Doddaballapura: Housewife hangs herself in front of her child..!

ದೊಡ್ಡಬಳ್ಳಾಪುರ: ಮಗುವಿನ ಮುಂದೆಯೇ ಗೃಹಿಣಿ ನೇಣಿಗೆ ಶರಣು..!

ದೊಡ್ಡಬಳ್ಳಾಪುರ: ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಗೃಹಿಣಿಯೋರ್ವರು ಒಂದುವರೆ ವರ್ಷದ ಮಗುವಿನ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಮೃತ ದುರ್ದೈವಿಯನ್ನು ಶಾಮಲ (26 ವರ್ಷ) ಎಂದು ಗುರುತಿಸಲಾಗಿದೆ.

ತಿಪ್ಪೂರು ಗ್ರಾಮದವರಾದ ಶಾಮಲ ಅವರನ್ನು ಕೆಸ್ತೂರು ಗ್ರಾಮದ ಮಧುಸೂದನ್ ಅವರಿಗೆ 5 ವರ್ಷಗಳ ಹಿಂದೆ ಮದುವೆ ಮಾಡಲಾಗಿದ್ದು, ಒಂದು ಗಂಡು, ಒಂದು ಹೆಣ್ಣು ಮಕ್ಕಳಿರುತ್ತದೆ.

ನಿನ್ನೆ ಮಧ್ಯಾಹ್ನ 3.30 ರ ಸಮಯದಲ್ಲಿ ಮನೆಯಲ್ಲಿ ಕೆಲಸ ಮಾಡುವ ವಿಚಾರ ಹಾಗೂ ಬೇರೆ ಮನೆ ಮಾಡು ವಿಚಾರವಾಗಿ ಅತ್ತ- ಸೊಸೆ ನಡುವೆ ಜಗಳವಾಗಿತ್ತು ಎನ್ನಲಾಗಿದ್ದು, ಇದರಿಂದ ಬೇಸತ್ತ ಶಾಮಲ ಅವರು ತನ್ನ ಒಂದುವರೆ ವರ್ಷದ ಮಗುವಿನೊಂದಿಗೆ ರೂಮಿಗೆ ತೆರಳಿದವರು, ಮಂಚದ ಮೇಲೆ ಚೇರ್ ಹಾಕಿ, ಶೀಟಿನ ಹ್ಯಾಂಗಲ್ಗೆ ಬಟ್ಟೆ ಒಣಗಿಸುವ ಪ್ಲಾಸ್ಟಿಕ್ ವೈರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

ಮಗು ಅಳವುದನ್ನು ನೋಡಿದ ಅತ್ತೆ ಕಿಟಕಿಯಲ್ಲಿ ನೋಡಿದಾಗ ಶಾಮಲ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಕೂಡಲೇ ಎಲ್ಲರನ್ನೂ ಕೂಗಿ ,ಬಾಗಿಲು ತೆರೆದು ನಗರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಸಾವನಪ್ಪಿದ್ದಾರೆ ಎಂದು ಗಂಡನ ಕಡೆಯವರು ಪೊಲೀಸರಿಗೆ ತಿಳಿಸಿದ್ದಾರೆ.

ಇನ್ನೂ ಮೃತ ಶಾಮಲ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದರಿಂದ ಮಗಳ ಆತ್ಮಹತ್ಯೆ ಕಾರಣ ಎಂದು ದೂರಿದ್ದಾರೆ.

ಈ ಕುರಿತಂತೆ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿರುವ ಮೃತ ಶಾಮಲ ಪೋಷಕರು, ಮದುವೆಯಾದ ಸುಮಾರು 1 ವರ್ಷಗಳವರೆಗೆ ನಮ್ಮ ಮಗಳನ್ನು (ಶಾಮಲ) ಚೆನ್ನಾಗಿ ನೋಡಿಕೊಂಡು ನಂತರದಲ್ಲಿ ಆಕೆಯನ್ನು ನಮ್ಮ ಮನೆಗೆ ಕಳುಹಿಸುತ್ತಿರಲಿಲ್ಲ. ಆಗಾಗ ನಮ್ಮ ಮಗಳು ನನಗೆ ಪೋನ್ ಮಾಡಿ ನನ್ನ ಗಂಡನ ಮನೆಯಲ್ಲಿ ನನ್ನ ಗಂಡ, ಅತ್ತೆ ಮಾವ ನಾದಿನಿಯರು ನಿನ್ನ ತವರು ಮನೆಯವರು ಬಡವರು ಮದುವೆ ಸರಿಯಾಗಿ ಮಾಡಿಕೊಟ್ಟಿಲ್ಲ, ದಿನ ಅವಾಚ್ಯ ಶಬ್ದಗಳಿಂದ ಬೈಯುವುದು, ಹೊಡೆಯುವುದು ಮಾಡಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸೆ ನೀಡಿರುತ್ತಾರೆಂದು ತಿಳಿಸುತ್ತಿದ್ದಳು.

ತನ್ನ ಗಂಡನ ಮನೆಯಲ್ಲಿ ಗಲಾಟೆ ಯಾದರೆ ನನ್ನ ಆಳಿಯಾ ನನ್ನ ಮಗಳನ್ನು ಕರೆದುಕೊಂಡು ನಮ್ಮ ಮನೆಗೆ ಬಂದು ಬಿಟ್ಟು ಹೋಗುತ್ತಿದ್ದನು. ಸ್ವಲ್ಪ ದಿನಗಳ ನಂತರ ನನ್ನ ಮಗಳಿಗೆ ಸಮಾಧಾನ ಮಾಡಿ ಕರೆದುಕೊಂಡು ಹೋಗುತ್ತಿದ್ದನು. ಈ ರೀತಿ ನನ್ನ ಮಗಳು ಸುಮಾರು 2-3 ಬಾರಿ ಗಲಾಟೆ ಮಾಡಿದಾಗ ನಮ್ಮ ಮನೆಗೆ ಬಂದಿರುತ್ತಾಳೆ.

ಆಗಸ್ಟ್ 11ರಂದು ನಮ್ಮ ಅಳಿಯ ಮಧುಸೂದನ್ ನನ್ನ ಮಗಳನ್ನು ಕರೆದುಕೊಂಡು ಬಂದು ನಮ್ಮ ಮನೆಗೆ ಬಿಟ್ಟು ಹೋಗಿರುತ್ತಾನೆ, ನಂತರ ನನ್ನ ಮಗಳನ್ನು ವಿಚಾರಿಸಲಾಗಿ ನನ್ನ ಗಂಡನ ಮನೆಯಲ್ಲಿ ನನ್ನ ಗಂಡ, ಅತ್ತೆ, ಮಾವ ಹಾಗೂ ನಾದಿನಿಯರು ನಿನಗೆ ಸರಿಯಾಗಿ ಕೆಲಸ ಮಾಡುಲು ಬರುವುದಿಲ್ಲ. ನೀನು ದಡ್ಡಿ ನಿನ್ನ ಮದುವೆ ಸಮಯದಲ್ಲಿ ನಿನ್ನ ತವರು ಮನೆಯವರು ಯಾವುದೇ ವರದಕ್ಷಿಣೆ ನೀಡಿರುವುದಿಲ್ಲ ಎಂದು ಅವಾಚ್ಯ ಶಬ್ದಗಳಿಂದ ಬೈದು, ನೀನು ನಿನ್ನ ತವರು ಮನೆಯಿಂದ ಒಡವೆಗಳನ್ನು ತೆಗೆದುಕೊಂಡು ಬಾರದೇ ಇದ್ದರೆ ನಿನ್ನನ್ನು ಜೀವ ಸಹಿತ ಉಳಿಸುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿ ನನ್ನನು ನಿಮ್ಮ ಮನೆಗೆ ಕರೆದುಕೊಂಡು ಬಂದು ಬಿಟ್ಟು ಹೋಗಿರುತ್ತಾರೆಂದು ತಿಳಿಸಿರುತ್ತಾಳೆ.

ಆಗಸ್ಟ್‌ 13 ರಂದು ನಮ್ಮ ಆಳಿಯ ನಮ್ಮ ಮನೆಗೆ ಬಂದು ಇನ್ನೂ ಮುಂದೆ ನಿಮ್ಮ ಮಗಳನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆಂದು ಹಾಗೂ ನಮ್ಮ ಮನೆಯಲ್ಲಿ ನಮ್ಮ ತಂದೆ, ತಾಯಿ ಜೊತೆ ಹೊಂದಾಣಿಕೆ ಆಗದಿದ್ದರೆ ಬೇರೆ ಮನೆ ಮಾಡಿಕೊಂಡು ಸಂಸಾರ ಮಾಡುತ್ತೇನೆಂದು ಹೇಳಿ, ನನ್ನ ಮಗಳನ್ನು ಕರೆದುಕೊಂಡು ಹೋಗಿರುತ್ತಾನೆ.

ನಮ್ಮ ಅಳಿಯ ನಮ್ಮ ಮನೆಗೆ ಬಂದಾಗ ಆತನಿಗೆ ನನ್ನ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಬುದ್ಧಿ ಹೇಳಿರುತ್ತೇವೆ. ಹಾಗೂ ನಿಮ್ಮ ಮನೆಯಲ್ಲಿ, ನಿಮ್ಮ ತಾಯಿ ನನ್ನ ಮಗಳಿಗೆ ಸರಿಯಾಗಿ ಊಟ ತಿಂಡಿ ಕೊಡದೆ ಹಿಂಸೆ ನೀಡಿರುತ್ತಾರೆ, ಆದ್ದರಿಂದ ತಿಂಡಿ ಕೊಡದೆ ಹಿಂಸೆ ನೀಡಿರುತ್ತಾರೆ, ಆದ್ದರಿಂದ ಈ ವಿಚಾರವಾಗಿ ನಾವು ಆಗಸ್ಟ್ 15 ರಂದು ನ್ಯಾಯ ಪಂಚಾಯಿತಿ ಮಾಡಲು ನಿಮ್ಮ ಮನೆಗೆ ಬರುತ್ತೇವೆಂದು ಹೇಳಿ ನನ್ನ ಮಗಳನ್ನು ನಮ್ಮ ಆಳಿಯನ ಜೊತೆಯಲ್ಲಿ ಕಳುಹಿಸಿಕೊಟ್ಟಿರುತ್ತೇವೆ.

ಆದರೆ ಆಗಸ್ಟ್ 15ರ ಸಂಜೆ ಸುಮಾರು 04:00 ಗಂಟೆಗೆ ಕೆಸ್ತೂರು ಗ್ರಾಮದಿಂದ ನನ್ನ ಆಳಿಯನಾದ ಮಧುಸೂದನ್, ನನ್ನ ತಮ್ಮ ವೆಂಕಟೇಶಗೆ ಫೋನ್ ಮಾಡಿ ಬೇಗನೆ ನಮ್ಮ ಮನೆಗೆ ಬಾ ಎಂದು ತಿಳಿಸಿರುತ್ತಾನೆ. ನಾವು ಯಾಕೆ ಎಂದು ಕಳೆದರು ಸಹ ಏನು ವಿಷಯ ತಿಳಿಸಿರುವುದಿಲ್ಲ, ಆದ್ದರಿಂದ ನಾವು ಕೆಸ್ತೂರು ಗ್ರಾಮಕ್ಕೆ ಹೋಗಿ ನೋಡಲಾಗಿ ನನ್ನ ಮಗಳು ಹೆಣವಾಗಿ ಬಿದ್ದಿರುತ್ತಾಳೆ. ಅಲ್ಲಿ, ವಿಚಾರಣೆ ಮಾಡಿದಾಗ ನನ್ನ ಮಗಳು ಶಾಮಲ ಮನೆಯ ಮೇಲಿರುವ ರೂಮಿನಲಿ, ಅನುಮಾನಸ್ಪದವಾಗಿ ನೇಣು ಬಿಗಿದುಕೊಂಡು ತರಹ ಬಿದ್ದಿರುತ್ತಾಳೆ.

ಆದ್ದರಿಂದ ನನ್ನ ಮಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಹೊಡೆದು, ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿ ವರದಕ್ಷಿಣೆ ಕಿರುಕುಳ ನೀಡಿ, ನನ್ನ ಮಗಳ ಸಾವಿಗೆ ಕಾರಣವಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ನೀಡಿದ ದೂರು ನೀಡಿದ್ದಾರೆಂದು ಇನ್ಸ್ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಹೇಳಿದ್ದಾರೆ.

ಈ ಕುರಿತಂತೆ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ರಾಜಕೀಯ

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

VoteChori: ಬೆದರಿಸುವ ಬದಲು ತನಿಖೆ ಮಾಡಿ; ಚುನಾವಣೆ ಆಯೋಗಕ್ಕೆ ಕಾಂಗ್ರೆಸ್ ತಿರುಗೇಟು

ನವದೆಹಲಿ: ರಾಹುಲ್ ಗಾಂಧಿಯವರು (Rahul Gandhi) ತಮ್ಮ ‘ವೋಟ್ ಚೋರಿ’ ( VoteChori) ಹೇಳಿಕೆಗಳನ್ನು ಬೆಂಬಲಿಸಿ ಏಳು ದಿನಗಳಲ್ಲಿ ಅಫಿಡವಿಟ್ ಸಲ್ಲಿಸಬೇಕು ಇಲ್ಲವಾದಲ್ಲಿ ದೇಶದ ಕ್ಷಮೆಯಾಚಿಸಬೇಕು ಎಂದು ಚುನಾವಣಾ ಆಯೋಗ (Election Commission) ಸೂಚಿಸಿದೆ.

[ccc_my_favorite_select_button post_id="112750"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!