ದೊಡ್ಡಬಳ್ಳಾಪುರ; 89 ವರ್ಷಗಳಿಂದ ನಡೆಯುತ್ತಿದೆ ಶ್ರಾವಣ ಮಾಸದ ಭಜನೆ..!

Doddaballapura; Shravana masa bhajan have been going on for 89 years

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯಲ್ಲಿ ಕಳೆದ 89 ವರ್ಷಗಳಿಂದ ಶ್ರಾವಣ ಮಾಸದ ಭಜನೆ ನಡೆಯುತ್ತಿದೆ.

ಒಂದು ತಿಂಗಳ ಕಾಲ ನಿರಂತರವಾಗಿ ಮಧುರೆ ಹೋಬಳಿಯ ಗ್ರಾಮಗಳಲ್ಲಿ ಇಸ್ತೂರು ಕೋದಂಡರಾಮಸ್ವಾಮಿ  ಭಜನಾ ಮಂಡಲಿ ನೇತೃತ್ವದಲ್ಲಿ ನಡೆಯುವ ಭಜನೆ ಕಾರ‌್ಯಕ್ರಮ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಭಜನೆ ಕಲೆ ಜೀವಂತವಾಗಿರುವುದಕ್ಕೆ  ಸಾಕ್ಷಿಯಾಗಿದೆ.

ಮಧುರೆ ಹೋಬಳಿಯ ಶ್ರಾವಣ ಮಾಸದ ಭಜನಾ ಕಾರ‌್ಯಕ್ರಮ 1936ರಲ್ಲಿ ಪ್ರಾರಂಭ ವಾಗಿದೆ. ಇಸ್ತೂರು ಗ್ರಾಮದ ಬೈರಹನುಮೇ ಗೌಡ ಎಂಬುವರು ಈ ಭಜನಾ ಕಾರ‌್ಯಕ್ರಮವನ್ನು ಮೊದಲಿಗೆ ಸಂಘಟಿಸಿದ್ದಾರೆ.

ಪ್ರಸ್ತುತ ಇಸ್ತೂರು ಕೋದಂಡರಾಮಸ್ವಾಮಿ ಭಜನಾ ಸಂಘ ಈ ಕಾರ್ಯವನ್ನು ನಿರ್ವಹಣೆ ಮಾಡುತ್ತದೆ. ಚನ್ನಾ ದೇವಿ ಅಗ್ರಹಾರ ಗ್ರಾಮದ ನಂಜೇಗೌಡ ಅಧ್ಯಕ್ಷರು, ಇಸ್ತೂರು ರಾಮಯ್ಯ   ಉಪಾಧ್ಯಕ್ಷರು, ಗಂಡರಗೂಳಿಪುರದ ಹನುಮಂತರಾಯಪ್ಪ  ಕಾರ್ಯ ದರ್ಶಿ, ಹೊನ್ನಾದೇವಿಪುರ ಗ್ರಾಮದ ಮಹಾದೇವಯ್ಯ ಖಂಜಾಚಿಯಾಗಿದ್ದಾರೆ.

ಈ ಬಾರಿ ಶ್ರಾವಣ ಮಾಸದ ಮೊದಲ ದಿನ ಇಸ್ತೂರು ಗ್ರಾಮದಲ್ಲಿ ಭಜನೆ ಪ್ರಾರಂಭವಾಗಿದೆ. ಶ್ರಾವಣ ಮಾಸದ ಕೊನೆಯ ದಿನ ಮಲ್ಲೋಹಳ್ಳಿ ಗ್ರಾಮದಲ್ಲಿ ಕೊನೆಗೊಳ್ಳುತ್ತದೆ. 

ಭಜನೆ ಕಾರ‌್ಯಕ್ರಮದ ಸಮಾರೋಪ ಗೊಲ್ಲಹಳ್ಳಿ ಬೈಲಾಂಜ ನೇಯಸ್ವಾಮಿ ದೇವಾಲಯದಲ್ಲಿ ಪ್ರತಿವರ್ಷ ನಡೆಯುತ್ತದೆ.

ಮಧುರೆ ಹೋಬಳಿಯ ಇಸ್ತೂರು, ಇಸ್ತೂರು ಕಾಲೋನಿ, ಗಂಡರಗೊಳಿಪುರ,  ಶ್ಯಾಕಲದೇವನಪುರ, ಗಾಡಿಗರಪಾಳ್ಯ,   ಸಿಂಪಾಡಿಪುರ, ಮಲ್ಲೋಹಳ್ಳಿ, ಚನ್ನಾದೇವಿ ಅಗ್ರಹಾರ, ಕನಸವಾಡಿ, ಮಲ್ಲೋಹಳ್ಳಿ,  ಮುಪ್ಪಡಿಘಟ್ಟ, ಮದಗೊಂಡನ ಹಳ್ಳಿ, ಚಲ್ಲಹಳ್ಳಿ, ಮಾರಸಂದ್ರ, ಬಂಡಯ್ಯನ ಪಾಳ್ಯ, ತಿಮ್ಮಸಂದ್ರ, ತಿಮ್ಮಸಂದ್ರ ಕಾಲೋನಿ, ಪುಟ್ಟೇನಹಳ್ಳಿ, ಕಮ್ಮಸಂದ್ರ  ಗ್ರಾಮಗಳಲ್ಲಿ ಶ್ರಾವಣ ಮಾಸದ ನಿರಂತರ ಭಜನಾ ಕಾರ‌್ಯಕ್ರಮ ನಡೆಯುತ್ತದೆ.

ಶ್ರಾವಣ ಮಾಸದ ಭಜನಾ ಕಾರ್ಯಕ್ರಮದಲ್ಲಿ ಹಾರ್ಮೋನಿಯಂ, ತಬಲ, ತಾಳ ಮುಂತಾದೊಂದಿಗೆ ಕಲಾವಿದರು ಪುರಂದರದಾಸ, ಕನಕದಾಸ, ತತ್ತ್ವ ಪದಕಾರರು, ಶಿಶುನಾಳ ಷರೀಫ್,  ಜನಪದರು ಮುಂತಾದವರು ರಚಿಸಿರುವ ಸಾಹಿತ್ಯವನ್ನು ಕಲಾವಿದವರು ಹಾಡುತ್ತಾರೆ.

ಇವರು ಹೆಚ್ಚಿನವರು ಪೌರಾಣಿಕ ನಾಟಕಗಳಲ್ಲಿ ಕಲಾವಿದರಾಗಿ ಅಭಿನಯಿಸಿದವರು.

ಹರಿಕಥಾ ವಿದ್ವಾಂಸರು, ವಿವಿಧ ಗ್ರಾಮಗಳಲ್ಲಿರುವ ಭಜನಾ ಮಂಡಲಿಯ ಸದಸ್ಯರುಗಳು ಶ್ರಾವಣ ಮಾಸದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ.

ಗ್ರಾಮದ ಪ್ರತಿಮನೆಗಳಿಗೂ ಭಜನಾ ತಂಡ ಹೋಗಿ ಸ್ವಲ್ಪ ಸಮಯ ಭಜನೆ ಮತ್ತು ಪೂಜಾ ಕಾರ್ಯಕ್ರಮ ನಡೆಸಿಕೊಡುತ್ತಾರೆ.

ವಿಶೇಷ ವರದಿ; ಹಿರಿಯ ಪತ್ರಕರ್ತ ಪಿ.ಗೋವಿಂದರಾಜು

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]