ಬೆಳ್ತಂಗಡಿ; ಧರ್ಮಸ್ಥಳದ (Dharmasthala) ನೇತ್ರಾವತಿ ಸ್ನಾನಘಟ್ಟದ ಬಳಿಯ ತೆಂಗಿನ ತೋಟದ ಪೊದೆಗಳಲ್ಲಿ ಮಹಜರು ಕಾರ್ಯವನ್ನು ತನಿಖಾಧಿಕಾರಿಗಳು ಕೈಗೆತ್ತಿಕೊಂಡಿದ್ದಾರೆ.
ಸಾಕ್ಷಿ ದೂರುದಾರನನ್ನು ಪೊಲೀಸರು ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಿಂದ ಸ್ಥಳಕ್ಕೆ ಕೊಂಡೊಯ್ದಿದ್ದಾರೆ
ಪೊಲೀಸ್ ಅಧಿಕಾರಿಗಳಿಗೆ ಸಾಕ್ಷಿ ದೂರುದಾರ ಶವ ಹೂತಿಟ್ಟ ಸ್ಥಳಗಳನ್ನು ತೋರಿಸಿದ್ದು, ಅದಕ್ಕೆ ಪೂರಕವಾಗಿ ಪೊಲೀಸರ ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.
ಕಂದಾಯ ಇಲಾಖೆ, ಅರಣ್ಯ ಇಲಾಖೆ, ಎಸ್ ಬಿ ಸಿ ಒ ಅಧಿಕಾರಿಗಳು , ಎಫ್ಎಎಲ್ ತಜ್ಞರು ಎಸ್.ಐ.ಟಿ ತನಿಖಾಧಿಕಾರಿಗಳೊಂದಿಗೆ ಕೈ ಜೋಡಿಸಿದ್ದಾರೆ.
ಸರ್ವೇ ಅಧಿಕಾರಿಗಳು ಕೂಡ ಹಲವು ದಾಖಲೆಗಳನ್ನು ತಂದಿದ್ದು, ಪೊಲೀಸರಿಗೆ ಅದನ್ನು ನೀಡಿದ್ದಾರೆ. ನೇತ್ರಾವತಿ ನದಿ ತಟದ ಬಳಿ ಜನಸಾಗರವೇ ಸೇರಿದ್ದು, ನೂರಾರು ಮಂದಿ ವೀಕ್ಷಿಸುತ್ತಿದ್ದಾರೆ. 40 ಕ್ಕೂ ಅಧಿಕ ಮಾಧ್ಯಮಗಳ ವರದಿಗಾರರು ಸ್ಥಳದಲ್ಲಿ ಜಮಾಯಿಸಿದ್ದಾರೆ.