Let the daughter of Mandya fly the flag of glory of the state at the international level: D.K. Shivakumar

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಬೆಂಗಳೂರು: ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಗೌಡೇನಹಳ್ಳಿ ಗ್ರಾಮದ ಅಂತರಾಷ್ಟ್ರೀಯ ಕ್ರೀಡಾಪಟು ವಿಜಯಕುಮಾರಿ ಜಿ.ಕೆ. ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K. Shivakumar) ವಿಧಾನಸೌಧದ ಕೊಠಡಿ ಸಂಖ್ಯೆ 337ರಲ್ಲಿ ಸನ್ಮಾನಿಸಿ ಅಭಿನಂದಿಸಿದರು.

ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಅಥ್ಲೆಟಿಕ್ಸ್ ನಲ್ಲಿ ನನಗೆ ಹೆಚ್ಚಿನ ಆಸಕ್ತಿ. ಹೀಗಾಗಿ ವಿಜಯಕುಮಾರಿ ಅವರ ಸಾಧನೆ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟವಾದ ವರದಿ ಗಮನಿಸಿ ನಮ್ಮ ಮಂಡ್ಯದ ಸಾಧಕಿಗೆ ಅಭಿನಂದಿಸಲಾಗುತ್ತಿದೆ. ಈಕೆಯ ಸಾಧನೆಗೆ ನನ್ನ ಸಂಪೂರ್ಣ ಸಹಕಾರ ನೆರವು ಇರಲಿದೆ ಎಂದರು.

ಮಂಡ್ಯದ ಹೆಣ್ಣುಮಗಳು ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ. ಆಕೆಯ ತರಬೇತಿಗೆ ಬೇಕಾದ ಸಕಲ ವ್ಯವಸ್ಥೆ ಮಾಡಲಾಗುವುದು. ಹಣಕಾಸಿನ ಸಮಸ್ಯೆ ಇದೆ ಎಂದು ತಿಳಿದು ಪಾಲಿಕೆ ವತಿಯಿಂದ 10 ಲಕ್ಷ ರೂ. ಪ್ರೋತ್ಸಾಧನ ನೀಡಲಾಗುವುದು. ಈ ವರ್ಷದ 5 ಲಕ್ಷ ರೂ. ಚೆಕ್ ಅನ್ನು ನೀಡಲಾಗಿದ್ದು ಮುಂದಿನ ವರ್ಷ 5 ಲಕ್ಷ ರೂ. ನೀಡುವುದಾಗಿ ತಿಳಿಸಿದರು.

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ವಿಜಯಕುಮಾರಿ, ನನ್ನ ಸಾಧನೆಯನ್ನು ಗುರುತಿಸಿ ಸನ್ಮಾನಿಸಿದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಶಾಸಕರಾದ ದಿನೇಶ್ ಗೂಳಿಗೌಡರವರಿಗೆ ಧನ್ಯವಾದಗಳು. ಇದರಿಂದ ಮತ್ತಷ್ಟು ಸಾಧನೆ ಮಾಡಲು ಸ್ಪೂರ್ತಿ ಸಿಕ್ಕಂತಾಗಿದೆ ಎಂದರು.

ಆರೋಗ್ಯ ಮತ್ತು ಹಣಕಾಸು ಸಮಸ್ಯೆ ಸೇರಿದಂತೆ ನಾನಾ ಕಾರಣಗಳಿಂದ ಕ್ರೀಡೆಯಲ್ಲಿ ಉತ್ಸಾಹ ಕಳೆದುಕೊಂಡಿದ್ದೆ. ಆದರೀಗ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಶಾಸಕರಾದ ದಿನೇಶ್ ಗೂಳಿಗೌಡ ಅವರ‌ ಮುಖಾಂತರ ನನ್ನನ್ನು ಸಂಪರ್ಕಿಸಿ ನನ್ನ ಸಾಧನೆಯನ್ನು ಗುರುತಿಸಿ 5 ಲಕ್ಷ ರೂ.ಗಳ ಚೆಕ್ ಅನ್ನು ನೀಡಿ ಗೌರವಿಸಿರುವುದು ನನಗೆ ಮರೆಯಲಾಗದ ಕ್ಷಣ. ಇದರಿಂದ ನನ್ನ ಉಮ್ಮಸ್ಸು ಹಿಮ್ಮಡಿಯಾಗಿದೆ ಎಂದು ಹೇಳಿದರು.

5 ಲಕ್ಷ ರೂ. ಚೆಕ್ ಹಸ್ತಾಂತರ

ವಿಜಯಕುಮಾರಿ ಅವರ ಸಾಧನೆಯನ್ನು ಮೆಚ್ಚಿದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಪಾಲಿಕೆ ವತಿಯಿಂದ 10 ಲಕ್ಷ ರೂ. ನೀಡುವುದಾಗಿ ಘೋಷಿಸಿ 5 ಲಕ್ಷ ರೂ. ಚೆಕ್‌ ಅನ್ನು ವಿಜಯಕುಮಾರಿ ಅವರಿಗೆ ಹಸ್ತಾಂತರಿಸಿದರು. ಮುಂದಿನ ವರ್ಷ ಐದು ಲಕ್ಷ ರೂ.ನ ಚೆಕ್ ನೀಡುವುದಾಗಿ ಡಿ.ಕೆ.ಶಿವಕುಮಾರ್ ಹೇಳಿದರು.

ವೈಯಕ್ತಿಕ ವಿವರ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಗೌಡೇನಹಳ್ಳಿ ಗ್ರಾಮದ ಕೃಷಿ ಕುಟುಂಬದಲ್ಲಿ ಜನಿಸಿದ ವಿಜಯಕುಮಾರಿ ಅವರು ರಾಜ್ಯದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದ್ದಾರೆ. ಇವರ ಈ ಸಾಧನೆ ರಾಜ್ಯದ ಇತರೆ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದೆ.

400 ಮೀಟರ್ ಸ್ಪರ್ಧೆಯಲ್ಲಿ 53.40 ಸೆಕೆಂಡ್ ಗಳಲ್ಲಿ ಮೊದಲಿಗರಾಗಿ ಗುರಿ ಮುಟ್ಟಿದ್ದಾರೆ. ಕಡುಕಷ್ಟದಲ್ಲಿ ಬೆಳೆದು ಅಪ್ರತಿಮ ಸಾಧನೆ ಮಾಡಿರುವ ವಿಜಯಕುಮಾರಿ ಅವರ ತಂದೆ ಕುಮಾರ ಅವರು ಕೃಷಿಕರಾಗಿದ್ದರೆ ತಾಯಿ ಪ್ರೇಮ ಗೃಹಿಣಿ. ಪತಿ ತರುಣ್ ಶೇಖರ್ ಅವರು ಕ್ರೀಡಾ ತರಬೇತುದಾರರು.

ಶಾಲಾ ದಿನಗಳಲ್ಲಿ ಅತ್ಯುತ್ತಮ ಕ್ರೀಡಾಪಟು ಆಗಿದ್ದ ವಿಜಯಕುಮಾರಿ ಅವರು 16ನೇ ವಯಸಿಗೆ ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (SAI)ಗೆ ಆಯ್ಕೆಯಾದರು. ಬಳಿಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ನಿರಂತರ ಅಭ್ಯಾಸ ಸತತ ಪರಿಶ್ರಮದಿಂದ ಚಿನ್ನದ ಪದಕ ಪಡೆದಿರುವ ವಿಜಯಕುಮಾರಿ ಅವರು ಮುಂದೆ ಕಾಮನ್‌ವೆಲ್ತ್ ಏಷಿಯನ್ ಗೇಮ್ಸ್ ಗೆ ಆಯ್ಕೆಯಾಗಿ ಭಾರತದ ಕೀರ್ತಿ ಪತಾಕೆ ಹಾರಿಸುವ ಇಂಗಿತ ಹೊಂದಿದ್ದಾರೆ.

ಸಾಧನೆಗಳು

2014ರಲ್ಲಿ LUSOFONIA ಗೇಮ್ಸ್ ನಲ್ಲಿ 4*400 ರಿಲೆಯಲ್ಲಿ ಚಿನ್ನದ ಪದಕ ಹಾಗೂ 400 ಮೀಟರ್ ನಲ್ಲಿ ಬೆಳ್ಳಿ ಪದಕ

2014ರಲ್ಲಿ ಏಷಿಯನ್ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ 4*400 ರಿಲೆಯಲ್ಲಿ ಚಿನ್ನದ ಪದಕ

2019ರಲ್ಲಿ ಸೌತ್ ಏಷಿಯನ್ ಗೇಮ್ಸ್ ನಲ್ಲಿ 400 ಮೀಟರ್ ನಲ್ಲಿ ಕಂಚಿನ ಪದಕ

2025 ಆಗಸ್ಟ್ 10ರಂದು ಭುವನೇಶ್ವರದಲ್ಲಿ ನಡೆದ ವಿಶ್ವ ಅಥ್ಲಿಟಿಕ್ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದಲ್ಲಿ 400 ಮೀಟರ್ ಸ್ಪರ್ಧೆಯಲ್ಲಿ ಚಿನ್ನದ ಪದಕ

ಇದರ ಜೊತೆಗೆ ರಾಷ್ಟ್ರೀಯ, ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ, ಕಂಚಿನ ಪದಕ ಗಳಿಸಿದ್ದಾರೆ.

ಪ್ರಶಸ್ತಿಗಳು

ವಿಜಯಕುಮಾರಿ ಅವರಿಗೆ ಈಗಾಗಲೇ ಏಕಲವ್ಯ ಪ್ರಶಸ್ತಿ, ಜೀಜಾಬಾಯಿ ಪ್ರಶಸ್ತಿ, ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ, ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ ಪ್ರಶಸ್ತಿ, ಮಂಡ್ಯ ಜಿಲ್ಲಾಡಳಿತದಿಂದ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ರಾಜಕೀಯ

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ರಾಹುಲ್ ಗಾಂಧಿಯವರು (Rahul Gandhi) ತಮ್ಮ ‘ವೋಟ್ ಚೋರಿ’ ( VoteChori) ಹೇಳಿಕೆಗಳನ್ನು ಬೆಂಬಲಿಸಿ ಏಳು ದಿನಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಇಲ್ಲವಾದಲ್ಲಿ ದೇಶದ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗ (Election Commission) ಸೂಚಿಸಿದೆ.

[ccc_my_favorite_select_button post_id="112750"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!