ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

Let the daughter of Mandya fly the flag of glory of the state at the international level: D.K. Shivakumar

ಬೆಂಗಳೂರು: ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಗೌಡೇನಹಳ್ಳಿ ಗ್ರಾಮದ ಅಂತರಾಷ್ಟ್ರೀಯ ಕ್ರೀಡಾಪಟು ವಿಜಯಕುಮಾರಿ ಜಿ.ಕೆ. ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K. Shivakumar) ವಿಧಾನಸೌಧದ ಕೊಠಡಿ ಸಂಖ್ಯೆ 337ರಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಅಥ್ಲೆಟಿಕ್ಸ್ ನಲ್ಲಿ ನನಗೆ ಹೆಚ್ಚಿನ ಆಸಕ್ತಿ. ಹೀಗಾಗಿ ವಿಜಯಕುಮಾರಿ ಅವರ ಸಾಧನೆ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ವರದಿ ಗಮನಿಸಿ ನಮ್ಮ ಮಂಡ್ಯದ ಸಾಧಕಿಗೆ ಅಭಿನಂದಿಸಲಾಗುತ್ತಿದೆ. ಈಕೆಯ ಸಾಧನೆಗೆ ನನ್ನ ಸಂಪೂರ್ಣ ಸಹಕಾರ ನೆರವು ಇರಲಿದೆ ಎಂದರು.

ಮಂಡ್ಯದ ಹೆಣ್ಣುಮಗಳು ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ. ಆಕೆಯ ತರಬೇತಿಗೆ ಬೇಕಾದ ಸಕಲ ವ್ಯವಸ್ಥೆ ಮಾಡಲಾಗುವುದು. ಹಣಕಾಸಿನ ಸಮಸ್ಯೆ ಇದೆ ಎಂದು ತಿಳಿದು ಪಾಲಿಕೆ ವತಿಯಿಂದ 10 ಲಕ್ಷ ರೂ. ಪ್ರೋತ್ಸಾಧನ ನೀಡಲಾಗುವುದು. ಈ ವರ್ಷದ 5 ಲಕ್ಷ ರೂ. ಚೆಕ್ ಅನ್ನು ನೀಡಲಾಗಿದ್ದು ಮುಂದಿನ ವರ್ಷ 5 ಲಕ್ಷ ರೂ. ನೀಡುವುದಾಗಿ ತಿಳಿಸಿದರು.

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ವಿಜಯಕುಮಾರಿ, ನನ್ನ ಸಾಧನೆಯನ್ನು ಗುರುತಿಸಿ ಸನ್ಮಾನಿಸಿದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಶಾಸಕರಾದ ದಿನೇಶ್ ಗೂಳಿಗೌಡರವರಿಗೆ ಧನ್ಯವಾದಗಳು. ಇದರಿಂದ ಮತ್ತಷ್ಟು ಸಾಧನೆ ಮಾಡಲು ಸ್ಪೂರ್ತಿ ಸಿಕ್ಕಂತಾಗಿದೆ ಎಂದರು.

ಆರೋಗ್ಯ ಮತ್ತು ಹಣಕಾಸು ಸಮಸ್ಯೆ ಸೇರಿದಂತೆ ನಾನಾ ಕಾರಣಗಳಿಂದ ಕ್ರೀಡೆಯಲ್ಲಿ ಉತ್ಸಾಹ ಕಳೆದುಕೊಂಡಿದ್ದೆ. ಆದರೀಗ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಶಾಸಕರಾದ ದಿನೇಶ್ ಗೂಳಿಗೌಡ ಅವರ‌ ಮುಖಾಂತರ ನನ್ನನ್ನು ಸಂಪರ್ಕಿಸಿ ನನ್ನ ಸಾಧನೆಯನ್ನು ಗುರುತಿಸಿ 5 ಲಕ್ಷ ರೂ.ಗಳ ಚೆಕ್ ಅನ್ನು ನೀಡಿ ಗೌರವಿಸಿರುವುದು ನನಗೆ ಮರೆಯಲಾಗದ ಕ್ಷಣ. ಇದರಿಂದ ನನ್ನ ಉಮ್ಮಸ್ಸು ಹಿಮ್ಮಡಿಯಾಗಿದೆ ಎಂದು ಹೇಳಿದರು.

5 ಲಕ್ಷ ರೂ. ಚೆಕ್ ಹಸ್ತಾಂತರ

ವಿಜಯಕುಮಾರಿ ಅವರ ಸಾಧನೆಯನ್ನು ಮೆಚ್ಚಿದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಪಾಲಿಕೆ ವತಿಯಿಂದ 10 ಲಕ್ಷ ರೂ. ನೀಡುವುದಾಗಿ ಘೋಷಿಸಿ 5 ಲಕ್ಷ ರೂ. ಚೆಕ್‌ ಅನ್ನು ವಿಜಯಕುಮಾರಿ ಅವರಿಗೆ ಹಸ್ತಾಂತರಿಸಿದರು. ಮುಂದಿನ ವರ್ಷ ಐದು ಲಕ್ಷ ರೂ.ನ ಚೆಕ್ ನೀಡುವುದಾಗಿ ಡಿ.ಕೆ.ಶಿವಕುಮಾರ್ ಹೇಳಿದರು.

ವೈಯಕ್ತಿಕ ವಿವರ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಗೌಡೇನಹಳ್ಳಿ ಗ್ರಾಮದ ಕೃಷಿ ಕುಟುಂಬದಲ್ಲಿ ಜನಿಸಿದ ವಿಜಯಕುಮಾರಿ ಅವರು ರಾಜ್ಯದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಇವರ ಈ ಸಾಧನೆ ರಾಜ್ಯದ ಇತರೆ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ.

400 ಮೀಟರ್ ಸ್ಪರ್ಧೆಯಲ್ಲಿ 53.40 ಸೆಕೆಂಡ್ ಗಳಲ್ಲಿ ಮೊದಲಿಗರಾಗಿ ಗುರಿ ಮುಟ್ಟಿದ್ದಾರೆ. ಕಡುಕಷ್ಟದಲ್ಲಿ ಬೆಳೆದು ಅಪ್ರತಿಮ ಸಾಧನೆ ಮಾಡಿರುವ ವಿಜಯಕುಮಾರಿ ಅವರ ತಂದೆ ಕುಮಾರ ಅವರು ಕೃಷಿಕರಾಗಿದ್ದರೆ ತಾಯಿ ಪ್ರೇಮ ಗೃಹಿಣಿ. ಪತಿ ತರುಣ್ ಶೇಖರ್ ಅವರು ಕ್ರೀಡಾ ತರಬೇತುದಾರರು.

ಶಾಲಾ ದಿನಗಳಲ್ಲಿ ಅತ್ಯುತ್ತಮ ಕ್ರೀಡಾಪಟು ಆಗಿದ್ದ ವಿಜಯಕುಮಾರಿ ಅವರು 16ನೇ ವಯಸಿಗೆ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI)ಗೆ ಆಯ್ಕೆಯಾದರು. ಬಳಿಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ನಿರಂತರ ಅಭ್ಯಾಸ ಸತತ ಪರಿಶ್ರಮದಿಂದ ಚಿನ್ನದ ಪದಕ ಪಡೆದಿರುವ ವಿಜಯಕುಮಾರಿ ಅವರು ಮುಂದೆ ಕಾಮನ್‌ವೆಲ್ತ್ ಏಷಿಯನ್ ಗೇಮ್ಸ್ ಗೆ ಆಯ್ಕೆಯಾಗಿ ಭಾರತದ ಕೀರ್ತಿ ಪತಾಕೆ ಹಾರಿಸುವ ಇಂಗಿತ ಹೊಂದಿದ್ದಾರೆ.

ಸಾಧನೆಗಳು

2014ರಲ್ಲಿ LUSOFONIA ಗೇಮ್ಸ್ ನಲ್ಲಿ 4*400 ರಿಲೆಯಲ್ಲಿ ಚಿನ್ನದ ಪದಕ ಹಾಗೂ 400 ಮೀಟರ್ ನಲ್ಲಿ ಬೆಳ್ಳಿ ಪದಕ

2014ರಲ್ಲಿ ಏಷಿಯನ್ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ 4*400 ರಿಲೆಯಲ್ಲಿ ಚಿನ್ನದ ಪದಕ

2019ರಲ್ಲಿ ಸೌತ್ ಏಷಿಯನ್ ಗೇಮ್ಸ್ ನಲ್ಲಿ 400 ಮೀಟರ್ ನಲ್ಲಿ ಕಂಚಿನ ಪದಕ

2025 ಆಗಸ್ಟ್ 10ರಂದು ಭುವನೇಶ್ವರದಲ್ಲಿ ನಡೆದ ವಿಶ್ವ ಅಥ್ಲಿಟಿಕ್ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದಲ್ಲಿ 400 ಮೀಟರ್ ಸ್ಪರ್ಧೆಯಲ್ಲಿ ಚಿನ್ನದ ಪದಕ

ಇದರ ಜೊತೆಗೆ ರಾಷ್ಟ್ರೀಯ, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕ ಗಳಿಸಿದ್ದಾರೆ.

ಪ್ರಶಸ್ತಿಗಳು

ವಿಜಯಕುಮಾರಿ ಅವರಿಗೆ ಈಗಾಗಲೇ ಏಕಲವ್ಯ ಪ್ರಶಸ್ತಿ, ಜೀಜಾಬಾಯಿ ಪ್ರಶಸ್ತಿ, ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಪ್ರಶಸ್ತಿ, ಮಂಡ್ಯ ಜಿಲ್ಲಾಡಳಿತದಿಂದ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ರಾಜಕೀಯ

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಕಾಂಗ್ರೆಸ್ ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

"ಪಕ್ಷದ ಶಿಸ್ತನ್ನು ಎಲ್ಲಾ ಶಾಸಕರು ಕಾಪಾಡಬೇಕು. ಪಕ್ಷಕ್ಕೆ ಗೌರವ ನೀಡಬೇಕು. ಮಾಧ್ಯಮಗಳ ಮುಂದೆ ಪಕ್ಷದ ಗೌರವವನ್ನು ಹಾಳು ಮಾಡಬಾರದು. ಮುಖ್ಯಮಂತ್ರಿಗಳೂ ಸಹ ಈಗಾಗಲೇ ಈ ವಿಚಾರದ ಬಗ್ಗೆ ಹೇಳಿದ್ದಾರೆ. ಮುಂದಕ್ಕೆ ಎಲ್ಲರ ಭವಿಷ್ಯ ಪಕ್ಷದಲ್ಲಿದೆಯೇ

[ccc_my_favorite_select_button post_id="120925"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ದೊಡ್ಡಬಳ್ಳಾಪುರ: ಗುಂಡಮಗೆರೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು.‌!

ಬೇಸಿಗೆಯ ಧಗೆಯಿಂದ ಪಾರಾಗಲು ಕೆರೆಯಲ್ಲಿ ಈಜಾಡಲು ತೆರಳಿದ್ದ ವ್ಯಕ್ತಿಯೋರ್ವ, ನೀರಲ್ಲಿ ಮುಳುಗಿ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿ‌ನ ಗುಂಡಮಗೆರೆ ಕೆರೆಯಲ್ಲಿ (Gundamagere lake) ಭಾನುವಾರ ಸಂಭವಿಸಿದೆ.

[ccc_my_favorite_select_button post_id="120915"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]