I would not have lost if Aadhaar card was linked to voter ID; Nikhil Kumaraswamy

ವೋಟರ್ ಐಡಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದ್ರೆ ನಾನು ಸೋಲ್ತಿರಲಿಲ್ಲ; ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ರಾಹುಲ್ ಗಾಂಧಿ ಮತಗಳ್ಳತನ ಆರೋಪ ಹಿಟ್ ಅಂಡ್ ರನ್ ಕೇಸ್ ರೀತಿ ಆರೋಪಗಳು ಇದರಲ್ಲಿ ಯಾವುದೇ ಉರಳಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ರಾಹುಲ್ ಗಾಂಧಿ (Rahul Gandhi) ವಿರುದ್ಧ ವಾಗ್ದಾಳಿ ನಡೆಸಿದರು.

ಜೆ.ಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಿನ್ನೆಯ ದಿನ ನಮ್ಮ ರಾಜ್ಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ಹೈಕಮಾಂಡ್ ರಾಹುಲ್ ಗಾಂಧಿ ಅವರು ಫ್ರೀಡಂ ಪಾರ್ಕ್ ನಲ್ಲಿ ಮತಕಳ್ಳತನ ಬಗ್ಗೆ ಕೆಲವೊಂದು ಆಪಾದನೆಗಳ ಮಾಡಿದ್ದಾರೆ ಅವೆಲ್ಲವೂ ಹಿಟ್ ಅಂಡ್ ರನ್ ಆರೋಪ ಇದಕ್ಕೆ ಹುರುಳಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು.

ನಿನ್ನೆಯೇ ದಿನ ಚುನಾವಣಾ ಆಯೋಗ ಸ್ವಷ್ಟವಾಗಿ ಹೇಳಿದೆ. ಆ ರೀತಿ ಏನಾದ್ರು ಆಗಿದ್ರೆ, ಚುನಾವಣೆಯಾದ 45 ದಿನಗಳ ಪ್ರಕ್ರಿಯೆಯಲ್ಲಿ ಅವಕಾಶ ಇರುತ್ತೆ ಅದನ್ನು ಬಹಳಸಿಕೊಳ್ಳಬೇಕು. ಈಗ ಮತಕಳ್ಳತನ ಆಗಿದೆ, ಮತ್ತೊಂದು ಆಗಿದೆ ಅಂತ ಚರ್ಚೆ ಮಾಡಿದ್ರೆ, ಘೋಷಣಾ ಪತ್ರಕ್ಕೆ ಸಹಿ ಹಾಕಿ ಯಾಕೆ ಆಯೋಗಕ್ಕೆ ಸಲ್ಲಿಸಲು ಮುಂದಾಗಿಲ್ಲ ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.

ಬಿಹಾರ ರಾಜ್ಯದ ಜನತೆಯನ್ನ ದಿಕ್ಕುತಪ್ಪಿಸಲು ರಾಹುಲ್ ಗಾಂಧಿ ಹುನ್ನಾರ

ರಾಜ್ಯಕ್ಕೆ ರಾಹುಲ್ ಗಾಂಧಿ ಅವರು ಸುಮ್ಮನೆ ಬಂದ್ರು ಮಾತಾಡಿದ್ರು ಹೊರಟರು. ಯಾಕೇ ರಾಹುಲ್ ಗಾಂಧಿ ಮುಂದೆ ಬರ್ತಾ ಇಲ್ಲ. ಇದು ಹಿಟ್ ಅಂಡ್ ರನ್ ಕೇಸ್. ಮುಂದೆ ಬಿಹಾರ ಚುನಾವಣೆಯನ್ನು ಎದುರು ನೋಡ್ತಾ ಇದ್ದೇವೆ.ಈ ಚುನಾವಣೆ ಯನ್ನ ಮುಂದಿಟ್ಟುಕೊಂಡು, ಬಿಹಾರ ರಾಜ್ಯದ ಜನತೆಯನ್ನು ದಿಕ್ಕುತಪ್ಪಿಸಲು ರಾಹುಲ್ ಗಾಂಧಿ ಸೇರಿ ರಾಜ್ಯ ನಾಯಕರು ಹುನ್ನಾರ ಮಾಡ್ತಾ‌ ಇದ್ದಾರೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಇದು ಆರೋಪ ಅಷ್ಟೇ, ಆರೋಪದಲ್ಲಿ ಏನು ಹುರಳಿಲ್ಲ

ಚುನಾವಣಾ ಆಯೋಗವನ್ನು ಏಜೆಂಟ್ ಆಗಿ ಬಿಜೆಪಿ ಬಳಸುತ್ತಿದೆ ಎಂಬ ಆರೋಪಕ್ಕೆ ಮಾತನಾಡಿದ ಅವರು;
ಇದು ಆರೋಪ ಅಷ್ಟೇ, ಆರೋಪದಲ್ಲಿ ಏನು ಹುರಳಿಲ್ಲ ಇದರಲ್ಲಿ ಸತ್ಯ ಇಲ್ಲ. ಚುನಾವಣಾ ಆಯೋಗ ಯಾವುದೇ ಪಕ್ಷದ ಏಜೆಂಟ್ ಆಗಿ ಕೆಲಸ ಮಾಡಲ್ಲ.

ಕುಮಾರಣ್ಣನ ವೋಟರ್ ಐಡಿಯನ್ನ ಆಧಾರ್ ಗೆ ಲಿಂಕ್ ಮಾಡಿ ಅಂತ‌ ಸಲಹೆ ನೀಡಿದ್ದಾರೆ

ಮಹದೇವ ಪುರ ಕ್ಷೇತ್ರದ ಬಗ್ಗೆ ಅವರು ಮಾಡಿರುವ ಆರೋಪಕ್ಕೆ ಅರವಿಂದ ಲಿಂಬಾವಳಿ ಉತ್ತರ ಕೊಟ್ಟಿದ್ದಾರೆ. ಚುನಾವಣಾ ಗುರುತಿನ ಚೀಟಿ ಆಧಾರ್ ಕಾರ್ಡ್ ಗೆ ಲಿಂಕ್ ಆಗಬೇಕು. ಹಾಗೇನಾದ್ರೂ ಆಗಿದ್ರೆ ರಾಮನಗರ ಚನ್ನಪಟ್ಟಣದಲ್ಲಿ ನಾನು ಕೂಡಾ ಸೋಲ್ತಾ ಇರಲಿಲ್ಲ ಎಂದು ಹೇಳಿದರು.

ಇದೇ ರಾಮನಗರ, ಚನ್ನಪಟ್ಟಣಕ್ಕೆ‌ ಬಂದರೆ ಕುಮಾರಣ್ಣ ಅವರು ಒಂದು ಮಾತು ಹೇಳಿದ್ದಾರೆ. ವೋಟರ್ ಐಡಿಯನ್ನ ಆಧಾರ್ ಲಿಂಕ್ ಮಾಡಿ ಅಂತ‌ ಸಲಹೆ ನೀಡಿದ್ದಾರೆ. ಈ ರೀತಿ ಆಗಿದ್ದರೆ ನಾನು ಸೋಲ್ತಾ ಇರಲಿಲ್ಲ.

ರಾಜ್ಯದಲ್ಲಿ ಕಾಂಗ್ರೆಸ್ 136 ಸ್ಥಾನ ಬಂದಾಗ ಮತಗಳ್ಳತನ ಆಗಿರಲಿಲ್ವ. ಈಗ ಮಾತ್ರ ಲೋಕಸಭೆ ಹಿನ್ನಡೆ ಆಯ್ತು ಅಂತ ಮತಗಳ್ಳತನಾ.? ಆಧಾರ್ ಗೆ ವೋಟರ್ ಲಿಂಕ್ ಮಾಡಿದ್ರೆ ತೆರೆ ಎಳೆಯಬಹುದು. ಕಾಂಗ್ರೆಸ್ ಕ್ಷೇತ್ರಗಳಲ್ಲಿ ಡಬಲ್ ಡಬಲ್ ಮತಗಳಿವೆ. ಆಧಾರ್ ಕಾರ್ಡ್ ಗೆ ವೋಟರ್ ಐಡಿ ಲಿಂಕ್ ಮಾಡಿದ್ರೆ ಕಡಿವಾಣ ಹಾಕಬಹುದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!