ಡೋನಾಲ್ಡ್ ಟ್ರಂಪ್‌ ವಿರುದ್ಧ ಹೆಚ್.ಡಿ. ದೇವೇಗೌಡ ತೀವ್ರ ಆಕ್ರೋಶ

H.D. Deve Gowda expresses strong anger against Donald Trump

ಬೆಂಗಳೂರು: ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ (Donald Trump) ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ (H.D. Deve Gowda) ಅವರು, ಬಹುಶಃ ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದು ಟೀಕಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಮಂತ್ರಿಗಳು, ಟ್ರಂಪ್‌ ಅವರ ವರ್ತನೆ, ಭಾಷೆ ಅವರ ಹೇಳಿಕೆಯ ಇನ್ನಿತರ ಅಂಶಗಳ ಬಗ್ಗೆ ಅತೀವ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಮಾಜಿ ಪ್ರಧಾನಿಗಳ ಹೇಳಿಕೆ ಪೂರ್ಣಪಾಠ ಇಲ್ಲಿದೆ

ಭಾರತದಲ್ಲಿ ಒಬ್ಬ ಸಣ್ಣ ವ್ಯಾಪಾರಿ ಮತ್ತು ಬಡರೈತ ಕೂಡ ತನ್ನ ವ್ಯವಹಾರವನ್ನು ಬಹಳ ಘನತೆ, ಸಮಗ್ರತೆ ಮತ್ತು ಮಾನವೀಯತೆಯಿಂದ ನಡೆಸುತ್ತಿದ್ದಾನೆ. ಈ ಮೂಲಕ ಟ್ರಂಪ್‌ ಅವರಿಗೆ ಅನೇಕ ಪಾಠಗಳನ್ನು ಕಲಿಸಬಹುದು.

ಎಲ್ಲರಂತೆ ನಾನು ಕೂಡ ಭಾರತದ ಆರ್ಥಿಕತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಧಾರ ರಹಿತ ಮತ್ತು ಕೋಪದ ಹೇಳಿಕೆಗಳಿಂದ ಆಶ್ಚರ್ಯಚಕಿತನಾಗಿದ್ದೇನೆ. ಆಧುನಿಕ ಇತಿಹಾಸದಲ್ಲಿ ಇಷ್ಟೊಂದು ಅಸ್ಥಿರ, ಅನಾಗರಿಕ ಮತ್ತು ಬೇಜವಾಬ್ದಾರಿಯುತ ರಾಷ್ಟ್ರಮುಖ್ಯಸ್ಥರನ್ನು ನಾನು ಕಂಡಿಲ್ಲ ಎಂದು ನಾನು ಭಾವಿಸುತ್ತೇನೆ.

ಟ್ರಂಪ್ ಅವರು ಭಾರತದೊಂದಿಗೆ ಮಾತ್ರವಲ್ಲ, ಜಗತ್ತಿನಾದ್ಯಂತ ಪ್ರತೀ ದೇಶದೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾರೆ. ಅವರು ತಮ್ಮ ದೀರ್ಘಕಾಲದ ಮಿತ್ರರಾಷ್ಟ್ರಗಳನ್ನು ಸಹ ಬಿಟ್ಟಿಲ್ಲ. ಅವರಲ್ಲಿ ಮೂಲಭೂತವಾಗಿ ಏನೋ ಸಮಸ್ಯೆ ಇದೆ. ರಾಜತಾಂತ್ರಿಕತೆ ಅಥವಾ ರಾಜಕೀಯದ ಮೂಲಕ ಅದನ್ನು ಪತ್ತೆ ಹಚ್ಚಲು ಅಥವಾ ಪರಿಹರಿಸಲು ಸಾಧ್ಯವಿಲ್ಲ. ಅವರ ಕೋಪದ ಸ್ವಭಾವದ ಬಗ್ಗೆ ಇದಕ್ಕಿಂತ ಹೆಚ್ಚಿಗೆ ಹೇಳುವುದು ಸರಿಯಲ್ಲ. ಏಕೆಂದರೆ, ಅದು ನಮ್ಮ ತತ್ವಾದರ್ಶಗಳಿಗೆ, ಬದ್ಧತೆ ಕಡಿಮೆ ಎನಿಸುತ್ತದೆ.

ಭಾರತದ ಸಣ್ಣ ವ್ಯಾಪಾರಿ ಮತ್ತು ಬಡರೈತ ಕೂಡ ತಮ್ಮ ವ್ಯವಹಾರವನ್ನು ಬಹಳ ಘನತೆ, ಸಮಗ್ರತೆ ಮತ್ತು ಮಾನವೀಯತೆಯಿಂದ ನಡೆಸುತ್ತಾ ಟ್ರಂಪ್‌ಗೆ ಅನೇಕ ಪಾಠಗಳನ್ನು ಕಲಿಸಬಹುದು ಎಂದು ನಾನು ಬಲವಾಗಿ ನಂಬಿದ್ದೇನೆ.

ಭಾರತವು ವೈವಿಧ್ಯಮಯ ಮತ್ತು ಪ್ರಜಾಪ್ರಭುತ್ವವಾದಿ ಸಾರ್ವಭೌಮ ರಾಷ್ಟ್ರ. ಸ್ವಾತಂತ್ರ್ಯದ ನಂತರ ಅದು ಯಾವಾಗಲೂ ಅತ್ಯುನ್ನತ ರಾಷ್ಟ್ರೀಯ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಭಾರತವು ತನ್ನ ದಾರಿಗೆ ಎದುರಾಗುವ ಎಲ್ಲಾ ತೊಂದರೆಗಳನ್ನು ಮಾತುಕತೆ ಮೂಲಕವೇ ಪರಿಹರಿಸಿಕೊಂಡು ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಲು ದೇವರು ಕರುಣಿಸಿರುವ ಸಾಮರ್ಥ್ಯ ಮತ್ತು ಶಕ್ತಿಯನ್ನು ಹೊಂದಿದೆ ಎಂಬುದು ನನ್ನ ಭಾವನೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ನಮ್ಮ ರಾಷ್ಟ್ರೀಯ ಹಿತಾಸಕ್ತಿಯನ್ನು ರಾಜಿ ಮಾಡಿಕೊಂಡಿಲ್ಲ ಎಂಬ ಬಗ್ಗೆ ನನಗೆ ಅತೀವ ಸಂತೋಷ ಮತ್ತು ಹೆಮ್ಮೆ ಇದೆ. ಟ್ರಂಪ್ ಅವರ ಬೆದರಿಕೆಗೆ ಭಾರತ ಹೆದರುವುದಿಲ್ಲ ಮತ್ತು ಅಂಥ ಬೆದರಿಕೆಗಳಿಂದ ಭಾರತ ಎಂದಿಗೂ ಇನ್ನೊಬ್ಬರ ತಾಳಕ್ಕೆ ತಕ್ಕಂತೆ ನಡೆಯುವುದಿಲ್ಲ ಎಂದು ಈಗಾಗಲೇ ತೋರಿಸಿಕೊಟ್ಟಿದೆ.

ಇದಕ್ಕೆ ವಿರುದ್ಧವಾಗಿ ರಾಷ್ಟ್ರದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆ ಅವಲಂಬಿಸಿರುವ ಕೃಷಿ ವಲಯ ಮತ್ತು ಸಣ್ಣ ಮತ್ತು ಮಧ್ಯಮ ವ್ಯವಹಾರಗಳನ್ನು ಸಂರಕ್ಷಿಸಲು ಮೋದಿ ಅವರ ಸರಕಾರವು ಪರಿಪೂರ್ಣ ಪ್ರಯತ್ನ ಮಾಡಿದೆ. ಸರಕಾರ ಕೈಕೊಂಡ ದೃಢ ನಿಲುವು ಅಭೂತಪೂರ್ವ ರಾಷ್ಟ್ರೀಯ ಅಭಿವೃದ್ಧಿಯ ಪುನರುಜ್ಜೀವನಕ್ಕೆ ಕಾರಣವಾಗಿದೆ.

ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಮತ್ತು ಜಗತ್ತಿನ ಐದನೇ ಅತೀದೊಡ್ಡ ಆರ್ಥಿಕತೆ ಆಗಿದೆ. ನಮ್ಮ ಆರ್ಥಿಕತೆಯನ್ನು ‘ಸತ್ತಿದೆ’ ಎಂದು ಹೇಳಲು ಟ್ರಂಪ್ ಅವರು ಕುರುಡರಾಗಿರಬೇಕು ಇಲ್ಲವೇ ಅಜ್ಞಾನಿಗಳಾಗಿರಬೇಕು. ಅವರ ಹೇಳಿಕೆಗಳನ್ನು ಆನಂದಿಸಿ ಭಾರತದಲ್ಲಿ ಅವರ ಭ್ರಮೆಯ ವಕ್ತಾರರಾಗಲು ಹೊರಟಿರುವ ವಿರೋಧ ಪಕ್ಷದ ಕೆಲ ನಾಯಕರಿಗೆ ಎಚ್ಚರಿಕೆಯ ಮಾತು ಹೇಳ ಬಯಸುತ್ತೇನೆ. ಅವರ ಹತಾಶೆಯನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಆದರೆ, ಅವರು ತಮ್ಮನ್ನು ಮತ್ತು ತಮ್ಮ ಪಕ್ಷಗಳಿಗೆ ಹಾನಿ ಮಾಡಿಕೊಳ್ಳಬಾರದು ಮತ್ತು ಟ್ರಂಪ್ ಅವರೊಂದಿಗೆ ಇತಿಹಾಸದ ಕಸದಬುಟ್ಟಿಗೆ ಬಹುಬೇಗನೆ ಸೇರಬಾರದು.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]