The musical program "Sing the melodies, carry the lights" was a head-turning success.

ತಲೆದೂಗಿಸಿದ “ಹಾಡಿರೇ ರಾಗಗಳ-ತೂಗಿರೇ ದೀಪಗಳ” ಸಂಗೀತ ಗಾಯನ ಕಾರ್ಯಕ್ರಮ

ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ನಾಡೋಜ ಡಾ.ಸುಭದ್ರಮ್ಮ ಮನ್ಸೂರ್ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ “ಹಾಡಿರೇ ರಾಗಗಳ-ತೂಗಿರೇ ದೀಪಗಳ” ಸಂಗೀತ ಗಾಯನ (Musical program) ಕಾರ್ಯಕ್ರಮವು ನೆರೆದಿದ್ದ ಜನತೆಯ ತಲೆದೂಗಿಸಿತು.

ಕಾರ್ಯಕ್ರಮವನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಉದ್ಘಾಟಿಸಿ, ಬಳಿಕ ಮಾತನಾಡಿದ ಅವರು ಜಾನಪದ, ತತ್ವಪದ, ಸುಗಮ ಸಂಗೀತ, ಶೋಭಾನೆ ಪದಗಳು, ರಂಗಗೀತೆ ಸೇರಿದಂತೆ ಈ ನೆಲ ಮೂಲದ ಕಲಾಪ್ರಕಾರಗಳನ್ನು ಪ್ರಸ್ತುತಪಡಿಸುವ ಕಲೆ ಮತ್ತು ಕಲಾವಿದರರ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು.

ಜಾನಪದ ಸಾಹಿತ್ಯ ಹಾಗೂ ತತ್ವಪದಗಳಿಗೆ ತನ್ನದೇ ಆದ ಇತಿಹಾಸ ಹೊಂದಿದೆ. ಈ ಹಿಂದೆ ಕೆಲಸದಿಂದ ದಣಿದು ಬಂದ ಹಿರಿಯರು ಪದಗಳನ್ನು ಹೇಳುತ್ತಾ ದಣಿವಾರಿಸಿಕೊಳ್ಳುತ್ತಿದ್ದರು. ಈ ಪ್ರಕಾರಗಳ ಕಲೆ ಮತ್ತು ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಉತ್ತಮ ಪ್ರಯತ್ನದ ಕಾರ್ಯಕ್ರಮ ಇದಾಗಿದ್ದು, ಇಂತಹ ಕಾರ್ಯಕ್ರಮ ರೂಪಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಅರ್ಪಿಸುತ್ತೇನೆ ಎಂದರು.

ಹಿಂದಿನ ಕಾಲದಲ್ಲಿ ತತ್ವಪದ, ಜಾನಪದ ಗೀತೆಗಳು ವ್ಯಕ್ತಿಯನ್ನು ಕೆಳಮಟ್ಟದಿಂದ ಮೇಲ್ಮಟ್ಟಕ್ಕೆ ಉತ್ತಮ ನಾಗರಿಕರನ್ನಾಗಿ ಬೆಳೆಸುತ್ತಿದ್ದವು. ಗ್ರಾಮೀಣ ಭಾಗದಲ್ಲಿ
ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಹಳ್ಳಿಗಳಲ್ಲಿ ಹವ್ಯಾಸ ಜೀವನವಾಗಿದ್ದವು ಎಂದರು.

ತೊಗಲುಗೊಂಬೆಯ ಬೆಳಗಲ್ಲು ವೀರಣ್ಣ, ಕಲಾವಿದರಾದ ಮನ್ಸೂರ್ ಸುಭದ್ರಮ್ಮ ಸೇರಿದಂತೆ ಜಿಲ್ಲೆಯಲ್ಲಿ ಹಲವಾರು ರೀತಿಯ ಕಲಾವಿದರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಜಾನಪದಕಾರರು, ತತ್ವಪದಕಾರರು ಎಲೆ ಮರೆ ಕಾಯಿಯಂತೆ ಬಯಸುವವರು. ಯಾವುದೇ ಪ್ರಚಾರವನ್ನು ಬಯಸುವವರಲ್ಲ, ತಮ್ಮದೇ ಆದ ಸಾಹಿತ್ಯ ಲೋಕ, ತತ್ವಪದ ಲೋಕದಲ್ಲಿ ಬದುಕಿದವರು ಎಂದು ಬಿಂಬಿಸಿದರು.

ಮನಸೊರೆಗೊಂಡ ಸಂಗೀತ ಗಾಯನ

ಬಳ್ಳಾರಿಯ ಎಸ್.ಎಂ ಹುಲುಗಪ್ಪ ತಂಡದಿಂದ ಜಾನಪದ ಗೀತೆಗಳು, ಸಿರುಗುಪ್ಪದ ಅಂಬಣ್ಣ ದಳವಾಯಿ ಅವರಿಂದ ಸುಗಮ ಸಂಗೀತ, ಬಳ್ಳಾರಿಯ ಕೆ.ಜಡೇಶ್ ಅವರಿಂದ ಭಾವ ಗೀತೆಗಳು, ಸಿರುಗುಪ್ಪ ತಾಲ್ಲೂಕಿನ ಉತ್ತನೂರಿನ ರಾಮಪ್ಪ ಅವರಿಂದ ರಂಗ ಗೀತೆಗಳು, ಕುರುಗೋಡು ತಾಲ್ಲೂಕಿನ ಕಲ್ಲುಕಂಬದ ಬಿ.ಆನಂದ ಅವರಿಂದ ಕ್ರಾಂತಿ ಗೀತೆಗಳು, ಸಂಗನಕಲ್ಲಿನ ಉಷಾ ಅವರಿಂದ ವಚನ ಗೀತೆಗಳು, ಯರ‍್ರಗುಡಿಯ ಸುಂಕಪ್ಪ ಹೆಚ್.ಜಿ ಅವರಿಂದ ಹೋರಾಟ ಗೀತೆಗಳು, ಇಬ್ರಾಹಿಂಪುರದ ಹೆಚ್.ಯರ‍್ರಿಸ್ವಾಮಿ ಅವರಿಂದ ಕ್ರಾಂತಿ ಗೀತೆಗಳು.

ಕುರುಗೋಡಿನ ಕೆ.ಹನುಮಂತಪ್ಪ ಜೋಗಿ ಅವರಿಂದ ಕಿನ್ನರಿ ಜೋಗಿ ಪದಗಳು, ಕಂಪ್ಲಿ ತಾಲ್ಲೂಕಿನ ಮೆಟ್ರಿಯ ಸಿ.ಡಿ.ಮೌನೇಶ್ ಅವರಿಂದ ತತ್ವಪದ ಮತ್ತು ದಾಸರ ಪದಗಳು, ಸಂಡೂರು ತಾಲ್ಲೂಕಿನ ಭುಜಂಗನಗರದ ತಾಯಪ್ಪ ಅವರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಸಂಗನಕಲ್ಲಿನ ಮಾರೆಮ್ಮ ಅವರಿಂದ ಸಂಪ್ರದಾಯ ಗೀತೆಗಳು, ಸಿರುಗುಪ್ಪ ತಾಲ್ಲೂಕಿನ ಅರಳಿಗನೂರಿನ ನೀಲಗಂಗಮ್ಮ ಅವರಿಂದ ಶೋಭಾನೆ ಪದಗಳು ಸೇರಿದಂತೆ ವಿವಿಧ ಸಂಗೀತ ಗಾಯನ ಕೇಳುಗರ ಮನಸೂರೆಗೊಂಡವು.

ಈ ವೇಳೆ ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷ ಟಿ.ಹೆಚ್.ಎಂ.ಬಸವರಾಜ, ಹಿರಿಯ ರಂಗಭೂಮಿ ಕಲಾವಿದರು ಹಾಗೂ ನೃತ್ಯ ಕಲಾವಿದರಾದ ಬಿ.ವೀಣಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಹಿರಿಯ ತತ್ವಪದಗಳ ಕಲಾವಿದ ಸಿ.ಡಿ.ಮಾರೆಪ್ಪ, ಬಯಲಾಟದ ಹಿರಿಯ ಕಲಾವಿದರು ಹಾಗೂ ಕರ್ನಾಟಕ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೆ.ರಂಗಾರೆಡ್ಡಿ, ಕುರುಗೋಡಿನ ಕಿನ್ನರಿ ಜೋಗಿ ಪದಗಳ ಗಾಯಕ ಕೆ.ಹನುಮಂತಪ್ಪ ಸೇರಿದಂತೆ ಕಲಾವಿದರು, ಸಾರ್ವಜನಿಕರು ಇದ್ದರು.

ರಾಜಕೀಯ

ಆ.10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ: ರಾಜ್ಯ ಬಿಜೆಪಿಯಲ್ಲಿ ತೀವ್ರ ಚಟುವಟಿಕೆ

ಆ.10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ: ರಾಜ್ಯ ಬಿಜೆಪಿಯಲ್ಲಿ ತೀವ್ರ ಚಟುವಟಿಕೆ

ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಸ್ಟ್ 10ರಂದು ಹಸಿರು ನಿಶಾನೆ ತೋರಿಸಲಿದ್ದಾರೆ.

[ccc_my_favorite_select_button post_id="112088"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಿಕ್ಷಕ ಮುಸ್ಲಿಂ ಎಂಬ ಕಾರಣಕ್ಕೆ ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಹಾಕಿದ ಕಿಡಿಗೇಡಿಗಳು

ಶಾಲೆಯ ಮುಖ್ಯ ಶಿಕ್ಷಕ ಮುಸ್ಲಿಂ (Muslim teacher) ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸುವ ಉದ್ದೇಶದಿಂದ ಶಾಲೆಯ ಆವರಣದಲ್ಲಿದ್ದ ಕುಡಿಯುವ ನೀರಿನ ಟ್ಯಾಂಕ್ ಗೆ

[ccc_my_favorite_select_button post_id="112064"]
ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಕ್ಯಾಂಟರ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು..!

ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಾಲ್ಲೂಕಿನ ಮಧುರೆ ರಸ್ತೆಯಲ್ಲಿನ ಖಾಸಗಿ

[ccc_my_favorite_select_button post_id="111623"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!