Dharmasthala mob clash: Home Minister Dr. G. Parameshwar's response

ಧರ್ಮಸ್ಥಳ ಗುಂಪು ಘರ್ಷಣೆ: ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ಧರ್ಮಸ್ಥಳದಲ್ಲಿ (Dharmasthala) ನಿನ್ನೆ ದಿನ ಎರಡು ಗುಂಪುಗಳ ಮಧ್ಯೆ ಗುಂಪು ಘರ್ಷಣೆ ಯಾಕಾಗಿದೆ, ಯಾರು ಕಾರಣಕರ್ತರು, ಎರಡು ಗುಂಪಿನ ಉದ್ದೇಶ ಏನಿದೆ ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ (Dr.G.Parameshwar) ಅವರು ಹೇಳಿದರು.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಿನ ಜನಸಮುದಾಯ ಎಸ್‌ಐಟಿ ಮಾಡಲು ಒತ್ತಾಯಿಸಿದ್ದರು. ಬಹಳ ಎಚ್ಚರಿಕೆಯಿಂದ ಪರಿಶೀಲನೆ ಮಾಡಿ ಎಸ್‌ಐಟಿ ರಚಿಸಿದ್ದೇವೆ. ಅನಾಮಿಕ ವ್ಯಕ್ತಿ ಇಲ್ಲಿ ಕೊಲೆಯಾಗಿದೆ, ನಾನೇ ಅನೇಕ ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೆ ನೀಡಿದ್ದ. ಆ ವ್ಯಕ್ತಿ, ಮ್ಯಾಜಿಸ್ಟ್ರೇಟರ್ ಮುಂದೆ 164 ಹೇಳಿಕೆ ನೀಡಿದ್ದ. ಆತನ ಹೇಳಿಕೆ ಆಧರಿಸಿ ತನಿಖೆ ಮಾಡಬೇಕು ಎಂದು ಮ್ಯಾಜಿಸ್ಟ್ರೀಯಲ್ ಸೂಚನೆಯೂ ಇತ್ತು. ನಾವು ಕೂಡ ಸಾರ್ವಜನಿಕವಾಗಿ ಗಂಭೀರವಾಗಿ ಪರಿಗಣಿಸಿ ಎಸ್‌ಐಟಿ ಮಾಡಿದ್ದೇವೆ ಎಂದು ತಿಳಿಸಿದರು.

ಧರ್ಮಸ್ಥಳದಲ್ಲಿ 13 ಸ್ಥಳಗಳಲ್ಲಿ ಹೆಣಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿಕೆ ಇತ್ತು. ಅದರ ಪ್ರಕಾರ 13 ಸ್ಥಳಗಳನ್ನು ತೆಗೆದಿದ್ದಾರೆ. 6ನೇ ಸ್ಥಳದಲ್ಲಿ ಗಂಡಸಿನ ಅಸ್ಥಿಪಂಜರ ಸಿಕ್ಕಿರುವ ಬಗ್ಗೆ ನೀವೆಲ್ಲ ವರದಿ ಮಾಡಿದ್ದೀರಿ. 13ನೇ ಸ್ಥಳಕ್ಕೆ ಹೋದಾಗ ಏನು ಸಿಕ್ಕಿಲ್ಲ. ಇದರ ಹೊರತುಪಡಿಸಿ ಗುಡ್ಡದಲ್ಲಿ ಒಂದಷ್ಟು ಮೂಳೆಗಳು ಸಿಕ್ಕಿದ್ದು, ಎಫ್‌ಎಸ್‌ಎಲ್ ಗೆ ಕಳಿಸುವ ಕೆಲಸ ಎಸ್‌ಐಟಿ ಮಾಡಿದೆ ಎಂದರು..

ಇದರ ಹಿನ್ನೆಲೆಯಲ್ಲಿ ಅಥವಾ ಸಂಬಂಧಪಟ್ಟಂತೆ ಎರಡು ಗುಂಪುಗಳ ಮಧ್ಯೆ ನಿನ್ನೆ ದಿನ ಘರ್ಷಣೆಯಾಗಿದೆ. ದೂರು, ಪ್ರತಿದೂರು ಕೊಟ್ಟಿದ್ದಾರೆ. ಏಫ್‌ಐಆರ್ ದಾಖಲಿಸುವಂತೆ ಸೂಚಿಸಲಾಗಿದೆ. ಅದನ್ನ ತನಿಖೆ ಮಾಡುತ್ತಾರೆ. ಯಾವ ರೀತಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಎಸ್‌ಐಟಿ ಹಾಗೂ ಸ್ಥಳೀಯ ಪೊಲೀಸರು ಮಾಡುತ್ತಾರೆ ಎಂದು ತಿಳಿಸಿದರು.

ಧರ್ಮಸ್ಥಳದ ವಿಚಾರದಲ್ಲಿ ಯಾರೋ ಹೇಳಿಕೆ ಕೊಡುತ್ತಾರೆ ಅದು ನಮಗೆ ಮುಖ್ಯವಲ್ಲ. ಎಸ್‌ಐಟಿಯವರು ತನಿಖೆಯನ್ನು ತಾಂತ್ರಿಕವಾಗಿ ಮತ್ತು ಆಧುನಿಕವಾಗಿ ಸತ್ಯ ಹೊರಗೆ ಬರುವ ರೀತಿಯಲ್ಲಿ ಮಾಡಬೇಕು. ಆ ಕೆಲಸವನ್ನು ಎಸ್‌ಐಟಿ ಮಾಡುತ್ತದೆ. ಅವರನ್ನು ಈಗಲೇ ಪ್ರಶ್ನೆ ಮಾಡಿದರೆ ತನಿಖೆಗೆ ಅರ್ಥ ಬರುವುದಿಲ್ಲ.

ಎಸ್‌ಐಟಿ ಸರಿಯಾಗಿ ತನಿಖೆ ಮಾಡುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಸೆಇಯಾಗು ತನಿಖೆ ಆಗುತ್ತಿಲ್ಲ ಎಂದು ಇನ್ನೂ ಕೆಲವರು ಹೇಳುತ್ತಿದ್ದಾರೆ. ಇವರೆ ಎಲ್ಲ ಸಲಹೆ ಕೊಡುತ್ತಾರೆ. ರೆಡಾರ್ ತರಬೇಕು ಎನ್ನುತ್ತಿದ್ದಾರೆ. ಅವರು ಹೇಳಿದ ರೀತಿ ತನಿಖೆ ಮಾಡಲು ಆಗುತ್ತದೆಯೇ? ಪೊಲೀಸರು ಸಮರ್ಥರಿದ್ದಾರೆ. ತನಿಖೆ ಮಾಡುತ್ತಾರೆ. ಎಸ್‌ಐಟಿ ತನಿಖೆಯ ಬಗ್ಗೆ ಸರ್ಕಾರ ಯಾವುದೇ ಡೈರೆಕ್ಷನ್ಸ್ ಕೊಡುವುದಿಲ್ಲ ಎಂದು ಹೇಳಿದರು.

ಇವತ್ತಿನ ಸಂಪುಟದಲ್ಲಿ ನಾಗಮೋಹನ್ ದಾಸ್ ಅವರು ವರದಿ ನೀಡಿದರು. ಮುಂದಿನ ಸಚಿವ ಸಂಪುಟಕ್ಕೆ ತರುವಂತೆ ಮುಖ್ಯಮಂತ್ರಿಯವರು ಮುಖ್ಯ ಕಾರ್ಯದರ್ಶಿಗೆ ಸೂಚನೆ ಕೊಟ್ಟರು. ಇವತ್ತು ಸಚಿವ ಸಂಪುಟದ ತರುತ್ತಾರೆ.

ನಾಳೆ ನಡೆಯಲಿರುವ ಮತಗಳ್ಳತನದ ವಿರುದ್ಧದ ಪ್ರತಿಭಟನೆಗೆ ಪೊಲೀಸ್ ಆಯುಕ್ತರು ಎಲ್ಲ ರೀತಿಯ ಭದ್ರತೆ ಕೈಗೊಂಡಿದ್ದಾರೆ‌. ಕೇಂದ್ರದಿಂದ ಎಸ್‌ಪಿಜಿ ಯವರು ಬಂದಿದ್ದಾರೆ. ಅವರೊಂದಿಗೆ ನಮ್ಮ ಪೊಲೀಸರು ಸಂಪರ್ಕದಲ್ಲಿದ್ದಾರೆ. ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಬರುತ್ತಿದ್ದು, ಅವರಿಗೂ ಭದ್ರತೆ ಒದಗಿಸುತ್ತೇವೆ ಎಂದರು.

ರಾಜಕೀಯ

ರಸಗೊಬ್ಬರ ಬಿಕ್ಕಟ್ಟು; ಕೃಷಿ ಸಚಿವರ ಪ್ರತಿಕೃತಿಗೆ ಬೆಂಕಿ ಇಟ್ಟ ಜೆಡಿಎಸ್‌ ಕಾರ್ಯಕರ್ತರು

ರಸಗೊಬ್ಬರ ಬಿಕ್ಕಟ್ಟು; ಕೃಷಿ ಸಚಿವರ ಪ್ರತಿಕೃತಿಗೆ ಬೆಂಕಿ ಇಟ್ಟ ಜೆಡಿಎಸ್‌ ಕಾರ್ಯಕರ್ತರು

ಸಮಯಕ್ಕೆ ಸರಿಯಾಗಿ ಯೂರಿಯಾ ಪೂರೈಕೆ ಮಾಡದೇ ರೈತರಿಗೂ ಮೋಸ ಮಾಡುತ್ತಿದೆ ಎಂದು ಜೆಡಿಎಸ್‌ (JDS) ಆಕ್ರೋಶ ವ್ಯಕ್ತಪಡಿಸಿದೆ.

[ccc_my_favorite_select_button post_id="112262"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ (Dr.K. Sudhakar) ಕಾರಣ ಅಂತ ಡೆತ್ ನೋಟ್ ಬರೆದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ

[ccc_my_favorite_select_button post_id="112252"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!