Operation Sindoora in text

ಗುಡ್ಮಾರ್ನಿಂಗ್ ನ್ಯೂಸ್: ಆಪರೇಷನ್ ಸಿಂದೂರ ಪಠ್ಯಕ್ಕೆ

ನವದೆಹಲಿ: ದೇಶದ ವಿದ್ಯಾರ್ಥಿಗಳಿಗೆ ಭಾರತದ ಒಟ್ಟಾರೆ ರಕ್ಷಣಾ ಪಡೆಗಳು, ಅವುಗಳ ಶಕ್ತಿ-ಸಾಮರ್ಥ್ಯ ಮತ್ತು ಸಾಧನೆಗಳ ಬಗ್ಗೆ ತಿಳಿಸಿಕೊಡುವ ಉದ್ದೇಶದಿಂದ ‘ಆಪರೇಷನ್ ಸಿಂದೂ‌ರ’ (Operation Sindoora) ಸೇನಾ ಕಾರ್ಯಾಚರಣೆಯ ಸಮಗ್ರ ಮಾಹಿತಿ ಒಳಗೊಂಡ ವಿಶೇಷ ಶೈಕ್ಷಣಿಕ ಪಠ್ಯವನ್ನು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದಪಡಿಸುತ್ತಿದೆ ಎಂದು ವರದಿಯಾಗಿದೆ.

ಭಾರತದ ರಕ್ಷಣಾ ಪಡೆಗಳ ಸಾಧನೆ ಕುರಿತ ಪಠ್ಯವನ್ನು ಎರಡು ಭಾಗಗಳಾಗಿ ವಿಂಗಡಿಸಿ ಕೇಂದ್ರ ಪಠ್ಯಕ್ರಮದಲ್ಲಿ ಸೇರಿಸಲಾಗುವುದು. ಒಂದು ಭಾಗ 4 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳ ಪಠ್ಯದಲ್ಲಿದ್ದರೆ, ಮತ್ತೊಂದು ಭಾಗ 9ರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳ ಪಠ್ಯದಲ್ಲಿ ಸೇರಿಸಲಾಗುವುದು ಎಂದಿದೆ.

ಆಪರೇಷನ್ ಸಿಂದೂರ್ ಕುರಿತ ವಿಶೇಷ ಪಠ್ಯವು ಒಟ್ಟಾರೆಯಾಗಿ 8ರಿಂದ 10 ಪುಟಗಳನ್ನು ಒಳಗೊಂಡಿರುತ್ತದೆ. ಪಹಲ್ಲಾಮ್ ಭಯೋತ್ಪಾದಕ ದಾಳಿ ನಂತರ ಭಾರತದ ಸೇನಾ ಕಾರ್ಯತಂತ್ರದ ಮೇಲೆಯೇ ಪಠ್ಯ ಹೆಚ್ಚು ಕೇಂದ್ರೀಕೃತವಾಗಿರುತ್ತದೆ ಎನ್ನಲಾಗಿದೆ.

ರಾಷ್ಟ್ರವೊಂದು ಗಡಿಯಾಚೆಗಿನ ಭಯೋತ್ಪಾದನೆ ಕೃತ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಮತ್ತು ರಾಷ್ಟ್ರೀಯ ಭದ್ರತೆಯನ್ನು ಖಾತರಿ ಪಡಿಸುವಲ್ಲಿ ದೇಶದ ರಕ್ಷಣಾ ಪಡೆಗಳ ಪಾತ್ರವೇನು? ರಾಜ ತಾಂತ್ರಿಕ ನೀತಿ ಮತ್ತು ವಿವಿಧ ಸಚಿವಾಲಯಗಳ ನಡುವಿನ ಸಮನ್ವಯತೆ ಮೊದಲಾದ ಪ್ರಮುಖ ಅಂಶಗಳನ್ನು ಪಠ್ಯ ಒಳಗೊಂಡಿರಲಿದೆ.

ದೇಶದ ರಕ್ಷಣಾ ವ್ಯವಸ್ಥೆಯನ್ನು ಉತ್ತಮ ರೀತಿ ಅರ್ಥಮಾಡಿಕೊಳ್ಳಲು ಈ ಉಪಕ್ರಮ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಿದೆ ಎಂದು ಮೂಲಗಳು ತಿಳಿಸಿವೆ.

ರಾಜಕೀಯ

ಜು.28 ರಂದು ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ

ಜು.28 ರಂದು ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ: ಬಿ.ವೈ. ವಿಜಯೇಂದ್ರ

ರಾಜ್ಯದಲ್ಲಿ ರೈತರಿಗೆ ಕಳಪೆ ಬಿತ್ತನೆ ಬೀಜ ವಿತರಣೆ ಮತ್ತು ರಸಗೊಬ್ಬರ ಕೊರತೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಆರೋಪಿಸಿದ್ದಾರೆ

[ccc_my_favorite_select_button post_id="111749"]
ಕರ್ನಾಟಕದ ಹೃದಯ ಬೆಂಗಳೂರು ಎಲ್ಲರಿಗೂ ಸೇರಿದ್ದು: ಡಿಸಿಎಂ ಡಿ.ಕೆ‌. ಶಿವಕುಮಾರ್

ಕರ್ನಾಟಕದ ಹೃದಯ ಬೆಂಗಳೂರು ಎಲ್ಲರಿಗೂ ಸೇರಿದ್ದು: ಡಿಸಿಎಂ ಡಿ.ಕೆ‌. ಶಿವಕುಮಾರ್

"ಕರ್ನಾಟಕದ ಎಲ್ಲಾ ಭಾಗಗಳ ಜನರ ಹೃದಯವೇ ಬೆಂಗಳೂರು. ಬೆಂಗಳೂರು ನಗರ ‌ಇಲ್ಲಿನ ಸುತ್ತಮುತ್ತಲ ಜನರಿಗೆ ಸೇರಿದ್ದಲ್ಲ, ದಕ್ಷಿಣ ಕನ್ನಡ, ಗುಲ್ಬರ್ಗ, ರಾಯಚೂರು, ಉಡುಪಿ ಹೀಗೆ ಎಲ್ಲರಿಗೂ ಸೇರಿದ್ದು. ನೀವೆಲ್ಲರೂ ಸೇರಿ ಬೆಂಗಳೂರನ್ನು ಉಳಿಸಿ ಬೆಳೆಸಬೇಕು"

[ccc_my_favorite_select_button post_id="111766"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ: PDO ಅಮಾನತ್ತು

ಕರ್ತವ್ಯ ಲೋಪ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಅಮಾನತ್ತು (suspended) ಮಾಡಲಾಗಿದೆ.

[ccc_my_favorite_select_button post_id="111621"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!