ಪ್ರಜ್ವಲ್‌ಗೆ ಶಿಕ್ಷೆ: ಟ್ರೋಲಾದ ಖಾಸಗಿ ನ್ಯೂಸ್ ಚಾನೆಲ್ ಆಂಕರ್| Video ನೋಡಿ

Prajwal punished: Private news channel anchor trolled

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮನೆ ಕೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಹೊರಡಿಸಿದೆ.

ಶುಕ್ರವಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿಯಾಗಿದ್ದಾನೆಂದು ನ್ಯಾಯಾಧೀಶರು ಘೋಷಿಸಿದ್ದಾರೆ. ಅಲ್ಲದೆ ಶನಿವಾರ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಪ್ರಕಟಿಸಿತು.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿನ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿ ಮನೆಗೆಲಸದ ಮಹಿಳೆಯ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಮಾಡಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆ ನಡೆಸಿತ್ತು.

ಮೈಸೂರಿನ ಕೆ ಆರ್ ನಗರದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಜ್ವಲ್ ವಿರುದ್ಧ ಐಪಿಸಿ ಸೆಕ್ಷನ್ 376(2)(2), 376(2)(5), 506, 354-2, 354(2), 354(2), 354(2) , 662 8 ದಾಖಲಿಸಲಾಗಿತ್ತು.

ಈ ಸಂಬಂಧ ಎಸ್‌ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಸಂಗ್ರಹಿಸಿ, ಸುಮಾರು 2 ಸಾವಿರ ಪುಟಗಳ ಆರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಗಳ ಪೆನ್ ಡ್ರೈವ್ ವೈರಲ್ ಆದ ಬಳಿಕ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಬಳಿಕ ವಿಶ್ವಾದ್ಯಂತ ರೆಡ್ ಕಾರ್ನರ್ ನೋಟಿಸ್ ಹೊರಡಿಸಲಾಗಿತ್ತು.

2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ, ಕೆ.ಆ‌ರ್.ನಗರದ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ರೇಪ್ ಕೇಸ್ ದಾಖಲಿಸಿಕೊಂಡಿದ್ದರು. ಕೇವಲ 7 ತಿಂಗಳಿನಲ್ಲಿ ಸಾಕ್ಷ್ಯ ವಿಚಾರಣೆ ಪೂರ್ಣಗೊಳಿಸಿದ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ತೀರ್ಪು ನೀಡಿ, ಜೀವಾವಧಿ ಶಿಕ್ಷೆ, 10 ಲಕ್ಷ ರೂ. ದಂಡ ವಿಧಿಸಿದ್ದಾರೆ.

ಇನ್ನೂ ತೀವ್ರ ಕುತೂಹಲ ಕೆರಳಿಸಿದ್ದ ಶಿಕ್ಷೆ ಪ್ರಮಾಣದ ಕುರಿತು ಖಾಸಗಿ ಚಾನೆಲ್ ಒಂದರ ಆಂಕರ್ ನಿರೂಪಿಸಿರುವುದು (ಕಿರಿಚಿರುವುದು) ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದೆ.

ಹೌದು ಪ್ರಜ್ವಲ್ ರೇವಣ್ಣ ಪ್ರಕರಣ ತೀರ್ಪು ಮತ್ತು ಶಿಕ್ಷೆ ಪ್ರಮಾಣದ ಕುರಿತು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕುತೂಹಲ ಕೆರಳಿಸಿತ್ತು. ಅದನ್ನು ವರದಿ ಮಾಡಲು ಇಡೀ ಮಾಧ್ಯಮಗಳು ಕಾದು ನಿಂತಿದ್ದವು. ಈ ವೇಳೆ ಖಾಸಗಿ ನ್ಯೂಸ್ ಚಾನಲ್ TV5 ಕನ್ನಡದ ಆಂಕರ್ ಪ್ರಜ್ವಲ್ ರೇವಣ್ಣ ಅವರಿಗೆ ಶಿಕ್ಷೆ ಪ್ರಮಾಣ ಘೋಷಿಸುತ್ತಿದ್ದಂತೆ, ದೊಡ್ಡ ದನಿಯಲ್ಲಿ ತೀರ್ಪಿನ ಕುರಿತು ಹೇಳಿದ್ದಾರೆ.

ಇದು ನೆಟ್ಟಿಗರಿಂದ ಟ್ರೋಲ್ಗೆ ಒಳಗಾಗಿದ್ದು, ಅಣ್ಣನಿಗೆ ಯಾರಾದ್ರೂ ನೀರು ಕುಡಿಸಿರೋ, ನಿಧಾನ ಗುರು, ಜೀವ- ಗೀವ ಹೋದ್ಗೀದಾತು ಎಂದು ಲೇವಡಿ ಮಾಡಿದ್ದಾರೆ.

ಇನ್ನೂ ಕೆಲವರು ಇದೇ ಪ್ರಕರಣದ ವರದಿಯನ್ನು ದೂರದರ್ಶನ ಚಂದನ ಆಂಕರ್ ನಿರೂಪಿಸಿರುವುದು ಹಾಗೂ Tv5 ಕನ್ನಡ ಖಾಸಗಿ ಚಾನಲ್ ಆಂಕರ್ ನಿರುಪಿಸಿರುವ ವಿಡಿಯೋ ಎಡಿಟ್ ಮಾಡಿ, ವೆತ್ಯಾಸ ಗಮನಿಸಿ, ಸರ್ಕಾರಿ ಉದ್ಯೋಗ Vs ಖಾಸಗಿ ಉದ್ಯೋಗ ಎಂದು ಕಿಚಾಯಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಬೇಸಿಗೆಯ ಹಿನ್ನೆಲೆ ತೀವ್ರ ನೀರಿನ ಸಮಸ್ಯೆ ಉಂಟಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="121594"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]