ಶ್ರೀ ವರಮಹಾಲಕ್ಷ್ಮೀ ಹಬ್ಬದ ವಿಶೇಷ: ಪೂಜೆ ಯಾವ ರೀತಿ ಮಾಡಬೇಕೆಂಬ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ

Varamahalakshmi Festival: Complete information on how to perform the puja

Varamahalakshmi festival: ಬೆಳಗ್ಗೆ ಬೇಗ ಎದ್ದು, ನಿತ್ಯ ಕರ್ಮಗಳನ್ನು ಮುಗಿಸಿ ಶ್ರೀ ದೇವಿಯ ಪೂಜೆಯನ್ನು ಮಾಡಬೇಕು. ಸಾಯಂಕಾಲದವರೆವಿಗೂ ಉಪವಾಸ ಇರಬೇಕು.

ವ್ರತ ಮಾಡುವವರು ಸಂಕಲ್ಪ ಮಾಡಿ ದೇವಿಯನ್ನು ಕಲಶ ಮತ್ತು ವಿಗ್ರಹಗಳಲ್ಲಿ ಆವಾಹನೆ ಮಾಡಿ ಪೂಜಿಸಬೇಕು. ಕಲಶದಲ್ಲಿ ಅಕ್ಕಿ ತುಂಬಿಸಿ ಖರ್ಜೂರ, ಗೋಡಂಬಿ, ದ್ರಾಕ್ಷಿ, ಬಾದಾಮಿ, ಕಲ್ಲುಸಕ್ಕರೆ ಮತ್ತು ಕೆಲವು ಹಣ್ಣುಗಳನ್ನು ಇರಿಸಬೇಕು. ಈ ಕಳಸಕ್ಕೆ ಲಕ್ಷ್ಮೀ ಕಳಸ ಎನ್ನುತ್ತಾರೆ.

ಅದರ ಮೇಲೆ ಚಿನ್ನ ಅಥವಾ ಬೆಳ್ಳಿ ಅಥವಾ ಮಣ್ಣಿನಿಂದ ತಯಾರಿಸಿದ ಮುಖವಾಡವನ್ನಿಟ್ಟು ಅಥವಾ ತೆಂಗಿನಕಾಯಿಗೆ ಹಳದಿಯ ಹಿಟ್ಟಿನಿಂದ ಮೂಗು ಕಣ್ಣು ಕಿವಿ ಮಾಡಿ, ಒಡವೆಗಳನ್ನು ಏರಿಸಿ, ಸೀರೆ ಉಡಿಸಿ, ಅಲಂಕಾರ ಮಾಡಬೇಕಾಗುತ್ತದೆ.

ಈ ಪೂಜೆಯಲ್ಲಿ ವಿಶೇಷವಾಗಿ ದಾರಗಳಿಗೆ ಪೂಜೆಯನ್ನು ಮಾಡುವುದು. ಈ ದಾರವನ್ನು ದೋರವೆಂದು ಕರೆವರು. ಹೊಸದಾದ 12 ದಾರಗಳಿಗೆ 12 ಗಂಟುಗಳನ್ನು ಹಾಕಿ, ಅದನ್ನು ಸ್ವಲ್ಪ ನೀರಿನಲ್ಲಿ ನೆನೆಸಿ ಅರಿಶಿನ ಹಚ್ಚಿ ದೇವಿಯ ಪಕ್ಕದಲ್ಲಿರಿಸಿ ಆರಾಧಿಸಿ ಪೂಜಿಸುವುದು.

ಈ ದಾರಗಳಿಗೆ ಅರಿಶಿನ, ಕುಂಕುಮ, ಹೂವು, ಪತ್ರೆಗಳಿಂದ ಪೂಜಿಸಿ, ಧೂಪ, ದೀಪ ಹಾಗೂ ನೈವೇದ್ಯ ಮಾಡುವುದು. ಹನ್ನೆರಡು ಹೆಸರುಗಳನ್ನು ಉಚ್ಚರಿಸಿ ದ್ವಾದಶನಾಮಾವಳಿಯೆಂದು ಪೂಜಿಸುವುದು.

ಆ ನಾಮಾವಳಿಗಳು ಹೀಗಿವೆ -ರಮೆ, ಸರ್ವಮಂಗಳೆ, ಕಮಲವಾಸಿನೆ, ಮನ್ಮಥ ಜನನಿ, ವಿಷ್ಣುವಲ್ಲಭೆ, ಕ್ಷೀರಾಬ್ಧಿಕನ್ಯಕೆ, ಲೋಕಮಾತೆ, ಭಾರ್ಗವಿ, ಪದ್ಮಹಸ್ತೆ, ಪುಷ್ಪೆ, ತುಷ್ಟೆ ಮತ್ತು ವರಲಕ್ಷ್ಮಿ.

ಈ ದಾರಕ್ಕಾಗಿ ಮತ್ತು ದೇವಿಗೆ ಹೋಳಿಗೆ, ಕೊಬ್ಬರಿ ಮಿಠಾಯಿ, ಜಾಮೂನು, ಪಾಯಸ, ಜಿಲೇಬಿ ಹಾಗೂ ಚಿಗಲಿ, ತಂಬಿಟ್ಟು ಮಾಡುತ್ತಾರೆ. ವಿಶೇಷವಾಗಿ ನೈವೇದ್ಯವಾಗಿ ಸಜ್ಜಪ್ಪವನ್ನು ಅರ್ಪಿಸುವರು. ಅಂದು ಶ್ರೀಸೂಕ್ತವನ್ನು ಪಠಿಸುವುದೂ ಒಳ್ಳೆಯದು.

ದೇವಿಯ ಮೂರ್ತಿಗೂ ಅರಿಶಿನ, ಕುಂಕುಮ,ಹೂವು, ಪತ್ರೆ ಮತ್ತು ಅಕ್ಷತೆಯಿಂದ ಪೂಜೆಯನ್ನು ಸಲ್ಲಿಸಿದ ಬಳಿಕ, ಪೂಜಿಸಿದ ಹೆಣ್ಣುಮಕ್ಕಳು ಆ ದಾರಗಳಿಗೆ ಹೂವನ್ನು ಕಟ್ಟಿ, ಹಿರಿಯರಿಂದ ಕಂಕಣದಂತೆ ಬಲಗೈಗೆ ಕಟ್ಟಿಸಿಕೊಳ್ಳುವುದು. ಹಾಗೆ ಕಟ್ಟಿಸಿಕೊಂಡ ನಂತರ ಆ ಹಿರಿಯರಿಗೆ ನಮಸ್ಕರಿಸಿ ದಕ್ಷಿಣೆಯೊಂದಿಗೆ ದಾನವನ್ನು ಪುರೋಹಿತರಿಗೆ ಕೊಡುವುದು.

ಈ ಸಮಯದಲ್ಲಿ ಹೇಳುವ ಶ್ಲೋಕ ಹೀಗಿದೆ.
“ದ್ವಾದಶಗ್ರಂಥಿ ಸಂಯುಕ್ತಂ ಕೃತಂ ದ್ವಾದಶತಂತುಭಿ: ಧಾರಯಾಮಿ ಮಹಾದೇವಿ ಸೂತ್ರಂ ತೇ ಸರ್ವಮಂಗಳೇ”.

ಪೂರ್ವಕ್ಕೆ ಅಥವಾ ಉತ್ತರ ದಿಕ್ಕಿಗೆ ದೇವಿಯನ್ನು ಕೂರಿಸಬೇಕು.

ಕನಕಾಂಬರ, ಮಲ್ಲಿಗೆ, ಪತ್ರೆ,ಮರುಗ, ದವನ, ಸಂಪಿಗೆ ಹಾಗೂ ಜಾಜಿ ಹೂವ ದೇವಿಗೆ ಶ್ರೇಷ್ಠವಾದದ್ದು.

ದೇವಿಯ ಪೂಜಾ ಸಮಯವು ಬೆಳಿಗ್ಗೆ 5:35 ರಿಂದ 6:40 ರೊಳಗೆ ಹಾಗೂ 7:30 ರಿಂದ 9:00, ಸಂಜೆ 6 ರಿಂದ 7.30 ಗಂಟೆಯೊಳಗೆ ಪೂಜೆ ಮಾಡಬಹುದು.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು.ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]