Protest meeting against vote rigging postponed to August 8: DCM D.K. Shivakumar

ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನಕ್ಕೆ ಮೂರು ದಿನಗಳ ಶೋಕಾಚರಣೆ ಹಿನ್ನೆಲೆಯಲ್ಲಿ ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ನೇತೃತ್ವದ ಪ್ರತಿಭಟನಾ ಸಭೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K Shivakumar) ಅವರು ತಿಳಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಸೋಮವಾರ ಮಾತನಾಡಿದ ಶಿವಕುಮಾರ್ ಅವರು ಈ ವಿಚಾರ ತಿಳಿಸಿದರು.

“ಶಿಬು ಸೊರೇನ್ ಬುಡಕಟ್ಟು ಸಮುದಾಯದ ಹಿರಿಯ ನಾಯಕರು. ಕಾಂಗ್ರೆಸ್ ಪಕ್ಷದ ಬಹುಕಾಲದ ಮೈತ್ರಿ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಶಿಬು ಸೊರೇನ್ ಅವರಿಗೆ ಗೌರವ ಸಲ್ಲಿಸಬೇಕು. ಅವರ ಅಂತ್ಯಕ್ರಿಯೆ ಮಂಗಳವಾರ (ನಾಳೆ) ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆತುರದಲ್ಲಿ ಮಾಡುವುದು ಬೇಡ ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬರಲಾಗಿದೆ. ಶೋಕಾಚರಣೆ ಆಚರಿಸುವ ದಿನ ದೇಶಕ್ಕೆ ಒಂದು ಸಂದೇಶ ನೀಡುವ ಕಾರ್ಯಕ್ರಮ ಬೇಡ ಎಂದು ನಿರ್ಧರಿಸಿದ್ದೇವೆ. ಈ ವಿಚಾರವಾಗಿ ನಮ್ಮ ನಾಯಕರ ಜೊತೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ” ಎಂದರು.

“ಮಂಗಳವಾರದ ಕಾರ್ಯಕ್ರಮಕ್ಕೆ ಮಾಡಿಕೊಂಡಿರುವ ಸಿದ್ಧತೆ ಹಾಗೇ ಮುಂದುವರಿಸಿಕೊಂಡು ಹೋಗಬೇಕು ಎಂದು ಪಕ್ಷದ ನಾಯಕರು, ಶಾಸಕರು, ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. 8ರಂದು ಅದೇ ಸ್ಥಳದಲ್ಲಿ, ಅದೇ ಸಮಯಕ್ಕೆ ನಡೆಯಲಿದೆ. ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಮತದಾರರು ಈ ಹೋರಾಟದಲ್ಲಿ ಭಾಗವಹಿಸಲು ಬಹಳ ಉತ್ಸುಕರಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ನಿಗದಿಯಾಗಿದ್ದ ರಾಹುಲ್ ಗಾಂಧಿ ಅವರ ಮಾಧ್ಯಮಗೋಷ್ಠಿಯನ್ನು ಕೂಡ ಮುಂದೂಡಲಾಗಿದ್ದು, ನಾಳೆ ಅಂತ್ಯಕ್ರಿಯೆ ನಂತರ ಇದರ ಬಗ್ಗೆ ಚರ್ಚಿಸಿ ಮಾಹಿತಿಯನ್ನು ಅವರು ತಿಳಿಸಲಿದ್ದಾರೆ” ಎಂದು ತಿಳಿಸಿದರು.

“ಶಿಬು ಸೊರೇನ್ ಅವರು ಕಷ್ಟ ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಂತಿದ್ದಾರೆ. ನರಸಿಂಹ ರಾವ್ ಅವರ ಕಾಲ ಸೇರಿದಂತೆ ಎಲ್ಲಾ ಸಮಯದಲ್ಲೂ ಕಾಂಗ್ರೆಸ್ ಪಕ್ಷದ ಪರ ಬಂಡೆಯಂತೆ ನಿಂತದ್ದರು. ಪಕ್ಷದ ಸಿದ್ಧಾಂತದ ಜೊತೆ ನಿಂತು ನಮ್ಮ ಸರ್ಕಾರಕ್ಕೆ ಅವರು, ಅವರ ಸರ್ಕಾರಕ್ಕೆ ನಾವು ಬೆಂಬಲವಾಗಿ ನಿಂತಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವು ಪ್ರಾರ್ಥಿಸುತ್ತೇವೆ” ಎಂದರು.

“ಆಗಸ್ಟ್ 8ರಂದು ವರಮಹಾಲಕ್ಷ್ಮಿ ಹಬ್ಬವಿದ್ದರೂ ಪಕ್ಷದ ಕೆಲಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಹಬ್ಬದ ಪ್ರಯುಕ್ತ ಪೂಜೆ ಮಾಡಲು ಹಾಗೂ ಪ್ರಾರ್ಥನೆ ಮಾಡಲು ನಾವು ಯಾರಿಗೂ ಅಡ್ಡಿಪಡಿಸುವುದಿಲ್ಲ. ಪಕ್ಷದ ಹೋರಾಟಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮುಖಂಡರು, ಕಾರ್ಯಕರ್ತರಲ್ಲಿ ಮಾಧ್ಯಮಗಳ ಮೂಲಕ ಮನವಿ ಮಾಡಿಕೊಳ್ಳುತ್ತೇನೆ. ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ಕರೆಯಲು ನಮ್ಮ ನಾಯಕರು ಮಾರ್ಗದರ್ಶನ ನೀಡಿದ್ದು, ಸಿಎಂ ಜೊತೆ ಚರ್ಚೆ ಮಾಡುತ್ತೇವೆ” ಎಂದು ಹೇಳಿದರು.

ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿಯಾಗಿ ಬಿಜೆಪಿಯವರು ಚುನಾವಣಾ ಆಯೋಗದ ಪರವಾಗಿ ಹೋರಾಟ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟಿಸುವವರು, ಟೀಕಿಸುವವರನ್ನು ಸ್ವಾಗತಿಸುತ್ತೇವೆ. ಅವರು ಏನು ಹೇಳಬೇಕೋ ಹೇಳಲಿ. ನೀವುಗಳು ಹೇಳಿದಂತೆ ಅವರು ಚುನಾವಣಾ ಆಯೋಗವನ್ನು ಸಮರ್ಥಿಸಿಕೊಂಡು ಪ್ರತಿಭಟಿಸುತ್ತಿದ್ದಾರೆ. ಚುನಾವಣಾ ಆಯೋಗ ಸರಕಾರದ ಭಾಗವಾಗಿದೆ. ಹೀಗಾಗಿ ಇದನ್ನು ಮಾಡುತ್ತಿದ್ದಾರೆ. ಚುನಾವಣಾ ಆಯೋಗ ನಿಷ್ಪಕ್ಷಪಾತ ಹಾಗೂ ನ್ಯಾಯಪೀಠ ಸ್ಥಾನದಲ್ಲಿ ಇರಬೇಕು. ನ್ಯಾಯಪೀಠದಿಂದ ಅನ್ಯಾಯ ಆಗಬಾರದು. ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದು ನಮ್ಮ ಆಶಯ. ವಿಧಾನಸಭೆ ಚುನಾವಣೆ ಸಮಯದಲ್ಲೇ ಮಹದೇವಪುರ ಕ್ಷೇತ್ರದ ನಮ್ಮ ಅಭ್ಯರ್ಥಿ ಸೂಕ್ತ ದಾಖಲೆಯೊಂದಿಗೆ ದೂರು ನೀಡಿದ್ದರು. ಅವರ ದೂರಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಈ ವಿಚಾರವಾಗಿ ಅಧ್ಯಯನ ನಡೆಸಿದ ನಂತರ ಮತ್ತಷ್ಟು ಅಂಶಗಳು ಬೆಳಕಿಗೆ ಬಂದಿವೆ. ಈ ವಿಚಾರ ತಡವಾಗಿ ಬಹಿರಂಗವಾಗುತ್ತಿರಬಹುದು, ಹಾಗೆಂದು ನಾವು ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ನಮ್ಮ ಅಧ್ಯಯನದ ಅಂಶಗಳನ್ನು ಸಾರ್ವಜನಿಕರ ಮುಂದೆ ಇಡುತ್ತೇವೆ. ನಂತರ ಯಾರು ಸರಿ, ಯಾರು ತಪ್ಪು ಎಂಬುದನ್ನು ಜನ ತೀರ್ಮಾನ ಮಾಡಲಿ” ಎಂದು ತಿಳಿಸಿದರು.

ಶಾಸಕಾಂಗ ಸಭೆ ಬಗ್ಗೆ ಕೇಳಿದಾಗ, “ಈ ಕಾರ್ಯಕ್ರಮದ ಉದ್ದೇಶಕ್ಕೆ ಬೆಂಗಳೂರಿಗೆ ಆಗಮಿಸುತ್ತಿರುವ ಶಾಸಕರ ಜೊತೆ ಚರ್ಚೆ ಮಾಡಲು ನಮ್ಮ ನಾಯಕರು ಹೇಳಿದ್ದಾರೆ” ಎಂದು ಸ್ಪಷಪಡಿಸಿದರು.

ರಾಜಕೀಯ

ಸಾರಿಗೆ ನೌಕರರ ಪ್ರತಿಭಟನೆಗೆ ಬಿಜೆಪಿ ಬೆಂಬಲ: ಆರ್.ಅಶೋಕ

ಸಾರಿಗೆ ನೌಕರರ ಪ್ರತಿಭಟನೆಗೆ ಬಿಜೆಪಿ ಬೆಂಬಲ: ಆರ್.ಅಶೋಕ

ಸಾರಿಗೆ ನೌಕರರ ಪ್ರತಿಭಟನೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ ಆರ್ ಅಶೊಕ್, ನಾನು ಸಾರಿಗೆ ಸಚಿವನಾಗಿದ್ದಾಗ ಅವರ ಬೇಡಿಕೆ ಈಡೇರಿಸಿದ್ದೆ. R.Ashoka

[ccc_my_favorite_select_button post_id="112108"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಾಲೆಯ ಮುಖ್ಯ ಶಿಕ್ಷಕ ಮುಸ್ಲಿಂ (Muslim teacher) ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸುವ ಉದ್ದೇಶದಿಂದ ಶಾಲೆಯ ಆವರಣದಲ್ಲಿದ್ದ ಕುಡಿಯುವ ನೀರಿನ ಟ್ಯಾಂಕ್ ಗೆ

[ccc_my_favorite_select_button post_id="112064"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!