Pratham at Doddaballapura.. Police Mahajar the place

ದೊಡ್ಡಬಳ್ಳಾಪುರಕ್ಕೆ ಪ್ರಥಮ್.. ಪೊಲೀಸರಿಂದ ಸ್ಥಳ ಮಹಜರ್

ದೊಡ್ಡಬಳ್ಳಾಪುರ: ಜುಲೈ 22 ರಂದು ತಾಲ್ಲೂಕಿನ ರಾಮಯ್ಯನಪಾಳ್ಯ ಸಮೀಪದ ಯಲ್ಲಮ್ಮ ದೇವಾಲಯ ವಾರ್ಷಿಕ ಪೂಜಾ ಕಾರ್ಯಮ ವೇಳೆ ನಡೆದಿದ್ದ ಹಲ್ಲೆ,ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ನಟ ಪ್ರಥಮ್ ನೀಡಿದ್ದ ದೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಿನ್ನೆಲೆಯಲ್ಲಿ ಗುರುವಾರ ಆರೋಪಿತರಾದ ಯಶಸ್ವಿನಿ ಹಾಗೂ ಬೇಕರಿ ರಘು ನ್ಯಾಯಾಲಯಕ್ಕೆ ಹಾಜರಾಗಿ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.

ನಗರದ ಜೆಎಂಎಫ್ಸಿ ನ್ಯಾಯಾಲಯವು ಇಬ್ಬರು ಆರೋಪಿತರಿಗು ತಲಾ ₹10 ಸಾವಿರ ಬಾಂಡ್, ಇಬ್ಬರು ಶೂರಿಟಿ ಪಡೆದು ಜಾಮೀನು ಮಂಜೂರು ಮಾಡಿದೆ. ಪೊಲೀಸರು ವಿಚಾರಣೆಗೆ ಕರೆದಾಗ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ತಿಳಿಸಲಾಗಿದೆ.

ದೂರು ನೀಡಿದ್ದ ನಟ ಪ್ರಥಮ್ ಅವರಿಗೆ ಪೊಲೀಸರ ನೋಟಿಸ್ ಜಾರಿ ಮಾಡಿ ಸ್ಥಳ ಮಹಜರ್ಗೆ ಹಾಜರಾಗುವಂತೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಸಾಧಿಕ್ಪಾಷ ಅವರ ಮುಂದೆ ಹಾಜರಾಗಿದ್ದರು.

ಪ್ರಥಮ್ ಅವರೊಂದಿಗೆ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಈಗಾಗಲೇ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ನೀಡಿರುವ ಮಾಹಿತಿಗೂ, ಘಟನೆ ನಡೆದ ಸ್ಥಳಕ್ಕೂ ಹೋಲಿಕೆಯಾಗುತ್ತದೆ ಎನ್ನುವ ಅಂಶವು ಸೇರಿದಂತೆ ಇತರೆ ಎಲ್ಲಾ ಮಾಹಿತಿಗಳನ್ನು ಯಲ್ಲಮ್ಮ ದೇವಾಲಯ ಸಮೀಪವೇ ಪೊಲೀಸರು ದಾಖಲಿಸಿಕೊಂಡು ವಿಡಿಯೋ ಚಿತ್ರೀಕಣವನ್ನು ಮಾಡಿಕೊಂಡರು.

ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ನಟ ಪ್ರಥಮ್, ‘ದೂರಿನಲ್ಲಿ ತಿಳಿಸಿರುವ ಎಲ್ಲಾ ಮಾಹಿತಿಗಳು ಸತ್ಯವಾಗಿವೆ. ಹಲ್ಲೆ, ಕೊಲೆ ಯತ್ನ ನಡೆದ ಸ್ಥಳವನ್ನು ಪೊಲೀಸರಿಗೆ ತೋರಿಸಲಾಗಿದೆ. ಉಳಿದ ಕಾನೂನು ಕ್ರಮಗಳನ್ನು ಪೊಲೀಸರು ತೆಗೆದುಕೊಳ್ಳಲಿದ್ದಾರೆ’ ಎಂದು ಹೇಳಿದರು.

ರಾಜಕೀಯ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌ ಪಕ್ಷ. ಅಂತಹ ಪಕ್ಷ ಈಗ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಟೀಕಿಸಿದರು.

[ccc_my_favorite_select_button post_id="111978"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು..!

ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಹೊರಡಿಸಿದೆ.

[ccc_my_favorite_select_button post_id="111989"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!