ತಲೆದೂಗಿಸಿದ “ಹಾಡಿರೇ ರಾಗಗಳ-ತೂಗಿರೇ ದೀಪಗಳ” ಸಂಗೀತ ಗಾಯನ ಕಾರ್ಯಕ್ರಮ

The musical program "Sing the melodies, carry the lights" was a head-turning success.

ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯಡಿ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ನಾಡೋಜ ಡಾ.ಸುಭದ್ರಮ್ಮ ಮನ್ಸೂರ್ ಬಯಲು ರಂಗಮಂದಿರದಲ್ಲಿ ಆಯೋಜಿಸಿದ್ದ “ಹಾಡಿರೇ ರಾಗಗಳ-ತೂಗಿರೇ ದೀಪಗಳ” ಸಂಗೀತ ಗಾಯನ (Musical program) ಕಾರ್ಯಕ್ರಮವು ನೆರೆದಿದ್ದ ಜನತೆಯ ತಲೆದೂಗಿಸಿತು.

ಕಾರ್ಯಕ್ರಮವನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಉದ್ಘಾಟಿಸಿ, ಬಳಿಕ ಮಾತನಾಡಿದ ಅವರು ಜಾನಪದ, ತತ್ವಪದ, ಸುಗಮ ಸಂಗೀತ, ಶೋಭಾನೆ ಪದಗಳು, ರಂಗಗೀತೆ ಸೇರಿದಂತೆ ಈ ನೆಲ ಮೂಲದ ಕಲಾಪ್ರಕಾರಗಳನ್ನು ಪ್ರಸ್ತುತಪಡಿಸುವ ಕಲೆ ಮತ್ತು ಕಲಾವಿದರರ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು.

ಜಾನಪದ ಸಾಹಿತ್ಯ ಹಾಗೂ ತತ್ವಪದಗಳಿಗೆ ತನ್ನದೇ ಆದ ಇತಿಹಾಸ ಹೊಂದಿದೆ. ಈ ಹಿಂದೆ ಕೆಲಸದಿಂದ ದಣಿದು ಬಂದ ಹಿರಿಯರು ಪದಗಳನ್ನು ಹೇಳುತ್ತಾ ದಣಿವಾರಿಸಿಕೊಳ್ಳುತ್ತಿದ್ದರು. ಈ ಪ್ರಕಾರಗಳ ಕಲೆ ಮತ್ತು ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಉತ್ತಮ ಪ್ರಯತ್ನದ ಕಾರ್ಯಕ್ರಮ ಇದಾಗಿದ್ದು, ಇಂತಹ ಕಾರ್ಯಕ್ರಮ ರೂಪಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಅರ್ಪಿಸುತ್ತೇನೆ ಎಂದರು.

ಹಿಂದಿನ ಕಾಲದಲ್ಲಿ ತತ್ವಪದ, ಜಾನಪದ ಗೀತೆಗಳು ವ್ಯಕ್ತಿಯನ್ನು ಕೆಳಮಟ್ಟದಿಂದ ಮೇಲ್ಮಟ್ಟಕ್ಕೆ ಉತ್ತಮ ನಾಗರಿಕರನ್ನಾಗಿ ಬೆಳೆಸುತ್ತಿದ್ದವು. ಗ್ರಾಮೀಣ ಭಾಗದಲ್ಲಿ
ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಹಳ್ಳಿಗಳಲ್ಲಿ ಹವ್ಯಾಸ ಜೀವನವಾಗಿದ್ದವು ಎಂದರು.

ತೊಗಲುಗೊಂಬೆಯ ಬೆಳಗಲ್ಲು ವೀರಣ್ಣ, ಕಲಾವಿದರಾದ ಮನ್ಸೂರ್ ಸುಭದ್ರಮ್ಮ ಸೇರಿದಂತೆ ಜಿಲ್ಲೆಯಲ್ಲಿ ಹಲವಾರು ರೀತಿಯ ಕಲಾವಿದರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಜಾನಪದಕಾರರು, ತತ್ವಪದಕಾರರು ಎಲೆ ಮರೆ ಕಾಯಿಯಂತೆ ಬಯಸುವವರು. ಯಾವುದೇ ಪ್ರಚಾರವನ್ನು ಬಯಸುವವರಲ್ಲ, ತಮ್ಮದೇ ಆದ ಸಾಹಿತ್ಯ ಲೋಕ, ತತ್ವಪದ ಲೋಕದಲ್ಲಿ ಬದುಕಿದವರು ಎಂದು ಬಿಂಬಿಸಿದರು.

ಮನಸೊರೆಗೊಂಡ ಸಂಗೀತ ಗಾಯನ

ಬಳ್ಳಾರಿಯ ಎಸ್.ಎಂ ಹುಲುಗಪ್ಪ ತಂಡದಿಂದ ಜಾನಪದ ಗೀತೆಗಳು, ಸಿರುಗುಪ್ಪದ ಅಂಬಣ್ಣ ದಳವಾಯಿ ಅವರಿಂದ ಸುಗಮ ಸಂಗೀತ, ಬಳ್ಳಾರಿಯ ಕೆ.ಜಡೇಶ್ ಅವರಿಂದ ಭಾವ ಗೀತೆಗಳು, ಸಿರುಗುಪ್ಪ ತಾಲ್ಲೂಕಿನ ಉತ್ತನೂರಿನ ರಾಮಪ್ಪ ಅವರಿಂದ ರಂಗ ಗೀತೆಗಳು, ಕುರುಗೋಡು ತಾಲ್ಲೂಕಿನ ಕಲ್ಲುಕಂಬದ ಬಿ.ಆನಂದ ಅವರಿಂದ ಕ್ರಾಂತಿ ಗೀತೆಗಳು, ಸಂಗನಕಲ್ಲಿನ ಉಷಾ ಅವರಿಂದ ವಚನ ಗೀತೆಗಳು, ಯರ‍್ರಗುಡಿಯ ಸುಂಕಪ್ಪ ಹೆಚ್.ಜಿ ಅವರಿಂದ ಹೋರಾಟ ಗೀತೆಗಳು, ಇಬ್ರಾಹಿಂಪುರದ ಹೆಚ್.ಯರ‍್ರಿಸ್ವಾಮಿ ಅವರಿಂದ ಕ್ರಾಂತಿ ಗೀತೆಗಳು.

ಕುರುಗೋಡಿನ ಕೆ.ಹನುಮಂತಪ್ಪ ಜೋಗಿ ಅವರಿಂದ ಕಿನ್ನರಿ ಜೋಗಿ ಪದಗಳು, ಕಂಪ್ಲಿ ತಾಲ್ಲೂಕಿನ ಮೆಟ್ರಿಯ ಸಿ.ಡಿ.ಮೌನೇಶ್ ಅವರಿಂದ ತತ್ವಪದ ಮತ್ತು ದಾಸರ ಪದಗಳು, ಸಂಡೂರು ತಾಲ್ಲೂಕಿನ ಭುಜಂಗನಗರದ ತಾಯಪ್ಪ ಅವರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಸಂಗನಕಲ್ಲಿನ ಮಾರೆಮ್ಮ ಅವರಿಂದ ಸಂಪ್ರದಾಯ ಗೀತೆಗಳು, ಸಿರುಗುಪ್ಪ ತಾಲ್ಲೂಕಿನ ಅರಳಿಗನೂರಿನ ನೀಲಗಂಗಮ್ಮ ಅವರಿಂದ ಶೋಭಾನೆ ಪದಗಳು ಸೇರಿದಂತೆ ವಿವಿಧ ಸಂಗೀತ ಗಾಯನ ಕೇಳುಗರ ಮನಸೂರೆಗೊಂಡವು.

ಈ ವೇಳೆ ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷ ಟಿ.ಹೆಚ್.ಎಂ.ಬಸವರಾಜ, ಹಿರಿಯ ರಂಗಭೂಮಿ ಕಲಾವಿದರು ಹಾಗೂ ನೃತ್ಯ ಕಲಾವಿದರಾದ ಬಿ.ವೀಣಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಹಿರಿಯ ತತ್ವಪದಗಳ ಕಲಾವಿದ ಸಿ.ಡಿ.ಮಾರೆಪ್ಪ, ಬಯಲಾಟದ ಹಿರಿಯ ಕಲಾವಿದರು ಹಾಗೂ ಕರ್ನಾಟಕ ಬಯಲಾಟ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೆ.ರಂಗಾರೆಡ್ಡಿ, ಕುರುಗೋಡಿನ ಕಿನ್ನರಿ ಜೋಗಿ ಪದಗಳ ಗಾಯಕ ಕೆ.ಹನುಮಂತಪ್ಪ ಸೇರಿದಂತೆ ಕಲಾವಿದರು, ಸಾರ್ವಜನಿಕರು ಇದ್ದರು.

ರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಬೇಸಿಗೆಯ ಹಿನ್ನೆಲೆ ತೀವ್ರ ನೀರಿನ ಸಮಸ್ಯೆ ಉಂಟಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="121594"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]