Congress party will be completely removed from Karnataka in the coming days: Nikhil Kumaraswamy

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ನೆಲಮಂಗಲ: ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದರು.

ಯಾವುದೇ ಕಾರಣಕ್ಕೂ ನೆಲಮಂಗಲದ ಕೆರೆಗಳಿಗೆ ವೃಷಭಾವತಿ ಕೊಳಚೆ ನೀರು ಹರಿಸಲು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ದೇವೇಗೌಡರು ಹಾಗೂ ಕುಮಾರಣ್ಣ ಅವರ ನೇತೃತ್ವದಲ್ಲಿ ಹೋರಾಟ ನಡೆಸುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ನೆಲಮಂಗಲದ ಎಂವಿಎಂ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ-ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇತ್ತೀಚಿಗೆ ಭದ್ರಾವತಿ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಮಹಿಳಾ ಅಧಿಕಾರಿ ವಿರುದ್ಧ ಅವಾಚ್ಯವಾಗಿ ನಿಂದಿಸಿದ್ದಾರೆ ಅದೇ ರೀತಿ ನೆಲಮಂಗಲದಲ್ಲಿ ಅಧಿಕಾರಿಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ. ಹೆದರಿಸಿ ಬೆದರಿಸಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕ ಶ್ರೀನಿವಾಸಯ್ಯ ವಿರುದ್ಧ ಕಿಡಿಕಾರಿದರು.

ಕುಮಾರಣ್ಣನವರಿಗೆ ಅಧಿಕಾರ ಇದ್ದರೂ, ಇಲ್ಲದಿದ್ದರೂ ಅಧಿಕಾರಿಗಳನ್ನ ಯಾವ ರೀತಿ ನಡೆಸಿಕೊಂಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಜನರು ಸಮಸ್ಯೆಗಳ ಬಗ್ಗೆ ಕರೆ ಮಾಡಿದಾಗ ಅವರಿಗೆ ಸಕಾರಾತ್ಮಕವಾಗಿ ಕುಮಾರಣ್ಣ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಕುಮಾರಣ್ಣವರು ಎಂದು ಕೂಡ ವರ್ಗಾವಣೆಗೆ ಹಣವನ್ನ ಪಡೆದಿಲ್ಲ, ಇಷ್ಟು ಕೋಟಿ ಕೊಡಿ ನಿಮಗೆ ಪೋಸ್ಟಿಂಗ್ ಕೊಡ್ತೀನಿ ಎಂದು ದೇವೇಗೌಡರು , ಕುಮಾರಣ್ಣ ಹಾಗೂ ಜೆಡಿಎಸ್ ಪಕ್ಷ ಕೆಟ್ಟತನದ ರಾಜಕಾರಣ ಮಾಡಿಲ್ಲ ಎಂದು ಹೇಳಿದರು.

ಇನ್ನು ಕಾಂಗ್ರೆಸ್ ಶಾಸಕರುಗಳಿಗೇ ಅವರ ಸರ್ಕಾರದ ಮೇಲೆ ನಂಬಿಕೆ ಇಲ್ಲವಾಗಿದೆ. ಇತ್ತೀಚೆಗೆ ಮೂಡಿಗೆರೆ ಕಾಂಗ್ರೆಸ್ ಶಾಸಕಿ‌ ನಯನಾ ಮೋಟಮ್ಮಅವರು ಮುಂದೆ ಯಾವ ಪಕ್ಷಕ್ಕೆ ಹೋಗಬೇಕೆಂದು ಲೆಕ್ಕಚಾರ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ ಇದಕ್ಕಿಂತ ಸಾಕ್ಷಿ ಬೇಕಾ.? ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ರಾಜ್ಯದಲ್ಲಿ ನೂರಕ್ಕೆ ನೂರರಷ್ಟು ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ. ಹಾಗಾಗಿ ಎಷ್ಟು ಸಾಧ್ಯವಾಗುತ್ತೋ ಅಷ್ಟು ಲೂಟಿ ಮಾಡುತಿದ್ದರೆ ಎಂದು ವಾಗ್ದಾಳಿ ನಡೆಸಿದರು

ವೃಷಭಾವತಿ ನದಿ ಪೈಪ್ಲೈನ್ ಯೋಜನೆಗೆ 1800 ಕೋಟಿ ದಾಖಲೆ ಪ್ರಮಾಣದ ಪರ್ಸೆಂಟೇಜ್ ಇದು. ಹಲವಾರು ಸರ್ಕಾರಗಳು ಕರ್ನಾಟಕ ರಾಜ್ಯದಲ್ಲಿ ಆಡಳಿತ ಮಾಡಿರುವುದನ್ನು ನೋಡಿದ್ದೇವೆ. ಬೆಂಗಳೂರು ನಗರದ ಕೊಳೆಚೆ ನೀರನ್ನ ಇವತ್ತು 69 ಕೆರೆಗಳನ್ನ ತುಂಬಿಸಲು ಈ ಯೋಜನೆಯನ್ನ ಮೂಡಿಟ್ಟಿದ್ದಿರೋ, ಇಲ್ಲ ನಿಮ್ಮ ಜೇಬು ಗಳಿಗೆ ದುಡ್ಡು ತುಂಬಿಸಿಕೊಳ್ಳುವುದಕ್ಕಾ ಎಂದು ವಾಗ್ದಾಳಿ ನಡೆಸಿದರು.

ವೃಷಭಾವತಿ ಪೈಪ್ ಲೈನ್ ಯೋಜನೆ ಹೆಸರಿನಲ್ಲಿ ಹಗಲು ದರೋಡೆ ನಡೆಸುತ್ತಿದ್ದಾರೆ. ನೆಲಮಂಗಲ ತಾಲೂಕಿನ ಜನತೆಗೆ ಮೋಸ ಮಾಡುತ್ತಿದ್ದಾರೆ ಇದರಿಂದ ನಿಮ್ಮ ಜೇಬು ಬರ್ತಿಯಾಗುತ್ತೆ. ಆದರೆ ತಾಲೂಕಿನ ಜನತೆಯ ಪರಿಸ್ಥಿತಿ ಏನಾಗುತ್ತೆ.? 69 ಕೆರೆಗಳಿಗೆ ಕೊಳಚೆ ನೇರನ್ನ ತುಂಬಿಸಿದರೆ
ಮುಂಬರುವ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳನ್ನ ತಾಲೂಕಿನ ಜನತೆ ನೋಡಬೇಕಾಗುತ್ತದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

1800 ಕೋಟಿ ಪೈಪ್ ಲೈನ್ ಅಂತ ನಾಟಕವಾಡುತಿದ್ದೀರಾ.? ಶಾಸಕರಾಗಿದ್ದೀರ, ಅವಕಾಶ ಸಿಕ್ಕಿದೆ. ಒಳ್ಳೆಯ ಕೆಲಸಕ್ಕೆ ಉಪಯೋಗಿಸಿಕೊಳ್ಳಿ. ಆದರೆ ಈ ರೀತಿ ವರ್ತನೆ ಮಾಡುತ್ತೀರಾ ಅಂದರೆ ಮುಂದಿನ ದಿನಗಳಲ್ಲಿ ದೇವೇಗೌಡರು ಹಾಗೂ ಕುಮಾರಣ್ಣ ಅವರ ನೇತೃತ್ವದಲ್ಲಿ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇದಕ್ಕೂ ಮುನ್ನ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಿದ ವೇಳೆ ತಾಲ್ಲೂಕಿನ ಜನತೆ ಬೃಹತ್ ಗಾತ್ರದ ಹೂವಿನ ಹಾರವನ್ನು ಹಾಕುವ ಮೂಲಕ ಸ್ವಾಗತಿಸಿ ನಂತರ ಸಹಸ್ರಾರು ಸಂಖ್ಯೆಯಲ್ಲಿ ಯುವಕರು ಬೈಕ್ ರ್ಯಾಲಿಯ ಮೂಲಕ ಪಟ್ಟಣಕ್ಕೆ ಆಗಮಿಸಿದ ಯುವ ನಾಯಕರಿಗೆ ದಾರಿಯುದ್ದಕ್ಕೂ ಸಾರ್ವಜನಿಕರು ಪಟಾಕಿ ಸಿಡಿಸಿ ಹೂವಿನ ಹಾರ ಹಾಕುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎ. ಮಂಜುನಾಥ್ ರವರು, ಮಾಜಿ ವಿಧಾನಪರಿಷತ್ ಸದಸ್ಯರಾದ ಈ. ಕೃಷ್ಣಪ್ಪ ರವರು, ತಾಲ್ಲೂಕು ಅಧ್ಯಕ್ಷರಾದ ತಿಮ್ಮರಾಯಪ್ಪ, ಮುಖಂಡರಾದ ಜಯಣ್ಣ, ಭೈರೇಗೌಡ , ಶಿವರುದ್ರಣ್ಣ, ಮೋಹನ್ ಕುಮಾರ್ ಸೇರಿದಂತೆ ಅನೇಕರಿದ್ದರು.

ರಾಜಕೀಯ

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ (Transport strike)

[ccc_my_favorite_select_button post_id="112164"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಕಣ್ಣೀರು ತರಿಸುವ  ನವವಿವಾಹಿತೆಯ ಸೂಸೈಡ್ ನೋಟ್..!

ಕಣ್ಣೀರು ತರಿಸುವ ನವವಿವಾಹಿತೆಯ ಸೂಸೈಡ್ ನೋಟ್..!

ಅಣ್ಣಾ, ಈ ಬಾರಿ ನಾನು ನಿನಗೆ ರಾಖಿ ಕಟ್ಟಲು ಸಾಧ್ಯವಾಗದಿರಬಹುದು ಎಂದು ಸುಸೈಡ್ ನೋಟ್ ಬರೆದಿರುವ ಸಹೋದರಿಯೋರ್ವಳು ಗಂಡನ ಕಿರುಕುಳದಿಂದ ಬೇಸತ್ತು ಮದುವೆಯಾದ ಆರು ತಿಂಗಳಲ್ಲಿಯೇ suicide

[ccc_my_favorite_select_button post_id="112128"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!