Doddaballapura: The state highway is plagued by garbage.. Ghati Subrahmanya devotees are outraged.

ದೊಡ್ಡಬಳ್ಳಾಪುರ: ರಾಜ್ಯ ಹೆದ್ದಾರಿಯಲ್ಲಿ ತ್ಯಾಜದ ಹಾವಳಿ.. ಘಾಟಿ ಸುಬ್ರಹ್ಮಣ್ಯ ಭಕ್ತರ ಆಕ್ರೋಶ

ದೊಡ್ಡಬಳ್ಳಾಪುರ: ತಾಲೂಕಿನ ಮೂಲಕ ಹಾದು ಹೋಗಿರುವ ಬೆಂಗಳೂರು – ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ತ್ಯಾಜ್ಯ (Garbage) ಹಾವಳಿ ಮಿತಿಮೀರಿದೆ‌.

ದೊಡ್ಡಬಳ್ಳಾಪುರ ತಾಲೂಕಿನ ಮೇಲಿನ ನಾಯಕರಂಡಹಳ್ಳಿ ಹಾಗೂ ಕೆಳಗಿನಜೂಗನಹಳ್ಳಿ ನಡುವೆ ರಾಜ್ಯ ಹೆದ್ದಾರಿಯ ಅಕ್ಕ ಪಕ್ಕದಲ್ಲಿಯೇ ಕಾರ್ಖಾನೆಯ ತ್ಯಾಜ್ಯವನ್ನು ಚೀಲಗಳಲ್ಲಿ ತುಂಬಿ ಎಸೆಯಲಾಗಿದೆ.

ಇದರಿಂದಾಗಿ ಈ ವ್ಯಾಪ್ತಿಯಲ್ಲಿ ಹೆಚ್ಚಾಗಿರುವ ವನ್ಯಜೀವಿಗಳಿಗೆ ಪ್ರಾಣಹಾನಿ ಉಂಟಾಗುವ ಆತಂಕ ಎದುರಾಗಿದೆ.

ಇತ್ತೀಚೆಗಷ್ಟೆ ಹೊಸಹಳ್ಳಿ ರಸ್ತೆಯಲ್ಲಿ ಕೈಗಾರಿಕಾ ತ್ಯಾಜ್ಯ ಸುರಿದು ಪರಿಸರ ಹಾಳುಮಾಡುವ ದುಷ್ಕ್ರತ್ಯ ಎಸೆಗಲಾಗಿತ್ತು. ಇದರ ಬೆನ್ನಲ್ಲೇ ಈ ರೀತಿ ರಾಜ್ಯ ಹೆದ್ದಾರಿಯ ಅಕ್ಕಪಕ್ಕದಲ್ಲಿಯೇ ತ್ಯಾಜ್ಯದ ಮೂಟೆಗಳನ್ನು ಬಿಸಾಡಲಾಗಿದೆ.

ಇನ್ನೂ ಈ ವ್ಯಾಪ್ತಿಯ ಹಲವೆಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಮೇಲಿನಜೂಗಾನಹಳ್ಳಿ ಗ್ರಾಮಪಂಚಾಯಿತಿಗೆ ಸೂಚನೆ ನೀಡಲಾಗಿದ್ದರು, ಅಳವಡಿಸಲು ಮುಂದಾಗದೇ ಇರುವ ಕಾರಣ ಈ ರೀತಿಯ ಕೃತ್ಯವೆಸೆಗಿದವರ ಪತ್ತೆ ಕಾರ್ಯಕ್ಕೆ ತೊಡಕಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ಸಮೀಪದ ರಾಜ್ಯ ಹೆದ್ದಾರಿಯಲ್ಲೇ ವಿವಿಧೆಡೆ ಸುಮಾರು 20ಕ್ಕೂ ಹೆಚ್ಚು ಚೀಲ ತ್ಯಾಜ್ಯ ಮೂಟೆಗಳು ಎಸೆದಿರುವುದು ಭಕ್ತರ ಆಕ್ರೋಶಕ್ಕೂ ಕೂಡ ಕಾರಣವಾಗಿದೆ.

ಪರಿಸರಕ್ಕೆ ಮಾರಕ

ಗಾರ್ಮೆಂಟ್ಸ್ ಕಾರ್ಖಾನೆಗೆ ಸೇರಿರುವ ಚೀಲದಲ್ಲಿ ಅನೇಕ ಪುಡಿ ಬಟ್ಟೆಗಳನ್ನು ತುಂಬಿ ತಂದು ಎಸೆಯಲಾಗಿದೆ‌. ಈ ಚೀಲಗಳಲ್ಲಿ ಕೆಲವು ಹೊಡೆದು ಪಾಲಿಸ್ಟರ್ ಮುಂದಾದ ಬಟ್ಟೆ ಪೀಸುಗಳು ಅರಣ್ಯ ಪ್ರದೇಶಕ್ಕೆ ಸೇರುತ್ತಿದೆ‌. ಇದರಿಂದ ಪರಿಸರಕ್ಕೆ ಹಾನಿಯುಂಟಾಗಲಿದೆ‌.

ಕೂಡಲೇ ತ್ಯಾಜ್ಯ ತೆರವಿಗೆ ಘಾಟಿ ಅಭಿವೃದ್ಧಿ ಪ್ರಾಧಿಕಾರವಾಗಲಿ, ಗ್ರಾಮ ಪಂಚಾಯಿತಿಯಾಗಲಿ ಕ್ರಮಕೈಗೊಳ್ಳಬೇಕು. ಹಾಗೂ ಈ ರೀತಿ ಬೇಜವಬ್ದಾರಿ ತೋರುವ ಕಿಡಿಗೇಡಿಗಳನ್ನು ಪತ್ತೆಹಚ್ಚಲು ಪೊಲೀಸರಿಗೆ ಅನುಕೂಲವಾಗುವಂತೆ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಪ್ರಯಾಣಿಕ ಗೌರಿಬಿದನೂರು ಸತೀಶ್ ರೆಡ್ಡಿ ಒತ್ತಾಯಿಸಿದ್ದಾರೆ‌.

ಕಿಡಿಗೇಡಿಗಳು ತ್ಯಾಜ್ಯವನ್ನು ಎಸೆದಿರುವ ಸ್ಥಳ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದೆ.

ರಾಜಕೀಯ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌

[ccc_my_favorite_select_button post_id="115408"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!