ಹರಿತಲೇಖನಿ ದಿನಕ್ಕೊಂದು ಕಥೆ: ಭೀಮಸೇನನ ಸಮಯ ಪ್ರಜ್ಞೆ

Bhimasena's sense of time

Harithalekhani: ಧರ್ಮರಾಜನು ರಾಜ್ಯವಾಳುತ್ತಿದ್ದ ಕಾಲದಲ್ಲಿ ಎಲ್ಲೆಲ್ಲೂ ಸುಖ ಸಂತೋಷಗಳು ತಾಂಡವಾಡುತ್ತಿದ್ದವು. ಪ್ರಜೆಗಳು ಬಂದು ರಾಜನ ಬಳಿ ಯಾವುದೇ ವಿಧವಾದ ಸಹಾಯವನ್ನು ಕೇಳಿದರೂ ತಕ್ಷಣವೇ ನೆರವೇರುತ್ತಿತ್ತು. ಯಾರೂ ಬರಿಗೈಯಲ್ಲಿ ತಿರುಗಿ ಹೋದದ್ದು ಇಲ್ಲವೇ ಇಲ್ಲ.

ಒಮ್ಮೆ ಒಬ್ಬ ಬ್ರಾಹ್ಮಣ ಯಾವುದೋ ಒಂದು ದಾನ ಕೇಳುತ್ತಾ ಧರ್ಮರಾಜನ ಬಳಿಗೆ ಹೋಗಿದ್ದನು. ಆದರೆ ಆತನು ವಾಪಸ್ ಬರುವಾಗ ಮಾತ್ರ ಬರಿಗೈಯಲ್ಲಿ ಬರುತ್ತಿದ್ದನು ಅದನ್ನು ಗಮನಿಸಿದ ಭೀಮಸೇನನು ಅವನನ್ನು ತನ್ನ ಬಳಿ ಕರೆದು

‘ಸ್ವಾಮೀ, ತಾವು ಏನನ್ನೋ ಕೇಳುವುದಕ್ಕಾಗಿ ರಾಜನ
ಬಳಿಗೆ ಹೋಗಿದ್ದರಿ. ಆದರೆ ವಾಪಾಸು ಬರುವಾಗ ಮಾತ್ರ ಬರಿಗೈಯಲ್ಲಿ ಬರುತ್ತಿದ್ದೀರಿ. ಯಾಕೆ ಬರಿಗೈಯಲ್ಲಿ ವಾಪಾಸಾಗುತ್ತಿದ್ದೀರಿ?’ ಏಕೆ ತಾವು ಮಹಾರಾಜರನ್ನು ಭೇಟಿಯಾಗಲಿಲ್ಲವೇ? ಪ್ರಭುಗಳು ಏನು ಕೊಡಲಿಲ್ಲವೇ ಎಂದು ಕೇಳಿದನು”.

ಆಗ ಆತನು ಅವರ ಬಳಿ ನಾನು ಕೇಳಿದ ವಸ್ತು ಇರಲಿಲ್ಲ. ಅದಕ್ಕಾಗಿ ನಾಳೆ ಬರಲು ತಿಳಿಸಿದ್ದಾರೆ. ನಾಳೆ ಅದನ್ನು ತರಿಸಿ ಇಟ್ಟಿರುತ್ತಾರೆ. ಹಾಗಾಗಿ ನಾನು ನಾಳೆ ಬರುತ್ತೇನೆ’ ಎಂದನು.

ಧರ್ಮರಾಜನಿಂದ ಭೀಮಸೇನನು ಇಂತಹ ಉತ್ತರವನ್ನು ನಿರೀಕ್ಷಿಸಿರಲಿಲ್ಲ. ‘ಇಂದು ಮಾಡಬೇಕಾದಕೆಲಸವನ್ನು ಇಂದೆಯೇ ಮಾಡಬೇಕು. ಅದನ್ನು ನಾಳೆಯ ದಿನಕ್ಕೆ ಮುಂದೂಡುವುದೆಂದರೇನು. ಇಂತಹ ವಿಷಯ ಅಣ್ಣನ ಅರಿವಿಗೇಕೆ ಬರಲಿಲ್ಲ?” ಹೀಗೆ ಯೋಚಿಸಿದ ಭೀಮಸೇನನು ಬ್ರಾಹ್ಮಣನನ್ನು ಹೋಗದಂತೆ ತಡೆದು ಅಲ್ಲೇ ನಿಲ್ಲಿಸುತ್ತ ಮಹಾರಾಜನ ಅರಮನೆಯ ಬಳಿಯಿರುವ ಒಂದು ದೊಡ್ಡ
ಗ೦ಟೆಯನ್ನು ಜೋರಾಗಿ ಬಾರಿಸತೊಡಗಿದ.

ಮಹಾರಾಜನ ಬಳಿ ಇರುವ ಈ ಗಂಟೆಯನ್ನು ಯಾವಾಗಲೂ ಬಾರಿಸುವುದಿಲ್ಲ. ಕೆಲವೊಂದು
ವಿಶಿಷ್ಟ ಸಂದರ್ಭಗಳಲ್ಲಿ ಅಂದರೆ ಅತಿ ಪ್ರಾಮುಖ್ಯವಾದ ಘಟನೆಗಳು ನಡೆದಾಗ ಮಾತ್ರ ಅದನ್ನು ಜನರ ಗಮನಕ್ಕೆ ತರಲು ಬಾರಿಸಲಾಗುತ್ತಿತ್ತು. ಹಾಗಾಗಿ ಈ ಗಂಟೆಯ ಸಪ್ಪಳವನ್ನು ಕೇಳಿದಾಗ ಎಲ್ಲಾ ಪ್ರಜೆಗಳೂ ತಮ್ಮ ತಮ್ಮ ಕೆಲಸಗಳನ್ನು ಅಲ್ಲಲ್ಲಿಯೇ ನಿಲ್ಲಿಸಿ ಮಹಾದ್ವಾರದ ಕಡೆಗೆ ವಿಷಯ ತಿಳಿಯಲು ನುಗ್ಗಿ ಬರುತ್ತಿದ್ದರು.

ಈ ದಿನವಂತೂ ಭೀಮಸೇನನೇ ಆ ಗಂಟೆಯನ್ನು ಜೋರಾಗಿ ಬಾರಿಸುತ್ತಿದ್ದುದರಿಂದ ಪ್ರಜೆಗಳೆಲ್ಲಾ
ಮಹಾದ್ವಾರದ ಕಡೆಗೆ ದೌಡಾಯಿಸತೊಡಗಿದರು. ಅಷ್ಟೇ ಅಲ್ಲ ಧರ್ಮರಾಜ, ಅರ್ಜುನ, ನಕುಲ ಸಹದೇವರ ಸಹಿತ ದೌಪದಿಯೂ ಆ ಸ್ಥಳಕ್ಕೆ ಓಡೋಡಿ ಬಂದರು. ಅವರಾರ ಬರವನ್ನೂ ಲೆಕ್ಕಿಸದೇ ಭೀಮಸೇನನು ತಡೆಯಿಲ್ಲದೇ ತುಂಬಾ ಆವೇಶ ಬಂದವನಂತೆ ಆ ಗಂಟೆಯನ್ನು ಬಾರಿಸುತ್ತಲೇ
ಇದ್ದನು.

ಆಗ ಅಲ್ಲಿಗೆ ಆಗಮಿಸಿದ ಧರ್ಮರಾಯನು ಭೀಮಸೇನನನ್ನು ತಡೆಯುತ್ತ, ‘ನಿಲ್ಲಿಸು,- ಭೀಮಸೇನ. ಯಾರಿಗೆ ಅನ್ಯಾಯವಾಗಿದೆ ಎಂದು ಈ ರೀತಿ ಗಂಟೆಯನ್ನು ಬಾರಿಸುತ್ತಿದ್ದೀಯ. ಈ ಗಂಟೆಯ ಸಪ್ಪಳವನ್ನು ಕೇಳಿ ನಮ್ಮ ಜೊತೆಗೆ ಊರಿನ ಪ್ರಜೆಗಳೂ ಬಂದು ಸೇರಿದ್ದಾರೆ. ನೀನು
ಈ ರೀತಿ ಗಂಟೆಯನ್ನು ಬಾರಿಸಲು ಕಾರಣವೇನು?’ ಎಂದು ಕೇಳಿದನು.

ಭೀಮಸೇನನು, “ಒಂದು ಸಂತಸ ಸುದ್ದಿಯನ್ನು ಹೇಳಲಿದ್ದೇನೆ” ಎಂದನು. ನಂತರ ಅವನು ಅಣ್ಣನಾದ ಧರ್ಮರಾಜನು ಪಾದಗಳಿಗೆ ನಮಸ್ಕರಿಸುತ್ತ ಅಲ್ಲಿ ನೆರೆದಿದ್ದ ಪ್ರಜೆಗಳ ಕಡೆಗೆ ತಿರುಗಿ, “ನಮ್ಮ ಅಣ್ಣನು ದೊಡ್ಡ ವಿಜಯವನ್ನು ಸಂಪಾದಿಸಿದ್ದಾನೆ. ತಾವೆಲ್ಲರೂ ಆ ವಿಷಯವನ್ನು ಕೇಳಿದ ಮೇಲೆ ನನಗಿಂತ ಹೆಚ್ಚಿನ ಸಂತೋಷವನ್ನು ಪಡುವಿರಿ. ಹಾಗೆಯೇ ನಾವೆಲ್ಲರೂ ಅಣ್ಣನ ಸಂತೋಷದಲ್ಲಿ ಪಾಲ್ಗೊಳ್ಳೋಣ’ಎಂದನು.

ಅವನ ಮಾತುಗಳನ್ನು ಕೇಳಿ ಉಳಿದವರ ವಿಷಯ ಹಾಗಿರಲಿ, ಸ್ವತಃ ಧರ್ಮರಾಜನಿಗೆ ಈ ವಿಷಯ ಅರ್ಥವಾಗಲಿಲ್ಲ. ಈ ದಿನ ಆತನು ಅರಮನೆಯನ್ನು ಬಿಟ್ಟು ಹೊರಕ್ಕೇ ಹೋಗಿರಲಿಲ್ಲ. ಯಾರೊಡನೆಯೂ
ಯುದ್ಧ ಮಾಡಿರಲಿಲ್ಲ. ಅಂತಹುದರಲ್ಲಿ ವಿಜಯವನ್ನು ಸಂಪಾದಿಸುವುದಾದರೂ ಹೇಗೆ? ಹಾಗಾಗಿ ಅವನು ಆಶ್ಚರ್ಯದಿಂದ ಭೀಮಸೇನನ ಕಡೆಗೆ ತಿರುಗಿ ನೋಡುತ್ತ, “ಅರೆ! ಭೀಮಸೇನ ಇದೇನು. ಹೇಳುತ್ತಿರುವಿ? ನಾನಿಂದು ಅರಮನೆಯಿಂದ ಹೊರಕ್ಕೇ ಹೋಗಿಲ್ಲ. ಯಾವ ಯುದ್ಧದಲ್ಲೂ ಭಾಗವಹಿಸಿಲ್ಲ. ಅಂತಹುದರಲ್ಲಿ ಯಾವ ಜಯ? ಎಲ್ಲಿ ಸಂಪಾದಿಸಿರುವೆ? ನಿನಗೇನಾದರೂ ಕನಸು ಬಿದ್ದಿದೆಯಾ?’ ಎಂದು ಕೇಳಿದನು.

ಆಗ ಭೀಮಸೇನನು ನಗುತ್ತ, “ಪ್ರಭು, ಇಂದು ಬ್ರಾಹ್ಮಣನೋರ್ವನು ತಮ್ಮ ಬಳಿಗೆ ಬಂದು ಯಾವುದೋ ಒಂದು ವಸ್ತುವನ್ನು ಕೇಳಿದಾಗ ಆ ವಸ್ತು ತಮ್ಮ ಬಳಿ ಇಲ್ಲವೆಂದೂ ನಾಳೆಯ ದಿನ ತರಿಸಿ
ಕೊಡುವುದಾಗಿಯೂ ತಿಳಿಸಿದರಂತೆ. ಅಂದರೆ ನಾಳೆಯ ದಿನದ ತನಕ ತಾವು ಬದುಕಿರುವುದಾಗಿಯೂ ಹಾಗೂ ಆ ಬ್ರಾಹ್ಮಣನೂ ಬದುಕಿ ಉಳಿಯುವುದರ ಬಗ್ಗೆ ತಮಗೆ ಖಾತ್ರಿ ಇದೆ ಎಂದಂತಾಯಿತು. ಆದರೆ ಹುಟ್ಟು ಸಾವಿನ ಬಗ್ಗೆ ಯಾರಿಗೂ ಖಾತ್ರಿಯಾಗಿ ಹೇಳಲಾಗುವುದಿಲ್ಲ. ಆದರೆ ತಾವು ಹೇಳುತ್ತಿರುವಿರಿ ಎಂದರೆ ತಾವು ಜಯಿಸಲಸಾಧ್ಯವಾದ ಸಾವನ್ನೂ ಜಯಸಿರುವಿರಿ ಎಂದರ್ಥವಲ್ಲವೇ? ಹಾಗಾಗಿ ಇದೊಂದು ಭಾರೀ ವಿಜಯವಲ್ಲವೇ?’ ಎಂದು ಕೇಳಿದನು.

ಭೀಮಸೇನನ ಮಾತುಗಳನ್ನು ಕೇಳಿದಾಗ ಧರ್ಮರಾಜನಿಗೆ ತನ್ನ ತಪ್ಪಿನ ಅರಿವಾಯಿತು. ತನ್ನ ತಮ್ಮನನ್ನು ಪ್ರೀತಿಯಿಂದ ತಬ್ಬಿಕೊಳ್ಳುತ್ತ, `ಭೀಮಸೇನ, ನಿಜ ನಿಜ ನೀನು ಹೇಳುತ್ತಿರುವುದು ನಿಜ.
ನೀನು ಸರಿಯಾದ ಸಮಯದಲ್ಲಿ ನನ್ನ ಕಣ್ಣುಗಳನ್ನು ತೆರೆಸಿದ್ದೀಯ. ಹುಟ್ಟು ಸಾವಿನ ಬಗ್ಗೆ ಯಾರೂ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಹಾಗಾಗಿ ನಾಳೆ ಮಾಡುವುದನ್ನು ಇಂದೇ ಮಾಡಬೇಕು. ಇಂದು ಮಾಡುವುದನ್ನು ಈಗಲೇ ಮಾಡಬೇಕು ಬ್ರಾಹ್ಮಣದಾನ ಕೇಳಿದಾಗ ನಾನು ಅಲ್ಲೇ ನೀಡಬೇಕಿತ್ತು. ಆ ರೀತಿಯಲ್ಲಿ ಹಾಗೇ ಬರಿಗೈಯಲ್ಲಿ ಕಳಿಸಬಾರದಾಗಿತ್ತು. ಒಳ್ಳೆಯ ಕೆಲಸಗಳನ್ನು ಮಾಡುವಾಗ ತಕ್ಷಣವೇ ಮಾಡಬೇಕು. ಅದನ್ನು ಎಂದಿಗೂ ಮುಂದಕ್ಕೆ ಹಾಕಬಾರದು’ ಎಂದನು.

ಮುಂದೆ ತಡ ಮಾಡದೆ ಊರಿಗೆ ಹೊರಡಲು ತಯಾರಾಗಿದ್ದ ಆ ಬ್ರಾಹ್ಮಣನನ್ನು ತಕ್ಷಣವೇ ಕರೆಸಿ, ಅವನನ್ನು ಸತ್ಕರಿಸಿ, ಅವನು ಕೇಳಿದ ಎಲ್ಲಾ ವಸ್ತುವನ್ನು ಅಂದೇ ಕೊಟ್ಟು ಕಳುಹಿಸಿದನು.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]