Modi ally Trump excessive words... Threat of further taxes on India

ಮಿತಿಮೀರಿದ ಮೋದಿ ಮಿತ್ರ ಟ್ರಂಪ್ ಮಾತು.. ಭಾರತದ ಮೇಲೆ ಮತ್ತಷ್ಟು ತೆರಿಗೆಯ ಧಮ್ಕಿ

ನವದೆಹಲಿ: ಮೈ ಫ್ರೆಂಡ್, ಫೇಂಡ್ ಆಫ್ ಇಂಡಿಯಾ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಡೋನಾಲ್ಡ್ ಟ್ರಂಪ್ (Donald Trump) ಅವರ ಪರ ಪ್ರಚಾರ ನಡೆಸಿ ಅಮೆರಿಕದ ಅಧ್ಯಕ್ಷರನ್ನಾಗಿಸಿದ ಬಳಿಕ, ಟ್ರಂಪ್ ಭಾರತಕ್ಕೆ ಮಾರಕವಾದ ನಿರ್ಣಯವನ್ನು ಕೈಗೊಳ್ಳುತ್ತಿದ್ದಾರೆ.

ಹೌದು ಇತ್ತೀಚೆಗಷ್ಟೇ ಭಾರತದ ವಸ್ತುಗಳ ಮೇಲೆ ಶೇ.25 ರಷ್ಟು ತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದೀಗ ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ.

ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಟ್ರಂಪ್, ‘ಎಚ್ಚರಿಕೆಗಳ ಹೊರತಾಗಿಯೂ ರಷ್ಯಾದಿಂದ ಭಾರತ ತೈಲ ಖರೀದಿಯನ್ನು ಮುಂದುವರೆಸಿದೆ. ಆದ್ದರಿಂದ ಅವರ ಆಮದುಗಳ ಮೇಲಿನ ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಏರಿಸುತ್ತೇನೆ’ ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ ಒಡೆತನದ ಜಾಲತಾಣ ಟ್ರುಥ್‌ನಲ್ಲಿ ಹೇಳಿಕೆ ನೀಡಿರುವ ಟ್ರಂಪ್, ‘ಭಾರತವು ಅತ್ಯಧಿಕ ಪ್ರಮಾಣದಲ್ಲಿ ರಷ್ಯಾದಿಂದ ತೈಲವನ್ನು ಖರೀದಿಸುತ್ತಿದೆ. ಸಾಲದ್ದಕ್ಕೆ ತಾನು ಖರೀದಿಸಿದ ಹೆಚ್ಚಿನ ತೈಲವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ದೊಡ್ಡ ಮೊತ್ತದ ಲಾಭ ಮಾಡಿಕೊಳ್ಳುತ್ತಿದೆ. ರಷ್ಯಾ ದಾಳಿಯಿಂದ ಉಕ್ರೇನ್‌ನಲ್ಲಿ ಎಷ್ಟು ಮಂದಿ ಸಾಯುತ್ತಿದ್ದಾರೆ ಎಂಬ ಬಗ್ಗೆ ಅವರು ತಲೆ ಕೆಡಿಸಿಕೊಳ್ಳುವುದಿಲ್ಲ. ಆದ್ದರಿಂದ ಅವರು ನಮಗೆ ಪಾವತಿಸುವ ತೆರಿಗೆಯನ್ನು ಇನ್ನಷ್ಟು ಏರಿಸುತ್ತೇನೆ’ ಎಂದು ಟ್ರಂಪ್‌ ಹೇಳಿದ್ದಾರೆ.

ಭಾರತ ಮತ್ತು ಅಮೆರಿಕದ ನಡುವೆ ವ್ಯಾಪಾರ ಒಪ್ಪಂದ ಮಾತುಕತೆಗಳು ನಡೆಯುತ್ತಿವೆ. ಹೀಗಿರುವಾಗಲೇ ಟ್ರಂಪ್, ಆ.7ರಿಂದ ಜಾರಿಗೆ ಬರುವಂತೆ ಭಾರತದ ವಸ್ತುಗಳ ಮೇಲೆ ಶೇ.25ರಷ್ಟು ಸುಂಕ ಹೇರಿದ್ದರು. ಜತೆಗೆ, ರಷ್ಯಾದಿಂದ ತೈಲ ಮತ್ತು ಶಸ್ತ್ರಾಸ್ತ್ರ ಆಮದನ್ನು ಮುಂದುವರೆಸಿದ್ದಕ್ಕಾಗಿ ಹೆಚ್ಚುವರಿ ದಂಡ ವಿಧಿಸುವುದಾಗಿ ಎಚ್ಚರಿಸಿದ್ದರು.

ಸಾಲದ್ದಕ್ಕೆ, ಪಾಕಿಸ್ತಾನದ ನಡುವೆ ನಡೆದ ಯುದ್ಧದ ಕದನ ವಿರಾಮಕ್ಕೆ ಬೇರೆಯಾವ ರಾಷ್ಟ್ರ ಮಧ್ಯೆ ತೂರಿಲ್ಲ ಎಂದು ಸಂಸತ್‌ ನಲ್ಲಿ ಪ್ರಧಾನಿ ಮೋದಿ ಹೇಳಿಕೆ ಬಳಿಕವೂ ಸೇರಿ ಇಲ್ಲಿಯವರೆಗೆ ಟ್ರಂಪ್ ಒಟ್ಟು 32 ಬಾರಿ ನಾನೇ ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮಕ್ಕೆ ಕಾರಣ, ನನ್ನಿಂದಲೇ ಎರಡು ದೇಶ ಯುದ್ಧ ನಿಲ್ಲಿಸಿವೆ ಎಂದಿದ್ದಾರೆ. ಅಲ್ಲದ ಭಾರತದ ಆರ್ಥಿಕತೆಯನ್ನು ‘ಮುಳುಗಿದ ಆರ್ಥಿಕತೆ’ ಎಂದು ಕರೆದಿದ್ದರು. ಈಗ ಹೆಚ್ಚುವರಿ ತೆರಿಗೆ ಹೇರುವ ಬೆದರಿಕೆ ಒಡ್ಡುತ್ತಿದ್ದಾರೆ.

ಭಾರತ ತಿರುಗೇಟು

ರಷ್ಯಾ ಜತೆಗೆ ವ್ಯಾಪಾರ ಮಾಡುವುದಕ್ಕೆ ಕಿಡಿಕಾರುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಐರೋಪ್ಯ ದೇಶಗಳಿಗೆ ಭಾರತ ಸೋಮವಾರ ತೀಕ್ಷ್ಯ ತಿರುಗೇಟು ನೀಡಿದೆ. ರಷ್ಯಾ ಜತೆ ಭಾರತದ ವ್ಯವಹಾರಕ್ಕಿಂತ ಯುರೋಪ್ ವ್ಯಾಪಾರ ಹೆಚ್ಚಿದೆ. ಅಮೆರಿಕ ಕೂಡ ರಷ್ಯಾದಿಂದ ಅಣು ಶಕ್ತಿಗೆ ಬೇಕಾದ ರಾಸಾಯನಿಕ ಆಮದು ಮಾಡಿಕೊಳ್ಳುತ್ತಿದೆ ಎಂದು ತಿವಿದಿದೆ.

ರಾಜಕೀಯ

ಸಾರಿಗೆ ನೌಕರರ ಮುಷ್ಕರ; ಕೂಡಲೇ ಪರಿಹಾರ ನೀಡುವಂತೆ ಬಿ.ವೈ.ವಿಜಯೇಂದ್ರ ಆಗ್ರಹ

ಸಾರಿಗೆ ನೌಕರರ ಮುಷ್ಕರ; ಕೂಡಲೇ ಪರಿಹಾರ ನೀಡುವಂತೆ ಬಿ.ವೈ.ವಿಜಯೇಂದ್ರ ಆಗ್ರಹ

ಸರಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112132"]
ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಯಾಣ

ಆಗಸ್ಟ್ 4 ರಿಂದ ಅಮೇರಿಕಾದಲ್ಲಿ ಶಾಸಕಾಂಗ ಶೃಂಗಸಭೆ 2025: ವಿಧಾನ ಪರಿಷತ್ ಸಭಾಪತಿ

ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ "ಶಾಸಕಾಂಗ ಶೃಂಗಸಭೆ 2025”ರಲ್ಲಿ (Legislative Summit 2025) ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ

[ccc_my_favorite_select_button post_id="111777"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕಣ್ಣೀರು ತರಿಸುವ  ನವವಿವಾಹಿತೆಯ ಸೂಸೈಡ್ ನೋಟ್..!

ಕಣ್ಣೀರು ತರಿಸುವ ನವವಿವಾಹಿತೆಯ ಸೂಸೈಡ್ ನೋಟ್..!

ಅಣ್ಣಾ, ಈ ಬಾರಿ ನಾನು ನಿನಗೆ ರಾಖಿ ಕಟ್ಟಲು ಸಾಧ್ಯವಾಗದಿರಬಹುದು ಎಂದು ಸುಸೈಡ್ ನೋಟ್ ಬರೆದಿರುವ ಸಹೋದರಿಯೋರ್ವಳು ಗಂಡನ ಕಿರುಕುಳದಿಂದ ಬೇಸತ್ತು ಮದುವೆಯಾದ ಆರು ತಿಂಗಳಲ್ಲಿಯೇ suicide

[ccc_my_favorite_select_button post_id="112128"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!