Fertilizer crisis; JDS Activists set fire to Agriculture Minister's effigy

ರಸಗೊಬ್ಬರ ಬಿಕ್ಕಟ್ಟು; ಕೃಷಿ ಸಚಿವರ ಪ್ರತಿಕೃತಿಗೆ ಬೆಂಕಿ ಇಟ್ಟ ಜೆಡಿಎಸ್‌ ಕಾರ್ಯಕರ್ತರು

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರ ʼಎʼ ಖಾತಾ ʼಬಿʼ ಎಂದು ರಾಜಧಾನಿಯ ಜನರನ್ನು ಒಂದೆಡೆ ವಂಚಿಸುತ್ತಿದ್ದರೆ, ಮತ್ತೊಂದು ಕಡೆ ಸಮಯಕ್ಕೆ ಸರಿಯಾಗಿ ಯೂರಿಯಾ ಪೂರೈಕೆ ಮಾಡದೇ ರೈತರಿಗೂ ಮೋಸ ಮಾಡುತ್ತಿದೆ ಎಂದು ಜೆಡಿಎಸ್‌ (JDS) ಆಕ್ರೋಶ ವ್ಯಕ್ತಪಡಿಸಿದೆ.

ಜೆಡಿಎಸ್‌ ನಗರ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಹೆಚ್.ಎಂ. ರಮೇಶ್‌ ಗೌಡ ಅವರ ನೇತೃತ್ವದಲ್ಲಿ ನಗರದ ಫ್ರೀಡಂ ಪಾರ್ಕ್‌ ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ ಜೆಡಿಎಸ್‌ ಕಾರ್ಯಕರ್ತರು ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರ ಪ್ರತಿಕೃತಿ ದಹನ ಮಾಡಿದರು. ಬಳಿಕ ಖಾತ ಬದಲಾವಣೆ ವಂಚನೆಯನ್ನು ಕೂಡಲೇ ನಿಲ್ಲಿಸಬೇಕು ಎಂದು ಬಿಬಿಎಂಪಿಯನ್ನು ಆಗ್ರಹಿಸಿದರು.

ಅಲ್ಲದೆ, ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್‌ ಅವರಿಗೆ ಮನವಿ ಸಲ್ಲಿಸಿ, ತಕ್ಷಣವೇ ಖಾತ ವಂಚನೆಯನ್ನು ನಿಲ್ಲುಸವಂತೆ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್‌ ಗೌಡರು; ಬಿ ಖಾತಾದಿಂದ ಎ ಖಾತ ಮಾಡುವ ಕ್ರಮಕ್ಕೆ ಕಾನೂನಿನಲ್ಲಿಯೇ ಅವಕಾಶ ಇಲ್ಲ. ಕೇವಲ ಜನರ ಹಣ ಲೂಟಿ ಮಾಡಲಿಕ್ಕಾಗಿಯೇ ಇದನ್ನು ಮಾಡಲಾಗುತ್ತಿದೆ. ಜನರಿಗೆ ಮಂಕುಬೂದಿ ಎರಚಿ ಸಾವಿರಾರು ಕೋಟಿ ರೂಪಾಯಿಗಳನ್ನು ಲೂಟಿ ಮಾಡುವ ಹುನ್ನಾರ ನಡೆಸಲಾಗಿದೆ ಎಂದು ಆರೋಪ ಮಾಡಿದರು.

ಖಾತಾಗೆ ಬದಲಾವಣೆ ಎನ್ನುವುದೇ ದೊಡ್ಡ ಬೋಗಸ್‌ ಎಂದಿರುವ ಅವರು, ನ್ಯಾಯಾಲಯದಲ್ಲಿ ಈ ಸರಕಾರ ಛೀಮಾರಿ ಹಾಕಿಸಿಕೊಳ್ಳುವುದು ಖಚಿತ. ಈ ಹಿಂದೆ ಒಂದು ಚದರ ಮೀಟರಿಗೆ 13,800 ರೂಪಾಯಿ ತೆರಿಗೆಯನ್ನು ಬಿಬಿಎಂಪಿಯಿಂದ ವಿಧಿಸಲಾಗುತ್ತಿತ್ತು. ಕಾಂಗ್ರೆಸ್‌ ಸರಕಾರ ಈ ತೆರಿಗೆಯನ್ನು 1000% ಏರಿಕೆ ಮಾಡಿದೆ. ಅಂದರೆ 3ರಿಂದ 6 ಲಕ್ಷ ರೂಪಾಯಿವರೆಗೂ ಹೆಚ್ಚಿಸಿದೆ. ಜನರಿಂದ ಇಷ್ಟೊಂದು ಹಣ ಕಟ್ಟಲು ಸಾಧ್ಯವೇ ಎಂದು ಅವರು ಕಿಡಿಕಾರಿದರು.

ಸರಕಾರಕ್ಕೆ ಚೆಲ್ಲಾಟ, ರೈತರಿಗೆ ಪ್ರಾಣ ಸಂಕಟ

ರಾಜ್ಯದ ಎಲ್ಲಾ ವರ್ಗದ ಜನರ ಜೊತೆ ಚೆಲ್ಲಾಟವಾಡಿದಂತೆ ಕಾಂಗ್ರೆಸ್‌ ಸರಕಾರವು ರೈತರ ಜತೆಯೂ ಆಟವಾಡುತ್ತಿದೆ. ಉತ್ತಮ ಮಳೆಯಾಗಿ ಬಿತ್ತನೆ ಚಟುವಟಿಕೆ ಆರಂಭವಾಗುವುದಕ್ಕೆ ಸರಿಯಾಗಿ ರಸಗೊಬ್ಬರದ ಕೃತಕ ಅಭಾವ ಸೃಷ್ಟಿಸಲಾಗಿದೆ. ಇದಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರೇ ಕಾರಣ. ಈ ಕಾರಣಕ್ಕಾಗಿಯೇ ಅವರ ಪ್ರತಿಕೃತಿ ದಹನ ಮಾಡಿದ್ದೇವೆ ಎಂದು ರಮೇಶ್‌ ಗೌಡ ದೂರಿದರು.

ಸೊಸೈಟಿಗಳ ಮೂಲಕ ರೈತರಿಗೆ ನ್ಯಾಯಯುತವಾಗಿ ಸಿಗಬೇಕಿದ್ದ ರಸಗೊಬ್ಬರ ದಲ್ಲಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಕೇವಲ ಗ್ಯಾರಂಟಿಗಳಿಂದ ಜನರಿಗೆ ಟೋಪಿ ಹಾಕುತ್ತಿರುವ ಸರಕಾರ ಅದೇ ಅನ್ನ ಕೊಡುವ ರೈತನಿಗೇ ಮೋಸ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ನಗರದ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್, ಬಿಬಿಎಂಪಿ ಮಾಜಿ ವಿರೋಧ ಪಕ್ಷದ ನಾಯಕ ಟಿ.ತಿಮ್ಮೇಗೌಡ, ಮಾಜಿ ಉಪ ಮಹಾಪೌರ ಶ್ರೀರಾಮೇಗೌಡ, ಬಿಬಿಎಂಪಿ ಮಾಜಿ ಸದಸ್ಯ ಎಂ. ಮುನಿಸ್ವಾಮಿ, ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಅಧ್ಯಕ್ಷ ವಿ.ನಾಗೇಶ್ವರರಾವ್, ಬೆಂಗಳೂರು ನಗರ ಯುವ ಘಟಕದ ಅಧ್ಯಕ್ಷ ಸ್ಯಾಮುಯಲ್ ಇನ್ನಿತರ ಮುಖಂಡರು, ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ರಾಜಕೀಯ

ನಮ್ಮ ಮೆಟ್ರೋ ಜನರದ್ದು – ಯಾವ ಪಕ್ಷದ ಸ್ವತ್ತು ಅಲ್ಲ; ಅಂಕಿಅಂಶಗಳ ಸಹಿತ ಬಿಜೆಪಿಗೆ ಕುಟುಕಿದ ಸಚಿವ ರಾಮಲಿಂಗಾ ರೆಡ್ಡಿ

ನಮ್ಮ ಮೆಟ್ರೋ ಜನರದ್ದು – ಯಾವ ಪಕ್ಷದ ಸ್ವತ್ತು ಅಲ್ಲ; ಅಂಕಿಅಂಶಗಳ ಸಹಿತ

ರಾಜ್ಯ ಬಿಜೆಪಿಯ ಪ್ರಮುಖ‌ ಮುಖಂಡರುಗಳಿಗೆ ಸ್ವಲ್ಪವೂ ನಾಚಿಕೆಯಿಲ್ಲದೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ನಮ್ಮ ಮೆಟ್ರೋ ಶ್ರೇಯಸ್ಸು ಕೊಡುತ್ತಿದ್ದಾರೆ: ಸಚಿವ ರಾಮಲಿಂಗಾ ರೆಡ್ಡಿ (Ramalinga Reddy)

[ccc_my_favorite_select_button post_id="112368"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು ಪರಾರಿ

ದೊಡ್ಡಬಳ್ಳಾಪುರ: ರೈತರಿಗೆ ಕೇಬಲ್ ವೈರ್ ಕಳ್ಳರ ಹಾವಳಿ.. ಕದಿಯಲು ಬಂದವರು ವಾಹನ ಬಿಟ್ಟು

ಕೃಷಿ ಜಮೀನುಗಳಲ್ಲಿನ ಬೋರ್ವೆಲ್ ಗೆ ಅಳವಡಿಸಿದ್ದ ಕೇಬಲ್ ವೈರ್ ಗಳನ್ನು (Cable wire) ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು (Thieves) ಬೆನ್ನತ್ತಿದ ರೈತರು, ವಾಹನವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

[ccc_my_favorite_select_button post_id="112373"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!