Pregnant woman's death case in Doddaballapura: Important meeting by various organizations tomorrow

ದೊಡ್ಡಬಳ್ಳಾಪುರದಲ್ಲಿ ಗರ್ಭಿಣಿ ಸಾವು ಪ್ರಕರಣ: ನಾಳೆ ವಿವಿಧ ಸಂಘಟನೆಗಳಿಂದ ಮಹತ್ವದ ಸಭೆ

ದೊಡ್ಡಬಳ್ಳಾಪುರ: ನಗರದಲ್ಲಿನ ತಾಯಿ ಮಗು ಸರ್ಕಾರಿ ಆಸ್ಪತ್ರೆಯಲ್ಲಿ 9 ತಿಂಗಳ ತುಂಬು ಗರ್ಭಿಣಿ (Pregnant) ಸಾವನಪ್ಪಿರುವ ಘಟನೆ ತಾಲೂಕಿನಾಧ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಗರ್ಭಿಣಿ ಸಾವನಪ್ಪಿರುವ ಕುರಿತಂತೆ ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ನಡುವೆಯೇ ನಗರದ ಕನ್ನಡ ಜಾಗೃತ ಭವನದಲ್ಲಿ ಬುಧವಾರ ಸಂಜೆ ಪ್ರಗತಿಪರ ಸಂಘಟನೆಗಳ ಮುಖಂಡರು ತುರ್ತು ಸಭೆ ನಡೆಸಿದ್ದಾರೆ.

ಸರ್ಕಾರಿ ಆಸ್ಪತ್ರೆ ಹಲವಾರು ಸಮಸ್ಯೆಗಳಿಂದ ಕೂಡಿದೆ ಎಂದು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರಾದ ಎಂ.ಕೃಷ್ಣಮೂರ್ತಿ, ಆರ್.ಚಂದ್ರತೇಜಸ್ವಿ, ಎ.ಓ.ಆವಲಮೂರ್ತಿ, ಸಂಜೀವ್ನಾಯ್ಕ್, ಕವಿತಾ, ನರೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಸೂಕ್ತ ಚಿಕಿತ್ಸೆ ದೊರೆಯದಾಗಿದೆ. ಗರ್ಭಿಣಿ ಸುಶ್ಮಿತ ಸಾವಿನ ಪ್ರಕರಣ ಅತ್ಯಂತ ಗಂಭೀರವಾದ್ದು. ಇದರ ವಿರುದ್ಧ ಸೂಕ್ತ ಹೋರಾಟ ಅಗತ್ಯವಿದೆ. ಅಲ್ಲದೆ ಸರ್ಕಾರಿ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಪರಿಹಾರವು ಆಗಬೇಕಿದೆ.

ಈ ಎಲ್ಲಾ ವಿಚಾರಗಳ ವಿರುದ್ಧ ದೊಡ್ಡ ಮಟ್ಟದ ಹೋರಾಟ ರೂಪಿಸಲು ಆಗಸ್ಟ್ 8 ರ ಸಂಜೆ 4 ಗಂಟೆಗೆ ಕನ್ನಡ ಜಾಗೃತ ಭವನದಲ್ಲಿ ತಾಲ್ಲೂಕಿನ ಎಲ್ಲಾ ಸಂಘಟನೆಗಳ ಮುಖಂಡರ ಸಭೆ ನಡೆಸಲು ಸಭೆಯಲ್ಲಿ ನಿರ್ಧಿರಿಸಲಾಯಿತು.

ಪೊಲೀಸ್ ಠಾಣೆಗೆ ದೂರು

ಗರ್ಭಿಣಿ ಸಾವನಪ್ಪಿರುವ ಕುರಿತಂತೆ ತಾಯಿ ಭಾಗ್ಯಮ್ಮ ಎನ್ನುವವರು ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಘಟನೆ ಕುರಿತಂತೆ ಭಾಗ್ಯಮ್ಮ ವಿವರಿಸಿದ್ದಾರೆ, ನಮಗೆ ಒಟ್ಟು ಮೂರು ಜನ ಹೆಣ್ಣು ಮಕ್ಕಳು ಇದ್ದು 3ನೇ ಮಗಳು ಸುಶ್ಮ ಎಂಬುವವರಾಗಿರುತ್ತಾರೆ.

ನಮ್ಮ ಕೊನೆಯ ಮಗಳಾದ ಸುಶ್ಮ ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲ್ಲೋಕು. ಗೊಲ್ಲರಪಾಳ್ಯ ವಾಸಿ ಮಹೇಶ್ ಎಂಬುವವರಿಗೆ ಮೂರುವರೆ ವರ್ಷಗಳ ಹಿಂದೆ ಮದುವೆ ಮಾಡಿಕೊಟ್ಟಿರುತ್ತೇವೆ.

ಸುಶ್ಮ 9 ತಿಂಗಳ ಗರ್ಭಿಣಿಯಾಗಿದ್ದು ಸುಮಾರು 7 ತಿಂಗಳ ಹಿಂದೆಯೇ ಗಂಡನ ಮನೆಯಿಂದ ದೊಡ್ಡಬಳ್ಳಾಪುರ ನಗರದ ಬಸವೇಶ್ವರನಗರದ ನಮ್ಮ ಮನೆಗೆ ಕರೆದುಕೊಂಡು ಬಂದು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸುತ್ತಿದ್ದೆವು.

ಆ.05 ರಂದು ಆಶಾ ಕಾರ್ಯಕರ್ತೆ ಜೊತೆಯಲ್ಲಿ ಬೆಳಗ್ಗೆ ಸುಮಾರು 10-30 ಗಂಟೆಯಲ್ಲಿ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ಹೋಗಿದ್ದು, ಕರ್ತವ್ಯದಲ್ಲಿದ್ದ ಮಹಿಳಾ ಸಹಾಯಕಿಯವರು ಪರೀಕ್ಷೆ ಮಾಡಿ ತಾಯಿ ಕಾರ್ಡ್ ನಲ್ಲಿ ಬರೆದಿರುವಂತೆ ಇದೇ ತಿಂಗಳ 14ರಂದು ಹೆರಿಗೆ ದಿನಾಂಕ ಇದೆ ಎಂದು ಹೇಳಿದರು.

ನಮ್ಮ ಮಗಳಿಗೆ ಉಸಿರಾಟದ ಸಮಸ್ಯೆ ಆಗುತ್ತಿದೆ ಎಂದು ನಮ್ಮ ಮಗಳು ಆಸ್ಪತ್ರೆಯಲ್ಲಿ ಹೇಳಿದ್ದು, ಬಿಪಿಗಾಗಿ ಮಾತ್ರೆಗಳನ್ನು ಕೊಟ್ಟು ಇದೇ ಗುರುವಾರದಂದು ಮತ್ತೆ ಆಸ್ಪತ್ರೆಗೆ ಬರುವಂತೆ ತಿಳಿಸಿ ಮನೆಗೆ ಕಳುಹಿಸಿಕೊಟ್ಟಿದ್ದರು.

ಆದರೆ ಆ.6 ರಂದು ಬೆಳಗಿನ ಜಾವ ಸುಮಾರು 4-30 ಗಂಟೆಯಲ್ಲಿ ನನ್ನ ಮಗಳು ಸುಶ್ಮ ಎಚ್ಚರಗೊಂಡು ನನಗೆ ಉಸಿರುಗಟ್ಟುತ್ತಿದೆ, ಸೆಖೆ ಆಗುತ್ತಿದೆ ಎಂದು ಹೇಳಿದ್ದರಿಂದ ನಾವು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಹರೀಶ್ ರವರಿಗೆ ಫೋನ್ ಮಾಡಿ ಮಾತನಾಡಿದ್ದು ತಕ್ಷಣ ಆಸ್ಪತ್ರೆಗೆ ಬರುವಂತೆ ವೈದ್ಯರು ಹೇಳಿದ್ದರು.

ಆಗ ನಾನು ನಮ್ಮ ಮೊದಲನೇ ಮಗಳು ಸುಧಾ ಅವರು ನಮ್ಮ ಪಕ್ಕದ ಮನೆಯವರ ಕಾರಿನಲ್ಲಿ ಸುಶ್ಮ ಅವರನ್ನು ಕರೆದುಕೊಂಡು ಬೆಳಗ್ಗೆ ಸುಮಾರು 6-30 ಗಂಟೆಯಲ್ಲಿ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಸುಶ್ಮ ನನ್ನ ಮೊದಲನೇ ಮಗಳ ಜೊತೆ ಅಕ್ಕ ನನಗೆ ಉಸಿರಾಡಲು ಆಗುತ್ತಿಲ್ಲವೆಂದು ಹೇಳಿದ್ದು ವೈದ್ಯರು ಪರೀಕ್ಷಿಸುತ್ತಿರುವಾಗಲೇ ಸ್ವಲ್ಪ ಸಮಯದಲ್ಲಿ ನನ್ನ ಮಗಳು ಸುಷ್ಮ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾಳೆ.

ನನ್ನ ಮಗಳ ಸಾವಿನಲ್ಲಿ ವೈದ್ಯರ ನಿರ್ಲಕ್ಷತೆ ಬಗ್ಗೆ ಅನುಮಾನ ಇದ್ದು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿ ದೂರು ನೀಡಿದ್ದಾರೆ.

ರಾಜಕೀಯ

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ಸಾರಿಗೆ ಮುಷ್ಕರ: ಆರ್. ಅಶೋಕ ಏಟು, ಸಿಎಂ ಸಿದ್ದರಾಮಯ್ಯ ತಿರುಗೇಟು

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ಬೆಳಗ್ಗೆ ಆರಂಭವಾಗಿದ್ದ ರಾಜ್ಯ ಸಾರಿಗೆ ಬಸ್ ನೌಕರರ ಮುಷ್ಕರ (Transport strike)

[ccc_my_favorite_select_button post_id="112164"]
ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ: ನಿಖಿಲ್ ಕುಮಾರಸ್ವಾಮಿ

ಅಧಿಕಾರಿಗಳ ಮೇಲೆ ಕಾಂಗ್ರೆಸ್‌ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ. ಕಾಂಗ್ರೆಸ್‌ ಸರ್ಕಾರ 1800 ಕೋಟಿ ರೂ. ಲೂಟಿಗೆ ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ

[ccc_my_favorite_select_button post_id="112187"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ರಾಷ್ಟ್ರೀಯ ಕಬಡ್ಡಿ ಪಂದ್ಯಾವಳಿ: ದೊಡ್ಡಬಳ್ಳಾಪುರದ ಕ್ರೀಡಾಪಟುಗಳು ಆಯ್ಕೆ

ಜು.25ರಿಂದ 28ರವರೆಗೆ ನಡೆಯಲಿರುವ ಪುರುಷರ ಸೀನಿಯರ್ -ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್‌ಶಿಪ್(Kabaddi Championship) ಪಂದ್ಯಾವಳಿ

[ccc_my_favorite_select_button post_id="111553"]
ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ಸಂಸದ ಡಾ.ಕೆ. ಸುಧಾಕರ್ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ..!

ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್ (Dr.K. Sudhakar) ಕಾರಣ ಅಂತ ಡೆತ್ ನೋಟ್ ಬರೆದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕ

[ccc_my_favorite_select_button post_id="112252"]
ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜು..!| Video ನೋಡಿ

ಚಲಿಸುತ್ತಿದ್ದ ಎರಡು ಬಸ್ಸುಗಳ ನಡುವೆ ಸಿಲುಕಿದ ಆಟೋ ನುಜ್ಜುಗುಜ್ಜಾಗಿದ್ದು (Auto crushed), ಹಲವರಿಗೆ ಪೆಟ್ಟಾಗಿರುವ ಗಾಯವಾದ ಘಟನೆ

[ccc_my_favorite_select_button post_id="112134"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!