Padayatra of Rahul Gandhi who has less intelligence: R. Ashoka

ಬುದ್ಧಿ ಕಡಿಮೆ ಇರುವ ರಾಹುಲ್‌ ಗಾಂಧಿಯವರ ಪಾದಯಾತ್ರೆ: ಆರ್‌.ಅಶೋಕ

ಬೆಂಗಳೂರು; ಬುದ್ಧಿ ಕಡಿಮೆ ಇರುವ ರಾಹುಲ್‌ ಗಾಂಧಿಯವರ (Rahul Gandhi) ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ ನೀಡುತ್ತಾರೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಪ್ರಶ್ನೆ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆದಾಗ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಆಗ ಚುನಾವಣೆಯಲ್ಲಿ ಅಕ್ರಮ ಆಗಿದ್ದರೆ ಚುನಾವಣಾ ಆಯೋಗಕ್ಕೆ ದೂರು ನೀಡಬಹುದು ಎಂಬ ಕಾಮನ್‌ಸೆನ್ಸ್‌ ರಾಹುಲ್‌ ಗಾಂಧಿಗೆ ಇಲ್ಲ. ಅದಕ್ಕಾಗಿಯೇ ಅವರು ರಾಜ್ಯಕ್ಕೆ ಬಂದು ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ಯಾತ್ರೆಗೆ ಅನುಮತಿ ನೀಡಬಾರದು ಎಂದು ಕೋರ್ಟ್‌ ಆದೇಶ ಇರುವಾಗ ಅನುಮತಿ ಹೇಗೆ ನೀಡುತ್ತಾರೆ? ಅನುಮತಿ ನೀಡಿದರೆ ಬಿಜೆಪಿಯಿಂದ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ಇಂದಿರಾಗಾಂಧಿ ಚುನಾವಣಾ ಅಕ್ರಮ ಮಾಡಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದರು. ಇಂತಹ ಪಕ್ಷಕ್ಕೆ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡಲು ಯಾವ ನೈತಿಕ ಅಧಿಕಾರವಿದೆ. ರಾಹುಲ್‌ ಗಾಂಧಿಗೆ ಬುದ್ಧಿ ಕಡಿಮೆ ಇದೆ. ಆದ್ದರಿಂದಲೇ ಚುನಾವಣಾ ಆಯೋಗದ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಬಿಜೆಪಿಗೆ ಪಾದಯಾತ್ರೆಗೆ ಅವಕಾಶ ನೀಡುತ್ತಿಲ್ಲ. ಅಂದಮೇಲೆ ಅವರಿಗೂ ಅವಕಾಶ ನೀಡಬಾರದು ಎಂದರು.

‘ಕೈ’ಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ. ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡಲಿದ್ದಾರೆ. ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ? ಇಷ್ಟಕ್ಕೂ ಇವರಿಗೆ ಕರ್ನಾಟಕ ಈಗ ನೆನಪಾಯಿತೇ? ಕಳೆದ 24 ತಿಂಗಳಲ್ಲಿ 2,000 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ 500ಕ್ಕೂ ಹೆಚ್ಚು ಗರ್ಭಿಣಿ, ಬಾಣಂತಿ ಮಹಿಳೆಯರು, ನವಜಾತ ಶಿಶುಗಳು ಮರಣ ಹೊಂದಿದಾಗ ಬರಲಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ 50ಕ್ಕೂ ಹೆಚ್ಚು ಬಡವರು ಆತ್ಮಹತ್ಯೆ ಮಾಡಿಕೊಂಡಾಗ ಬರಲಿಲ್ಲ.

ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಎಡವಟ್ಟಿನಿಂದ 11 ಜನ ಅಮಾಯಕ ಯುವಕರು ಸತ್ತಾಗ ಬರಲಿಲ್ಲ. ನಾಳೆ ಎದುರಾಗಲಿರುವ ಬಿಹಾರ ಚುನಾವಣಾ ಸೋಲಿಗೆ ಕುಂಟು ನೆಪ ಸೃಷ್ಟಿಸಿ ತಮ್ಮ ಅಸಾಮರ್ಥ್ಯಕ್ಕೆ, ವೈಫಲ್ಯಕ್ಕೆ anticipatory bail ತೆಗೆದುಕೊಳ್ಳೋಕೆ ಬರುತ್ತಿದ್ದೀರಲ್ಲ, ನಿಮ್ಮ ಕಾಂಗ್ರೆಸ್ ಪಕ್ಷದ ಲಜ್ಜೆಗೇಡಿತನಕ್ಕೆ ಕನ್ನಡಿಗರು ರೋಸಿ ಹೋಗಿದ್ದಾರೆ. ಅದ್ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರೋ ಎಂದು ಆರ್‌.ಅಶೋಕ ಪ್ರಶ್ನೆ ಮಾಡಿದರು.

ಸಿಎಂ ಸಿದ್ದರಾಮಯ್ಯ ಪವರ್‌ ತೋರಿಸಲು ಡಿ.ಕೆ.ಶಿವಕುಮಾರ್‌ ಅವರನ್ನು ಸಭೆಗೆ ಆಹ್ವಾನಿಸಿಲ್ಲ. ಕಾಂಗ್ರೆಸ್‌ ಶಾಸಕರ ಬೆಂಬಲ ಡಿಕೆಶಿಗೆ ಇಲ್ಲವೆಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆದ್ದರಿಂದಲೇ ಆ ಸಭೆಗೆ ಅವರನ್ನು ಕರೆದಿಲ್ಲ. ಎರಡು ವರ್ಷದಿಂದ ಏನೂ ಕೊಡದೆ ಈಗ 50 ಕೋಟಿ ನೀಡಿದರೆ ಪ್ರಯೋಜನವಿಲ್ಲ. ಅದರಲ್ಲೂ ಸಿದ್ದರಾಮಯ್ಯನವರ ಬೆಂಬಲಿಗ ಶಾಸಕರಿಗೆ ಮಾತ್ರ 50 ಕೋಟಿ ರೂ. ನೀಡಲಾಗುತ್ತಿದೆ. ಬಿಜೆಪಿ ಶಾಸಕರಿಗೂ 50 ಕೋಟಿ ರೂ. ನೀಡಬೇಕೆಂದು ಆಗ್ರಹಿಸಲಾಗುವುದು ಎಂದರು.

ಸಿಎಂ ಸಿದ್ದರಾಮಯ್ಯ ಎಲ್ಲ ವರ್ಗಗಳ ನಾಯಕರಾಗಿ ಉಳಿದಿಲ್ಲ. ಅವರು ಸ್ವಹಿತಾಸಕ್ತಿ ನೋಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಗುಂಪುಗಾರಿಕೆ ಬೆಳೆದಿದೆ. ಸಿದ್ದರಾಮಯ್ಯನವರಿಗೆ ಅಧಿಕಾರಿಗಳ ಮೇಲೆ ಹಾಗೂ ಶಾಸಕರ ಮೇಲೆ ಹಿಡಿತವಿಲ್ಲ. ಅಭಿವೃದ್ಧಿ ಬಗ್ಗೆ ಸರ್ಕಾರ ಯೋಚಿಸುತ್ತಿಲ್ಲ. ರಸಗೊಬ್ಬರ ವಿತರಣೆಯಲ್ಲಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ರಾಜಕೀಯ

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ. ವಿಜಯೇಂದ್ರ ಸವಾಲು

ಚುನಾವಣಾ ಅಕ್ರಮ ಆರೋಪ; ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಿ: ಬಿ.ವೈ.

ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="111927"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ ಪತ್ತೆ..!

ರೋಚಕ ಹಂತಕ್ಕೆ ಬಂದ ಧರ್ಮಸ್ಥಳದ ಪ್ರಕರಣ: 6ನೇ ಪಾಯಿಂಟ್ ‌ನಲ್ಲಿ ಮೃತದೇಹದ ಅವಶೇಷ

ಧರ್ಮಸ್ಥಳ (Dharmasthala): ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ.31 ರಂದು 6ನೇ ಗುರುತಿನ ಎಸ್‌ಐಟಿ (SIT) ನಡೆಸಿದ ಉತ್ಖನನದಲ್ಲಿ ಶವದ ಅವಶೇಷ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿ ವಿಜ್ಞಾನ ಅಧಿಕಾರಿಗಳು ಅದನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಧರ್ಮಸ್ಥಳ ಗ್ರಾಮ

[ccc_my_favorite_select_button post_id="111942"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!