Elections to ZP and TP

ಗುಡ್ಮಾರ್ನಿಂಗ್ ನ್ಯೂಸ್: ಜಿಪಂ, ತಾಪಂಗಳಿಗೆ ಚುನಾವಣೆ ಶೀಘ್ರ

ಬೆಂಗಳೂರು: ಜಿಲ್ಲಾ (ZP) ಹಾಗೂ ತಾಲೂಕು ಪಂಚಾಯಿತಿಗಳಿಗೆ (TP) ಮೀಸಲಾತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಇದು ಪೂರ್ಣಗೊಂಡ ನಂತರ ಶೀಘ್ರದಲ್ಲೇ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದರು.

ವಿಧಾನಪರಿಷತ್ ಅಧಿವೇಶನದ ಭೋಜನ ವಿರಾಮದ ನಂತರ ಗಮನ ಸೆಳೆಯುವ ಕಲಾಪದಡಿ ಕಾಂಗ್ರೆಸ್‌ನ ಮಂಜುನಾಥ್ ಭಂಡಾರಿ ಮತ್ತು ಬಿಜೆಪಿಯ ಡಿ.ಎಸ್.ಅರುಣ್ ಈ ಬಗ್ಗೆ ಪ್ರಸ್ತಾಪಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಂಜುನಾಥ್ ಭಂಡಾರಿ, ಬಿಜೆಪಿ ಆಡಳಿತದ ಅವಧಿಯಲ್ಲಿ ಚುನಾವಣೆ ನಡೆಯಬೇಕಾಗಿತ್ತು. ಆದರೆ ಈವರೆಗೂ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆದಿಲ್ಲ.

ಪಂಚಾಯತ್ ರಾಜ್ ವ್ಯವಸ್ಥೆ ಬಲಿಷ್ಠವಾಗಬೇಕಾದರೆ ಪಂಚಾಯತ್ ಗಳಿಗೆ ಅಧಿಕಾರ ನೀಡಬೇಕು. ಈ ಹಿನ್ನೆಲೆಯಲ್ಲಿ ಸರಕಾರ ಈಗಿರುವ ಕಾನೂನಾತ್ಮಕ ತೊಡಕು ಬಗೆಹರಿಸಿ ಶೀಘ್ರದಲ್ಲೇ ಚುನಾವಣೆ ನಡೆಸಿ ಸರಕಾರಕ್ಕೆ ಮನವಿ ಮಾಡಿದರಲ್ಲದೆ, ಚುನಾವಣೆ ನಡೆಯದೆ ಹಿನ್ನೆಲೆಯಲ್ಲಿ ಹಲವು ಸವಲತ್ತುಗಳು ಸಿಗುತ್ತಿಲ್ಲ. ಸರಕಾರ ಈ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು. ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಬೇಕು ಎಂದು ಒತ್ತಾಯಿಸಿದರು.

ಜತೆಗೆ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಪಕ್ಷದ ಚಿಹ್ನೆಯಲ್ಲಿ ನಡೆಸಬೇಕು. ಕೇರಳದಲ್ಲಿ ಚಿಹ್ನೆಯಡಿ ಚುನಾವಣೆ ನಡೆಸಲಾಗುತ್ತಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಸರಕಾರ ಚುನಾವಣೆಗೆ ಅವಕಾಶ ನೀಡಬೇಕು. ಪಂಚಾಯಿತಿ ಸದಸ್ಯರುಗಳ ಗೌರವಧನ ಹೆಚ್ಚಳ ಸಂಬಂಧ ಸರಕಾರ ತಿದ್ದುಪಡಿ ತರಬೇಕು. ಪಂಚಾಯಿತಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕೆಲಸದ ಭದ್ರತೆ ನೀಡಬೇಕು ಎಂದು ಭಂಡಾರಿ ಒತ್ತಾಯಿಸಿದರು.

ಏಕಕಾಲದಲ್ಲಿ ಚುನಾವಣೆ ನಡೆಯಲಿ: ಬಿಜೆಪಿಯ ಡಿ.ಎಸ್.ಅರುಣ್ ಮಾತನಾಡಿ, ಸರಕಾರ ಗ್ರಾಮ ಪಂಚಾಯಿತಿಗಳಿಗೆ ಶಕ್ತಿ ನೀಡುವ ಕೆಲಸ ಆಗಬೇಕು. ಸರಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷ ಪೂರೈಸುವತ್ತ ಸಮೀಪಿಸುತ್ತಿದೆ. ದ್ವಿತೀಯ ಹಂತದ ನಾಯಕತ್ವದ ಬೆಳೆಯಲು ಇದಕ್ಕೆ ಅನುಕೂಲವಾಗಲಿದೆ. ಇದಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ಅವರೇ ಉದಾಹರಣೆ.

ಗ್ರಾಮ ಪಂಚಾಯಿತಿಯಿಂದ ವಿಧಾನ ಪರಿಷತ್ ವರೆಗೆ ಇದೀಗ ಲೋಕಸಭೆಗೂ ಹೆಜ್ಜೆಯಿರಿಸಿದ್ದಾರೆ. ಅಂತಹ ನಾಯಕರು ಹುಟ್ಟಿಕೊಳ್ಳಲು ಪಂಚಾಯಿತಿ ವ್ಯವಸ್ಥೆ ಕಾರಣವಾಗಲಿದೆ ಎಂದರು. ಒಂದೇ ದೇಶ ಒಂದೇ ಚುನಾವಣೆ ಮಾದರಿಯಲ್ಲಿ ಮೂರು ಪಂಚಾಯಿತಿಗಳಿಗೆ ಏಕ ಕಾಲದಲ್ಲಿ ಚುನಾವಣೆ ನಡೆಸುವಂತೆ ಒತ್ತಾಯಿಸಿದರು. ಜತೆಗೆ ಚುನಾವಣೆ ನಡೆಯದಿದ್ದರೆ ಕೇಂದ್ರ ಸರಕಾರ ಅನುದಾನ ಕೂಡ ಕುಂಠಿತವಾಗಲಿದೆ ಎಂದರು.

ಏಕಕಾಲದಲ್ಲಿ ಚುನಾವಣೆ ನಡೆಸಲು ಸಾಧ್ಯವಿಲ್ಲ

ಈ ಹಿಂದೆ ಕ್ಷೇತ್ರ ಪುನರ್ ವಿಂಗಡಣೆ ತೊಡಕಾಗಿತ್ತು. ಅದು ನಿವಾರಣೆಯಾಗಿದೆ. ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡ ನಂತರ ಸರಕಾರ ಚುನಾವಣೆ ನಡೆಸಲಿದೆ.

ಪಂಚಾಯಿತಿಗಳಿಗೆ ಚುನಾವಣೆ ನಡೆಸಬೇಕು ಎಂಬುವುದು ಸರಕಾರದ ಇರಾದೆ. ಆದರೆ, ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಲು ಆಗದು. ಕಾರಣ ಗ್ರಾಮ ಪಂಚಾಯಿತಿ ಅಧಿಕಾರವಧಿ ಇನ್ನೂ ಒಂದೆರಡು ವರ್ಷವಿದೆ. ಆದರೆ ಮೀಸಲಾತಿ ಪಟ್ಟಿ ಬಿಡುಗಡೆಯಾದ ತಕ್ಷಣ ಸರಕಾರ ಚುನಾವಣೆ ನಡೆಸಲು ಸಿದ್ದವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!