Allegations of election irregularities; If Congress has evidence, submit it to the court: B.Y. Vijayendra

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಬೆಂಗಳೂರು: ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಾಗದೆ ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣಾ ಅಕ್ರಮದ ಹೊಸ ಕಪಟ ನಾಟಕ ಮಾಡುತ್ತಿದೆ. ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ಟೀಕಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಆಗಸ್ಟ್ 4 ಅಥವಾ 5ರಂದು ಬೆಂಗಳೂರಿಗೆ ಬಂದು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ; ಪಾದಯಾತ್ರೆ ಅಥವಾ ಧರಣಿ ಮಾಡುತ್ತಾರೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ನಡವಳಿಕೆ ಗಮನಿಸಿದರೆ ಅಯ್ಯೋ ಪಾಪ ಅನಿಸುತ್ತದೆ ಎಂದು ಟೀಕಿಸಿದರು.

ಚುನಾವಣಾ ಆಯೋಗದ ಬಗ್ಗೆಯೂ ಅನುಮಾನ, ಸುಪ್ರೀಂ ಕೋರ್ಟಿನ ಬಗ್ಗೆಯೂ ಅನುಮಾನ ವ್ಯಕ್ತಪಡಿಸುತ್ತಾರೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಬಳಿ ಪುರಾವೆ ಇದ್ದರೆ ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲಿ ಎಂದು ಸವಾಲು ಹಾಕಿದರು.

ನೀವು ಅದನ್ನು ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನೆ ಮಾಡಿ ಎಂದು ಆಗ್ರಹಿಸಿದರು.
ಹೇಗಾದರೂ ಮಾಡಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕೆಂದು ಕಾಂಗ್ರೆಸ್ ಪ್ರಯತ್ನ ಮಾಡಿತ್ತು. ಆದರೆ, ಗೆಲುವು ಸಾಧ್ಯವಾಗಿಲ್ಲ ಎಂದ ಅವರು, ಆರೋಪದಿಂದ ಅವರು ಏನೂ ಸಾಧನೆ ಮಾಡಲು ಸಾಧ್ಯವಾಗದು ಎಂದು ತಿಳಿಸಿದರು.

ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡಿದ್ದರೆ ನಾವು (ಬಿಜೆಪಿ) ಕರ್ನಾಟಕದಲ್ಲಿ ವಿಪಕ್ಷ ಸ್ಥಾನದಲ್ಲಿ ಕೂರುವ ಅವಶ್ಯಕತೆ ಇರಲಿಲ್ಲ ಎಂದು ಅವರು ತಿಳಿಸಿದರು. ಕಾಂಗ್ರೆಸ್ 66 ಶಾಸಕ ಸ್ಥಾನ ಪಡೆದರೆ, ಬಿಜೆಪಿ 136 ಸ್ಥಾನದಿಂದ ಅಧಿಕಾರಕ್ಕೆ ಏರುತ್ತಿತ್ತು ಎಂದು ವಿಶ್ಲೇಷಿಸಿದರು.

ಸಾಂವಿಧಾನಿಕ ಸಂಸ್ಥೆ ಬಗ್ಗೆ ಅನುಮಾನ ಅಪಾಯಕಾರಿ ಬೆಳವಣಿಗೆ

3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಗೆಲ್ಲುತ್ತಿತ್ತು. ಹಾಗಿದ್ದರೆ ಮೂರರಲ್ಲೂ ಕಾಂಗ್ರೆಸ್ ಗೆದ್ದದ್ದು ಹೇಗೆ ಎಂದು ಪ್ರಶ್ನಿಸಿದರು. ಇದು ಮೂರ್ಖತನದ ಪರಮಾವಧಿ ಎಂದು ವಿಜಯೇಂದ್ರ ಅವರು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷ ಮೂರ್ಖರ ಪಕ್ಷವಾಗಿದೆ ಎಂದು ಟೀಕಿಸಿದರು.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿವೆ. ಹಾಗಿದ್ದರೆ ರಾಯಚೂರು, ದಾವಣಗೆರೆಯಲ್ಲಿ ಕಾಂಗ್ರೆಸ್ ಗೆದ್ದದ್ದು ಹೇಗೆ ಎಂದು ಕೇಳಿದರು. ಈ ರೀತಿ ಹುಚ್ಚಾಟ, ರಂಪಾಟದ ಮೂಲಕ ಸಾಂವಿಧಾನಿಕ ಸಂಸ್ಥೆ ಬಗ್ಗೆ ಕೂಡ ಅನುಮಾನ ವ್ಯಕ್ತಪಡಿಸುವುದು ಅಪಾಯಕಾರಿ ಬೆಳವಣಿಗೆ; ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪಿಸಿದರು.

4 ಅಥವಾ 5ರಂದು ಅವರು ಬಂದು ಏನು ಕಡಿದು ಕಟ್ಟೆ ಹಾಕುತ್ತಾರೆಂದು ಬಿಜೆಪಿ ನೋಡುತ್ತದೆ ಎಂದರು. ನಾವು ಕೂಡ ಕಾರ್ಯತಂತ್ರ ರೂಪಿಸುತ್ತೇವೆ ಎಂದು ತಿಳಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ, ಮುಖ್ಯಮಂತ್ರಿ ಮನೆ ಮುಂದೆ ಪ್ರತಿಭಟನೆಗೆ ಮುಂದಾದರೆ ಕಮೀಷನರ್ ಅವರು ಹೈಕೋರ್ಟಿನ ಆದೇಶ ತೋರಿಸುತ್ತಾರೆ. ಸಿದ್ದರಾಮಯ್ಯನವರು ಎಲ್ಲಿಂದ ಬೇಕಿದ್ದರೂ ಪಾದಯಾತ್ರೆ ಮಾಡಬಹುದು, ರಾಹುಲ್ ಗಾಂಧಿಯವರು ಮೆರವಣಿಗೆ ಮಾಡಬಹುದು; ಇದು ಖಂಡಿತ ಸರಿಯಲ್ಲ ಎಂದು ಟೀಕಿಸಿದರು.

ನಮಗೊಂದು ಕಾನೂನು, ಅವರಿಗೊಂದು ಕಾನೂನು ಇರಲು ಸಾಧ್ಯವಿಲ್ಲ ಎಂದರು. ಅವರಿಗೆ ಅವಕಾಶ ನೀಡಿದರೆ ನಾವೂ ಹೋರಾಟ ಮಾಡುತ್ತೇವೆ. ಅದನ್ನು ತಡೆಯಬಾರದು ಎಂದು ನುಡಿದರು.

ದಿಕ್ಕು ತೋಚದ ರಾಹುಲ್ ಗಾಂಧಿ

ರಾಹುಲ್ ಗಾಂಧಿಯವರು ಹತಾಶರಾಗಿದ್ದಾರೆ. ಅವರಿಗೆ ದಿಕ್ಕು ತೋಚುತ್ತಿಲ್ಲ. ಒಂದೆಡೆ ನ್ಯಾಷನಲ್ ಹೆರಾಲ್ಡ್ ಕೇಸಿನಲ್ಲಿ ಬೀದಿಗೆ ಬಂದಿದ್ದಾರೆ. ಜಾಮೀನಿನಲ್ಲಿ ಅವರಿದ್ದಾರೆ. ದೇಶದ ಯಾವುದೇ ರಾಜ್ಯಕ್ಕೆ ಹೋದರೂ ಅವರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.

ಕರ್ನಾಟಕದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿದ್ದಾರೆ. ಇಲ್ಲಿ ಬಂದು ಪುಂಗಿ ಊದುವ ಕೆಲಸ ಮಾಡುತ್ತಾರೆ. ಅವರು ಬರಲಿ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಸಿದ್ದರಾಮಯ್ಯ ಅವರು ಶಾಸಕರ ಸಭೆಗೆ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ಕೊಡದ ಕುರಿತ ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳ ನಡುವೆ ನಾವು ವ್ಯತ್ಯಾಸ ಕಾಣುತ್ತಿದ್ದೇವೆ. ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಅಲ್ಲ; ಸಿದ್ದರಾಮಯ್ಯನವರ ಸಾಧನಾ ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್ ಅವರು ಯಾವ ರೀತಿ ಏಕಾಂಗಿಯಾಗಿ ವೇದಿಕೆ ಬಿಟ್ಟು ನಡೆದು ಹೋದುದನ್ನು ನೋಡಿದ್ದೀರಿ. ರಾತ್ರೋರಾತ್ರಿ ದೆಹಲಿಗೆ ಹೋದರು. ಒಟ್ಟಾರೆಯಾಗಿ ಆಡಳಿತ ಪಕ್ಷದಲ್ಲಿ ಶಾಸಕರ ಮಧ್ಯೆ ಇರುವ ವ್ಯತ್ಯಾಸ ಕಾಣಿಸುತ್ತಿದೆ. ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿಗಳ ಬಗ್ಗೆ ವಿಶ್ವಾಸ ಕಳೆದುಹೋಗಿದೆ; ಮುಖ್ಯಮಂತ್ರಿಗಳೂ ವಿಚಲಿತರಾಗಿ ಮತ್ತೆ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಕರ್ನಾಟಕದಲ್ಲಿ ದೀಪಾವಳಿ ಧಮಾಕಾ

50 ಕೋಟಿ ಅನುದಾನ ಎಲ್ಲಿ ಬಿಡುಗಡೆ ಮಾಡಿದ್ದಾರೆ ಸ್ವಾಮೀ? ಸಿದ್ದರಾಮಯ್ಯ ಅವರು ಹೇಳಿಕೆ ನೀಡಿ ಒಂದು ವಾರ ಕಳೆಯುತ್ತ ಬಂದಿದೆ. ಆಡಳಿತ ಪಕ್ಷದ ಶಾಸಕರಿಗೆ ಇವತ್ತಿಗೆ ಕೂಡ ಎಲ್ಲಿಯೂ ಅನುದಾನ ಬಿಡುಗಡೆ ಆಗಿಲ್ಲ ಎಂದು ಟೀಕಿಸಿದರು.

ವಿಪಕ್ಷದ ಶಾಸಕರಿಗೆ 25 ಕೋಟಿ ಎಂಬ ಊಹಾಪೋಹವಿದ್ದು, ಅದನ್ನೂ ಕೊಟ್ಟಿಲ್ಲ. ಒಟ್ಟಾರೆಯಾಗಿ ಮುಂದಿನ ದೀಪಾವಳಿ ಧಮಾಕಾ ಕರ್ನಾಟಕದಲ್ಲಿ ಆಗುವುದು ಸತ್ಯ ಎಂದು ತಿಳಿಸಿದರು. ರಷ್ಯಾ- ಉಕ್ರೇನ್ ಯುದ್ಧ ನಿಲ್ಲಬಹುದು; ಇಲ್ಲಂತೂ ಯುದ್ಧ ಪ್ರಾರಂಭ ಆಗಲಿದೆ ಎಂದು ನುಡಿದರು.

ರಾಜಕೀಯ

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ.

ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="111927"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ ಪತ್ತೆ..!

ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ

ಧರ್ಮಸ್ಥಳ (Dharmasthala): ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ.31 ರಂದು 6ನೇ ಗುರುತಿನ ಎಸ್‌ಐಟಿ (SIT) ನಡೆಸಿದ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿ ವಿಜ್ಞಾನ ಅಧಿಕಾರಿಗಳು ಅದನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಧರ್ಮಸ್ಥಳ ಗ್ರಾಮ

[ccc_my_favorite_select_button post_id="111942"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!