Bhimasena's sense of time

ಹರಿತಲೇಖನಿ ದಿನಕ್ಕೊಂದು ಕಥೆ: ಭೀಮಸೇನನ ಸಮಯ ಪ್ರಜ್ಞೆ

Harithalekhani: ಧರ್ಮರಾಜನು ರಾಜ್ಯವಾಳುತ್ತಿದ್ದ ಕಾಲದಲ್ಲಿ ಎಲ್ಲೆಲ್ಲೂ ಸುಖ ಸಂತೋಷಗಳು ತಾಂಡವಾಡುತ್ತಿದ್ದವು. ಪ್ರಜೆಗಳು ಬಂದು ರಾಜನ ಬಳಿ ಯಾವುದೇ ವಿಧವಾದ ಸಹಾಯವನ್ನು ಕೇಳಿದರೂ ತಕ್ಷಣವೇ ನೆರವೇರುತ್ತಿತ್ತು. ಯಾರೂ ಬರಿಗೈಯಲ್ಲಿ ತಿರುಗಿ ಹೋದದ್ದು ಇಲ್ಲವೇ ಇಲ್ಲ.

ಒಮ್ಮೆ ಒಬ್ಬ ಬ್ರಾಹ್ಮಣ ಯಾವುದೋ ಒಂದು ದಾನ ಕೇಳುತ್ತಾ ಧರ್ಮರಾಜನ ಬಳಿಗೆ ಹೋಗಿದ್ದನು. ಆದರೆ ಆತನು ವಾಪಸ್ ಬರುವಾಗ ಮಾತ್ರ ಬರಿಗೈಯಲ್ಲಿ ಬರುತ್ತಿದ್ದನು ಅದನ್ನು ಗಮನಿಸಿದ ಭೀಮಸೇನನು ಅವನನ್ನು ತನ್ನ ಬಳಿ ಕರೆದು

‘ಸ್ವಾಮೀ, ತಾವು ಏನನ್ನೋ ಕೇಳುವುದಕ್ಕಾಗಿ ರಾಜನ
ಬಳಿಗೆ ಹೋಗಿದ್ದರಿ. ಆದರೆ ವಾಪಾಸು ಬರುವಾಗ ಮಾತ್ರ ಬರಿಗೈಯಲ್ಲಿ ಬರುತ್ತಿದ್ದೀರಿ. ಯಾಕೆ ಬರಿಗೈಯಲ್ಲಿ ವಾಪಾಸಾಗುತ್ತಿದ್ದೀರಿ?’ ಏಕೆ ತಾವು ಮಹಾರಾಜರನ್ನು ಭೇಟಿಯಾಗಲಿಲ್ಲವೇ? ಪ್ರಭುಗಳು ಏನು ಕೊಡಲಿಲ್ಲವೇ ಎಂದು ಕೇಳಿದನು”.

ಆಗ ಆತನು ಅವರ ಬಳಿ ನಾನು ಕೇಳಿದ ವಸ್ತು ಇರಲಿಲ್ಲ. ಅದಕ್ಕಾಗಿ ನಾಳೆ ಬರಲು ತಿಳಿಸಿದ್ದಾರೆ. ನಾಳೆ ಅದನ್ನು ತರಿಸಿ ಇಟ್ಟಿರುತ್ತಾರೆ. ಹಾಗಾಗಿ ನಾನು ನಾಳೆ ಬರುತ್ತೇನೆ’ ಎಂದನು.

ಧರ್ಮರಾಜನಿಂದ ಭೀಮಸೇನನು ಇಂತಹ ಉತ್ತರವನ್ನು ನಿರೀಕ್ಷಿಸಿರಲಿಲ್ಲ. ‘ಇಂದು ಮಾಡಬೇಕಾದಕೆಲಸವನ್ನು ಇಂದೆಯೇ ಮಾಡಬೇಕು. ಅದನ್ನು ನಾಳೆಯ ದಿನಕ್ಕೆ ಮುಂದೂಡುವುದೆಂದರೇನು. ಇಂತಹ ವಿಷಯ ಅಣ್ಣನ ಅರಿವಿಗೇಕೆ ಬರಲಿಲ್ಲ?” ಹೀಗೆ ಯೋಚಿಸಿದ ಭೀಮಸೇನನು ಬ್ರಾಹ್ಮಣನನ್ನು ಹೋಗದಂತೆ ತಡೆದು ಅಲ್ಲೇ ನಿಲ್ಲಿಸುತ್ತ ಮಹಾರಾಜನ ಅರಮನೆಯ ಬಳಿಯಿರುವ ಒಂದು ದೊಡ್ಡ
ಗ೦ಟೆಯನ್ನು ಜೋರಾಗಿ ಬಾರಿಸತೊಡಗಿದ.

ಮಹಾರಾಜನ ಬಳಿ ಇರುವ ಈ ಗಂಟೆಯನ್ನು ಯಾವಾಗಲೂ ಬಾರಿಸುವುದಿಲ್ಲ. ಕೆಲವೊಂದು
ವಿಶಿಷ್ಟ ಸಂದರ್ಭಗಳಲ್ಲಿ ಅಂದರೆ ಅತಿ ಪ್ರಾಮುಖ್ಯವಾದ ಘಟನೆಗಳು ನಡೆದಾಗ ಮಾತ್ರ ಅದನ್ನು ಜನರ ಗಮನಕ್ಕೆ ತರಲು ಬಾರಿಸಲಾಗುತ್ತಿತ್ತು. ಹಾಗಾಗಿ ಈ ಗಂಟೆಯ ಸಪ್ಪಳವನ್ನು ಕೇಳಿದಾಗ ಎಲ್ಲಾ ಪ್ರಜೆಗಳೂ ತಮ್ಮ ತಮ್ಮ ಕೆಲಸಗಳನ್ನು ಅಲ್ಲಲ್ಲಿಯೇ ನಿಲ್ಲಿಸಿ ಮಹಾದ್ವಾರದ ಕಡೆಗೆ ವಿಷಯ ತಿಳಿಯಲು ನುಗ್ಗಿ ಬರುತ್ತಿದ್ದರು.

ಈ ದಿನವಂತೂ ಭೀಮಸೇನನೇ ಆ ಗಂಟೆಯನ್ನು ಜೋರಾಗಿ ಬಾರಿಸುತ್ತಿದ್ದುದರಿಂದ ಪ್ರಜೆಗಳೆಲ್ಲಾ
ಮಹಾದ್ವಾರದ ಕಡೆಗೆ ದೌಡಾಯಿಸತೊಡಗಿದರು. ಅಷ್ಟೇ ಅಲ್ಲ ಧರ್ಮರಾಜ, ಅರ್ಜುನ, ನಕುಲ ಸಹದೇವರ ಸಹಿತ ದೌಪದಿಯೂ ಆ ಸ್ಥಳಕ್ಕೆ ಓಡೋಡಿ ಬಂದರು. ಅವರಾರ ಬರವನ್ನೂ ಲೆಕ್ಕಿಸದೇ ಭೀಮಸೇನನು ತಡೆಯಿಲ್ಲದೇ ತುಂಬಾ ಆವೇಶ ಬಂದವನಂತೆ ಆ ಗಂಟೆಯನ್ನು ಬಾರಿಸುತ್ತಲೇ
ಇದ್ದನು.

ಆಗ ಅಲ್ಲಿಗೆ ಆಗಮಿಸಿದ ಧರ್ಮರಾಯನು ಭೀಮಸೇನನನ್ನು ತಡೆಯುತ್ತ, ‘ನಿಲ್ಲಿಸು,- ಭೀಮಸೇನ. ಯಾರಿಗೆ ಅನ್ಯಾಯವಾಗಿದೆ ಎಂದು ಈ ರೀತಿ ಗಂಟೆಯನ್ನು ಬಾರಿಸುತ್ತಿದ್ದೀಯ. ಈ ಗಂಟೆಯ ಸಪ್ಪಳವನ್ನು ಕೇಳಿ ನಮ್ಮ ಜೊತೆಗೆ ಊರಿನ ಪ್ರಜೆಗಳೂ ಬಂದು ಸೇರಿದ್ದಾರೆ. ನೀನು
ಈ ರೀತಿ ಗಂಟೆಯನ್ನು ಬಾರಿಸಲು ಕಾರಣವೇನು?’ ಎಂದು ಕೇಳಿದನು.

ಭೀಮಸೇನನು, “ಒಂದು ಸಂತಸ ಸುದ್ದಿಯನ್ನು ಹೇಳಲಿದ್ದೇನೆ” ಎಂದನು. ನಂತರ ಅವನು ಅಣ್ಣನಾದ ಧರ್ಮರಾಜನು ಪಾದಗಳಿಗೆ ನಮಸ್ಕರಿಸುತ್ತ ಅಲ್ಲಿ ನೆರೆದಿದ್ದ ಪ್ರಜೆಗಳ ಕಡೆಗೆ ತಿರುಗಿ, “ನಮ್ಮ ಅಣ್ಣನು ದೊಡ್ಡ ವಿಜಯವನ್ನು ಸಂಪಾದಿಸಿದ್ದಾನೆ. ತಾವೆಲ್ಲರೂ ಆ ವಿಷಯವನ್ನು ಕೇಳಿದ ಮೇಲೆ ನನಗಿಂತ ಹೆಚ್ಚಿನ ಸಂತೋಷವನ್ನು ಪಡುವಿರಿ. ಹಾಗೆಯೇ ನಾವೆಲ್ಲರೂ ಅಣ್ಣನ ಸಂತೋಷದಲ್ಲಿ ಪಾಲ್ಗೊಳ್ಳೋಣ’ಎಂದನು.

ಅವನ ಮಾತುಗಳನ್ನು ಕೇಳಿ ಉಳಿದವರ ವಿಷಯ ಹಾಗಿರಲಿ, ಸ್ವತಃ ಧರ್ಮರಾಜನಿಗೆ ಈ ವಿಷಯ ಅರ್ಥವಾಗಲಿಲ್ಲ. ಈ ದಿನ ಆತನು ಅರಮನೆಯನ್ನು ಬಿಟ್ಟು ಹೊರಕ್ಕೇ ಹೋಗಿರಲಿಲ್ಲ. ಯಾರೊಡನೆಯೂ
ಯುದ್ಧ ಮಾಡಿರಲಿಲ್ಲ. ಅಂತಹುದರಲ್ಲಿ ವಿಜಯವನ್ನು ಸಂಪಾದಿಸುವುದಾದರೂ ಹೇಗೆ? ಹಾಗಾಗಿ ಅವನು ಆಶ್ಚರ್ಯದಿಂದ ಭೀಮಸೇನನ ಕಡೆಗೆ ತಿರುಗಿ ನೋಡುತ್ತ, “ಅರೆ! ಭೀಮಸೇನ ಇದೇನು. ಹೇಳುತ್ತಿರುವಿ? ನಾನಿಂದು ಅರಮನೆಯಿಂದ ಹೊರಕ್ಕೇ ಹೋಗಿಲ್ಲ. ಯಾವ ಯುದ್ಧದಲ್ಲೂ ಭಾಗವಹಿಸಿಲ್ಲ. ಅಂತಹುದರಲ್ಲಿ ಯಾವ ಜಯ? ಎಲ್ಲಿ ಸಂಪಾದಿಸಿರುವೆ? ನಿನಗೇನಾದರೂ ಕನಸು ಬಿದ್ದಿದೆಯಾ?’ ಎಂದು ಕೇಳಿದನು.

ಆಗ ಭೀಮಸೇನನು ನಗುತ್ತ, “ಪ್ರಭು, ಇಂದು ಬ್ರಾಹ್ಮಣನೋರ್ವನು ತಮ್ಮ ಬಳಿಗೆ ಬಂದು ಯಾವುದೋ ಒಂದು ವಸ್ತುವನ್ನು ಕೇಳಿದಾಗ ಆ ವಸ್ತು ತಮ್ಮ ಬಳಿ ಇಲ್ಲವೆಂದೂ ನಾಳೆಯ ದಿನ ತರಿಸಿ
ಕೊಡುವುದಾಗಿಯೂ ತಿಳಿಸಿದರಂತೆ. ಅಂದರೆ ನಾಳೆಯ ದಿನದ ತನಕ ತಾವು ಬದುಕಿರುವುದಾಗಿಯೂ ಹಾಗೂ ಆ ಬ್ರಾಹ್ಮಣನೂ ಬದುಕಿ ಉಳಿಯುವುದರ ಬಗ್ಗೆ ತಮಗೆ ಖಾತ್ರಿ ಇದೆ ಎಂದಂತಾಯಿತು. ಆದರೆ ಹುಟ್ಟು ಸಾವಿನ ಬಗ್ಗೆ ಯಾರಿಗೂ ಖಾತ್ರಿಯಾಗಿ ಹೇಳಲಾಗುವುದಿಲ್ಲ. ಆದರೆ ತಾವು ಹೇಳುತ್ತಿರುವಿರಿ ಎಂದರೆ ತಾವು ಜಯಿಸಲಸಾಧ್ಯವಾದ ಸಾವನ್ನೂ ಜಯಸಿರುವಿರಿ ಎಂದರ್ಥವಲ್ಲವೇ? ಹಾಗಾಗಿ ಇದೊಂದು ಭಾರೀ ವಿಜಯವಲ್ಲವೇ?’ ಎಂದು ಕೇಳಿದನು.

ಭೀಮಸೇನನ ಮಾತುಗಳನ್ನು ಕೇಳಿದಾಗ ಧರ್ಮರಾಜನಿಗೆ ತನ್ನ ತಪ್ಪಿನ ಅರಿವಾಯಿತು. ತನ್ನ ತಮ್ಮನನ್ನು ಪ್ರೀತಿಯಿಂದ ತಬ್ಬಿಕೊಳ್ಳುತ್ತ, `ಭೀಮಸೇನ, ನಿಜ ನಿಜ ನೀನು ಹೇಳುತ್ತಿರುವುದು ನಿಜ.
ನೀನು ಸರಿಯಾದ ಸಮಯದಲ್ಲಿ ನನ್ನ ಕಣ್ಣುಗಳನ್ನು ತೆರೆಸಿದ್ದೀಯ. ಹುಟ್ಟು ಸಾವಿನ ಬಗ್ಗೆ ಯಾರೂ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಹಾಗಾಗಿ ನಾಳೆ ಮಾಡುವುದನ್ನು ಇಂದೇ ಮಾಡಬೇಕು. ಇಂದು ಮಾಡುವುದನ್ನು ಈಗಲೇ ಮಾಡಬೇಕು ಬ್ರಾಹ್ಮಣದಾನ ಕೇಳಿದಾಗ ನಾನು ಅಲ್ಲೇ ನೀಡಬೇಕಿತ್ತು. ಆ ರೀತಿಯಲ್ಲಿ ಹಾಗೇ ಬರಿಗೈಯಲ್ಲಿ ಕಳಿಸಬಾರದಾಗಿತ್ತು. ಒಳ್ಳೆಯ ಕೆಲಸಗಳನ್ನು ಮಾಡುವಾಗ ತಕ್ಷಣವೇ ಮಾಡಬೇಕು. ಅದನ್ನು ಎಂದಿಗೂ ಮುಂದಕ್ಕೆ ಹಾಕಬಾರದು’ ಎಂದನು.

ಮುಂದೆ ತಡ ಮಾಡದೆ ಊರಿಗೆ ಹೊರಡಲು ತಯಾರಾಗಿದ್ದ ಆ ಬ್ರಾಹ್ಮಣನನ್ನು ತಕ್ಷಣವೇ ಕರೆಸಿ, ಅವನನ್ನು ಸತ್ಕರಿಸಿ, ಅವನು ಕೇಳಿದ ಎಲ್ಲಾ ವಸ್ತುವನ್ನು ಅಂದೇ ಕೊಟ್ಟು ಕಳುಹಿಸಿದನು.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ನ್ಯೂಸ್ ಚಾನಲ್ ಚರ್ಚೆ ವೇಳೆ ಕಿರಿಕ್.. ಎಫ್‌ಐಆ‌ರ್

ಕಳೆದ ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ (News channel) ಧರ್ಮಸ್ಥಳ ಪ್ರಕರಣ ಸಂಬಂಧಿಸಿ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಆರೋಪದ ಮೇಲೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕೀರ್ತಿ ವಿರುದ್ಧ ಬೆಂಗಳೂರಿನ

[ccc_my_favorite_select_button post_id="119114"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!