಾಪುರದ ಜನರು ನಿರ್ಭಯದಿಂದ ಬದುಕಲು ಕಾರಣರಾಗಿದ್ದಾರೆ.

ಆದರೆ ಇದೀಗ ಸುದ್ದಿಯಲ್ಲಿರುವ ಸೆಲೆಬ್ರಿಟಿಯಾಗಿರುವ ಪ್ರಥಮ್ ವಿಚಾರ ದೊಡ್ಡಬಳ್ಳಾಪುರದ ಶಾಂತಿಯುತ ವಾತಾವರಣದ ಮೇಲೆ ಪ್ರಶ್ನೆ ಮಾಡುವಂತೆ ಮಾಡಿದೆ. ಅದರ ಜೊತೆಯಲ್ಲಿ ಜಗದೀಶ್ ರವರ ವೈರಲ್ ಆಡಿಯೋ ಹಾಗೂ ವಿಡಿಯೋ ಕ್ಲಿಪ್ಪಿಂಗ್ ಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ಜನತೆಯ ಸೌಹಾರ್ದತೆಗೆ, ರಾಜ್ಯ ಪೋಲೀಸ್ ಹಾಗೂ ದೊಡ್ಡಬಳ್ಳಾಪುರದ ಪೋಲೀಸ್ ರವರ ದಕ್ಷತೆಗೆ ಮಸಿ ಬಳೆಯುವ ಪ್ರಯತ್ನದಂತೆ ತೋರುತ್ತಿದೆ.

ಇಂತಹ ಬೆಳವಣಿಗೆಗಳು ಜನಸಾಮಾನ್ಯರಲ್ಲಿ ಭಯವನ್ನುಂಟು ಮಾಡುವುದಲ್ಲದೆ, ಬೆಳೆಯುತ್ತಿರುವ ತಾಲ್ಲೂಕಿಗೆ ಕಂಟಕವಾಗುವುದು ಸುಳ್ಳಲ್ಲ. ಆದ್ದರಿಂದ ಪೊಲೀಸರು ಈ ವಿಚಾರದ ಬಗ್ಗೆ ಸ್ವತಂತ್ರವಾಗಿ ಸುಮೋಟೋ ಕೇಸ್ ದಾಖಲಿಸಿಕೊಂಡು ನಿಜವಾಗಿಯೂ ಪ್ರಥಮ್ ಹಾಗೂ ಜಗದೀಶ್ ರವರು ಹೇಳಿಕೊಳ್ಳುತ್ತಿರುವಂತಹ ಕಹಿ ಘಟನೆ ನಡೆದಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ.

ಅಂತೆಯೇ ಈ ಆರೋಪ ಸುಳ್ಳಾಗಿದ್ದಲ್ಲಿ, ಸುಳ್ಳುವದಂತಿಗಳನ್ನು ಹಬ್ಬಿಸಿ ದೊಡ್ಡಬಳ್ಳಾಪುರ ಹಾಗೂ ಪೋಲೀಸ್ ಇಲಾಖೆಗೆ ಮಸಿ ಬಳೆಯುವ ಕೆಲಸ ಮಾಡಿರುವ ಪ್ರಥಮ್ ಹಾಗೂ ಜಗದೀಶ್ ರವರ ಮೇಲೆ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ರಾಜಕೀಯ

ಒಂದೇ ದಿನ ರೂ.1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಿಜೆಪಿಗೆ ಸವಾಲೆಸೆದ ಸಿಎಂ ಸಿದ್ದರಾಮಯ್ಯ

ಒಂದೇ ದಿನ ರೂ.1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಬಿಜೆಪಿಗೆ

ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="111790"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಸ್ಥಳ ಮಹಜರು ಆರಂಭಿಸಿದ ಎಸ್.ಐ.ಟಿ

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ಸ್ಥಳ ಮಹಜರು ಆರಂಭಿಸಿದ ಎಸ್.ಐ.ಟಿ

ಧರ್ಮಸ್ಥಳದ (Dharmasthala) ನೇತ್ರಾವತಿ ಸ್ನಾನಘಟ್ಟದ ಬಳಿಯ ತೆಂಗಿನ ತೋಟದ ಪೊದೆಗಳಲ್ಲಿ ಮಹಜರು ಕಾರ್ಯವನ್ನು ತನಿಖಾಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ

[ccc_my_favorite_select_button post_id="111774"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!